![Thirthahalli: ಸಾಲ ಕಟ್ಟದ್ದಕ್ಕೆ ಕಿವಿಯೋಲೆ ಕಿತ್ತ ಬ್ಯಾಂಕ್ ಸಿಬ್ಬಂದಿ!](https://www.udayavani.com/wp-content/uploads/2025/02/19-4-415x249.jpg)
![Thirthahalli: ಸಾಲ ಕಟ್ಟದ್ದಕ್ಕೆ ಕಿವಿಯೋಲೆ ಕಿತ್ತ ಬ್ಯಾಂಕ್ ಸಿಬ್ಬಂದಿ!](https://www.udayavani.com/wp-content/uploads/2025/02/19-4-415x249.jpg)
Team Udayavani, Jan 8, 2020, 12:08 PM IST
ಟೆಹ್ರಾನ್: ಇರಾಕ್ ವಾಯುನೆಲೆಯಲ್ಲಿರುವ ಅಮೆರಿಕ ಪಡೆಗಳನ್ನು ಗುರಿಯಾಗಿರಿಸಿಕೊಂಡು ಇರಾನ್ ನಡೆಸಿದ 15 ಮಿಸೈಲ್ಸ್ ದಾಳಿಯಲ್ಲಿ 80 ಅಮೆರಿಕನ್ ಟೆರರಿಸ್ಟ್ (ಸೈನಿಕರು) ಸಾವನ್ನಪ್ಪಿರುವುದಾಗಿ ಇರಾನ್ ಸ್ಟೇಟ್ ಟೆಲಿವಿಷನ್ ವರದಿ ಮಾಡಿದೆ.
ನಮ್ಮ ಯಾವುದೇ ಮಿಸೈಲ್ಸ್ ಗಳಿಗೆ ತಡೆಯೊಡ್ಡಲು ಸಾಧ್ಯವಾಗಿಲ್ಲ ಎಂದು ಇರಾನ್ ಹೇಳಿದೆ. ರೆವಲ್ಯೂಷನರಿ ಗಾರ್ಡ್ಸ್ ಮೂಲಗಳ ಪ್ರಕಾರ, ಒಂದು ವೇಳೆ ಅಮೆರಿಕ ಪ್ರತ್ಯುತ್ತರ ನೀಡಲು ಮುಂದಾದರೆ ಇರಾನ್ ಕೂಡಾ ನೂರು ಇತರ ಪ್ರದೇಶಗಳ ಮೇಲೆ ದಾಳಿ ನಡೆಸಲು ಗುರಿ ಇರಿಸಿಕೊಂಡಿದೆ ಎಂದು ವರದಿ ತಿಳಿಸಿದೆ.
ಇರಾನ್ ಮಿಸೈಲ್ಸ್ ದಾಳಿಯಲ್ಲಿ ಅಮೆರಿಕದ ಹೆಲಿಕಾಪ್ಟರ್ ಗಳು ಮತ್ತು ಮಿಲಿಟರಿ ಯುದ್ಧೋಪಕರಣಗಳು ಹಾನಿಗೊಂಡಿರುವುದಾಗಿ ವರದಿ ತಿಳಿಸಿದೆ.
ಇರಾಕ್ ನಲ್ಲಿರುವ ಅಮೆರಿಕ ಮೈತ್ರಿಕೂಟದ ಪಡೆಗಳ ಮೇಲೆ ಬುಧವಾರ ನಸುಕಿನ ವೇಳೆ ಇರಾನ್ ಮಿಸೈಲ್ ದಾಳಿ ನಡೆಸಿದೆ. ಇತ್ತೀಚೆಗೆ ಅಮೆರಿಕದ ವೈಮಾನಿಕ ಪಡೆ ದಾಳಿ ನಡೆಸಿ ಇರಾನ್ ಮಿಲಿಟರಿ ಜನರಲ್ ಕಮಾಂಡರ್ ಖಾಸಿಂ ಸೊಲೆಮನಿಯನ್ನು ಹತ್ಯೆಗೈದಿತ್ತು. ಅಮೆರಿಕದ ವಿರುದ್ಧ ಪ್ರತೀಕಾರಕ್ಕಾಗಿ ಮಿಸೈಲ್ ದಾಳಿ ನಡೆಸಿರುವುದಾಗಿ ಇರಾನ್ ಹೇಳಿದೆ.
