ರಸಗೊಬ್ಬರಗಳಿಗೆ ಕ್ಯೂರ್‌ಕೋಡ್‌ ಕಡ್ಡಾಯ: ಆಗಸ್ಟ್‌ 1ರಿಂದಲೇ ಹೊಸ ಕ್ರಮ ಜಾರಿಗೆ

ನಕಲಿ ರಸಗೊಬ್ಬರ ಉತ್ಪನ್ನಗಳಿಗೆ ಕಡಿವಾಣ

Team Udayavani, Jan 22, 2023, 7:15 AM IST

ರಸಗೊಬ್ಬರಗಳಿಗೆ ಕ್ಯೂರ್‌ಕೋಡ್‌ ಕಡ್ಡಾಯ: ಆಗಸ್ಟ್‌ 1ರಿಂದಲೇ ಹೊಸ ಕ್ರಮ ಜಾರಿಗೆ

ಹೊಸದಿಲ್ಲಿ: ನಕಲಿ ರಸಗೊಬ್ಬರ ಉತ್ಪನ್ನಗಳಿಗೆ ಕಡಿವಾಣ ಹಾಕುವ ನಿಟ್ಟಿನಲ್ಲಿ ರಸಗೊಬ್ಬರ ಪ್ಯಾಕೆಟ್‌ಗಳ ಮೇಲೆ ಬಾರ್‌ಕೋಡ್‌ ಅಥವಾ ಕ್ಯುಆರ್‌ ಕೋಡ್‌ ಕಡ್ಡಾಯಗೊಳಿಸಲು ಕೇಂದ್ರ ಸರಕಾರ ಮುಂದಾಗಿದೆ.

ಕೇಂದ್ರ ರಾಸಾಯನಿಕ ಮತ್ತು ರಸಗೊಬ್ಬರ ಸಚಿವಾಲಯದ ಅಡಿ ಬರುವ ಔಷಧೋದ್ಯಮ ಇಲಾಖೆ ಈ ಕುರಿತು ಗೆಜೆಟ್‌ ನೋಟಿಫಿಕೇಶನ್‌ ಹೊರಡಿಸಿದ್ದು, ಇದರ ಪ್ರಕಾರ 2023ರ ಆ. 1ರಿಂದ ಮಾರಾಟ ಮಾಡುವ ಎಲ್ಲ ರಸಗೊಬ್ಬರಗಳ ಪ್ಯಾಕೆಟ್‌ಗಳ ಮೇಲೆ ಬಾರ್‌ಕೋಡ್‌ ಅಥವಾ ಕ್ಯುಆರ್‌ ಕೋಡ್‌ ಕಡ್ಡಾಯವಾಗಿದೆ.

ಈ ಕ್ರಮವು ನಕಲಿ ರಸಗೊಬ್ಬರ ತಡೆಯುವ ಮೂಲಕ ಕೃಷಿಕರಿಗೆ ಸಹಕಾರಿಯಾಗಿದೆ. ನಕಲಿ ರಸಗೊಬ್ಬರ ಹಾವಳಿಯಿಂದಾಗಿ ಕೃಷಿ ಉತ್ಪನ್ನಗಳ ಇಳುವರಿ ಕಡಿಮೆಯಾಗುತ್ತದೆ. ಈ ಮೂಲಕ ರೈತರ ಆದಾಯ ಕುಸಿಯುತ್ತದೆ. ಇದಕ್ಕೆ ಕಡಿವಾಣ ಹಾಕಲು ಕೇಂದ್ರ ಸರಕಾರ ಸಿಂಗಲ್‌ ಸೂಪರ್‌ ಫಾಸ್ಪೇಟ್‌ (ಎಸ್‌ಎಸ್‌ಪಿ) ರಸಗೊಬ್ಬರಕ್ಕೆ ಬಾರ್‌ಕೋಡಿಂಗ್‌ ಕಡ್ಡಾಯಗೊಳಿಸಿದೆ.

ಎಸ್‌ಎಸ್‌ಪಿ ಒಂದು ಪ್ರಮುಖ ರಸಗೊಬ್ಬರವಾಗಿದ್ದು, ಸಸ್ಯಗಳಿಗೆ ಅಗತ್ಯವಿರುವ ಮೂರು ಪ್ರಮುಖ ಪೋಷಕಾಂಶಗಳಾದ ಫಾಸ್ಫರಸ್‌, ಸಲ#ರ್‌ ಮತ್ತು ಕ್ಯಾಲ್ಸಿಯಂ ಜತೆಗೆ ಅನೇಕ ಸೂಕ್ಷ್ಮ ಪೋಷಕಾಂಶಗಳನ್ನು ಒಳಗೊಂಡಿದೆ.

