Delhi;ಕಾಂಗ್ರೆಸ್ ನೊಂದಿಗೆ ಮೈತ್ರಿ?: 2 ರಾಜ್ಯಗಳ ಫಲಿತಾಂಶದ ಬಳಿಕ ಆಪ್ ಹೇಳಿದ್ದೇನು?
ಕೇಜ್ರಿವಾಲ್ ಗುರುವಾರ ಜಮ್ಮು ಮತ್ತು ಕಾಶ್ಮೀರಕ್ಕೆ ಭೇಟಿ ನೀಡಲಿದ್ದಾರೆ...
Team Udayavani, Oct 9, 2024, 4:50 PM IST
ಹೊಸದಿಲ್ಲಿ: ಮುಂಬರುವ ದೆಹಲಿ ವಿಧಾನಸಭಾ ಚುನಾವಣೆಯಲ್ಲಿ ಆಮ್ ಆದ್ಮಿ ಪಕ್ಷವು ಕಾಂಗ್ರೆಸ್ ಜತೆ ಮೈತ್ರಿ ಮಾಡಿಕೊಳ್ಳದೆ ಏಕಾಂಗಿಯಾಗಿ ಸ್ಪರ್ಧಿಸಲಿದೆ ಎಂದು ಹೇಳಿದೆ.
ದೆಹಲಿಯಲ್ಲಿ ಎಎಪಿ ಏಕಾಂಗಿಯಾಗಿ ಸ್ಪರ್ಧಿಸಲಿದೆ. ಅತಿಯಾದ ಆತ್ಮವಿಶ್ವಾಸ ಹೊಂದಿರುವ ಕಾಂಗ್ರೆಸ್ ಮತ್ತು ಸೊಕ್ಕಿನ ಬಿಜೆಪಿ ವಿರುದ್ಧ ಏಕಾಂಗಿಯಾಗಿ ಹೋರಾಡಲು ನಾವು ಸಮರ್ಥರಾಗಿದ್ದೇವೆ ಎಂದು ಎಎಪಿ ವಕ್ತಾರೆ ಪ್ರಿಯಾಂಕಾ ಕಕ್ಕರ್ ಬುಧವಾರ(ಅ9)ಹೇಳಿದ್ದಾರೆ.
‘ಹರಿಯಾಣದಲ್ಲಿ ಮೈತ್ರಿ ಪಾಲುದಾರರನ್ನು ಗಂಭೀರವಾಗಿ ಪರಿಗಣಿಸದ ಕಾಂಗ್ರೆಸ್ ಮತ್ತು ಅದರ ಅತಿಯಾದ ಆತ್ಮವಿಶ್ವಾಸದಿಂದಾಗಿ ಅಂತಿಮವಾಗಿ ಸೋಲನ್ನು ಅನುಭವಿಸಬೇಕಾಯಿತು’ ಎಂದರು.
ಜಮ್ಮು ಮತ್ತು ಕಾಶ್ಮೀರದಲ್ಲಿ ಎಎಪಿ ಖಾತೆ ತೆರೆಯಲು ಪಕ್ಷದ ಅಭಿವೃದ್ಧಿ-ಚಾಲಿತ ರಾಜಕೀಯ ಕಾರಣ. ಎಎಪಿ ರಾಷ್ಟ್ರೀಯ ಸಂಚಾಲಕ ಅರವಿಂದ್ ಕೇಜ್ರಿವಾಲ್ ಗುರುವಾರ ಜಮ್ಮು ಮತ್ತು ಕಾಶ್ಮೀರಕ್ಕೆ ಭೇಟಿ ನೀಡಲಿದ್ದಾರೆ ಎಂದು ಎಂದು ಕಕ್ಕರ್ ಹೇಳಿದರು.
