ಗಿರಣಿಯಲ್ಲಿ ಅತ್ಯಾಚಾರ ಯತ್ನ; ದಲಿತ ಯುವತಿಯನ್ನು ಬಿಸಿ ಎಣ್ಣೆ ಕಡಾಯಿಗೆ ಎಸೆದ ದುರುಳರು
Team Udayavani, Dec 31, 2023, 3:19 PM IST
ಲಕ್ನೋ: ಎಣ್ಣೆ ಗಿರಣಿಯಲ್ಲಿ ಕೆಲಸ ಮಾಡುತ್ತಿದ್ದ 18 ವರ್ಷ ಪ್ರಾಯದ ದಲಿತ ಯುವತಿಯ ಮೇಲೆ ಲೈಂಗಿಕ ದೌರ್ಜನ್ಯಕ್ಕೆ ಯತ್ನಿಸಿ, ಪ್ರತಿಭಟಿಸಿದ ವೇಳೆ ಆಕೆಯನ್ನು ಬಿಸಿ ಎಣ್ಣೆಯಿದ್ದ ಕಡಾಯಿಗೆ ಎಸೆದ ಘಟನೆ ಉತ್ತರ ಪ್ರದೇಶದ ಬಾಘ್ಪತ್ ನಲ್ಲಿ ನಡೆದಿದೆ.
ಗಂಭೀರ ಸುಟ್ಟಗಾಯಗಳಾಗಿರುವ ಯುವತಿಯನ್ನು ಚಿಕಿತ್ಸೆಗಾಗಿ ದೆಹಲಿಗೆ ಸ್ಥಳಾಂತರಿಸಲಾಗಿದೆ. ಗಿರಣಿ ಮಾಲೀಕ ಸೇರಿದಂತೆ ಮೂವರು ಆರೋಪಿಗಳನ್ನು ಬಂಧಿಸಲಾಗಿದೆ.
ಮಹಿಳೆಯ ಸಹೋದರ ನೀಡಿದ ದೂರಿನ ಪ್ರಕಾರ, ಆತನ ಕುಟುಂಬದ ಸದಸ್ಯರು ಧನೂರ ಸಿಲ್ವರ್ನಗರ ಗ್ರಾಮದ ಆಯಿಲ್ ಮಿಲ್ನಲ್ಲಿ ಕೆಲಸ ಮಾಡುತ್ತಿದ್ದರು. ಸಹೋದರಿಗೆ ಆರೋಪಿಗಳಾದ ಗಿರಣಿ ಮಾಲೀಕ ಪ್ರಮೋದ್ ಮತ್ತು ಸಹಚರರಾದ ರಾಜು ಮತ್ತು ಸಂದೀಪ್ ಕಿರುಕುಳ ನೀಡಿದ್ದಾರೆ. ಆಕೆ ಪ್ರತಿಭಟನೆ ನಡೆಸಿದಾಗ ಆರೋಪಿಗಳು ಜಾತಿ ನಿಂದನೆ ಮಾಡಿದ್ದಾರೆ. ನಂತರ ಅವರು ಅವಳನ್ನು ಬಿಸಿ ಎಣ್ಣೆಯಿಂದ ತುಂಬಿದ ಕಡಾಯಿಗೆ ತಳ್ಳಿದರು ಎಂದು ಆಕೆಯ ಸಹೋದರ ಹೇಳಿದ್ದಾರೆ.
ಇದನ್ನೂ ಓದಿ:High Blood Pressure: ಅಧಿಕ ರಕ್ತದೊತ್ತಡ (ಹೈ ಬಿಪಿ) ಖಂಡಿತವಾಗಿಯೂ ನಿರ್ಲಕ್ಷ್ಯ ಬೇಡ!
ದೆಹಲಿ ಆಸ್ಪತ್ರೆಯಲ್ಲಿ ದಾಖಲಿಸಿದ ಹೇಳಿಕೆಯಲ್ಲಿ ಯುವತಿಯು, ಆರೋಪಿಯು ತನ್ನೊಂದಿಗೆ ಅನುಚಿತವಾಗಿ ವರ್ತಿಸಿದನು ಮತ್ತು ಅವಳನ್ನು ಎಣ್ಣೆ ಕಡಾಯಿಗೆ ತಳ್ಳುವ ಮೊದಲು ತನ್ನನ್ನು ಅವಾಚ್ಯವಾಗಿ ನಿಂದಿಸಿದನು ಎಂದು ಹೇಳಿದ್ದಾಳೆ.
ಯುವತಿಯು ತನ್ನ ದೇಹದ ಅರ್ಧಕ್ಕಿಂತಲೂ ಹೆಚ್ಚು ಸುಟ್ಟಗಾಯಗಳನ್ನು ಅನುಭವಿಸಿದಳು, ಆಕೆಯ ಕಾಲುಗಳು ಮತ್ತು ಕೈಗಳು ಗಂಭೀರವಾಗಿ ಸುಟ್ಟುಹೋಗಿವೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ಉಡುಪಿಯ ಈ ಜಾಗದಲ್ಲಿ ರಸಂ ಪುರಿ ತುಂಬಾನೇ ಫೇಮಸ್
ತಿರುಪತಿ ಲಡ್ಡು ವಿವಾದ ಪೇಜಾವರ ಶ್ರೀಗಳು ಹೇಳಿದ್ದೇನು ?
Kaljigaದಲ್ಲಿ ದೈವದ ಅಪಪ್ರಚಾರ ನಡೆದಿಲ್ಲ, ಸಿನಿಮಾ ನೋಡಿದ ಬಳಿಕ ಈ ಬಗ್ಗೆ ಪ್ರತಿಕ್ರಿಯಿಸಿ
ನವಜಾತ ಶಿಶುಗಳಲ್ಲಿ ಶ್ರವಣ ಶಕ್ತಿ ಸಮಸ್ಯೆ ಕುರಿತು ಸಂಪೂರ್ಣ ಮಾಹಿತಿ
ಅಂತರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆ ಅಂಗವಾಗಿ ತಾಲೂಕು ಮಟ್ಟದ ಮಾನವ ಸರಪಳಿ ಕಾರ್ಯಕ್ರಮ
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.