MCD ಸ್ಥಾಯಿ ಸಮಿತಿ ಸ್ಥಾನಕ್ಕೆ ಇಂದೇ ಚುನಾವಣೆ… ಮಧ್ಯಾಹ್ನ 1 ಗಂಟೆಗೆ ಮುಹೂರ್ತ ಫಿಕ್ಸ್


Team Udayavani, Sep 27, 2024, 8:48 AM IST

MCD ಸ್ಥಾಯಿ ಸಮಿತಿ ಸ್ಥಾನಕ್ಕೆ ಇಂದೇ ಚುನಾವಣೆ… ಮಧ್ಯಾಹ್ನ 1 ಗಂಟೆಗೆ ಮುಹೂರ್ತ ಫಿಕ್ಸ್

ನವದೆಹಲಿ: ದೆಹಲಿ ಮಹಾನಗರ ಪಾಲಿಕೆಯಲ್ಲಿ (ಎಂಸಿಡಿ) ತೆರವಾಗಿರುವ ಸ್ಥಾಯಿ ಸಮಿತಿಯ ಒಂದು ಸ್ಥಾನಕ್ಕೆ ಇಂದೇ (ಸೆ.27) ಚುನಾವಣೆ ನಡೆಸುವಂತೆ ಪಾಲಿಕೆಯ ಆಯುಕ್ತರಿಗೆ ಲೆಫ್ಟಿನೆಂಟ್‌ ಗವರ್ನರ್‌ ವಿ.ಕೆ. ಸಕ್ಸೇನಾ ಗುರುವಾರ(ಸೆ. 26) ತಡರಾತ್ರಿ ಆದೇಶ ನೀಡಿದ್ದಾರೆ.
ಅದರಂತೆ ಇಂದು ಮಧ್ಯಾಹ್ನ 1 ಗಂಟೆಗೆ ಚುನಾವಣೆ ನಡೆಯಲಿದೆ ಎಂದು ಪೌರಾಯುಕ್ತ ಅಶ್ವನಿಕುಮಾರ್ ತಿಳಿಸಿದ್ದಾರೆ.

ಬಿಜೆಪಿ ನಾಯಕ ಕಮಲ್‌ಜೀತ್ ಸೆಹ್ರಾವತ್ ಪಶ್ಚಿಮ ದೆಹಲಿ ಸಂಸದರಾಗಿ ಆಯ್ಕೆಯಾದ ನಂತರ ಅವರಿಂದ ತೆರವಾದ ಸಮಿತಿಯ ಆರನೇ ಸ್ಥಾನಕ್ಕೆ ಚುನಾವಣೆ ಅನಿವಾರ್ಯವಾಗಿತ್ತು, ಗವರ್ನರ್ ಆದೇಶದಂತೆ ಹೆಚ್ಚುವರಿ ಮುನ್ಸಿಪಲ್ ಕಮಿಷನರ್ ಜಿತೇಂದರ್ ಯಾದವ್ ಅವರನ್ನು ಎಂಸಿಡಿ ಹೌಸ್ ಸಭೆಯ ಅಧ್ಯಕ್ಷರಾಗಿ ಚುನಾವಣೆ ನಡೆಸಲು ನೇಮಿಸಲಾಗಿದೆ.

ಗುರುವಾರ ಸದಸ್ಯರ ಗದ್ದಲದಿಂದಾಗಿ ಚುನಾವಣೆಯನ್ನು ಅಕ್ಟೋಬರ್‌ 5ಕ್ಕೆ ಮುಂದೂಡಲಾಗಿತ್ತು. ಆದರೆ, ಮೇಯರ್‌ ಶೆಲ್ಲಿ ಒಬೆರಾಯ್‌ ಅವರ ಈ ಆದೇಶವನ್ನು ರದ್ದು ಮಾಡಿದ ಲೆಫ್ಟಿನೆಂಟ್‌ ಗವರ್ನರ್‌ ವಿ.ಕೆ. ಸಕ್ಸೇನಾ, ರಾತ್ರಿ 10ರೊಳಗೆ ವರದಿ ನೀಡುವಂತೆ ಆಯುಕ್ತರಿಗೆ ಸೂಚಿಸಿದ್ದರು. ಇದಾದ ಬಳಿಕ ನಡೆದ ಚರ್ಚೆಯಲ್ಲಿ ಶುಕ್ರವಾರ ಚುನಾವಣೆ ನಡೆಸುವಂತೆ ಆದೇಶ ಹೊರಡಿಸಲಾಗಿದೆ.

