Abhaya; ಮುಷ್ಕರ ನಿರತ ವೈದ್ಯರಿಗೆ ಕೇಂದ್ರ ಸರಕಾರ ಅಭಯ: ಸುರಕ್ಷೆಗೆ ಸಮಿತಿ

ಅಭಯಾಳಿಗೆ ನ್ಯಾಯಕ್ಕಾಗಿ ದೇಶಾದ್ಯಂತ ನಡೆದ ವೈದ್ಯರ ಮುಷ್ಕರ ಯಶಸ್ವಿ

Team Udayavani, Aug 18, 2024, 6:40 AM IST

1-doctors

ಹೊಸದಿಲ್ಲಿ: ಕೋಲ್ಕತದ ಆಸ್ಪತ್ರೆಯಲ್ಲಿ ತರಬೇತಿನಿರತ ವೈದ್ಯೆ (ಅಭಯಾ) ಮೇಲೆ ಅತ್ಯಾಚಾರ ನಡೆಸಿ ಹತ್ಯೆ ಮಾಡಿದ ಘಟನೆಯನ್ನು ಖಂಡಿಸಿ ದೇಶಾದ್ಯಂತ ವೈದ್ಯರು ಶನಿವಾರ ಮುಷ್ಕರ ನಡೆಸಿದ್ದಾರೆ. ಇದಕ್ಕೆ ಪೂರಕವಾಗಿ ವೈದ್ಯರು ಮತ್ತು ಆರೋಗ್ಯ ಕ್ಷೇತ್ರದಲ್ಲಿ ಕೆಲಸ ಮಾಡುವವರ ರಕ್ಷಣೆಗಾಗಿ ಸೂಕ್ತ ಕ್ರಮ ಕೈಗೊಳ್ಳುವ ಅಭಯವನ್ನು ಕೇಂದ್ರ ಸರಕಾರ ನೀಡಿದ್ದು, ಅದಕ್ಕಾಗಿ ಸಮಿತಿ ರಚಿಸುವುದಾಗಿ ವಾಗ್ಧಾನ ಮಾಡಿದೆ. ಅಲ್ಲದೆ ಘಟನೆಯನ್ನು ಖಂಡಿಸಿ ದೇಶದ ಹಲವೆಡೆ ವೈದ್ಯರು ನಡೆಸುತ್ತಿರುವ ಮುಷ್ಕರ ಕೈಬಿಟ್ಟು ವೈದ್ಯಕೀಯ ಸೇವೆಗೆ ವಾಪಸಾಗಬೇಕು ಎಂದು ಮನವಿ ಮಾಡಿದೆ.

ಭಾರತೀಯ ವೈದ್ಯಕೀಯ ಸಂಘ (ಐಎಂಎ), ಫೆಡರೇಶನ್‌ ಆಫ್ ರೆಸಿಡೆಂಟ್‌ ಡಾಕ್ಟರ್ಸ್‌ ಅಸೋಸಿಯೇಶನ್‌ (ಎಫ್ಒಆರ್‌ಡಿಎ), ದಿಲ್ಲಿ ಸರಕಾರಿ ವೈದ್ಯ ಕಾಲೇಜುಗಳ ರೆಸಿಡೆಂಟ್‌ ವೈದ್ಯರ ಸಂಘಟನೆಗಳು ಸದಸ್ಯರು ಶನಿವಾರ ಹೊಸದಿಲ್ಲಿಯಲ್ಲಿ ಕೇಂದ್ರ ಆರೋಗ್ಯ ಸಚಿವ ಜೆ.ಪಿ. ನಡ್ಡಾ ಜತೆ ಸಮಾಲೋಚನೆ ನಡೆಸಿದ್ದಾರೆ. ಕೆಲಸದ ವೇಳೆ ಆರೋಗ್ಯ ವೃತ್ತಿಪರರ ಸುರಕ್ಷೆ ಮತ್ತು ಭದ್ರತೆಯ ಬಗ್ಗೆ ತಮ್ಮ ಬೇಡಿಕೆಗಳನ್ನು ಸರಕಾರದ ಮುಂದಿಟ್ಟರು. ವೈದ್ಯರ ಬೇಡಿಕೆಗಳನ್ನು ಸಾವಧಾನವಾಗಿ ಆಲಿಸಿದ ಕೇಂದ್ರ ಆರೋಗ್ಯ ಸಚಿವರು, ಆರೋಗ್ಯ ಕ್ಷೇತ್ರದ ವೃತ್ತಿಪರರ ಸುರಕ್ಷೆಗಾಗಿ ಸಮಿತಿಯನ್ನು ರಚಿಸಲು ಸರಕಾರ ತೀರ್ಮಾನಿಸಿದೆ. ರಾಜ್ಯ ಸರಕಾರಗಳ ಸಹಿತ ಸಂಬಂಧಿಸಿದ ಎಲ್ಲರೂ ಈ ಸಮಿತಿಗೆ ತಮ್ಮ ಸಲಹೆಗಳನ್ನು ನೀಡಬಹುದು ಎಂದು ಪ್ರಸ್ತಾವನೆ ಮುಂದಿಟ್ಟರು ಎಂದು ಸಭೆಯ ಅನಂತರ ಬಿಡುಗಡೆ ಮಾಡಲಾದ ಹೇಳಿಕೆಯಲ್ಲಿ ಸರಕಾರ ತಿಳಿಸಿದೆ.