ಆಮ್ ಆದ್ಮಿ ಪಕ್ಷದ ಅಭ್ಯರ್ಥಿ ಮೆಹರಾಜ್ ಮಲಿಕ್ ದೋಡಾ ಕ್ಷೇತ್ರದಲ್ಲಿ ಬಿಜೆಪಿಯ ಸಮೀಪದ ಪ್ರತಿಸ್ಪರ್ಧಿಯನ್ನು 4,538 ಮತಗಳ ಅಂತರದಿಂದ ಸೋಲಿಸಿ ವಿಧಾನ ಸಭೆ ಪ್ರವೇಶಿಸಿದ್ದಾರೆ. “ಮೆಹರಾಜ್ ಮಲಿಕ್ ತುಂಬಾ ಕಷ್ಟಪಟ್ಟು ದುಡಿಯುವ ವ್ಯಕ್ತಿ, ಮತ್ತು ಅವರು ಚಳವಳಿ ಮತ್ತು ಹೋರಾಟದ ಸಮಯದಿಂದಲೂ ಪಕ್ಷದೊಂದಿಗೆ ಇದ್ದಾರೆ” ಎಂದು ಕಕ್ಕರ್ ಹೇಳಿದರು.
“ಕಳೆದ 10 ವರ್ಷಗಳಿಂದ ದೆಹಲಿ ವಿಧಾನಸಭೆಯಲ್ಲಿ ಕಾಂಗ್ರೆಸ್ ಒಂದೂ ಸ್ಥಾನವನ್ನೂ ಹೊಂದಿಲ್ಲವಾದರೂ ನಾವು ಲೋಕಸಭೆ ಚುನಾವಣೆಯಲ್ಲಿಮೂರು ಸ್ಥಾನಗಳನ್ನು ಬಿಟ್ಟುಕೊಟ್ಟಿದ್ದೆವು. ಹರ್ಯಾಣದಲ್ಲಿ ಮಿತ್ರಪಕ್ಷಗಳನ್ನು ಬಿಟ್ಟು ಹೋಗುವ ಅಗತ್ಯವಿರಲಿಲ್ಲ. I.N.D.I.A ಎಲ್ಲಾ ಪ್ರಯತ್ನಗಳನ್ನು ಕಾಂಗ್ರೆಸ್ ವಿಫಲಗೊಳಿಸಿದೆ ಎಂದು ಕಕ್ಕರ್ ತೀವ್ರ ಅಸಮಾಧಾನ ಹೊರ ಹಾಕಿದರು.
ಹರಿಯಾಣದಲ್ಲಿ ಲೋಕಸಭೆ ಚುನಾವಣೆಯನ್ನು ಒಟ್ಟಿಗೆ ಎದುರಿಸಿದ್ದ ಎಎಪಿ ಮತ್ತು ಕಾಂಗ್ರೆಸ್ ವಿಧಾನಸಭಾ ಚುನಾವಣೆಯಲ್ಲಿ ಸೀಟು ಹಂಚಿಕೆಯಲ್ಲಿನ ಭಿನ್ನಾಭಿಪ್ರಾಯಗಳಿಂದಾಗಿ ಎಎಪಿ ಮತ್ತು ಕಾಂಗ್ರೆಸ್ ಚುನಾವಣಾ ಪೂರ್ವ ಮೈತ್ರಿ ಮಾಡಿಕೊಳ್ಳುವಲ್ಲಿ ವಿಫಲವಾಗಿತ್ತು. ಹರ್ಯಾಣದಲ್ಲಿ ಎಎಪಿ ಸ್ಪರ್ಧಿಸಿದ ಎಲ್ಲಾ ಸ್ಥಾನಗಳಲ್ಲಿ ಸೋತಿದೆ. ಕಾಂಗ್ರೆಸ್ ಅನಿರೀಕ್ಷಿತ ಸೋಲು ಅನುಭವಿಸಿ ಆಡಳಿತಾರೂಢ ಬಿಜೆಪಿಗೆ ಸತತ ಮೂರನೇ ಬಾರಿಗೆ ಮರಳಲು ದಾರಿ ಮಾಡಿಕೊಟ್ಟಿತು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Haryana: ಇಬ್ಬರು ಪಕ್ಷೇತರ ಶಾಸಕರು ಬಿಜೆಪಿ ಸೇರ್ಪಡೆ… ಸಂಖ್ಯಾ ಬಲ 50ಕ್ಕೆ ಏರಿಕೆ