ಪ್ರಸ್ತುತ ಸ್ಥಾಯಿ ಸಮಿತಿಯಲ್ಲಿ ಬಿಜೆಪಿ ಒಂಬತ್ತು ಮತ್ತು ಎಎಪಿ ಎಂಟು ಸದಸ್ಯರನ್ನು ಹೊಂದಿದ್ದು, ಸಮಿತಿಯಲ್ಲಿ ಒಟ್ಟು ಸದಸ್ಯರ ಸಂಖ್ಯೆ 18 ಆಗಿದೆ. ನಿಗಮದ ಪ್ರಮುಖ ನೀತಿಗಳು ಮತ್ತು ಯೋಜನೆಗಳು ಮತ್ತು ಹಣಕಾಸಿನ ವಿಷಯಗಳಿಗೆ ಸಂಬಂಧಿಸಿದಂತೆ ಸ್ಥಾಯಿ ಸಮಿತಿಯು ನಿರ್ಧಾರಗಳನ್ನು ತೆಗೆದುಕೊಳ್ಳುತ್ತದೆ. ಸದನದ ಸಭೆಯಲ್ಲಿ ಸ್ಥಾಯಿ ಸಮಿತಿ ಸದಸ್ಯರ ಉಪಚುನಾವಣೆಯಲ್ಲಿ ಬಿಜೆಪಿ ಜಯಗಳಿಸುವಲ್ಲಿ ಯಶಸ್ವಿಯಾದರೆ, ಅದು ಸಮಿತಿಯಲ್ಲಿ ಬಹುಮತವನ್ನು ಪಡೆಯುತ್ತದೆ.

ಒಂದು ವೇಳೆ ಉಪಚುನಾವಣೆಯಲ್ಲಿ ಎಎಪಿ ಗೆದ್ದರೆ ಎರಡೂ ಪಕ್ಷಗಳ ಸದಸ್ಯರ ಸಂಖ್ಯೆ ಸಮಾನವಾಗಿರುತ್ತದೆ. ಈ ಮೂಲಕ ಸಮಿತಿ ಅಧ್ಯಕ್ಷರ ಆಯ್ಕೆ ಕುತೂಹಲ ಮೂಡಿಸಲಿದೆ. ಈ ಬಾರಿಯ ಚುನಾವಣೆಯಲ್ಲಿ ಎರಡೂ ಪಕ್ಷಗಳ ಅಭ್ಯರ್ಥಿಗಳು ಸಮಾನ ಮತ ಪಡೆದರೆ ಡ್ರಾ ಮೂಲಕ ಗೆಲುವು ನಿರ್ಧಾರವಾಗಲಿದೆ.

ಇದನ್ನೂ ಓದಿ: MUDA Scam: ಇಂದು ಸಿಎಂ ಸಿದ್ದರಾಮಯ್ಯ ವಿರುದ್ಧ ಲೋಕಾಯುಕ್ತದಲ್ಲಿ ಎಫ್ಐಆರ್‌ ಸಾಧ್ಯತೆ

