Meteorite; ಕೃಷಿಭೂಮಿಗೆ ಬಿದ್ದ ಉಲ್ಕಾಶಿಲೆ; ಗುಂಡಿಯಿಂದ ಹೊರಬರುತ್ತಿದೆ ಶಾಖ
Team Udayavani, May 29, 2024, 9:42 AM IST
ಚೆನ್ನೈ: ತಮಿಳುನಾಡಿನ ತಿರುಪತ್ತೂರು ಜಿಲ್ಲೆಯ ಆಚಮಂಗಲಂ ಗ್ರಾಮದ ವ್ಯಕ್ತಿಯೊಬ್ಬರು ತಮ್ಮ ಕೃಷಿ ಭೂಮಿಯಲ್ಲಿ ಉಲ್ಕಾಶಿಲೆ ಬಿದ್ದ ನಂತರ ಸೃಷ್ಟಿಯಾದ ಗುಂಡಿಯನ್ನು ಕಂಡುಹಿಡಿದಿದ್ದಾರೆ ಎಂದು ವರದಿಯಾಗಿದೆ.
ತನ್ನ ಕೃಷಿ ಭೂಮಿಯಲ್ಲಿ ಇದ್ದಕ್ಕಿದ್ದಂತೆ ಸೃಷ್ಟಿಯಾದ ಐದು ಅಡಿ ಆಳದ ಗುಂಡಿಯಿಂದ ಶಾಖವು ಹೊರಹೊಮ್ಮುತ್ತಿದೆ. ರಂಧ್ರ ಕಂಡ ನಂತರ, ಜಮೀನಿನ ಮಾಲೀಕ ಪೊಲೀಸರಿಗೆ ಮತ್ತು ಜಿಲ್ಲಾಧಿಕಾರಿಗಳಿಗೆ ಮಾಹಿತಿ ನೀಡಿದರು. ಅವರು ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.
ಅಧಿಕಾರಿಗಳು ರಂಧ್ರದ ಆಳದಿಂದ ಮಾದರಿಗಳನ್ನು ಸಂಗ್ರಹಿಸಿ ಹೆಚ್ಚಿನ ವಿಶ್ಲೇಷಣೆಗಾಗಿ ವೆಲ್ಲೂರು ಮತ್ತು ಚೆನ್ನೈಗೆ ಕಳುಹಿಸಿದ್ದಾರೆ.
“ನಾವು ರಂಧ್ರ ಮತ್ತು ಸುತ್ತಮುತ್ತಲಿನ ಸ್ಥಳದಿಂದ ಮಾದರಿಗಳನ್ನು ಸಂಗ್ರಹಿಸಿದ್ದೇವೆ. ಇದು ನೆಲಕ್ಕೆ ಅಪ್ಪಳಿಸಿದ ಉಲ್ಕಾಶಿಲೆಯಾಗಿದೆ. ಇದು ಮಂಗಳ ಮತ್ತು ಗುರು (ಗ್ರಹಗಳು) ನಡುವಿನ ಕ್ಷುದ್ರಗ್ರಹ ಸಾಲಿನಿಂದ ಇಲ್ಲಿಗೆ ಬಂದಿರಬಹುದು” ಎಂದು ಜಿಲ್ಲಾ ವಿಜ್ಞಾನ ಅಧಿಕಾರಿ ರವಿ ಹೇಳಿದ್ದಾರೆ.
ಹೆಚ್ಚಿನ ಪರಿಶೀಲನೆಗಾಗಿ ಮಾದರಿಗಳನ್ನು ಅಹಮದಾಬಾದ್ ಗೆ ಕಳುಹಿಸಲಾಗುವುದು ಎಂದು ಅವರು ಹೇಳಿದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ಉಡುಪಿಯ ಈ ಜಾಗದಲ್ಲಿ ರಸಂ ಪುರಿ ತುಂಬಾನೇ ಫೇಮಸ್
ತಿರುಪತಿ ಲಡ್ಡು ವಿವಾದ ಪೇಜಾವರ ಶ್ರೀಗಳು ಹೇಳಿದ್ದೇನು ?
Kaljigaದಲ್ಲಿ ದೈವದ ಅಪಪ್ರಚಾರ ನಡೆದಿಲ್ಲ, ಸಿನಿಮಾ ನೋಡಿದ ಬಳಿಕ ಈ ಬಗ್ಗೆ ಪ್ರತಿಕ್ರಿಯಿಸಿ
ನವಜಾತ ಶಿಶುಗಳಲ್ಲಿ ಶ್ರವಣ ಶಕ್ತಿ ಸಮಸ್ಯೆ ಕುರಿತು ಸಂಪೂರ್ಣ ಮಾಹಿತಿ
ಅಂತರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆ ಅಂಗವಾಗಿ ತಾಲೂಕು ಮಟ್ಟದ ಮಾನವ ಸರಪಳಿ ಕಾರ್ಯಕ್ರಮ
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.