ಈಗಾಗಲೇ 26 ರಾಜ್ಯಗಳು ಈ ಸಂಬಂಧ ಕಾಯ್ದೆ ಗಳನ್ನು ಜಾರಿಗೆ ತಂದಿವೆ ಎಂಬ ಅಂಶವನ್ನೂ ಸಭೆಯಲ್ಲಿ ಮಂಡಿಸಿ, ಚರ್ಚೆ ನಡೆಸಲಾಗಿದೆ. ವೈದ್ಯರ ಪ್ರತಿನಿಧಿಗಳು ವ್ಯಕ್ತಪಡಿಸಿದ ಕಳವಳಗಳನ್ನು ಗಮನದಲ್ಲಿ ಇರಿಸಿಕೊಂಡು, ಆರೋಗ್ಯ ವೃತ್ತಿಪರರ ಸುರಕ್ಷೆಯನ್ನು ಖಾತ್ರಿಪಡಿಸಿಕೊಳ್ಳಲು ಎಲ್ಲ ಕ್ರಮಗಳನ್ನು ಕೈಗೊಳ್ಳಲಾಗುತ್ತದೆ ಎಂದೂ ಸರಕಾರ ವೈದ್ಯರಿಗೆ ಭರವಸೆ ನೀಡಿದೆ.

ಈ ಬಗ್ಗೆ ಪ್ರತಿಕ್ರಿಯೆ ನೀಡಿದ ಭಾರತೀಯ ವೈದ್ಯಕೀಯ ಸಂಘವು, ವೈದ್ಯರಿಗೆ ಮತ್ತು ಆರೋಗ್ಯ ಕಾರ್ಯಕರ್ತರಿಗೆ ನೀಡಿದ ಅಭಯದ ಮಾತುಗಳನ್ನು ನಾವು ಪರಿಶೀಲಿಸುತ್ತಿದ್ದೇವೆ ಎಂದು ಹೇಳಿದೆ. ಎಲ್ಲ ಅಂಶಗಳನ್ನು ಪರಿಶೀಲಿಸಿದ ಬಳಿಕ ಅದಕ್ಕೆ ಪ್ರತಿಕ್ರಿಯೆ ನೀಡುವುದಾಗಿ ತಿಳಿಸಿದೆ.

ಸರಕಾರದ ಭರವಸೆ
ಆರೋಗ್ಯ ಕ್ಷೇತ್ರದ ವೃತ್ತಿಪರರ ಸುರಕ್ಷೆಗೆ ಸಂಬಂಧಿಸಿ ಸಮಿತಿ ರಚನೆ
ರಾಜ್ಯ ಸರಕಾರಗಳ ಸಹಿತ ಎಲ್ಲರೂ ಈ ಸಮಿತಿಗೆ ತಮ್ಮ ಸಲಹೆಗಳನ್ನು ನೀಡಬಹುದು
ವೈದ್ಯರ ಸುರಕ್ಷೆಗೆ ಸೂಕ್ತ ಕ್ರಮಗಳನ್ನು ಕೈಗೊಳ್ಳಲಾಗುವುದು

ಟಾಪ್ ನ್ಯೂಸ್

Monkey-Pox

Health Department: ಮಂಗನ ಕಾಯಿಲೆ ಆತಂಕ: ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ವಿಶೇಷ ನಿಗಾ

Karnataka; ರಾಜ್ಯಪಾಲರ ಅಧಿಕಾರಕ್ಕೆ ರಾಜ್ಯ ಸರಕಾರ ಅಂಕುಶ?

