78th Independence Day;ತಿರಂಗಾ ಜತೆ ಸೆಲ್ಫಿ ತೆಗೆದು ಅಪ್‌ಲೋಡ್‌ ಮಾಡಿ: ಮೋದಿ ಮನವಿ


Team Udayavani, Jul 29, 2024, 6:00 AM IST

PM Modi

ಹೊಸದಿಲ್ಲಿ: ಈ ಬಾರಿ 78ನೇ ಸ್ವಾತಂತ್ರ್ಯೋತ್ಸವ ಹಿನ್ನೆಲೆಯಲ್ಲಿ ಮನೆ ಮನೆಯಲ್ಲಿ ರಾಷ್ಟ್ರ ಧ್ವಜ (ಹರ್‌ ಘರ್‌ ತಿರಂಗಾ) ಅಭಿಯಾನ ಕೈಗೊಳ್ಳಬೇಕು ಎಂದು ಪ್ರಧಾನಿ ನರೇಂದ್ರ ಮೋದಿ ಮನವಿ ಮಾಡಿದ್ದಾರೆ. 112ನೇ ಆವೃತ್ತಿಯ ತಿಂಗಳ ಕಾರ್ಯಕ್ರಮ “ಮನ್‌ ಕೀ ಬಾತ್‌’ನಲ್ಲಿ ಮಾತನಾಡಿದ ಪ್ರಧಾನಿ ನರೇಂದ್ರ ಮೋದಿ ಅವರು, ರಾಷ್ಟ್ರಧ್ವಜದ ಜತೆಗೆ ಸೆಲ್ಫಿ ತೆಗೆದುಕೊಂಡು ಸಾಮಾಜಿಕ ಜಾಲತಾಣ ಗಳಲ್ಲಿ ಫೋಟೋ ಅಪ್‌ಲೋಡ್‌ ಮಾಡಬೇಕು ಎಂದು ಮನವಿ ಮಾಡಿ ದ್ದಾರೆ. ಇದೇ ಸಂದರ್ಭದಲ್ಲಿ ವಿಶ್ವಪಾರಂಪರಿಕ ಪಟ್ಟಿಗೆ ಅಸ್ಸಾಂನ ಮೊಯಿಡಮ್ಸ್‌ ಸೇರ್ಪಡೆ ಯಾಗಿದ್ದಕ್ಕೆ ಮೆಚ್ಚುಗೆ ವ್ಯಕ್ತಪಡಿಸಿದರು.

1.5 ಲ.ಕೋ.ರೂ. ವ್ಯವಹಾರ: ದೇಶದಲ್ಲಿ ಇದೇ ಮೊದಲ ಬಾರಿಗೆ 1.5 ಲಕ್ಷ ಕೋಟಿ ರೂ.ಗೂ ಅಧಿಕ ಖಾದಿ ಗ್ರಾಮೋದ್ಯೋಗ ವ್ಯವಹಾರ ನಡೆದಿದೆ. ಖಾದಿ ಮತ್ತು ಕೈಮಗ್ಗ ಉತ್ಪನ್ನಗಳ ಮಾರಾಟದಲ್ಲಿ ಹೆಚ್ಚಳವಾಗಿದ್ದು, ಸಾಕಷ್ಟು ಉದ್ಯೋಗಾವಕಾಶಗಳು ಸೃಷ್ಟಿಯಾಗಿವೆ ಎಂದು ಪ್ರಧಾನಿ ನರೇಂದ್ರ ಮೋದಿ ಹೇಳಿದ್ದಾರೆ. ಮೋದಿ, ಖಾದಿ ಉತ್ಪನ್ನಗಳ ಮಾರಾಟದಲ್ಲಿ ಶೇ.400ರಷ್ಟು ಹೆಚ್ಚಳವಾಗಿದೆ. ಈ ಉದ್ಯಮದಿಂದ ಮಹಿಳೆಯರಿಗೆ ಹೆಚ್ಚು ಲಾಭವಾಗಿದೆ ಎಂದು ತಿಳಿಸಿದರು.

