Kuki: ಮಣಿಪುರಕ್ಕೆ ಅಕ್ರಮ ಪ್ರವೇಶಿಸಿದ 900 ಕುಕಿ ಉಗ್ರರು: ಭದ್ರತಾ ಸಂಸ್ಥೆ ಮಾಹಿತಿ
Team Udayavani, Sep 21, 2024, 9:06 AM IST
ಇಂಫಾಲ್: ಮ್ಯಾನ್ಮಾರ್ ನಿಂದ 900 ಕುಕಿ ಉಗ್ರರು ಒಳನುಸುಳಿರುವುದು ಮಣಿಪುರದಲ್ಲಿ ಬೆಳಕಿಗೆ ಬಂದಿದೆ ಎಂದು ರಾಜ್ಯ ಭದ್ರತಾ ಸಲಹೆಗಾರ ಕುಲದೀಪ್ ಸಿಂಗ್ ಮಾಹಿತಿ ನೀಡಿದ್ದಾರೆ.
ಶುಕ್ರವಾರ (ಸೆ.20) ರಂದು ಪತ್ರಿಕಾಗೋಷ್ಠಿ ನಡೆಸಿದ ಅವರು ಕಳೆದ ಮೂರ್ನಾಲ್ಕು ದಿನಗಳಿಂದ ಮಣಿಪುರದಲ್ಲಿ ಉಗ್ರಗಾಮಿಗಳ ಚಲನವಲನದ ಬಗ್ಗೆ ವರದಿಯಾಗುತ್ತಿದೆ ಒಳನುಸುಳುವ ಉಗ್ರಗಾಮಿಗಳು ಡ್ರೋನ್ಗಳು, ಬಾಂಬ್ಗಳು, ಸ್ಪೋಟಕಗಳು, ಕ್ಷಿಪಣಿಗಳು ಮತ್ತು ಗೆರಿಲ್ಲಾ ಯುದ್ಧ ಸಾಧನಗಳನ್ನು ಬಳಸುತ್ತಿದ್ದಾರೆ, 30-30 ಜನರ ತಂಡ ವಿವಿಧ ಪ್ರದೇಶಗಳಲ್ಲಿ ಅಡಗಿಕೊಂಡಿದ್ದಾರೆ ಎಂದು ಮಾಹಿತಿ ನೀಡಿದ್ದಾರೆ.
ಸೆಪ್ಟೆಂಬರ್ 28 ರ ಒಳಗೆ ಈ ತಂಡ ಮೈತೆಯ್ ಗ್ರಾಮಗಳ ಮೇಲೆ ದಾಳಿ ನಡೆಸುವ ಮುನ್ಸೂಚನೆ ಇದ್ದು ದಾಳಿಯ ಭೀತಿಯ ಹಿನ್ನೆಲೆಯಲ್ಲಿ ಚುರಾಚಂದ್ಪುರ, ತೆಂಗನೌಪಾಲ್, ಉಖ್ರುಲ್, ಕಾಮ್ಜಾಂಗ್ ಮತ್ತು ಫರ್ಜೌಲ್ ಸೇರಿದಂತೆ ಹಲವು ಜಿಲ್ಲೆಗಳಲ್ಲಿ ಕಟ್ಟೆಚ್ಚರ ವಹಿಸಲಾಗಿದೆ ಎಂದು ಹೇಳಿದ್ದಾರೆ.
ಮಣಿಪುರದಲ್ಲಿ ಮೇ 3, 2023 ರಿಂದ ಕುಕಿ ಮತ್ತು ಮೈತೇಯಿ ಸಮುದಾಯಗಳ ನಡುವೆ ಮೀಸಲಾತಿಗಾಗಿ ಹಿಂಸಾಚಾರ ನಡೆಯುತ್ತಿದೆ. ಸರ್ಕಾರಿ ಅಂಕಿಅಂಶಗಳ ಪ್ರಕಾರ, ಹಿಂಸಾಚಾರದಲ್ಲಿ ಇದುವರೆಗೆ 237 ಜನರು ಸಾವನ್ನಪ್ಪಿದ್ದಾರೆ. 1500ಕ್ಕೂ ಹೆಚ್ಚು ಮಂದಿ ಗಾಯಗೊಂಡಿದ್ದಾರೆ. 60 ಸಾವಿರಕ್ಕೂ ಹೆಚ್ಚು ಮಂದಿ ಮನೆ ತೊರೆದಿದ್ದಾರೆ.
