ಖಾಸಗಿ ಲ್ಯಾಬ್ಗಳಿಗೆ ಹೋಗಲು ಸಲಹೆ: ಟಾಟಾ ಆಸ್ಪತ್ರೆಯ 11 ನೌಕರರ ಬಂಧನ
ಕಮಿಷನ್ ದಂಧೆ ನಡೆಸುತ್ತಿದ್ದರು..!!
Team Udayavani, Jul 19, 2023, 4:27 PM IST
ಮುಂಬಯಿ : ಕ್ಯಾನ್ಸರ್ ರೋಗಿಗಳನ್ನು ಖಾಸಗಿ ಪ್ರಯೋಗಾಲಯಗಳಿಗೆ ಕಮಿಷನ್ಗಾಗಿ ಶಿಫಾರಸು ಮಾಡಿದ ಆರೋಪದ ಮೇಲೆ ನಗರದ ಟಾಟಾ ಸ್ಮಾರಕ ಆಸ್ಪತ್ರೆಯ ಕೆಲ ನೌಕರರು ಸೇರಿ 11 ಜನರನ್ನು ಬಂಧಿಸಲಾಗಿದೆ ಎಂದು ಪೊಲೀಸರು ಬುಧವಾರ ತಿಳಿಸಿದ್ದಾರೆ.
ಅಣುಶಕ್ತಿ ಇಲಾಖೆಯ ವ್ಯಾಪ್ತಿಯಲ್ಲಿ ಬರುವ ಆಸ್ಪತ್ರೆಯು ಸುಧಾರಿತ ಕ್ಯಾನ್ಸರ್ ಚಿಕಿತ್ಸೆ ಮತ್ತು ಸಂಶೋಧನೆಗೆ ಹೆಸರುವಾಸಿಯಾಗಿದ್ದು, ದೇಶಾದ್ಯಂತದ ರೋಗಿಗಳಿಗೆ ಚಿಕಿತ್ಸೆ ನೀಡಲಾಗುತ್ತದೆ.
ಕೆಲವು ಉದ್ಯೋಗಿಗಳು ಆಸ್ಪತ್ರೆಯಲ್ಲಿ ಸ್ಕ್ಯಾನ್ಗಾಗಿ ದೀರ್ಘ ಕಾಯಬೇಕಾಗುತ್ತದೆ ಎಂದು ಹೇಳಿ ಖಾಸಗಿ ಇಮೇಜಿಂಗ್ ಸೆಂಟರ್ ಗಳು ಮತ್ತು ಪ್ರಯೋಗಾಲಯಗಳಲ್ಲಿ ರೋಗನಿರ್ಣಯದ ಸ್ಕ್ಯಾನ್ ಮಾಡುವಂತೆ ರೋಗಿಗಳನ್ನು ಕೇಳಿಕೊಂಡಿದ್ದಾರೆ ಎಂದು ಪೊಲೀಸ್ ಅಧಿಕಾರಿಯೊಬ್ಬರು ತಿಳಿಸಿದ್ದಾರೆ. ಆರೋಪಿಗಳಲ್ಲಿ ಸಹಾಯಕ ಆಡಳಿತಾಧಿಕಾರಿ, ವಾರ್ಡ್ಬಾಯ್, ಆಯಾ, ಸೇವಕ ಮತ್ತು ಸ್ವಚ್ಛತಾ ಸಿಬಂದಿ ಸೇರಿದ್ದಾರೆ.
ಬಂಧಿತರು ಖಾಸಗಿ ಲ್ಯಾಬ್ಗಳಿಂದ ಕಮಿಷನ್ ಪಡೆದಿದ್ದುಅವರ ದರಗಳು ಆಸ್ಪತ್ರೆಯಲ್ಲಿದ್ದಕ್ಕಿಂತ ಹೆಚ್ಚಾಗಿದೆ ಎಂದು ಅಧಿಕಾರಿ ಹೇಳಿದರು. ಹೀಗಾಗಿ ಆರೋಪಿಗಳು ರೋಗಿಗಳಿಗೆ ಹಾಗೂ ಸರ್ಕಾರಕ್ಕೆ ಲಕ್ಷಾಂತರ ರೂಪಾಯಿ ವಂಚಿಸಿದ್ದಾರೆ.
