ಮುಂಬಯಿ ವಿಮಾನ ನಿಲ್ದಾಣದಲ್ಲಿ 75 ಹಾರಾಟಗಳು ರದ್ದು


Team Udayavani, Jul 3, 2019, 3:51 PM IST

Air-India1-730

ಮುಂಬಯಿ : ಎರಡು ದಿನಗಳ ಹಿಂದೆ ಸ್ಪೈಸ್‌ ಜೆಟ್‌ ಪ್ರಯಾಣಿಕರ ವಿಮಾನ ರನ್‌ ವೇ ಯಿಂದ ಜಾರಿದ ಪರಿಣಾಮವಾಗಿ ಮುಖ್ಯ ರನ್‌ ವೇ ಮುಚ್ಚಲಾದ ಕಾರಣ ಇಂದು ಬುಧವಾರ ಮುಂಬಯಿ ವಿಮಾನ ನಿಲ್ದಾಣದಲ್ಲಿ ಸುಮಾರು 75 ವಿಮಾನಗಳ ಹಾರಾಟವನ್ನು ರದ್ದು ಪಡಿಸಲಾಯಿತು.

ಮುಖ್ಯ ರನ್‌ ವೇ ಬಂದ್‌ ಮಾಡಿರುವ ಪ್ರಯುಕ್ತ ಮುಂಬಯಿ ವಿಮಾನ ನಿಲ್ದಾಣ ನಿರ್ವಾಹಕರು ಇಂದು ಬುಧವಾರ ಮಧ್ಯರಾತ್ರಿಯ ತನಕ NOTAM – ನೊಟೀಸ್‌ ಟು ಏರ್‌ ಮನ್‌ – ಪಡೆದುಕೊಂಡಿದ್ದು ಆ ಪ್ರಕಾರ ಏರಿಂಡಿಯಾ ಇಂಜಿನಿಯರ್‌ಗಳು ಮತ್ತು ತಂತ್ರಜ್ಞರು ಕಳೆದ ಸೋಮವಾರ ರಾತ್ರಿ ರನ್‌ ವೇ ಯಿಂದ ಜಾರಿದ ಬೋಯಿಂಗ್‌ 737-800 ವಿಮಾನವನ್ನು ತೆರವು ಗೊಳಿಸುವ ಕಾರ್ಯಾಚರಣೆಯಲ್ಲಿ ನಿರತರಾಗಿದ್ದಾರೆ.

ನೊಟೀಸ್‌ ಟು ಏರ್‌ಮನ್‌ (NOTAM) ಜಾರಿಗೊಳಿಸುವುದರ ಮುಖ್ಯ ಉದ್ದೇಶ ಈ ವಾಯು ಮಾರ್ಗದಲ್ಲಿ ಸಂಭಾವ್ಯ ಅಪಾಯವಿದೆ ಎಂಬುದನ್ನು ಪೈಲಟ್‌ಗಳು ಮತ್ತು ವಿವಿಧ ವಿಮಾನಯಾನ ಸಂಸ್ಥೆಗಳಿಗೆ ಜಾಹೀರು ಮಾಡುವುದೇ ಆಗಿದೆ.

ಇಂದು ಬುಧವಾರ ಮುಂಬಯಿ ವಿಮಾನ ನಿಲ್ದಾಣದಲ್ಲಿ ಒಟ್ಟು 75 ವಿಮಾನ ಹಾರಾಟಗಳನ್ನು ರದ್ದುಪಡಿಸಲಾಗಿದ. ಈ ಪೈಕಿ 40 ವಿವಿಧ ಸಂಸ್ಥೆಗಳ ಆಗಮನ ವಿಮಾನಗಳಾಗಿದ್ದು 35 ನಿರ್ಗಮನ ವಿಮಾನಗಳಾಗಿವೆ.

ಈ ರದ್ದತಿಯ ಹೊರತಾಗಿ ವಿಮಾನ ನಿಲ್ದಾಣದಲ್ಲಿನ ಇತರೇ ಹಾರಾಟ ನಿರ್ವಹಣೆಗಳು, ಕೆಲಸ ಕಾರ್ಯಗಳು ಸುಗಮವಾಗಿ ನಡೆಯುತ್ತಿವೆ ಎಂದು ಮುಂಬಯಿ ವಿಮಾನ ನಿಲ್ದಾಣ ನಿರ್ವಾಹಕರ ಅಧಿಕೃತ ಪ್ರಕಟನೆ ತಿಳಿಸಿದೆ.

ಸೋಮವಾರ ರಾತ್ರಿಯಿಂದಲೇ ಮುಂಬಯಿ ವಿಮಾನ ನಿಲ್ದಾಣದ ಎರಡನೇ ರನ್‌ ವೇ ಮೂಲಕ ಹಾರಾಟ ಕಾರ್ಯಗಳು ಸುಗಮವಾಗಿ ನಡೆಯುತ್ತಿವೆ. ರನ್‌ ವೇ ಯಿಂದ ಜಾರಿರುವ ವಿಮಾನವನ್ನು ತೆರವುಗೊಳಿಸುವ ಕೆಲಸಕ್ಕೆ ಇನ್ನಷ್ಟು ಸ್ವಲ್ಪ ಸಮಯ ಹಿಡಿಯಲಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.

