Maharashtra Polls; ನಮಗೆ ಸ್ಪರ್ಧಿಸಬಹುದಿತ್ತು, ಆದರೆ..: ಆಪ್ ಹೇಳಿದ್ದೇನು?
Team Udayavani, Oct 27, 2024, 9:07 PM IST
ಮುಂಬಯಿ: ಮಹಾರಾಷ್ಟ್ರ ವಿಧಾನಸಭಾ ಚುನಾವಣೆಯಿಂದ ಹಿಂದೆ ಸರಿಯುವುದಾಗಿ ಘೋಷಿಸಿದ ಒಂದು ದಿನದ ನಂತರ, ಎಎಪಿ ನಾಯಕ ಮತ್ತು ದೆಹಲಿ ಸಚಿವ ಸೌರಭ್ ಭಾರದ್ವಾಜ್, ”ಹರಿಯಾಣ ವಿಧಾನಸಭಾ ಚುನಾವಣೆಯ ಸಮಯದಲ್ಲಿ ಸಂಭವಿಸಿದ ರೀತಿಯಲ್ಲಿ ಯಾವುದೇ ಮತ ವಿಭಜನೆ ತಪ್ಪಿಸುವ ಮೂಲಕ ಬಿಜೆಪಿಯನ್ನು ಸೋಲಿಸುವುದು ಪಕ್ಷದ ಮೂಲ ಉದ್ದೇಶವಾಗಿದೆ” ಎಂದು ಒತ್ತಿ ಹೇಳಿದ್ದಾರೆ.
“ಶರದ್ ಪವಾರ್ ಅವರ ಎನ್ಸಿಪಿ ಮತ್ತು ಉದ್ಧವ್ ಠಾಕ್ರೆ ಅವರ ಶಿವಸೇನೆ ಔದಾರ್ಯದಿಂದ ನಮಗೆ ಸೀಟುಗಳನ್ನು ನೀಡಿದರು. ಆದರೆ ಇದು ಸೀಟುಗಳಿಗಾಗಿ ಚುನಾವಣೆಯಲ್ಲಿ ಸ್ಪರ್ಧಿಸುವ ವಿಷಯವಲ್ಲ ಎಂದು ನಾವು ನೋಡಿದ್ದೇವೆ.ಬಿಜೆಪಿಯನ್ನು ಸೋಲಿಸುವುದು ನಮಗೆ ವಿಷಯವಾಗಿದೆ. ಸ್ಥಾನಗಳನ್ನು ನೀಡಿದ್ದಕ್ಕಾಗಿ ಶರದ್ ಪವಾರ್ ಮತ್ತು ಉದ್ಧವ್ ಠಾಕ್ರೆ ಅವರಿಗೆ ಕೃತಜ್ಞತೆ ಸಲ್ಲಿಸಿಸುತ್ತೇನೆ” ಎಂದು ಭಾರದ್ವಾಜ್ ಹೇಳಿದ್ದಾರೆ.
ಆಮ್ ಆದ್ಮಿ ಪಕ್ಷ ಮಹಾ ವಿಕಾಸ್ ಅಘಾಡಿಗೆ (ಎಂವಿಎ) ತನ್ನ ಸಂಪೂರ್ಣ ಬೆಂಬಲವನ್ನು ನೀಡಿದೆ. ಆಮ್ ಆದ್ಮಿ ಪಕ್ಷದ ಮುಖ್ಯಸ್ಥ ಅರವಿಂದ್ ಕೇಜ್ರಿವಾಲ್ ಅವರು ಮಹಾ ವಿಕಾಸ್ ಅಘಾಡಿ(ಎಂವಿಎ) ಮೈತ್ರಿಕೂಟದ ಪರವಾಗಿ ಪ್ರಚಾರ ಕೈಗೊಳ್ಳಲಿದ್ದಾರೆ ಎಂದು ಆಪ್ ಹೇಳಿದೆ. ಝಾರ್ಖಂಡ್ ಅಲ್ಲಿ ಜೆಎಂಎಂ ಪರವಾಗಿಯೂ ಕೇಜ್ರಿವಾಲ್ ಪ್ರಚಾರ ಕೈಗೊಳ್ಳಲಿದ್ದಾರೆ ಎನ್ನಲಾಗಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Reliance Foundation; ನೂತನ ಆರೋಗ್ಯ ಸೇವಾ ಯೋಜನೆ ಘೋಷಿಸಿದ ನೀತಾ ಅಂಬಾನಿ
Kanpur: ನಾಪತ್ತೆಯಾಗಿ ನಾಲ್ಕು ತಿಂಗಳ ಬಳಿಕ ಯುವತಿಯ ಶವ ಪತ್ತೆ; ಘಟನೆ ಹಿಂದಿದೆ ರೋಚಕ ಕಥೆ
Tragic: ಬೆಂಕಿ ಅವಘಡ; ಜತೆಯಲ್ಲಿ ಮಲಗಿದ್ದ ನಾಲ್ವರು ಸ್ನೇಹಿತರು ಸುಟ್ಟುಕರಕಲು
Mumbai: ಬಾಂದ್ರಾ ಟರ್ಮಿನಸ್ ರೈಲು ನಿಲ್ದಾಣದಲ್ಲಿ ಕಾಲ್ತುಳಿತ; ಹಲವರಿಗೆ ಗಾಯ
New Delhi: ವಿಮಾನ ನಿಲ್ದಾಣಕ್ಕೆ ನಕಲಿ ಬಾಂಬ್ ಬೆದರಿಕೆ ಹಾಕಿದ್ದ ನಿರುದ್ಯೋಗಿ ಯುವಕನ ಬಂಧನ
MUST WATCH
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.