ಟಾಪ್ ನ್ಯೂಸ್

Sandalwood; ಮುಂದಿನ ಭಾಗದಲ್ಲಿ ನಿರೀಕ್ಷಿಸಿ.. ಸ್ಯಾಂಡಲ್‌ವುಡ್‌ನ‌ಲ್ಲಿ ಪಾರ್ಟ್‌-2 ಕ್ರೇಜ್‌

Sandalwood; ‘ಮುಂದಿನ ಭಾಗದಲ್ಲಿ ನಿರೀಕ್ಷಿಸಿ..’ ಸ್ಯಾಂಡಲ್‌ವುಡ್‌ನ‌ ಪಾರ್ಟ್‌-2 ಕ್ರೇಜ್‌

Kulasekhara: ಬೈಕ್ ಗಳ ನಡುವೆ ಅಪಘಾತ… ಸವಾರ ಮೃತ್ಯು

Kulasekhara: ಬೈಕ್ ಗಳ ನಡುವೆ ಅಪಘಾತ… ಸವಾರ ಮೃತ್ಯು

Success Story-ಮುನಿಯಾಲ್‌ To ಅಬುಧಾಬಿ; ಯಶಸ್ವಿ ಹೋಟೆಲ್‌ ಉದ್ಯಮಿ ಸುಂದರ ಶೆಟ್ಟಿ ಜೀವನಗಾಥೆ

Success Story-ಮುನಿಯಾಲ್‌ To ಅಬುಧಾಬಿ; ಯಶಸ್ವಿ ಹೋಟೆಲ್‌ ಉದ್ಯಮಿ ಸುಂದರ ಶೆಟ್ಟಿ ಜೀವನಗಾಥೆ

Celebrity Corner:ಕಾಲೇಜುಗಳು ಕಲಿಸುತ್ತವೆಂದು ಕಾಯದಿರಿ-ಆದಾಯದ ಮಾಡೆಲ್‌ ಎಂದರೇನು?

Celebrity Corner:ಕಾಲೇಜುಗಳು ಕಲಿಸುತ್ತವೆಂದು ಕಾಯದಿರಿ-ಆದಾಯದ ಮಾಡೆಲ್‌ ಎಂದರೇನು?

Bellary: Siddaramaiah, who said corruption is unforgivable, should resign now: Sri Ramulu

Bellary: ಭ್ರಷ್ಟಾಚಾರ ಕ್ಷಮಿಸಲಾಗದು ಎಂದಿದ್ದ ಸಿದ್ದರಾಮಯ್ಯ ಈಗ ರಾಜೀನಾಮೆ ಕೊಡಬೇಕು: ರಾಮುಲು

Dwayne Bravo replaces Gautam Gambhir as KKR mentor

IPL 2025: ಗಂಭೀರ್‌ ಜಾಗಕ್ಕೆ ಹೊಸ ಮೆಂಟರ್‌ ಘೋಷಿಸಿದ ಕೋಲ್ಕತ್ತಾ ನೈಟ್‌ ರೈಡರ್ಸ್

1

World Tourism Day 2024: “ಕರ್ನಾಟಕ ಒಂದು ರಾಜ್ಯ…ಇಲ್ಲಿದೆ ವಿಸ್ಮಯದ ಹಲವು ಜಗತ್ತು”


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Gold Stolen: ಹಾಡಹಗಲೇ ಕಾರು ಅಡ್ಡಗಟ್ಟಿ, ಇಬ್ಬರನ್ನು ಅಪಹರಿಸಿ 2.5 ಕೆಜಿ ಚಿನ್ನ ದೋಚಿದ ತಂಡ

Gold Stolen: ಹಾಡಹಗಲೇ ಕಾರು ಅಡ್ಡಗಟ್ಟಿ, ಇಬ್ಬರನ್ನು ಅಪಹರಿಸಿ 2.5 ಕೆಜಿ ಚಿನ್ನ ದೋಚಿದ ತಂಡ

MONEY (2)

Minimum wages; ಅಸಂಘಟಿತ ಕಾರ್ಮಿಕರ ಕನಿಷ್ಠ ವೇತನ ಹೆಚ್ಚಿಸಿದ ಕೇಂದ್ರ

online

400 crores ಆನ್‌ಲೈನ್‌ ಗೇಮಿಂಗ್‌ ಆ್ಯಪ್‌ ವಂಚನೆ ಪತ್ತೆ

robbers

Leopard cage; ಚಿರತೆ ಬೋನಿನಲ್ಲಿಟ್ಟಿದ್ದ ಮೇಕೆ ಕದ್ದೊಯ್ದ ಖದೀಮರು!