ಒಲಿಂಪಿಕ್ಸ್‌ನಲ್ಲಿ ನಮ್ಮ ಕ್ರೀಡಾಪಟುಗಳನ್ನು ಬೆಂಬಲಿಸಿ
ಒಲಿಂಪಿಕ್ಸ್‌ನಲ್ಲಿ ಭಾಗಿಯಾಗಿರುವ ಭಾರತೀಯ ಕ್ರೀಡಾಪಟುಗಳನ್ನು ಬೆಂಬಲಿಸುವಂತೆ ಮೋದಿ ಕರೆ ನೀಡಿದರು. ಅಂತಾರಾಷ್ಟ್ರೀಯ ಮ್ಯಾಥ್‌ಮ್ಯಾಟಿಕ್ಸ್‌ ಒಲಂಪಿಯಾಡ್‌ನ‌ಲ್ಲಿ ಭಾರತೀಯ ವಿದ್ಯಾರ್ಥಿಗಳ ತಂಡವು ಅತ್ಯುತ್ತಮ ಪ್ರದರ್ಶನ ತೋರಿ, 4 ಚಿನ್ನದ ಪದಕ ಮತ್ತು 1 ಬೆಳ್ಳಿ ಪದಕ ಗೆದ್ದಿದೆ ಎಂದು ಹೇಳಿದರು.

ಹುಲಿ ಮಿತ್ರ ಕಾರ್ಯಕ್ರಮಕ್ಕೆ ಮೋದಿ ಹರ್ಷ: ಯೋಗಿ
ಉತ್ತರಪ್ರದೇಶದ ಪಿಲಿಭಿತ್‌ ಜಿಲ್ಲೆಯಲ್ಲಿ ಕೈಗೊಳ್ಳ ಲಾಗು ತ್ತಿರುವ ಬಾಘ ಮಿತ್ರ(ಹುಲಿ ಸ್ನೇಹಿತರು) ಕಾರ್ಯಕ್ರಮಕ್ಕೆ ಪ್ರಧಾನಿ ಮೋದಿ ತಮ್ಮ ಮನ್‌ ಕೀ ಬಾತ್‌ನಲ್ಲಿ ಮೆಚ್ಚುಗೆ ವ್ಯಕ್ತಪಡಿಸಿದ್ದಾರೆ. ಈ ಕುರಿತು ಹರ್ಷ ವ್ಯಕ್ತಪಡಿಸಿರುವ ಉ.ಪ್ರ. ಸಿಎಂ ಯೋಗಿ ಆದಿತ್ಯನಾಥ, ಮೋದಿ ನಾಯಕತ್ವದಲ್ಲಿ ಹುಲಿ ಸಂರಕ್ಷಣೆಗೆ ಬದ್ಧ ಎಂದು ತಿಳಿಸಿದರು.

ಕೇಂದ್ರ-ರಾಜ್ಯ ಸರಕಾರ ಪ್ರಯತ್ನದಿಂದ “ವಿಕಸಿತ ಭಾರತ’ ಸಾಧ್ಯ
ಕೇಂದ್ರ ಹಾಗೂ ರಾಜ್ಯ ಸರಕಾರಗಳ ಸಂಘಟಿತ ಪ್ರಯತ್ನದಿಂದ “ವಿಕಸಿತ ಭಾರತ’ದ ಗುರಿಯನ್ನು ಸಾಧಿಸುವುದು ಖಚಿತ ಎಂದು ಪ್ರಧಾನಿ ನರೇಂದ್ರ ಮೋದಿ ರವಿವಾರ ಹೇಳಿದರು. ಪರಂಪರೆಯನ್ನು ಅಭಿವೃದ್ಧಿಪಡಿಸುವುದು ಹಾಗೂ ಅಭಿವೃದ್ಧಿಯ ಪರಂಪರೆಯನ್ನು ಬೆಳೆಸುವುದು ಎರಡೂ, “ವಿಕಸಿತ ಭಾರತ’ದ ಕಲ್ಪನೆಯಲ್ಲಿ ವಿಶೇಷ ಸ್ಥಾನ ಪಡೆದಿವೆ ಎಂದು ಪ್ರಧಾನಿ ಹೇಳಿರುವುದಾಗಿ ಬಿಜೆಪಿಯ ಹಿರಿಯ ಮುಖಂಡ ವಿನಯ್‌ ಸಹಸ್ರ ಬುದ್ಧೆ ಹೇಳಿದ್ದಾರೆ. ಬಿಜೆಪಿ ಆಡಳಿತದ ರಾಜ್ಯಗಳ 13 ಮುಖ್ಯಮಂತ್ರಿಗಳು ಹಾಗೂ 15 ಉಪಮುಖ್ಯಮಂತ್ರಿ ಗಳನ್ನೊಳಗೊಂಡ “ಮುಖ್ಯಮಂತ್ರಿ ಪರಿಷದ್‌’ ಸಭೆಯಲ್ಲಿ ಮೋದಿ ಮಾತನಾಡಿದ್ದು, ಸರಕಾರದ ಯೋಜನೆ ಜನರಿಗೆ ತಲುಪಲು ಸಾಮಾಜಿಕ ಜಾಲತಾಣದ ಸಮರ್ಪಕ ಬಳಕೆಯಾಗಲಿ ಎಂದಿದ್ದಾರೆ.

