ಗೋವಾದಲ್ಲಿ ಆಲ್ಕೋಹಾಲ್ ಮ್ಯೂಸಿಯಂ!
Team Udayavani, Aug 23, 2021, 7:10 AM IST
ಪಣಜಿ: ಪ್ರವಾಸಿ ರಾಜ್ಯ ಗೋವಾದಲ್ಲಿ ಮೊದಲ ಆಲ್ಕೋಹಾಲ್ ಮ್ಯೂಸಿಯಂ ತೆರೆಯಲಾಗಿದೆ. ಸ್ಥಳೀಯ ವಿಶೇಷ ಮದ್ಯವೆನಿಸಿಕೊಂಡಿರುವ ಫೆನ್ನಿಯ ಪ್ರಸಿದ್ಧತೆಯನ್ನು ದೇಶ ವಿದೇಶಕ್ಕೆ ಹರಡಿಸುವ ಉದ್ದೇಶದೊಂದಿಗೆ ಈ ಮ್ಯೂಸಿಯಂ ತೆರೆಯಲಾಗಿದೆ.
ಉದ್ಯಮಿ ನಂದನ್ ಕುಡcಡ್ಕರ್ “ಆಲ್ ಎಬೌಟ್ ಆಲ್ಕೋಹಾಲ್’ ಹೆಸರಿನ ಮ್ಯೂಸಿಯಂ ತೆರೆದಿದ್ದಾರೆ. ಕಾಂಡೋಲಿಮ್ ಬೀಚ್ ಗ್ರಾಮದ ಬಳಿ ಈ ಮ್ಯೂಸಿಯಂ ಇದೆ. ಇದರಲ್ಲಿ ವಿಶೇಷವಾಗಿ ಪೆನ್ನಿಗೆ ಸಂಬಂಧಪಟ್ಟ ಸಾಮಗ್ರಿಗಳನ್ನು ಪ್ರದರ್ಶಿಸಲಾಗುವುದು. ಹಿಂದಿನ ಕಾಲದಲ್ಲಿ ಪೆನ್ನಿಯನ್ನು ಸಂಗ್ರಹಿಸುಡುತ್ತಿದ್ದ ಬೃಹದಾಕಾರದ ಹೂಜಿಗಳು, ಪೆನ್ನಿಗೆ ಸಂಬಂಧಿಸಿದ ಕಲಾಕೃತಿಗಳ ಪ್ರದರ್ಶನ ನಡೆಯಲಿದೆ. ಈ ಮ್ಯೂಸಿಯಂ ಮೂಲಕ ಗೋವಾದ ಪರಂಪರೆ ಮತ್ತು ಪೆನ್ನಿಯ ಮೂಲ, ಅದು ಬ್ರೆಜಿಲ್ನಿಂದ ಗೋವಾಕ್ಕೆ ಬಂದಿದ್ದು ಹೇಗೆ ಎಂಬೆಲ್ಲ ಮಾಹಿತಿಯನ್ನೂ ಜನರಿಗೆ ತಿಳಿಸಿಕೊಡುವುದಾಗಿ ನಂದನ್ ಹೇಳಿದ್ದಾರೆ.
ಪೆನ್ನಿ ಗೋವಾದಲ್ಲೇ ತಯಾಗುತ್ತಿರುವ ಮದ್ಯ. ಅದನ್ನು ರಾಜ್ಯದ ಪಾರಂಪರಿಕ ಮದ್ಯ ಎಂದು ಸರಕಾರ 2016ರಲ್ಲಿ ಗುರುತಿಸಿದೆ. 1700ರ ಸಮಯದಲ್ಲಿ ಪೋರ್ಚುಗೀಸರು ಬ್ರೆಜಿಲ್ನಿಂದ ಗೇರು ಬೀಜವನ್ನು ತಂದು ಗೋವಾದಲ್ಲಿ ಅದರ ಬೆಳೆ ಆರಂಭಿಸಿದರು. ನಂತರ ಗೇರು ಹಣ್ಣುಗಳಿಂದಲೇ ಪೆನ್ನಿ ಮದ್ಯ ತಯಾರಿಸಲಾರಂಭಿಸಲಾಯಿತು. ಗೇರು ರಸವನ್ನು ಎರಡು ಬಾರಿ ಡಿಸ್ಟಿಲ್ ಮಾಡಿ ಅದಕ್ಕೆ ಕೆಲ ಸಾಮಾಗ್ರಿಗಳನ್ನು ಸೇರಿಸಿ ಪೆನ್ನಿ ತಯಾರಿಸಲಾಗುತ್ತದೆ. ಗೋವಾದ ಜನರು ಅತಿ ಹೆಚ್ಚು ಬಳಸುವ ಮದ್ಯದಲ್ಲಿ ಇದು ಮೊದಲಿದೆ. ಅದಕ್ಕೆಂದೇ ವಿಶೇಷ ಬಾರ್ಗಳೂ ಅಲ್ಲಿವೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Prophet Hate Speech; ಯತಿ ನರಸಿಂಹಾನಂದ ಸರಸ್ವತಿ ಯುಪಿ ಪೊಲೀಸರ ವಶಕ್ಕೆ
Exit poll results; ಹರಿಯಾಣದಲ್ಲಿ ಕೈಗೆ ಅಧಿಕಾರ, ಜಮ್ಮು ಮತ್ತು ಕಾಶ್ಮೀರ ಅತಂತ್ರ?