ಮಣಿಪುರ ಪೊಲೀಸರು, ಸಿಆರ್ಪಿಎಫ್ ಮತ್ತು ಬಿಎಸ್ಎಫ್ ಜಂಟಿ ಕಾರ್ಯಾಚರಣೆಯಲ್ಲಿ ಸೆಪ್ಟೆಂಬರ್ 12 ರಂದು ಚುರಾಚಂದ್ಪುರದಲ್ಲಿ ಅಪಾರ ಪ್ರಮಾಣದ ಶಸ್ತ್ರಾಸ್ತ್ರಗಳು, ಮದ್ದುಗುಂಡುಗಳು ಮತ್ತು ಇತರ ಶಸ್ತ್ರಾಸ್ತ್ರಗಳನ್ನು ಸೇನೆ ವಶಪಡಿಸಿಕೊಂಡಿತ್ತು.
ಇಂಫಾಲದಲ್ಲಿ ಸಚಿವರ ಆಪ್ತ ಸಹಾಯಕನ ಅಪಹರಣ:
ಶುಕ್ರವಾರ (ಸೆ.20) ರಂದು ಇಂಫಾಲ್ ಪೂರ್ವ ಜಿಲ್ಲೆಯಲ್ಲಿ ಅಪರಿಚಿತ ದುಷ್ಕರ್ಮಿಗಳ ತಂಡವೊಂದು ಮಣಿಪುರ ಸಚಿವ ಎಲ್. ಸುಸಿಂದರೊ ಅವರ ಆಪ್ತ ಸಹಾಯಕನನ್ನು ಅವರ ನಿವಾಸದಿಂದಲೇ ಬೆಳಗ್ಗೆ 8:30ರ ಸುಮಾರಿಗೆ ಅಪಹರಿಸಲಾಗಿದೆ, ಆಪ್ತ ಸಹಾಯಕನನ್ನು ಸಾರಂಗ್ತೇಂ ಸೋಮರಂದ್ರೋ(43) ಎಂದು ಗುರುತಿಸಲಾಗಿದೆ. ಘಟನೆಯ ವೇಳೆ ಅವರು ತಮ್ಮ ಅಧಿಕೃತ ಕೆಲಸಕ್ಕಾಗಿ ಹೋಗುತ್ತಿದ್ದರು ಈ ವೇಳೆ ತಂಡ ಹಲವು ಸುತ್ತು ಗಾಳಿಯಲ್ಲಿ ಗುಂಡು ಹಾರಿಸಿ ಅಪಹರಣ ಮಾಡಿದ್ದಾರೆ ಎಂದು ಪೊಲೀಸರು ತಿಳಿಸಿದ್ದಾರೆ.
