Excise Policy Case: ಆಪ್ ಆರೋಪಿ! ದಿಲ್ಲಿ ಹೈಕೋರ್ಟ್ಗೆ ಇ.ಡಿ. ಮಾಹಿತಿ
ಇಂಥ ಕ್ರಮ ದೇಶದಲ್ಲೇ ಮೊದಲು
Team Udayavani, May 15, 2024, 6:55 AM IST
ಹೊಸದಿಲ್ಲಿ: ಅಚ್ಚರಿಯ ಬೆಳವಣಿಗೆ ಯಲ್ಲಿ ದಿಲ್ಲಿ ಅಬಕಾರಿ ನೀತಿ ಹಗರಣಕ್ಕೆ ಸಂಬಂಧಿಸಿದ ಅಕ್ರಮ ಹಣಕಾಸು ವರ್ಗಾವಣೆ ಪ್ರಕರಣದಲ್ಲಿ ಆಮ್ ಆದ್ಮಿ ಪಕ್ಷ (ಆಪ್)ವನ್ನೇ ಆರೋಪಿ ಎಂದು ಪರಿಗಣಿಸುವುದಾಗಿ ದಿಲ್ಲಿ ಹೈಕೋರ್ಟ್ಗೆ ಜಾರಿ ನಿರ್ದೇಶನಾಲಯ (ಇ.ಡಿ.) ಮಂಗಳವಾರ ಮಾಹಿತಿ ನೀಡಿದೆ.
ರಾಜಕೀಯ ಪಕ್ಷ ವೊಂದನ್ನು “ಆರೋಪಿ’ ಸ್ಥಾನದಲ್ಲಿ ನಿಲ್ಲಿಸ ಲಾಗು ತ್ತಿರುವ ದೇಶದ ಮೊದಲ ಪ್ರಕರಣ ಇದಾಗಿದೆ.
ಪ್ರಕರಣದ ಆರೋಪಿಯಾದ ದಿಲ್ಲಿಯ ಮಾಜಿ ಡಿಸಿಎಂ ಮನೀಷ್ ಸಿಸೋಡಿಯಾ ಅವರ ಜಾಮೀನು ಅರ್ಜಿಯ ವಿಚಾರಣೆ ವೇಳೆ ಕೋರ್ಟ್ಗೆ ಇ.ಡಿ. ಈ ಮಾಹಿತಿ ನೀಡಿದೆ. ಸದ್ಯದಲ್ಲೇ ಪೂರಕ ಆರೋಪಪಟ್ಟಿ ಸಲ್ಲಿಸಲಾಗುವುದು ಮತ್ತು ಆಮ್ ಆದ್ಮಿ ಪಕ್ಷವನ್ನೇ ಸಹ-ಆರೋಪಿ ಎಂದು ಹೆಸರಿಸಲಾಗುವುದು ಎಂದು ಇ.ಡಿ. ಹೇಳಿದೆ.
ಅಬಕಾರಿ ನೀತಿ ಹಗರಣದಲ್ಲಿ ನಡೆದಿದೆ ಎನ್ನಲಾದ ಕಿಕ್ಬ್ಯಾಕ್ನಿಂದ ಆಪ್ಗೆ ಅನು ಕೂಲವಾಗಿದೆ ಎನ್ನುವುದು ಇ.ಡಿ.ಯ ವಾದ ಎಂದಾದ ಮೇಲೆ ಇಡೀ ಪಕ್ಷವನ್ನೇ ಆರೋಪಿ ಎಂದು ಏಕೆ ಹೆಸರಿಸಿಲ್ಲ ಎಂದು ಕಳೆದ ವರ್ಷದ ಅಕ್ಟೋಬರ್ನಲ್ಲಿ ತನಿಖಾ ಸಂಸ್ಥೆಗೆ ಸುಪ್ರೀಂ ಕೋರ್ಟ್ ಪ್ರಶ್ನಿಸಿತ್ತು. ಮಾರನೇ ದಿನ ಈ ಕುರಿತು ಸ್ಪಷ್ಟನೆ ನೀಡಿದ್ದ ನ್ಯಾ| ಸಂಜೀವ್ ಖನ್ನಾ ಮತ್ತು ನ್ಯಾ| ಎಸ್.ವಿ. ಭಟ್ಟಿ ಅವರನ್ನೊಳಗೊಂಡ ನ್ಯಾಯಪೀಠವು, “ನಾವು ಯಾವುದೇ ರಾಜಕೀಯ ಪಕ್ಷವನ್ನು ತಳಕುಹಾಕಲು ಈ ಪ್ರಶ್ನೆ ಕೇಳಿದ್ದಲ್ಲ’ ಎಂದು ಹೇಳಿತ್ತು.
