![BR-Hills](https://www.udayavani.com/wp-content/uploads/2025/02/BR-Hills-415x249.jpg)
![BR-Hills](https://www.udayavani.com/wp-content/uploads/2025/02/BR-Hills-415x249.jpg)
Team Udayavani, Sep 5, 2022, 4:45 PM IST
ಹೊಸದಿಲ್ಲಿ: ಯುವಕನೋರ್ವ ತನ್ನ ತಾಯಿಯನ್ನು ಕೊಂದು ಬಳಿಕ ತಾನೂ ಆತ್ಮಹತ್ಯೆ ಮಾಡಿಕೊಂಡ ಘಟನೆ ದೆಹಲಿಯ ರೋಹಿಣಿಯಲ್ಲಿ ನಡೆದಿದೆ. ಮೃತಪಟ್ಟ ಯುವಕನನ್ನು 25 ವರ್ಷದ ಕ್ಷಿತಿಜ್ ಎಂದು ಗುರುತಿಸಲಾಗಿದೆ.
ಕ್ಷಿತಿಜ್ ಗುರುವಾರ ತನ್ನ ತಾಯಿಯನ್ನು ಕೊಂದಿದ್ದಾನೆ. ಬಳಿಕ ತಾನೂ ಹರಿತವಾದ ಆಯುಧದಿಂದ ಕತ್ತು ಸೀಳಿಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾನೆ. ಕ್ಷಿತಿಜ್ ಮನೆಯಿಂದ ದುರ್ವಾಸನೆ ಬರುತ್ತಿದ್ದ ಕಾರಣದಿಂದ ನೆರೆ ಮನೆಯವರು ಪೊಲೀಸರಿಗೆ ಮಾಹಿತಿ ನೀಡಿದ್ದರು. ಪೊಲೀಸರು ಬಂದು ನೋಡಿದಾಗ ವಿಚಾರ ಹೊರಬಿದ್ದಿದೆ.
ಇದನ್ನೂ ಓದಿ:ಜಮ್ಮುವಿನಲ್ಲಿ ಪ್ರತ್ಯೇಕ ಅವಘಡ: ಕಾರುಗಳು ಪ್ರಪಾತಕ್ಕೆ ಉರುಳಿ 7 ಬಲಿ
ಸ್ಥಳಕ್ಕೆ ಭೇಟಿ ನೀಡಿದ ಪೊಲೀಸರು ಬಾಲ್ಕನಿ ಮೂಲಕ ಮನೆಗೆ ಪ್ರವೇಶಿಸಿದ್ದಾರೆ. ಈ ವೇಳೆ ಕ್ಷಿತಿಜ್ ದೇಹವು ರಕ್ತದ ಮಡುವಿನಲ್ಲಿ ಬಿದ್ದಿರುವುದು ಕಂಡು ಬಂದಿದೆ. ತಾಯಿಯ ಮೃತದೇಹವು ಶಾಚಾಲಯದಲ್ಲಿತ್ತು.
ಇದೇ ವೇಳೆ ಪೊಲೀಸರಿಗೆ ಕ್ಷಿತಿಜ್ ಬರೆದಿರುವ 77 ಪುಟಗಳ ಆತ್ಮಹತ್ಯೆ ಪತ್ರ ಸಿಕ್ಕಿದೆ. ಇದರಲ್ಲಿ ತಾನು ತಾಯಿಯನ್ನು ಗುರುವಾರದಂದು ಕೊಂದು ಹಾಕಿದ್ದು, ರವಿವಾರ ತಾನೂ ಆತ್ಮಹತ್ಯೆ ಮಾಡಿಕೊಂಡಿದ್ದೇನೆ ಎಂದು ಬರೆಯಲಾಗಿದೆ.
ಪೊಲೀಸರ ತಂಡವು ವಿಧಿ ವಿಜ್ಞಾನ ತಂಡದ ಜೊತೆ ಸೇರಿ ತನಿಖೆ ಆರಂಭಿಸಿದೆ.
Mahakumbh Rush: ಗೊಂದಲಕಾರಿ ಪ್ರಕಟಣೆಯಿಂದ ರೈಲು ನಿಲ್ದಾಣದಲ್ಲಿ ಕಾಲ್ತುಳಿತ: ಪೊಲೀಸರು
RSS; ಹಿಂದೂ ಸಮಾಜ ದೇಶದ ಜವಾಬ್ದಾರಿಯುತ ಸಮುದಾಯ: ಮೋಹನ್ ಭಾಗವತ್
Controversy; ಮಹಾಕುಂಭ ‘ಅರ್ಥಹೀನ’ ಎಂದ ಲಾಲು ಪ್ರಸಾದ್ ಯಾದವ್
Pariksha Pe Charcha: ಸ್ಮಾರ್ಟ್ ಫೋನ್ಗಿಂತಲೂ ನೀವು ಸ್ಮಾರ್ಟ್ ಆಗಬೇಕು:ಸದ್ಗುರು
Mahakumbh sensation: ಕೇರಳದಲ್ಲಿ ಕುಂಭಮೇಳದ ಮೊನಾಲಿಸಾ ಹವಾ
You seem to have an Ad Blocker on.
To continue reading, please turn it off or whitelist Udayavani.