1-wqewewq

Dubai; ಪತ್ನಿ ಬಿಕಿನಿ ಧರಿಸಲು 418 ಕೋಟಿ ರೂ.ಗೆ ದ್ವೀಪ ಖರೀದಿ!

MUST WATCH

udayavani youtube

ಉಡುಪಿಯ ಈ ಜಾಗದಲ್ಲಿ ರಸಂ ಪುರಿ ತುಂಬಾನೇ ಫೇಮಸ್

udayavani youtube

ತಿರುಪತಿ ಲಡ್ಡು ವಿವಾದ ಪೇಜಾವರ ಶ್ರೀಗಳು ಹೇಳಿದ್ದೇನು ?

udayavani youtube

Kaljigaದಲ್ಲಿ ದೈವದ ಅಪಪ್ರಚಾರ ನಡೆದಿಲ್ಲ, ಸಿನಿಮಾ ನೋಡಿದ ಬಳಿಕ ಈ ಬಗ್ಗೆ ಪ್ರತಿಕ್ರಿಯಿಸಿ

udayavani youtube

ನವಜಾತ ಶಿಶುಗಳಲ್ಲಿ ಶ್ರವಣ ಶಕ್ತಿ ಸಮಸ್ಯೆ ಕುರಿತು ಸಂಪೂರ್ಣ ಮಾಹಿತಿ

udayavani youtube

ಅಂತರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆ ಅಂಗವಾಗಿ ತಾಲೂಕು ಮಟ್ಟದ ಮಾನವ ಸರಪಳಿ ಕಾರ್ಯಕ್ರಮ

ಹೊಸ ಸೇರ್ಪಡೆ

Munirathna Case: ವಿಕಾಸಸೌಧದಲ್ಲೇ ಮುನಿರತ್ನ ರೇಪ್‌; ಸಂತ್ರಸ್ತೆ

Munirathna Case: ವಿಕಾಸಸೌಧದಲ್ಲೇ ಮುನಿರತ್ನ ರೇಪ್‌; ಸಂತ್ರಸ್ತೆ

6-araga

Thirthahalli: ಸಿಬಿಐ ಬರಬಾರದು ಎಂದು ಬೇಲಿ ಹಾಕಿದ್ದು ಯಾಕೆ: ಆರಗ ಪ್ರಶ್ನೆ

Sandalwood; ಮುಂದಿನ ಭಾಗದಲ್ಲಿ ನಿರೀಕ್ಷಿಸಿ.. ಸ್ಯಾಂಡಲ್‌ವುಡ್‌ನ‌ಲ್ಲಿ ಪಾರ್ಟ್‌-2 ಕ್ರೇಜ್‌

Sandalwood; ‘ಮುಂದಿನ ಭಾಗದಲ್ಲಿ ನಿರೀಕ್ಷಿಸಿ..’ ಸ್ಯಾಂಡಲ್‌ವುಡ್‌ನ‌ ಪಾರ್ಟ್‌-2 ಕ್ರೇಜ್‌

012

High Court: ಜೈಲಿನಲ್ಲಿ ಆತಿಥ್ಯ; ಕೈದಿ ಕುಳ್ಳ ಸೀನ ವಿರುದ್ಧದ ಕೇಸ್‌ಗೆ ಹೈಕೋರ್ಟ್‌ ತಡೆ

Fraud Case: ಖಾಸಗಿ ಸುದ್ದಿವಾಹಿನಿ ಎಂಡಿ ಬಂಧನ

Fraud Case: ಖಾಸಗಿ ಸುದ್ದಿವಾಹಿನಿ ಎಂಡಿ ಬಂಧನ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.