Haryana Polls; ಕೈ ಕಾರ್ಯಕರ್ತರು ಮತ್ತು ಪಕ್ಷೇತರನ ಬೆಂಬಲಿಗರ ಮಾರಾಮಾರಿ
PM: ಕಾಂಗ್ರೆಸ್ ಡ್ರಗ್ಸ್ ದಂಧೆ ಹಣ ಚುನಾವಣೆ ಗೆಲ್ಲಲು ಬಳಸಿಕೊಳ್ಳುತ್ತಿದೆ: ಪ್ರಧಾನಿ ಮೋದಿ
IFFI: ನವೆಂಬರ್ 20ರಿಂದ ಗೋವಾದಲ್ಲಿ 55ನೇ ಅಂತರಾಷ್ಟ್ರೀಯ ಚಲನಚಿತ್ರೋತ್ಸವ
MUST WATCH
ಉಡುಪಿಯ ಈ ಜಾಗದಲ್ಲಿ ರಸಂ ಪುರಿ ತುಂಬಾನೇ ಫೇಮಸ್
ತಿರುಪತಿ ಲಡ್ಡು ವಿವಾದ ಪೇಜಾವರ ಶ್ರೀಗಳು ಹೇಳಿದ್ದೇನು ?
Kaljigaದಲ್ಲಿ ದೈವದ ಅಪಪ್ರಚಾರ ನಡೆದಿಲ್ಲ, ಸಿನಿಮಾ ನೋಡಿದ ಬಳಿಕ ಈ ಬಗ್ಗೆ ಪ್ರತಿಕ್ರಿಯಿಸಿ
ನವಜಾತ ಶಿಶುಗಳಲ್ಲಿ ಶ್ರವಣ ಶಕ್ತಿ ಸಮಸ್ಯೆ ಕುರಿತು ಸಂಪೂರ್ಣ ಮಾಹಿತಿ
ಅಂತರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆ ಅಂಗವಾಗಿ ತಾಲೂಕು ಮಟ್ಟದ ಮಾನವ ಸರಪಳಿ ಕಾರ್ಯಕ್ರಮ
ಹೊಸ ಸೇರ್ಪಡೆ
Prophet Hate Speech; ಯತಿ ನರಸಿಂಹಾನಂದ ಸರಸ್ವತಿ ಯುಪಿ ಪೊಲೀಸರ ವಶಕ್ಕೆ
Theft Case: ಬ್ಯಾಂಕಿನಿಂದ ಹಣದ ಬ್ಯಾಗ್ ಕಳವು ಪ್ರಕರಣ
Exit poll results; ಹರಿಯಾಣದಲ್ಲಿ ಕೈಗೆ ಅಧಿಕಾರ, ಜಮ್ಮು ಮತ್ತು ಕಾಶ್ಮೀರ ಅತಂತ್ರ?
Manvi: ವಿಪಕ್ಷಗಳ ಬೆದರಿಕೆಗಳಿಗೆ ಜಗ್ಗಲ್ಲ, ಜನರಿಗಾಗಿ ಹೋರಾಟ ಮುಂದುವರಿಸುವೆ: ಸಿದ್ದರಾಮಯ್ಯ
ನಾಡೋಜ ಜಿ. ಶಂಕರ್ 69ನೇ ಹುಟ್ಟು ಹಬ್ಬ: ಉಚ್ಚಿಲ ಮಹಾಲಕ್ಷ್ಮೀ ದೇವಸ್ಥಾನದಲ್ಲಿ ವಿಶೇಷ ಪೂಜೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.