ರಸಗೊಬ್ಬರ ಪ್ಯಾಕೆಟ್‌ಗಳಲ್ಲಿರುವ ಕ್ಯುಆರ್‌ ಕೋಡ್‌ ಅನನ್ಯ ಉತ್ಪನ್ನ ಗುರುತಿನ ಕೋಡ್‌, ಬ್ರ್ಯಾಂಡ್‌ ಹೆಸರು, ತಯಾರಕರ ಹೆಸರು ಮತ್ತು ವಿಳಾಸ, ಬ್ಯಾಚ್‌ ಸಂಖ್ಯೆ, ತಯಾರಿಕೆಯ ದಿನಾಂಕ, ಮುಕ್ತಾಯ ದಿನಾಂಕ ಮತ್ತು ಉತ್ಪಾದನ ಪರವಾನಗಿ ಸಂಖ್ಯೆಯನ್ನು ಒಳಗೊಂಡಿರುತ್ತದೆ.

ಕೇಂದ್ರ ಆರೋಗ್ಯ, ಔಷಧ ಮತ್ತು ರಸಗೊಬ್ಬರ ಸಚಿವ ಮನಸುಖ ಮಾಂಡವಿಯಾ ಅವರ ಮುತುವರ್ಜಿಯಿಂದ ಈ ಕ್ರಮ ಕೈಗೊಳ್ಳಲಾಗಿದೆ. ಔಷಧ ವಲಯದಲ್ಲಿ ಈಗಾಗಲೇ ಔಷಧಗಳ ಪ್ಯಾಕೆಟ್‌ಗಳ ಮೇಲೆ ಕ್ಯುಆರ್‌ ಕೋಡ್‌ ಕಡ್ಡಾಯಗೊಳಿಸುವ ಕಾರ್ಯ ಪ್ರಗತಿಯಲ್ಲಿದೆ. ಅದೇ ರೀತಿ ರಸಗೊಬ್ಬರಗಳ ಪ್ಯಾಕೆಟ್‌ಗಳ ಮೇಲೂ ಕ್ಯುಆರ್‌ ಕೋಡ್‌ ಕಡ್ಡಾಯಕ್ಕೆ ಸಚಿವರು ಸಲಹೆ ನೀಡಿದ್ದರು ಎಂದು ಉನ್ನತ ಅಧಿಕಾರಿಯೊಬ್ಬರು ತಿಳಿಸಿದ್ದಾರೆ.

ದೇಶದಲ್ಲಿ ಪ್ರತೀ ವರ್ಷ 56 ಲಕ್ಷ ಟನ್‌ ಎಸ್‌ಎಸ್‌ಪಿ ಉತ್ಪಾದಿಸಲಾಗುತ್ತದೆ. ಇದು ಡಿಎಪಿ (ಡಿ-ಅಮೋನಿಯಂ ಫಾಸ್ಪೇಟ್‌) ರಸಗೊಬ್ಬರ ಆಮದು ಮೇಲಿನ ಅತಿಯಾದ ಅವಲಂಬನೆಯನ್ನು ತಗ್ಗಿಸಿದೆ.

ಟಾಪ್ ನ್ಯೂಸ್

Gun-Fire

Mandya: ನಾಗಮಂಗಲದಲ್ಲಿ ಆಕಸ್ಮಿಕ ಫೈರಿಂಗ್‌: 3 ವರ್ಷದ ಮಗು ಮೃತ್ಯು!

Thirthahalli: ಸಾಲ ಕಟ್ಟದ್ದಕ್ಕೆ ಕಿವಿಯೋಲೆ ಕಿತ್ತ ಬ್ಯಾಂಕ್‌ ಸಿಬ್ಬಂದಿ!

Thirthahalli: ಸಾಲ ಕಟ್ಟದ್ದಕ್ಕೆ ಕಿವಿಯೋಲೆ ಕಿತ್ತ ಬ್ಯಾಂಕ್‌ ಸಿಬ್ಬಂದಿ!

BR-Hills

Restriction: ನಿಷೇಧವಿದ್ದರೂ ಗೂಡ್ಸ್‌ ವಾಹನಗಳಲ್ಲಿ ಜನರು ಬಿಳಿಗಿರಿ ರಂಗನ ಬೆಟ್ಟಕ್ಕೆ ಪಯಣ!

Delhi-Stamp

Mahakumbh Rush: ಗೊಂದಲಕಾರಿ ಪ್ರಕಟಣೆಯಿಂದ ರೈಲು ನಿಲ್ದಾಣದಲ್ಲಿ ಕಾಲ್ತುಳಿತ: ಪೊಲೀಸರು

ಜರ್ಮನಿ ಅಧ್ಯಕ್ಷರ ಎಕ್ಸ್‌ ಖಾತೆ ಹ್ಯಾಕ್‌: ಬಿಹಾರ ಇಲಾಖೆ ಹೆಸರಿಟ್ಟ ಕಿಡಿಗೇಡಿಗಳು

ಜರ್ಮನಿ ಅಧ್ಯಕ್ಷರ ಎಕ್ಸ್‌ ಖಾತೆ ಹ್ಯಾಕ್‌: ಬಿಹಾರ ಇಲಾಖೆ ಹೆಸರಿಟ್ಟ ಕಿಡಿಗೇಡಿಗಳು

Kuruburu-Shanta

Air Lift: ಪಂಜಾಬ್‌ನಲ್ಲಿ ರೈತ ಮುಖಂಡ ಶಾಂತಕುಮಾರ್‌ಗೆ ಅಪಘಾತ; ಬೆಂಗಳೂರಿಗೆ ಏರ್‌ಲಿಫ್ಟ್‌

Kollywood: ಖ್ಯಾತ ನಟ ಯೋಗಿ ಬಾಬು ಕಾರು ಅಪಘಾತ?: ನಟ ಹೇಳಿದ್ದೇನು?