Karnataka; ರಾಜ್ಯಪಾಲರ ಅಧಿಕಾರಕ್ಕೆ ರಾಜ್ಯ ಸರಕಾರ ಅಂಕುಶ?

BJP MLA ಮುನಿರತ್ನ ಜಾಮೀನು ಭವಿಷ್ಯ ಇಂದು ನಿರ್ಧಾರ

BJP MLA ಮುನಿರತ್ನ ಜಾಮೀನು ಭವಿಷ್ಯ ಇಂದು ನಿರ್ಧಾರ

Chandrayaan-4ಕ್ಕೆ 2100 ಕೋಟಿ ರೂ.; ಕೇಂದ್ರದಿಂದ ಅನುದಾನ

Chandrayaan-4ಕ್ಕೆ 2100 ಕೋಟಿ ರೂ.; ಕೇಂದ್ರದಿಂದ ಅನುದಾನ

Drug ಪೆಡ್ಲರ್‌ಗಳಿಗೆ ಇನ್ನು ಆಜೀವ ಜೈಲು; ಬೆಂಗಳೂರು,ಮಂಗಳೂರಲ್ಲಿ ಡ್ರಗ್ಸ್‌ ಹಾವಳಿ ಹೆಚ್ಚಳ

Karnataka Govt.,; ಡ್ರಗ್‌ ಪೆಡ್ಲರ್‌ಗಳಿಗೆ ಇನ್ನು ಆಜೀವ ಜೈಲು

Central Govt; ಏಕ ಚುನಾವಣೆಗೆ ನಾನಾ ಪ್ರಶ್ನೆ: ಹಲವು ಪ್ರಶ್ನೆಗಳಿಗೆ ಇಲ್ಲಿವೆ ಉತ್ತರ

Central Govt; ಏಕ ಚುನಾವಣೆಗೆ ನಾನಾ ಪ್ರಶ್ನೆ: ಹಲವು ಪ್ರಶ್ನೆಗಳಿಗೆ ಇಲ್ಲಿವೆ ಉತ್ತರ

Karnataka ರಾಜ್ಯದಲ್ಲಿ ಆರ್‌ಟಿಇ ಸೀಟಿಗಿಲ್ಲ ಕಿಮ್ಮತ್ತು!

Karnataka ರಾಜ್ಯದಲ್ಲಿ ಆರ್‌ಟಿಇ ಸೀಟಿಗಿಲ್ಲ ಕಿಮ್ಮತ್ತು!


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Chandrayaan-4ಕ್ಕೆ 2100 ಕೋಟಿ ರೂ.; ಕೇಂದ್ರದಿಂದ ಅನುದಾನ

