ಸಮಾವೇಶಕ್ಕೆ ರಾಜ್ಯದೆಲ್ಲೆಡೆಯ ಕಾರ್ಯಕರ್ತರು ಭಾಗಿ: ಡಿಕೆಶಿ
Team Udayavani, Mar 2, 2022, 10:00 PM IST
ಬೆಂಗಳೂರು: ಪಾದಯಾತ್ರೆ ಭಾಗವಾಗಿ ನ್ಯಾಷನಲ್ ಕಾಲೇಜು ಮೈದಾನದಲ್ಲಿ ನಡೆಯಲಿರುವ ಸಮಾವೇಶಕ್ಕೆ ರಾಜ್ಯದ ಮೂಲೆ, ಮೂಲೆಯಿಂದ ಕಾರ್ಯಕರ್ತರು ಆಗಮಿಸುತ್ತಿದ್ದಾರೆ ಎಂದು ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್ ಹೇಳಿದ್ದಾರೆ.
ಸುದ್ದಿಗಾರರ ಜತೆ ಮಾತನಾಡಿದ ಅವರು, ಪಾದಯಾತ್ರೆಯು ಗುರುವಾರ ನ್ಯಾಷನಲ್ ಕಾಲೇಜು ಮೈದಾನದಲ್ಲಿ ಬೃಹತ್ ಸಮಾವೇಶದೊಂದಿಗೆ ಅಂತ್ಯವಾಗಲಿದೆ. ಆದರೆ, ನಮ್ಮ ಹೋರಾಟ ಮುಂದುವರಿಯಲಿದೆ. ಇದು ಮೊದಲ ಭಾಗ ಅಷ್ಟೇ ಎಂದರು.
ಸರ್ವಧರ್ಮ, ಜನಾಂಗ, ಪಕ್ಷಗಳಿಗೆ ಈ ಪಾದಯಾತ್ರೆಯಲ್ಲಿ ಹೆಜ್ಜೆ ಹಾಕಲು ಅವಕಾಶ ಮಾಡಿಕೊಡಲಾಗಿದೆ. ಈ ದೊಡ್ಡ ಜನಸಂಖ್ಯೆಯಲ್ಲಿ ಕೇವಲ ಕಾಂಗ್ರೆಸಿಗರು ಮಾತ್ರವಿಲ್ಲ. ಎಲ್ಲ ವರ್ಗಕ್ಕೆ ಸೇರಿದ ಕಾರ್ಮಿಕರು, ರೈತರು, ನಾಗರಿಕರಿದ್ದಾರೆ. ಬಿಜೆಪಿ ಹಾಗೂ ದಳದ ಜತೆ ಗುರುತಿಸಿಕೊಳ್ಳಲಾಗದವರೂ ಈ ಪಾದಯಾತ್ರೆಯಲ್ಲಿ ಭಾಗವಹಿಸಿದ್ದಾರೆ ಎಂದರು.
ಗುರುವಾರದ ಕಾರ್ಯಕ್ರಮದಲ್ಲಿ ಸುಮಾರು 12 ರಾಜ್ಯಗಳ ಯುವ ಕಾಂಗ್ರೆಸ್ ಅಧ್ಯಕ್ಷರು ಪಾಲ್ಗೊಳ್ಳಲಿದ್ದಾರೆ. ನಾನು ಅವರಿಗೆ ಆಹ್ವಾನ ನೀಡಿರಲಿಲ್ಲ. ಆದರೆ ರಾಜ್ಯದಲ್ಲಿ ಹೇಗೆ ಹೋರಾಟವನ್ನು ಸಂಘಟನೆ ಮಾಡಲಾಗುತ್ತಿದೆ ಎಂದು ನೋಡಲು ಆಗಮಿಸುತ್ತಿದ್ದಾರೆ. ನಾನು ಕೆಲವು ರಾಷ್ಟ್ರ ನಾಯಕರಿಗೆ ಆಹ್ವಾನ ನೀಡಿದ್ದೇನೆ ಎಂದು ತಿಳಿಸಿದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
Kaljigaದಲ್ಲಿ ದೈವದ ಅಪಪ್ರಚಾರ ನಡೆದಿಲ್ಲ, ಸಿನಿಮಾ ನೋಡಿದ ಬಳಿಕ ಈ ಬಗ್ಗೆ ಪ್ರತಿಕ್ರಿಯಿಸಿ
ನವಜಾತ ಶಿಶುಗಳಲ್ಲಿ ಶ್ರವಣ ಶಕ್ತಿ ಸಮಸ್ಯೆ ಕುರಿತು ಸಂಪೂರ್ಣ ಮಾಹಿತಿ
ಅಂತರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆ ಅಂಗವಾಗಿ ತಾಲೂಕು ಮಟ್ಟದ ಮಾನವ ಸರಪಳಿ ಕಾರ್ಯಕ್ರಮ
ಈಟ್ ರಾಜಾ ಶಾಪ್ ನಲ್ಲಿ ಜ್ಯೂಸ್ ಕುಡಿಯೋದಷ್ಟೇ ಅಲ್ಲ ತಿನ್ನಲೂ ಬಹುದು
ಅಯ್ಯೋ…ಸಂತೆಕಟ್ಟೆ ಅಂಡರ್ ಪಾಸ್ ಪ್ರಯಾಣ ನಿತ್ಯ ನರಕ!
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.