Kollywood: ಖ್ಯಾತ ನಟ ಯೋಗಿ ಬಾಬು ಕಾರು ಅಪಘಾತ?: ನಟ ಹೇಳಿದ್ದೇನು?


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Delhi-Stamp

Mahakumbh Rush: ಗೊಂದಲಕಾರಿ ಪ್ರಕಟಣೆಯಿಂದ ರೈಲು ನಿಲ್ದಾಣದಲ್ಲಿ ಕಾಲ್ತುಳಿತ: ಪೊಲೀಸರು

mohan bhagwat

RSS; ಹಿಂದೂ ಸಮಾಜ ದೇಶದ ಜವಾಬ್ದಾರಿಯುತ ಸಮುದಾಯ: ಮೋಹನ್ ಭಾಗವತ್

Lalu

Controversy; ಮಹಾಕುಂಭ ‘ಅರ್ಥಹೀನ’ ಎಂದ ಲಾಲು ಪ್ರಸಾದ್ ಯಾದವ್

1sadgu

Pariksha Pe Charcha: ಸ್ಮಾರ್ಟ್ ಫೋನ್‌ಗಿಂತಲೂ ನೀವು ಸ್ಮಾರ್ಟ್ ಆಗಬೇಕು:ಸದ್ಗುರು

15-monalisa

Mahakumbh sensation: ಕೇರಳದಲ್ಲಿ ಕುಂಭಮೇಳದ ಮೊನಾಲಿಸಾ ಹವಾ

MUST WATCH

udayavani youtube

ನಿಮ್ಮ ಅಚ್ಚುಮೆಚ್ಚಿನ ; ಆರೋಗ್ಯಕರ ಪಾನಿಪುರಿ ಸವಿಯಲು ಇಲ್ಲಿಗೆ ಬನ್ನಿ

udayavani youtube

ಭೀಕರ ಹಿಟ್ & ರನ್ ಸಂತ್ರಸ್ತರ ಪರ ನಿಂತ ಪುತ್ತೂರು ಶಾಸಕ ಅಶೋಕ್ ರೈ

udayavani youtube

ಶ್ರೀ ಬ್ರಹ್ಮಬೈದರ್ಕಳ ನೇಮೋತ್ಸವ, ಮಾಣಿಬಾಲೆ ನೇಮೋತ್ಸವ

udayavani youtube

ಸಾಹಿತ್ಯಾಸಕ್ತಿಯ ಚಹಾ ಅಂಗಡಿ

udayavani youtube

ಇಲ್ಲಿ ಪ್ರತಿಯೊಂದು ಗೋವುಗಳಿಗೂ ವಿಭಿನ್ನ ಹೆಸರಿದೆ

ಹೊಸ ಸೇರ್ಪಡೆ

Gun-Fire

Mandya: ನಾಗಮಂಗಲದಲ್ಲಿ ಆಕಸ್ಮಿಕ ಫೈರಿಂಗ್‌: 3 ವರ್ಷದ ಮಗು ಮೃತ್ಯು!

accident

Kaup: ಸ್ಕೂಟಿ, ಕಾರಿಗೆ ಬಸ್‌ ಢಿಕ್ಕಿ; ಸವಾರನಿಗೆ ಗಾಯ

Thirthahalli: ಸಾಲ ಕಟ್ಟದ್ದಕ್ಕೆ ಕಿವಿಯೋಲೆ ಕಿತ್ತ ಬ್ಯಾಂಕ್‌ ಸಿಬ್ಬಂದಿ!

Thirthahalli: ಸಾಲ ಕಟ್ಟದ್ದಕ್ಕೆ ಕಿವಿಯೋಲೆ ಕಿತ್ತ ಬ್ಯಾಂಕ್‌ ಸಿಬ್ಬಂದಿ!

1

Padubidri: ಕಬ್ಬಿಣದ ತುಂಡು ಹೆಕ್ಕಿದ ಬಾಲಕರಿಗೆ ರೈಲ್ವೇ ಗ್ಯಾಂಗ್‌ಮನ್‌ ಹಲ್ಲೆ; ದೂರು

BR-Hills

Restriction: ನಿಷೇಧವಿದ್ದರೂ ಗೂಡ್ಸ್‌ ವಾಹನಗಳಲ್ಲಿ ಜನರು ಬಿಳಿಗಿರಿ ರಂಗನ ಬೆಟ್ಟಕ್ಕೆ ಪಯಣ!

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.