Prayagraj: ಕುಂಭಮೇಳದಲ್ಲಿ ಮಳಿಗೆಗೆ ಸನಾತನೇತರರಿಗೆ ಅವಕಾಶ ಇಲ್ಲ: ಅಖಾರ ಪರಿಷತ್
Congress ಬೇಜವಾಬ್ದಾರಿ ಪಕ್ಷ, ದ್ವೇಷ ಹರಡುವ ಕಾರ್ಖಾನೆ : ಪ್ರಧಾನಿ ಮೋದಿ ಕಿಡಿ
Jammu-Kashmir: ಇಬ್ಬರು ಸೇನಾ ಯೋಧರ ಅಪಹರಣ-ಓರ್ವ ಯೋಧನ ಮೃತದೇಹ ಪತ್ತೆ
Haryana: ಸೈನಿ ಪ್ರಮಾಣವಚನಕ್ಕೆ ಬಿಜೆಪಿ ಸಿದ್ಧತೆ: ದೆಹಲಿಯಲ್ಲಿ ಉನ್ನತ ಮಟ್ಟದ ಸಭೆ
MUST WATCH
ಉಡುಪಿಯ ಈ ಜಾಗದಲ್ಲಿ ರಸಂ ಪುರಿ ತುಂಬಾನೇ ಫೇಮಸ್
ತಿರುಪತಿ ಲಡ್ಡು ವಿವಾದ ಪೇಜಾವರ ಶ್ರೀಗಳು ಹೇಳಿದ್ದೇನು ?
Kaljigaದಲ್ಲಿ ದೈವದ ಅಪಪ್ರಚಾರ ನಡೆದಿಲ್ಲ, ಸಿನಿಮಾ ನೋಡಿದ ಬಳಿಕ ಈ ಬಗ್ಗೆ ಪ್ರತಿಕ್ರಿಯಿಸಿ
ನವಜಾತ ಶಿಶುಗಳಲ್ಲಿ ಶ್ರವಣ ಶಕ್ತಿ ಸಮಸ್ಯೆ ಕುರಿತು ಸಂಪೂರ್ಣ ಮಾಹಿತಿ
ಅಂತರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆ ಅಂಗವಾಗಿ ತಾಲೂಕು ಮಟ್ಟದ ಮಾನವ ಸರಪಳಿ ಕಾರ್ಯಕ್ರಮ
ಹೊಸ ಸೇರ್ಪಡೆ
Toxic Movie: ಮುಂಬೈನತ್ತ ಯಶ್ ಟಾಕ್ಸಿಕ್ ಪಯಣ
Bhool Bhulaiyaa 3 trailer: ʼಮಂಜುಲಿಕಾʼಗಳ ರಹಸ್ಯ ಬಯಲಿಗೆ ʼರೂಹ್ ಬಾಬಾʼನಾದ ಕಾರ್ತಿಕ್
MUDA CASE: ಮರೆಮಾಚಲು ಜಾತಿಗಣತಿ ಉದ್ಭವ: ಶಾಸಕ ಕಂದಕೂರ
Hosanagara: 3 ಚಿನ್ನದ ಉಂಗುರ ಸಹಿತ ನಗದು ದೋಚಿ ಪರಾರಿಯಾದ ಕಳ್ಳರು
ಕಾಂಗ್ರೆಸ್ ನಲ್ಲೇ ಸಿದ್ದರಾಮಯ್ಯ ವಿರುದ್ಧ ತೆರೆಮರೆಯ ಚಟುವಟಿಕೆ ನಡೆಯುತ್ತಿದೆ: ಸಿ.ಟಿ. ರವಿ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.