ಟಾಪ್ ನ್ಯೂಸ್

da

Davanagere: ಗಣೇಶ ವಿಸರ್ಜನಾ ಮೆರವಣಿಗೆ ವೇಳೆ ಕಲ್ಲು ತೂರಾಟ

Kundapura: ಖಾಸಗಿ ಬಸ್‌ಗಳ ಮಧ್ಯೆ ಪೈಪೋಟಿ… ನಿರ್ವಾಹಕನಿಗೆ ಗಾಯ

Kundapura: ಖಾಸಗಿ ಬಸ್‌ಗಳ ಮಧ್ಯೆ ಪೈಪೋಟಿ… ನಿರ್ವಾಹಕನಿಗೆ ಗಾಯ

Modi (2)

PM ಮೋದಿ ಅಮೆರಿಕ ಪ್ರವಾಸ; ಮಣಿಪುರಕ್ಕೆ ಹೋಗುವುದಿಲ್ಲವೇಕೆ?:ಕಾಂಗ್ರೆಸ್ ಪ್ರಶ್ನೆ

High Court: ಮಹಿಳೆ ಅಪಹರಣ ಕೇಸ್‌; ರೇವಣ್ಣ ಅರ್ಜಿ ವಿಚಾರಣೆ ಮುಂದಕ್ಕೆ

High Court: ಮಹಿಳೆ ಅಪಹರಣ ಕೇಸ್‌; ಎಚ್‌.ಡಿ.ರೇವಣ್ಣ ಅರ್ಜಿ ವಿಚಾರಣೆ ಮುಂದಕ್ಕೆ

11

Eshwara Khandre: ಮಹದಾಯಿಗೆ ಅನುಮತಿ ಸಿಗೋವರೆಗೂ ಮರ ಕಡಿಯಲು ಬಿಡಲ್ಲ

H.D.Kumaraswamy

H. D. Kumaraswamy: ರಾಜಕೀಯ ಮಾಡಲು, ಬೆಂಕಿ ಹಚ್ಚಲು ಬಂದಿಲ್ಲ

1-frr

BJP ಶಾಸಕ ಮುನಿರತ್ನಗೆ ಷರತ್ತುಬದ್ಧ ಜಾಮೀನು; ಆದರೂ ತಪ್ಪಿಲ್ಲ ಸಂಕಷ್ಟ!


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Modi (2)