ಅಪಹರಣಕ್ಕೊಳಗಾದ ವ್ಯಕ್ತಿಗಾಗಿ ಶೋಧ ನಡೆಯುತ್ತಿದೆ. ಆತನ ಅಪಹರಣದ ಹಿಂದಿನ ಕಾರಣ ತಿಳಿದುಬಂದಿಲ್ಲ. ಅಲ್ಲದೇ ಯಾವುದೇ ಬಂಡುಕೋರ ಗುಂಪು ಘಟನೆಯ ಹೊಣೆ ಹೊತ್ತುಕೊಂಡಿಲ್ಲ ಎನ್ನಲಾಗಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Laddoo Row: ಲಡ್ಡು ತಯಾರಿಸಲು ತಿರುಪತಿಗೆ ನಾವು ತುಪ್ಪ ಪೂರೈಕೆ ಮಾಡಿಲ್ಲ: ಅಮೂಲ್ ಸ್ಪಷ್ಟನೆ
Atishi: ದೆಹಲಿ ನೂತನ ಸಿಎಂ ಆಗಿ ಆತಿಶಿ ಇಂದು ಅಧಿಕಾರ ಸ್ವೀಕಾರ
PM Modi U.S. visit: ಇಂದಿನಿಂದ 3 ದಿನಗಳ ಕಾಲ ಮೋದಿ ಅಮೆರಿಕ ಪ್ರವಾಸ
Tirupati: ಲಡ್ಡಿಗೆ ಪ್ರಾಣಿ ಕೊಬ್ಬು: ಟಿಟಿಡಿ ಹೇಳಿದ್ದೇನು? ತನಿಖೆಗೆ ನಿರ್ಧಾರ
Tirupati Laddus row;ತಪ್ಪಿತಸ್ಥರನ್ನು ಸುಮ್ಮನೆ ಬಿಡಲು ಸಾಧ್ಯವೇ?: ಸಿಎಂ ನಾಯ್ಡು ಪ್ರಶ್ನೆ
MUST WATCH
Kaljigaದಲ್ಲಿ ದೈವದ ಅಪಪ್ರಚಾರ ನಡೆದಿಲ್ಲ, ಸಿನಿಮಾ ನೋಡಿದ ಬಳಿಕ ಈ ಬಗ್ಗೆ ಪ್ರತಿಕ್ರಿಯಿಸಿ
ನವಜಾತ ಶಿಶುಗಳಲ್ಲಿ ಶ್ರವಣ ಶಕ್ತಿ ಸಮಸ್ಯೆ ಕುರಿತು ಸಂಪೂರ್ಣ ಮಾಹಿತಿ
ಅಂತರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆ ಅಂಗವಾಗಿ ತಾಲೂಕು ಮಟ್ಟದ ಮಾನವ ಸರಪಳಿ ಕಾರ್ಯಕ್ರಮ
ಈಟ್ ರಾಜಾ ಶಾಪ್ ನಲ್ಲಿ ಜ್ಯೂಸ್ ಕುಡಿಯೋದಷ್ಟೇ ಅಲ್ಲ ತಿನ್ನಲೂ ಬಹುದು
ಅಯ್ಯೋ…ಸಂತೆಕಟ್ಟೆ ಅಂಡರ್ ಪಾಸ್ ಪ್ರಯಾಣ ನಿತ್ಯ ನರಕ!
ಹೊಸ ಸೇರ್ಪಡೆ
Upendra: ‘ಭಗವಂತನೇ ಈ ಸಿನಿಮಾ ಮಾಡ್ಸಿದಾನೆ..’: ‘ಉಪೇಂದ್ರ’ ನೋಡಿ ಉಪೇಂದ್ರ ಭಾವುಕ
Artificial Intelligence: ಕೃತಕ ಬುದ್ಧಿಮತ್ತೆ ಕ್ರಾಂತಿ- ಹೊಸ ಸಂಗಾತಿ ಹೊಸ ಅವಕಾಶ!
Mangaluru: ಶೋಷಣೆ ಎಲ್ಲ ರಂಗದಲ್ಲೂ ಇದೆ: ಡಾ| ಗುರುಕಿರಣ್
Bengaluru: ಪರಪ್ಪನ ಅಗ್ರಹಾರ ಜೈಲಿನಲ್ಲಿ ಮೊಬೈಲ್ ಫೋನ್ ಅಂಗಡಿ!
Chikkaballapura: ವಿಶ್ವ ಶಾಂತಿ ದಿನದ ಪ್ರಯುಕ್ತ ಚಿಕ್ಕಬಳ್ಳಾಪುರದಲ್ಲಿ ನಡಿಗೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.