Chandrayaan-4ಕ್ಕೆ 2100 ಕೋಟಿ ರೂ.; ಕೇಂದ್ರದಿಂದ ಅನುದಾನ

Drug ಪೆಡ್ಲರ್‌ಗಳಿಗೆ ಇನ್ನು ಆಜೀವ ಜೈಲು; ಬೆಂಗಳೂರು,ಮಂಗಳೂರಲ್ಲಿ ಡ್ರಗ್ಸ್‌ ಹಾವಳಿ ಹೆಚ್ಚಳ

Karnataka Govt.,; ಡ್ರಗ್‌ ಪೆಡ್ಲರ್‌ಗಳಿಗೆ ಇನ್ನು ಆಜೀವ ಜೈಲು

ಶುಕ್ರಯಾನಕ್ಕೂ ಕೇಂದ್ರ ಸಂಪುಟ ಅನುಮೋದನೆ: ಚಂದ್ರ, ಮಂಗಳ ಯೋಜನೆ ಬಳಿಕ ಶುಕ್ರಯಾನಕ್ಕೆ ನೆರವು

ಶುಕ್ರಯಾನಕ್ಕೂ ಕೇಂದ್ರ ಸಂಪುಟ ಅನುಮೋದನೆ: ಚಂದ್ರ, ಮಂಗಳ ಯೋಜನೆ ಬಳಿಕ ಶುಕ್ರಯಾನಕ್ಕೆ ನೆರವು

Biotechnology: ಜೈವಿಕ ತಂತ್ರಜ್ಞಾನ ಬಲವರ್ಧನೆಗೆ ಬಯೋ ರೈಡ್‌: ಅಶ್ವಿ‌ನಿ ವೈಷ್ಣವ್‌

Biotechnology: ಜೈವಿಕ ತಂತ್ರಜ್ಞಾನ ಬಲವರ್ಧನೆಗೆ ಬಯೋ ರೈಡ್‌: ಅಶ್ವಿ‌ನಿ ವೈಷ್ಣವ್‌

gayakwad

ಕಾಂಗ್ರೆಸ್ ನಾಯಿ ನಮ್ಮ ಕಾರ್ಯಕ್ರಮಕ್ಕೆ ಬಂದರೆ…: ಶಿವಸೇನೆ ಶಾಸಕನ ವಿವಾದಾತ್ಮಕ ಹೇಳಿಕೆ

MUST WATCH

udayavani youtube

Kaljigaದಲ್ಲಿ ದೈವದ ಅಪಪ್ರಚಾರ ನಡೆದಿಲ್ಲ, ಸಿನಿಮಾ ನೋಡಿದ ಬಳಿಕ ಈ ಬಗ್ಗೆ ಪ್ರತಿಕ್ರಿಯಿಸಿ

udayavani youtube

ನವಜಾತ ಶಿಶುಗಳಲ್ಲಿ ಶ್ರವಣ ಶಕ್ತಿ ಸಮಸ್ಯೆ ಕುರಿತು ಸಂಪೂರ್ಣ ಮಾಹಿತಿ

udayavani youtube

ಅಂತರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆ ಅಂಗವಾಗಿ ತಾಲೂಕು ಮಟ್ಟದ ಮಾನವ ಸರಪಳಿ ಕಾರ್ಯಕ್ರಮ

udayavani youtube

ಈಟ್ ರಾಜಾ ಶಾಪ್ ನಲ್ಲಿ ಜ್ಯೂಸ್ ಕುಡಿಯೋದಷ್ಟೇ ಅಲ್ಲ ತಿನ್ನಲೂ ಬಹುದು

udayavani youtube

ಅಯ್ಯೋ…ಸಂತೆಕಟ್ಟೆ ಅಂಡರ್ ಪಾಸ್ ಪ್ರಯಾಣ ನಿತ್ಯ ನರಕ!

ಹೊಸ ಸೇರ್ಪಡೆ

1-horoscope

Daily Horoscope: ಮನೋಬಲವನ್ನು ಹೆಚ್ಚಿಸಿ ಕೊಂಡಷ್ಟೂ ಹೆಚ್ಚು ಅನುಕೂಲ

Monkey-Pox

Health Department: ಮಂಗನ ಕಾಯಿಲೆ ಆತಂಕ: ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ವಿಶೇಷ ನಿಗಾ

Karnataka; ರಾಜ್ಯಪಾಲರ ಅಧಿಕಾರಕ್ಕೆ ರಾಜ್ಯ ಸರಕಾರ ಅಂಕುಶ?

Karnataka; ರಾಜ್ಯಪಾಲರ ಅಧಿಕಾರಕ್ಕೆ ರಾಜ್ಯ ಸರಕಾರ ಅಂಕುಶ?

BJP MLA ಮುನಿರತ್ನ ಜಾಮೀನು ಭವಿಷ್ಯ ಇಂದು ನಿರ್ಧಾರ

BJP MLA ಮುನಿರತ್ನ ಜಾಮೀನು ಭವಿಷ್ಯ ಇಂದು ನಿರ್ಧಾರ

Chandrayaan-4ಕ್ಕೆ 2100 ಕೋಟಿ ರೂ.; ಕೇಂದ್ರದಿಂದ ಅನುದಾನ

Chandrayaan-4ಕ್ಕೆ 2100 ಕೋಟಿ ರೂ.; ಕೇಂದ್ರದಿಂದ ಅನುದಾನ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.