J&K; ಮತದಾನ ಪ್ರಕ್ರಿಯೆ ವೀಕ್ಷಿಸುತ್ತಿರುವ ವಿದೇಶಗಳ ಉನ್ನತ ಮಟ್ಟದ ರಾಜತಾಂತ್ರಿಕರು
ಆರು ಜಿಲ್ಲೆಗಳ 26 ಕ್ಷೇತ್ರಗಳಿಗೆ ಇಂದು ಮತದಾನ...
Team Udayavani, Sep 25, 2024, 11:19 AM IST
ಶ್ರೀನಗರ: ಇಲ್ಲಿ ಬುಧವಾರ(ಸೆ25 ) ನಡೆಯುತ್ತಿರುವ ವಿಧಾನಸಭಾ ಚುನಾವಣೆಯ ಎರಡನೇ ಹಂತದ ಮತದಾನ ಪ್ರಕ್ರಿಯೆಗಳನ್ನು ವೀಕ್ಷಿಸಲು ವಿವಿಧ ದೇಶಗಳ ಹಿರಿಯ ರಾಜತಾಂತ್ರಿಕರ ಉನ್ನತ ಮಟ್ಟದ ನಿಯೋಗ ಬಂದಿದೆ.
ಅಮೆರಿಕ, ಮೆಕ್ಸಿಕೋ, ಗಯಾನಾ, ದಕ್ಷಿಣ ಕೊರಿಯಾ, ಸೊಮಾಲಿಯಾ, ಪನಾಮ, ಸಿಂಗಾಪುರ್, ನೈಜೀರಿಯಾ, ಸ್ಪೇನ್, ದಕ್ಷಿಣ ಆಫ್ರಿಕಾ, ನಾರ್ವೆ, ತಾಂಜಾನಿಯಾ, ರುವಾಂಡಾ, ಅಲ್ಜೀರಿಯಾ ಮತ್ತು ಫಿಲಿಪೈನ್ಸ್ ದೇಶಗಳ ರಾಯಭಾರ ಕಚೇರಿಗಳು ಅವುಗಳ CdA/DCM ಪ್ರತಿನಿಧಿಗಳನ್ನೂ ಕಳುಹಿಸಿದ್ದು, ಸಚಿವರು ಸಮಾಲೋಚಕ ಶ್ರೇಣಿಯಲ್ಲಿರುವ ರಾಜಕೀಯ ಅಧಿಕಾರಿಗಳು ಪ್ರತಿನಿಧಿಸುತ್ತಿದ್ದಾರೆ.
ಕೇಂದ್ರಾಡಳಿತ ಪ್ರದೇಶದ ಆರು ಜಿಲ್ಲೆಗಳ 26 ಕ್ಷೇತ್ರಗಳಿಗೆ ಇಂದು ಮತದಾನ ನಡೆಯುತ್ತಿದೆ. ಶ್ರೀನಗರದ ಬೆಮಿನಾ ಪ್ರದೇಶ, ಬದ್ಗಾಮ್ ಪ್ರದೇಶದ ಮತಗಟ್ಟೆಯಲ್ಲಿ ಮತದಾನ ಪ್ರಕ್ರಿಯೆಗೆ ಸಾಕ್ಷಿಯಾದರು. ವ್ಯಾಪಕ ಭದ್ರತಾ ವ್ಯವಸ್ಥೆಗಳನ್ನು ಕೈಗೊಳ್ಳಲಾಗಿದೆ.
#WATCH | J&K Assembly elections | A delegation of diplomats from various countries arrives at a polling booth in Budgam area to witness the polling process.
26 constituencies across six districts of the UT are voting today. pic.twitter.com/N1ZFlE2nYN
— ANI (@ANI) September 25, 2024
ದಕ್ಷಿಣ ಆಫ್ರಿಕಾದ ರಾಜತಾಂತ್ರಿಕ ಲಾರಾ ಸ್ವಾರ್ಟ್ ಮಾತನಾಡಿ”ನಾವು 15 ದೇಶಗಳಿಂದ ಬಂದಿದ್ದು, ಮೊದಲ ಬಾರಿಗೆ ಜಮ್ಮು ಮತ್ತು ಕಾಶ್ಮೀರಕ್ಕೆ ಭೇಟಿ ನೀಡುತ್ತಿದ್ದೇನೆ. ವಿದೇಶಾಂಗ ಸಚಿವಾಲಯವು ಮತದಾನ ಕೇಂದ್ರಗಳಿಗೆ ಬಂದು ಭೇಟಿ ನೀಡಲು ಆಹ್ವಾನಿಸಿರುವುದು ನಿಜವಾಗಿಯೂ ವಿಶೇಷವಾಗಿದೆ” ಎಂದು ಹೇಳಿದರು.
ಎರಡನೇ ಹಂತದ ಮತದಾನದಲ್ಲಿ ಬೆಳಗ್ಗೆ 9 ಗಂಟೆಗೆ 10.22 % ಮತದಾನವಾಗಿದೆ. ಮತಗಟ್ಟೆಗಳಲ್ಲಿ ಉದ್ದನೆಯ ಸಾಲುಗಳು ಕಂಡುಬಂದಿವೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
High court: ಕಲಿಯುಗ ಬಂದಂತೆ ತೋರುತ್ತಿದೆ…ವೃದ್ಧ ದಂಪತಿಯ ಜೀವನಾಂಶ ಕಾನೂನು ಹೋರಾಟ!
BJP; ಆಕ್ರೋಶದ ಬಳಿಕ ಹೇಳಿಕೆ ಹಿಂಪಡೆದುಕೊಂಡ ಕಂಗನಾ ರಣಾವತ್
Uttar Pradesh: ಕಾಳಿಂಗ ಸರ್ಪವನ್ನು ಕೊಂದು ಮಗುವನ್ನು ರಕ್ಷಿಸಿದ ಪಿಟ್ ಬುಲ್ ಶ್ವಾನ!
Siddaramaiah ವಿರುದ್ಧ ಹೈ ಕೋರ್ಟ್ ತೀರ್ಪು: ಕಪಿಲ್ ಸಿಬಲ್ ಪ್ರತಿಕ್ರಿಯೆ
Sanatana Dharma; ಮುಂದುವರೆದ ಪವನ್ ಕಲ್ಯಾಣ್ vs ಪ್ರಕಾಶ್ ರಾಜ್ ಸಮರ
MUST WATCH
ಉಡುಪಿಯ ಈ ಜಾಗದಲ್ಲಿ ರಸಂ ಪುರಿ ತುಂಬಾನೇ ಫೇಮಸ್
ತಿರುಪತಿ ಲಡ್ಡು ವಿವಾದ ಪೇಜಾವರ ಶ್ರೀಗಳು ಹೇಳಿದ್ದೇನು ?
Kaljigaದಲ್ಲಿ ದೈವದ ಅಪಪ್ರಚಾರ ನಡೆದಿಲ್ಲ, ಸಿನಿಮಾ ನೋಡಿದ ಬಳಿಕ ಈ ಬಗ್ಗೆ ಪ್ರತಿಕ್ರಿಯಿಸಿ
ನವಜಾತ ಶಿಶುಗಳಲ್ಲಿ ಶ್ರವಣ ಶಕ್ತಿ ಸಮಸ್ಯೆ ಕುರಿತು ಸಂಪೂರ್ಣ ಮಾಹಿತಿ
ಅಂತರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆ ಅಂಗವಾಗಿ ತಾಲೂಕು ಮಟ್ಟದ ಮಾನವ ಸರಪಳಿ ಕಾರ್ಯಕ್ರಮ
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.