 

ಟಾಪ್ ನ್ಯೂಸ್

-pumpwell

Rain: ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಭಾರೀ ಮಳೆ; ಕೆಲವೆಡೆ ಹಾನಿ

gold

Guruvayur Devaswam ಒಡೆತನದಲ್ಲಿ 1,085 ಕೆ.ಜಿ. ಚಿನ್ನ!

nitish-kumar

Budget ಆರ್ಥಿಕ ಸಹಾಯ: ಕೇಂದ್ರವನ್ನು ಶ್ಲಾಘಿಸಿದ ಬಿಹಾರ ಸಿಎಂ

Kharge 2

Kharge ಟೀಕೆ; ಹಳಸಿದ ಭಾಷಣದಿಂದ ವೈಫ‌ಲ್ಯ ಮರೆಮಾಚಲು ಸಾಧ್ಯವಿಲ್ಲ

BELLARE-MALE

Rain: ಪುತ್ತೂರು, ಸುಳ್ಯ, ಬೆಳ್ಳಾರೆ: ಕೆಲವಡೆ ಹಾನಿ ಉಕ್ಕಿ ಹರಿದ ಗೌರಿ ಹೊಳೆ; ಸಂಚಾರ ಬಂದ್‌

DANDIA-DANCE

Udupi Ucchila Dasara: ಸಾರ್ವಜನಿಕ ದಾಂಡಿಯಾ, ಗರ್ಭಾ ನೃತ್ಯ ಸಂಭ್ರಮ

siddanna-2

Guarantee ಯೋಜನೆಗಳಿಂದ ಕರ್ನಾಟಕ ನಂ. 1: ಸಿದ್ದರಾಮಯ್ಯ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

gold

Guruvayur Devaswam ಒಡೆತನದಲ್ಲಿ 1,085 ಕೆ.ಜಿ. ಚಿನ್ನ!

nitish-kumar

Budget ಆರ್ಥಿಕ ಸಹಾಯ: ಕೇಂದ್ರವನ್ನು ಶ್ಲಾಘಿಸಿದ ಬಿಹಾರ ಸಿಎಂ

Kharge 2

Kharge ಟೀಕೆ; ಹಳಸಿದ ಭಾಷಣದಿಂದ ವೈಫ‌ಲ್ಯ ಮರೆಮಾಚಲು ಸಾಧ್ಯವಿಲ್ಲ

attack

Public place ಮೂತ್ರ ವಿಸರ್ಜಿಸಬೇಡ ಎಂದಿದ್ದಕ್ಕೆ ವ್ಯಕ್ತಿ ಮೇಲೆ ಹಲ್ಲೆ

rape

Women; 16 ವರ್ಷಗಳಿಂದ ಮನೆಯಲ್ಲೇ ಮಹಿಳೆ ಬಂಧನ: ರಕ್ಷಣೆ

MUST WATCH

udayavani youtube

ಉಡುಪಿಯ ಈ ಜಾಗದಲ್ಲಿ ರಸಂ ಪುರಿ ತುಂಬಾನೇ ಫೇಮಸ್

udayavani youtube

ತಿರುಪತಿ ಲಡ್ಡು ವಿವಾದ ಪೇಜಾವರ ಶ್ರೀಗಳು ಹೇಳಿದ್ದೇನು ?

udayavani youtube

Kaljigaದಲ್ಲಿ ದೈವದ ಅಪಪ್ರಚಾರ ನಡೆದಿಲ್ಲ, ಸಿನಿಮಾ ನೋಡಿದ ಬಳಿಕ ಈ ಬಗ್ಗೆ ಪ್ರತಿಕ್ರಿಯಿಸಿ

udayavani youtube

ನವಜಾತ ಶಿಶುಗಳಲ್ಲಿ ಶ್ರವಣ ಶಕ್ತಿ ಸಮಸ್ಯೆ ಕುರಿತು ಸಂಪೂರ್ಣ ಮಾಹಿತಿ

udayavani youtube

ಅಂತರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆ ಅಂಗವಾಗಿ ತಾಲೂಕು ಮಟ್ಟದ ಮಾನವ ಸರಪಳಿ ಕಾರ್ಯಕ್ರಮ

ಹೊಸ ಸೇರ್ಪಡೆ

-pumpwell

Rain: ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಭಾರೀ ಮಳೆ; ಕೆಲವೆಡೆ ಹಾನಿ

gold

Guruvayur Devaswam ಒಡೆತನದಲ್ಲಿ 1,085 ಕೆ.ಜಿ. ಚಿನ್ನ!

nitish-kumar

Budget ಆರ್ಥಿಕ ಸಹಾಯ: ಕೇಂದ್ರವನ್ನು ಶ್ಲಾಘಿಸಿದ ಬಿಹಾರ ಸಿಎಂ

Kharge 2

Kharge ಟೀಕೆ; ಹಳಸಿದ ಭಾಷಣದಿಂದ ವೈಫ‌ಲ್ಯ ಮರೆಮಾಚಲು ಸಾಧ್ಯವಿಲ್ಲ

attack

Public place ಮೂತ್ರ ವಿಸರ್ಜಿಸಬೇಡ ಎಂದಿದ್ದಕ್ಕೆ ವ್ಯಕ್ತಿ ಮೇಲೆ ಹಲ್ಲೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.