ಅಚ್ಚರಿಯೇನಿಲ್ಲ ಎಂದ ಬಿಜೆಪಿ
ಇ.ಡಿ. ನಿರ್ಧಾರದ ಕುರಿತು ಪ್ರತಿಕ್ರಿಯಿಸಿರುವ ಬಿಜೆಪಿಯು, ಕಿಕ್ಬ್ಯಾಕ್ನಿಂದ ಬಂದ ಹಣವನ್ನು ಆಪ್ 2022ರ ಗೋವಾ ಚುನಾವಣೆಗೆ ಬಳಸಿತ್ತು. ಅಲ್ಲದೆ ಈ ಕೇಸಿನಲ್ಲಿ ಆಪ್ನ ಬಹುತೇಕ ನಾಯಕರು ಆರೋಪಿಗಳಾಗಿದ್ದಾರೆ. ಹೀಗಾಗಿ ಇಡೀ ಪಕ್ಷವನ್ನೇ ಆರೋಪಿ ಸ್ಥಾನದಲ್ಲಿ ನಿಲ್ಲಿಸುವ ಇ.ಡಿ. ನಿರ್ಧಾರ ನಮಗೇನೂ ಅಚ್ಚರಿ ತಂದಿಲ್ಲ. ಆಮ್ ಆದ್ಮಿ ಪಕ್ಷವು ಆದಷ್ಟು ಬೇಗ ತಪ್ಪೊಪ್ಪಿಕೊಳ್ಳಬೇಕು ಎಂದು ಹೇಳಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Haryana: ಅಕ್ರಮ ಪಟಾಕಿ ಕಾರ್ಖಾನೆಯಲ್ಲಿ ಭೀಕರ ಸ್ಫೋಟ: 3 ಮೃತ್ಯು, 7 ಮಂದಿಗೆ ಗಾಯ
Bus Overturns… ಪುರಿ ಜಗನ್ನಾಥನ ದರ್ಶನಕ್ಕೆ ಹೊರಟಿದ್ದ ನಾಲ್ವರು ಯಾತ್ರಿಕರು ಮೃತ್ಯು
Hosur: ಟಾಟಾ ಎಲೆಕ್ಟ್ರಾನಿಕ್ಸ್ ಘಟಕದಲ್ಲಿ ಅಗ್ನಿ ಅವಘಡ… ಕೋಟ್ಯಂತರ ಮೌಲ್ಯದ ಸೊತ್ತು ನಾಶ
Mumbai: ಭಯೋತ್ಪಾದಕ ದಾಳಿ ಸಾಧ್ಯತೆ-ಗುಪ್ತಚರ ಇಲಾಖೆ: ಮುಂಬೈನಲ್ಲಿ ಬಿಗಿ ಪೊಲೀಸ್ ಭದ್ರತೆ
Telangana: ಉಪಮುಖ್ಯಮಂತ್ರಿ ಮನೆಯಲ್ಲಿ ಭಾರಿ ಕಳ್ಳತನ.. ಚಿನ್ನದ ಬಿಸ್ಕತ್ ಸೇರಿ ನಗನಗದು ಕಳವು
MUST WATCH
ಉಡುಪಿಯ ಈ ಜಾಗದಲ್ಲಿ ರಸಂ ಪುರಿ ತುಂಬಾನೇ ಫೇಮಸ್
ತಿರುಪತಿ ಲಡ್ಡು ವಿವಾದ ಪೇಜಾವರ ಶ್ರೀಗಳು ಹೇಳಿದ್ದೇನು ?
Kaljigaದಲ್ಲಿ ದೈವದ ಅಪಪ್ರಚಾರ ನಡೆದಿಲ್ಲ, ಸಿನಿಮಾ ನೋಡಿದ ಬಳಿಕ ಈ ಬಗ್ಗೆ ಪ್ರತಿಕ್ರಿಯಿಸಿ
ನವಜಾತ ಶಿಶುಗಳಲ್ಲಿ ಶ್ರವಣ ಶಕ್ತಿ ಸಮಸ್ಯೆ ಕುರಿತು ಸಂಪೂರ್ಣ ಮಾಹಿತಿ
ಅಂತರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆ ಅಂಗವಾಗಿ ತಾಲೂಕು ಮಟ್ಟದ ಮಾನವ ಸರಪಳಿ ಕಾರ್ಯಕ್ರಮ
ಹೊಸ ಸೇರ್ಪಡೆ
Moksha Kushal: ಹಾಟ್ ಫೋಟೋಶೂಟ್ನಲ್ಲಿ ಮೋಕ್ಷಾ ಮಿಂಚು
MUDA; ಅವರು-ಇವರು ಕಳ್ಳರು ಎನ್ನೋದು ಬೇಡ, ರಾಜೀನಾಮೆ ಕೊಟ್ಟು ನೀವು ಸ್ವಚ್ಛವಾಗಿರಿ: ಯತ್ನಾಳ್
Hubli: ರಾಡ್ ಬಿದ್ದು ಎಎಸ್ಐ ಸಾವು ಪ್ರಕರಣದಲ್ಲಿ ಮತ್ತೋರ್ವನ ಬಂಧನ
Haryana: ಅಕ್ರಮ ಪಟಾಕಿ ಕಾರ್ಖಾನೆಯಲ್ಲಿ ಭೀಕರ ಸ್ಫೋಟ: 3 ಮೃತ್ಯು, 7 ಮಂದಿಗೆ ಗಾಯ
World Rabies Day 2024: ಈ ಮಾರಣಾಂತಿಕ ಕಾಯಿಲೆಯ ಬಗ್ಗೆ ತಿಳಿವಳಿಕೆ ಕೊರತೆ!
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.