“ಫ್ರಿಡ್ಜ್ ಮರ್ಡರ್’ ಅಫ್ತಾಬ್ ವಿರುದ್ಧ ಆರೋಪ ನಿಗದಿ
Team Udayavani, May 10, 2023, 7:50 AM IST
ಹೊಸದಿಲ್ಲಿ: ದೇಶವನ್ನೇ ಬೆಚ್ಚಿಬೀಳಿಸಿದ್ದ ದಿಲ್ಲಿ ಫ್ರಿಡ್ಜ್ ಮರ್ಡರ್ ಪ್ರಕರಣದ ಆರೋಪಿ ಅಫ್ತಾಬ್ ಪೂನಾವಾಲಾ ವಿರುದ್ಧ ದಿಲ್ಲಿ ಸಾಕೇತ್ ನ್ಯಾಯಾಲಯ ಮಂಗಳವಾರ ಶ್ರದ್ಧಾಳ ಹತ್ಯೆ ಹಾಗೂ ಸಾಕ್ಷ್ಯಾಧಾರಗಳ ನಾಶಕ್ಕೆ ಯತ್ನಿಸಿ ರುವ ಆರೋಪವನ್ನು ನಿಗದಿಪಡಿಸಿದೆ.
ಪ್ರಕರಣ ಸಂಬಂಧಿಸಿದಂತೆ ಪ್ರಾಸಿಕ್ಯೂ ಷನ್ ವತಿಯಿಂದ ಸಲ್ಲಿಕೆಯಾಗಿರುವಂಥ ದಾಖಲೆಗಳು, ಸಾಕ್ಷ್ಯಾಧಾರಗಳು, ವಾದಗಳು ಸಮರ್ಪಕವಾಗಿರುವ ಹಿನ್ನೆಲೆ ಹೆಚ್ಚುವರಿ ಸೆಷನ್ಸ್ ನ್ಯಾಯಾಧೀಶರಾದ ಮನೀಶ್ ಕುರಾನಾ ಅವರು, ಅಫ್ತಾಬ್ ವಿರುದ್ಧ ಐಪಿಸಿ ಸೆಕ್ಷನ್ 302, 201ರ ಅನ್ವಯ ಆರೋಪಗಳನ್ನು ನಿಗದಿ ಪಡಿಸಿದ್ದಾರೆ.
ನ್ಯಾಯಾಲಯ ನಿಗದಿ ಪಡಿಸಿರುವ ಆರೋಪಗಳನ್ನು ಆರೋಪಿ ಅಫ್ತಾಬ್ ತಿರಸ್ಕರಿಸಿದ್ದಾನೆ. ಅಲ್ಲದೇ, ಪ್ರಕರಣದಲ್ಲಿ ವಿಚಾರಣೆ ಎದುರಿಸಲು ತಾನು ಸಿದ್ಧವಾಗಿರುವುದಾಗಿಯೂ ಹೇಳಿದ್ದಾನೆ. ಈ ಹಿನ್ನೆಲೆಯಲ್ಲಿ ಪ್ರಕರಣ ಕುರಿತ ಮುಂದಿನ ವಿಚಾರಣೆಯನ್ನು ಜೂನ್ 1ಕ್ಕೆ ನ್ಯಾಯಾಲಯ ನಿಗದಿಪಡಿಸಿದೆ.
ಮತ್ತೊಂದೆಡೆ, ಆರೋಪಿ ಅಫ್ತಾಬ್ ವಿರುದ್ಧದ ವಿಚಾರಣೆಯನ್ನು ಶೀಘ್ರ ಆರಂಭಿಸುವಂತೆ ಹಾಗೂ ಆತನನ್ನು ಗಲ್ಲಿಗೇರಿಸುವಂತೆ ಶ್ರದ್ಧಾರ ತಂದೆ ವಿಕಾಸ್ ವಾಕರ್ ಮನವಿ ಮಾಡಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Foreign affairs, ಕೃಷಿ ಶಿಕ್ಷಣ, ಸ್ಥಾಯಿ ಸಮಿತಿಗಳ ಅಧ್ಯಕ್ಷ ಸ್ಥಾನ ಕಾಂಗ್ರೆಸ್ ಪಾಲು
CBI ಪಂಜರದ ಗಿಳಿ: ಸುಪ್ರೀಂ ಅಭಿಪ್ರಾಯಕ್ಕೆ ಉಪರಾಷ್ಟ್ರಪತಿ ಕೆಂಡ
J&K ಸಂಸದ ಇಂಜಿನಿಯರ್ ರಶೀದ್ ಗೆ ಕೈಕೊಟ್ಟು ಎನ್ ಸಿ ಸೇರಿದ ಅಭ್ಯರ್ಥಿ!
Modi 100 days; ಮುಂದಿನ 1000 ವರ್ಷಗಳ ಅಭಿವೃದ್ಧಿಗೆ ತಳಹದಿ ಸಿದ್ಧಪಡಿಸಲಾಗುತ್ತಿದೆ
J-K ಉಗ್ರವಾದ ಯಾರೂ ಪುನರುಜ್ಜೀವನಗೊಳಿಸುವ ಧೈರ್ಯ ತೋರದಂತೆ ಸಮಾಧಿ: ಶಾ
MUST WATCH
ನವಜಾತ ಶಿಶುಗಳಲ್ಲಿ ಶ್ರವಣ ಶಕ್ತಿ ಸಮಸ್ಯೆ ಕುರಿತು ಸಂಪೂರ್ಣ ಮಾಹಿತಿ
ಅಂತರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆ ಅಂಗವಾಗಿ ತಾಲೂಕು ಮಟ್ಟದ ಮಾನವ ಸರಪಳಿ ಕಾರ್ಯಕ್ರಮ
ಈಟ್ ರಾಜಾ ಶಾಪ್ ನಲ್ಲಿ ಜ್ಯೂಸ್ ಕುಡಿಯೋದಷ್ಟೇ ಅಲ್ಲ ತಿನ್ನಲೂ ಬಹುದು
ಅಯ್ಯೋ…ಸಂತೆಕಟ್ಟೆ ಅಂಡರ್ ಪಾಸ್ ಪ್ರಯಾಣ ನಿತ್ಯ ನರಕ!
ನಾಗಮಂಗಲ ಗಣಪತಿ ಗಲಾಟೆ ಪ್ರಕರಣ ಸರ್ಕಾರದ ವಿರುದ್ಧ ಸಿ.ಟಿ.ರವಿ ವಾಗ್ದಾಳಿ
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.