ಮಿಲಿಟರಿ ಜನರಲ್ ಖಾಸಿಂ ಸೊಲೆಮನಿ ಹತ್ಯೆಗೆ ಪ್ರತೀಕಾರ ತೀರಿಸಿಕೊಳ್ಳದೇ ಬಿಡುವುದಿಲ್ಲ. ಮಿಸೈಲ್ ದಾಳಿ ಅಮೆರಿಕಕ್ಕೆ ನೀಡಿದ ಎಚ್ಚರಿಕೆಯಾಗಿದೆ. ಒಂದು ವೇಳೆ ಅಮೆರಿಕ ಪ್ರತ್ಯುತ್ತರಕ್ಕೆ ಮುಂದಾದರೆ ನಾವು ಇನ್ನಷ್ಟು ಹಿಂಸಾತ್ಮಕ ದಾಳಿ ನಡೆಸಬೇಕಾಗುತ್ತದೆ ಎಂದು ಇರಾನ್ ಎಚ್ಚರಿಕೆ ನೀಡಿರುವುದಾಗಿ ವರದಿ ತಿಳಿಸಿದೆ.
ಮಧ್ಯ ಏಷ್ಯಾದಿಂದ ಅಮೆರಿಕ ತನ್ನ ಪಡೆಗಳನ್ನು ಹಿಂದಕ್ಕೆ ಕರೆಯಿಸಿಕೊಳ್ಳಬೇಕು ಎಂದು ಇರಾನ್ ಒತ್ತಾಯಿಸಿರುವುದಾಗಿ ಇರಾನ್ ಸ್ವಾಮಿತ್ವದ ಟಿವಿ ವರದಿ ಮಾಡಿದೆ.
ಇದೀಗ ಅಮೆರಿಕಕ್ಕೆ ನಮ್ಮ ಶಕ್ತಿ ಏನೆಂಬುದು ಅರ್ಥವಾಗಿದೆ. ಮಧ್ಯ ಏಷ್ಯಾದಿಂದ ಅಮೆರಿಕ ಪಡೆಗಳನ್ನು ವಾಪಸ್ ಕರೆಯಿಸಿಕೊಳ್ಳಲು ಇದೀಗ ಸಮಯ ಬಂದಿದೆ ಎಂದು ಇರಾನ್ ಸೇನಾಪಡೆಯ ಜನರಲ್ ಮೊಹಮ್ಮದ್ ಬಾಖೇರಿ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
Mahakumbh Rush: ಗೊಂದಲಕಾರಿ ಪ್ರಕಟಣೆಯಿಂದ ರೈಲು ನಿಲ್ದಾಣದಲ್ಲಿ ಕಾಲ್ತುಳಿತ: ಪೊಲೀಸರು
RSS; ಹಿಂದೂ ಸಮಾಜ ದೇಶದ ಜವಾಬ್ದಾರಿಯುತ ಸಮುದಾಯ: ಮೋಹನ್ ಭಾಗವತ್
Controversy; ಮಹಾಕುಂಭ ‘ಅರ್ಥಹೀನ’ ಎಂದ ಲಾಲು ಪ್ರಸಾದ್ ಯಾದವ್
Pariksha Pe Charcha: ಸ್ಮಾರ್ಟ್ ಫೋನ್ಗಿಂತಲೂ ನೀವು ಸ್ಮಾರ್ಟ್ ಆಗಬೇಕು:ಸದ್ಗುರು
Mahakumbh sensation: ಕೇರಳದಲ್ಲಿ ಕುಂಭಮೇಳದ ಮೊನಾಲಿಸಾ ಹವಾ
Kaup: ಸ್ಕೂಟಿ, ಕಾರಿಗೆ ಬಸ್ ಢಿಕ್ಕಿ; ಸವಾರನಿಗೆ ಗಾಯ
Thirthahalli: ಸಾಲ ಕಟ್ಟದ್ದಕ್ಕೆ ಕಿವಿಯೋಲೆ ಕಿತ್ತ ಬ್ಯಾಂಕ್ ಸಿಬ್ಬಂದಿ!
Padubidri: ಕಬ್ಬಿಣದ ತುಂಡು ಹೆಕ್ಕಿದ ಬಾಲಕರಿಗೆ ರೈಲ್ವೇ ಗ್ಯಾಂಗ್ಮನ್ ಹಲ್ಲೆ; ದೂರು
Restriction: ನಿಷೇಧವಿದ್ದರೂ ಗೂಡ್ಸ್ ವಾಹನಗಳಲ್ಲಿ ಜನರು ಬಿಳಿಗಿರಿ ರಂಗನ ಬೆಟ್ಟಕ್ಕೆ ಪಯಣ!
Pro Hockey: ಇಂಗ್ಲೆಂಡ್ ವಿರುದ್ಧ ಭಾರತ ವನಿತೆಯರಿಗೆ ಸೋಲು
You seem to have an Ad Blocker on.
To continue reading, please turn it off or whitelist Udayavani.