PM ಮೋದಿ ಅಮೆರಿಕ ಪ್ರವಾಸ; ಮಣಿಪುರಕ್ಕೆ ಹೋಗುವುದಿಲ್ಲವೇಕೆ?:ಕಾಂಗ್ರೆಸ್ ಪ್ರಶ್ನೆ

1-tirupati-laddu

Tirupati ತಿರುಪತಿ ಲಡ್ದು ಪ್ರಸಾದದಲ್ಲಿ ಬೀಫ್ ಫ್ಯಾಟ್!:ಲ್ಯಾಬ್ ವರದಿಯಲ್ಲಿ ದೃಢ

Chennai: ಗ್ರಾಹಕ ನಿಂದಿಸಿದ್ದಕ್ಕೆ ಖಿನ್ನತೆಗೆ ಒಳಗಾಗಿ ಫುಡ್‌ ಡೆಲಿವರಿ ಯುವಕ ಆತ್ಮಹತ್ಯೆ

Chennai: ಗ್ರಾಹಕ ನಿಂದಿಸಿದ್ದಕ್ಕೆ ಖಿನ್ನತೆಗೆ ಒಳಗಾಗಿ ಫುಡ್‌ ಡೆಲಿವರಿ ಯುವಕ ಆತ್ಮಹತ್ಯೆ

Haryana: Financial assistance to women, MSP promised; BJP manifesto released

Haryana: ಮಹಿಳೆಯರಿಗೆ ವಿತ್ತ ನೆರವು, ಎಂಎಸ್‌ ಪಿ ಭರವಸೆ; ಬಿಜೆಪಿ ಪ್ರಣಾಳಿಕೆ ಬಿಡುಗಡೆ

Chennai: ರಸ್ತೆ ಬದಿ ಪತ್ತೆಯಾದ ಸೂಟ್‌ಕೇಸ್‌ನಲ್ಲಿತ್ತು ಮಹಿಳೆಯ ಕತ್ತರಿಸಿದ ದೇಹದ ಭಾಗಗಳು…

Chennai: ರಸ್ತೆ ಬದಿ ಪತ್ತೆಯಾದ ಸೂಟ್‌ಕೇಸ್‌ನಲ್ಲಿತ್ತು ಮಹಿಳೆಯ ಕತ್ತರಿಸಿದ ದೇಹದ ಭಾಗಗಳು…

MUST WATCH

udayavani youtube

Kaljigaದಲ್ಲಿ ದೈವದ ಅಪಪ್ರಚಾರ ನಡೆದಿಲ್ಲ, ಸಿನಿಮಾ ನೋಡಿದ ಬಳಿಕ ಈ ಬಗ್ಗೆ ಪ್ರತಿಕ್ರಿಯಿಸಿ

udayavani youtube

ನವಜಾತ ಶಿಶುಗಳಲ್ಲಿ ಶ್ರವಣ ಶಕ್ತಿ ಸಮಸ್ಯೆ ಕುರಿತು ಸಂಪೂರ್ಣ ಮಾಹಿತಿ

udayavani youtube

ಅಂತರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆ ಅಂಗವಾಗಿ ತಾಲೂಕು ಮಟ್ಟದ ಮಾನವ ಸರಪಳಿ ಕಾರ್ಯಕ್ರಮ

udayavani youtube

ಈಟ್ ರಾಜಾ ಶಾಪ್ ನಲ್ಲಿ ಜ್ಯೂಸ್ ಕುಡಿಯೋದಷ್ಟೇ ಅಲ್ಲ ತಿನ್ನಲೂ ಬಹುದು

udayavani youtube

ಅಯ್ಯೋ…ಸಂತೆಕಟ್ಟೆ ಅಂಡರ್ ಪಾಸ್ ಪ್ರಯಾಣ ನಿತ್ಯ ನರಕ!

ಹೊಸ ಸೇರ್ಪಡೆ

da

Davanagere: ಗಣೇಶ ವಿಸರ್ಜನಾ ಮೆರವಣಿಗೆ ವೇಳೆ ಕಲ್ಲು ತೂರಾಟ

POCSO ಪ್ರಕರಣ : ಜ್ಯೋತಿಷಿ ನರಸಿಂಹ ಪ್ರಸಾದ್‌ ಪಾಂಗಣ್ಣಾಯ ಬಂಧನ

POCSO ಪ್ರಕರಣ : ಜ್ಯೋತಿಷಿ ನರಸಿಂಹ ಪ್ರಸಾದ್‌ ಪಾಂಗಣ್ಣಾಯ ಬಂಧನ

Kundapura: ಪ್ರಾಣಿ ತ್ಯಾಜ್ಯ ಚೀಲದಲ್ಲಿ ಪತ್ತೆ… ಕೇಸು ದಾಖಲು

Kundapura: ಪ್ರಾಣಿ ತ್ಯಾಜ್ಯ ಚೀಲದಲ್ಲಿ ಪತ್ತೆ… ಕೇಸು ದಾಖಲು

1-baa

Mangalore Port ಇಬ್ಬರು ಬಾಲಕಾರ್ಮಿಕರ ರಕ್ಷಣೆ

Kundapura: ಖಾಸಗಿ ಬಸ್‌ಗಳ ಮಧ್ಯೆ ಪೈಪೋಟಿ… ನಿರ್ವಾಹಕನಿಗೆ ಗಾಯ

Kundapura: ಖಾಸಗಿ ಬಸ್‌ಗಳ ಮಧ್ಯೆ ಪೈಪೋಟಿ… ನಿರ್ವಾಹಕನಿಗೆ ಗಾಯ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.