ಆಸ್ಪತ್ರೆಯ ಅಧಿಕಾರಿಯೊಬ್ಬರು ನೀಡಿದ ದೂರಿನ ಆಧಾರದ ಮೇಲೆ, ಖಾಸಗಿ ಪ್ರಯೋಗಾಲಯದ ಉದ್ಯೋಗಿ ಸೇರಿದಂತೆ 21 ಜನರ ವಿರುದ್ಧ ಜುಲೈ 16 ರಂದು ಭೋಯಿವಾಡ ಪೊಲೀಸ್ ಠಾಣೆಯಲ್ಲಿ ಎಫ್ ಐಆರ್ ದಾಖಲಿಸಿ 11 ಜನರನ್ನು ಬಂಧಿಸಲಾಗಿದೆ. ಹೆಚ್ಚಿನ ತನಿಖೆ ನಡೆಯುತ್ತಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Agra: ಶಿಕ್ಷಕಿಯ ಆಕ್ಷೇಪಾರ್ಹ ವಿಡಿಯೋ ಹಂಚಿಕೊಂಡ ವಿದ್ಯಾರ್ಥಿಗಳು; ನಾಲ್ವರ ಬಂಧನ
31 Naxal ಎನ್ಕೌಂಟರ್ಗೆ 1,500 ಮಂದಿ 25 ಕಿ.ಮೀ. ಟ್ರೆಕ್!
Maharashtra; ಅಹ್ಮದ್ನಗರ ಇನ್ನು ಮುಂದೆ ‘ಅಹಿಲ್ಯಾನಗರ’
Yasin Malik; ಶಸ್ತ್ರಾಸ್ತ್ರ ತ್ಯಜಿಸಿದ್ದೇನೆ, ನಾನೀಗ ಗಾಂಧಿವಾದಿ..
DRDO; ಕಡಿಮೆ ವ್ಯಾಪ್ತಿಯಲ್ಲಿ ಕಾರ್ಯ ನಿರ್ವಹಿಸುವ 4 ಕ್ಷಿಪಣಿ ಪರೀಕ್ಷೆಯಲ್ಲಿ ಯಶಸ್ಸು!
MUST WATCH
ಉಡುಪಿಯ ಈ ಜಾಗದಲ್ಲಿ ರಸಂ ಪುರಿ ತುಂಬಾನೇ ಫೇಮಸ್
ತಿರುಪತಿ ಲಡ್ಡು ವಿವಾದ ಪೇಜಾವರ ಶ್ರೀಗಳು ಹೇಳಿದ್ದೇನು ?
Kaljigaದಲ್ಲಿ ದೈವದ ಅಪಪ್ರಚಾರ ನಡೆದಿಲ್ಲ, ಸಿನಿಮಾ ನೋಡಿದ ಬಳಿಕ ಈ ಬಗ್ಗೆ ಪ್ರತಿಕ್ರಿಯಿಸಿ
ನವಜಾತ ಶಿಶುಗಳಲ್ಲಿ ಶ್ರವಣ ಶಕ್ತಿ ಸಮಸ್ಯೆ ಕುರಿತು ಸಂಪೂರ್ಣ ಮಾಹಿತಿ
ಅಂತರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆ ಅಂಗವಾಗಿ ತಾಲೂಕು ಮಟ್ಟದ ಮಾನವ ಸರಪಳಿ ಕಾರ್ಯಕ್ರಮ
ಹೊಸ ಸೇರ್ಪಡೆ
Agra: ಶಿಕ್ಷಕಿಯ ಆಕ್ಷೇಪಾರ್ಹ ವಿಡಿಯೋ ಹಂಚಿಕೊಂಡ ವಿದ್ಯಾರ್ಥಿಗಳು; ನಾಲ್ವರ ಬಂಧನ
Kuloor: ಮೊಯ್ದೀನ್ ಬಾವಾ ಸೋದರ ಮಮ್ತಾಜ್ ಅಲಿ ನಾಪತ್ತೆ; ಅಪಘಾತ ಸ್ಥಿತಿಯಲ್ಲಿ ಕಾರು ಪತ್ತೆ
Navratri special: ಮತ್ತೆ ಪರಪಂಚಕೆ ಸಿಗುವುದೇ ಉಸಿರಲಿ ಬೆರೆಯುವ ಹಸಿರಾದ ಪ್ರೀತಿ?
Martin: ಇಂದು ಧ್ರುವ ಸರ್ಜಾ ಬರ್ತ್ಡೇ; ದಾವಣಗೆರೆಯಲ್ಲಿ ಪ್ರೀ ರಿಲೀಸ್ ಇವೆಂಟ್
New Guideline For Trekkers: ಇಂದಿನಿಂದ ಕುಮಾರ ಪರ್ವತ ಚಾರಣಕ್ಕೆ ಅವಕಾಶ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.