Ambani; ಅನಂತ್- ರಾಧಿಕಾ ಮದುವೆ ಮಂಟಪದಲ್ಲಿ ಕಾಶಿ ಬನಾರಸ್ ಘಾಟ್ ಗಳ ಮರುಸೃಷ್ಟಿ

ಎಲ್ಲವೂ ಸಂಪೂರ್ಣವಾಗಿ ಭಾರತೀಯ ಮೌಲ್ಯಗಳಿಂದ ಕೂಡಿರಲಿವೆ...

Team Udayavani, Jul 12, 2024, 8:03 PM IST

1-aare

ಮುಂಬೈ: ಅನಂತ್ ಅಂಬಾನಿ- ರಾಧಿಕಾ ಮರ್ಚೆಂಟ್ ಅವರ ವಿವಾಹ ಮಹೋತ್ಸವು ಶುಕ್ರವಾರ (ಜುಲೈ 12) ಮುಂಬೈನ ಬಾಂದ್ರಾ ಕುರ್ಲಾದಲ್ಲಿರುವ ಜಿಯೋ ವರ್ಲ್ಡ್ ಸೆಂಟರ್ ನಲ್ಲಿ ‘ಭಾರತೀಯ ಥೀಮ್’ನಲ್ಲಿ ನಡೆಸಲು ಎಲ್ಲ ರೀತಿಯಲ್ಲೂ ವಿವಾಹಕ್ಕೆ ಸಿದ್ಧವಾಗಿದೆ. ಭಾರತ ಮತ್ತು ವಿದೇಶಗಳ ಅತಿಥಿಗಳಿಗೆ ಭಾರತೀಯ ಸಂಸ್ಕೃತಿಯನ್ನು ಪರಿಚಯಿಸುವುದಕ್ಕಾಗಿ ಇಡೀ ವೇದಿಕೆಯನ್ನು ಭಾರತೀಯ ಬಣ್ಣಗಳಲ್ಲಿ ಚಿತ್ರಿಸಲಾಗಿದೆ. ಅತಿಥಿಗಳ ಡ್ರೆಸ್ ಕೋಡ್ ಆಗಿರಲಿ, ಅಲಂಕಾರಕ್ಕಾಗಿ ಕೆತ್ತಿರುವ ಹೂವುಗಳು ಮತ್ತು ಎಲೆಗಳು, ಸಂಗೀತ ಅಥವಾ ವಿವಿಧ ಭಕ್ಷ್ಯಗಳು ಹೀಗೆ ಎಲ್ಲವೂ ಸಂಪೂರ್ಣವಾಗಿ ಭಾರತೀಯ ಮೌಲ್ಯಗಳಿಂದ ಕೂಡಿರಲಿವೆ.

ಮದುವೆ ಸಮಾರಂಭದ ಸ್ಥಳದಲ್ಲಿ ಕಾಶಿಯ ಅಂದರೆ ಬನಾರಸ್‌ನ ಘಾಟ್‌ಗಳನ್ನು ನಿಖರವಾಗಿ ಮರುಸೃಷ್ಟಿಸಲಾಗಿದೆ. ಈ ಘಾಟ್‌ಗಳಲ್ಲಿ ಅತಿಥಿಗಳು ನಗರದ ಚಾಟ್, ಕಚೋರಿ ಮತ್ತು ಪಾನ್ ಅನ್ನು ಆನಂದಿಸಲು ಸಾಧ್ಯವಾಗುತ್ತದೆ. ಬಾಬಾ ವಿಶ್ವನಾಥ ದೇವಸ್ಥಾನದ ಪ್ರತಿಕೃತಿ ಮತ್ತು ಬನಾರಸ್‌ನ ಶ್ರೀಮಂತ ಮತ್ತು ಪುರಾತನ ಸಂಪ್ರದಾಯಗಳ ಮಧ್ಯೆ ಈ ವಿವಾಹದ ವಿಧಿವಿಧಾನಗಳು ನೆರವೇರಲಿವೆ. ರುಚಿಯ ಜೊತೆಗೆ ಸಂಗೀತದ ಜುಗಲ್ಬಂಧಿಯೂ ಇರುತ್ತದೆ. ಕಾಶಿಯ ಸ್ಥಳೀಯ ಕಲಾವಿದರು ಮತ್ತು ಸಂಗೀತಗಾರರು ಅತಿಥಿಗಳಿಗೆ ಸಂಗೀತದ ರಸದೌತಣವನ್ನು ಉಣಬಡಿಸಲಿದ್ದಾರೆ. ಅನಂತ್ ಅವರ ತಾಯಿ ನೀತಾ ಅಂಬಾನಿ ಬನಾರಸ್ ಮತ್ತು ಬನಾರಸಿ ನೇಕಾರರೊಂದಿಗೆ ಹಳೆಯ ಪರಿಚಯ ಹಾಗೂ ಬಾಂಧವ್ಯವನ್ನು ಹೊಂದಿದ್ದಾರೆ. ಇತ್ತೀಚೆಗಷ್ಟೇ ನೀತಾ ಅಂಬಾನಿ ಕಾಶಿ-ವಿಶ್ವನಾಥ ದೇವರ ಪಾದದಡಿಯಲ್ಲಿ ಮದುವೆಯ ಆಮಂತ್ರಣವನ್ನು ಇಟ್ಟು, ಆಹ್ವಾನವನ್ನು ನೀಡಿದ್ದರು.

ಅನಂತ್-ರಾಧಿಕಾ ವಿವಾಹದಲ್ಲಿ ಹಿಂದೂಸ್ತಾನಿ ಸಂಗೀತದ ಅತಿರಥ- ಮಹಾರಥರು ಭಾರತದ ಶ್ರೀಮಂತ ಸಂಗೀತ ಸಂಪ್ರದಾಯಗಳನ್ನು ಜಗತ್ತಿಗೆ ಪರಿಚಯಿಸಲಿದ್ದಾರೆ. ಸಿತಾರ್, ಷಹನಾಯಿ, ಸರೋದ್, ರಾಜಸ್ಥಾನಿ ಜನಪದ ಸಂಗೀತ, ಹಿಂದೂಸ್ತಾನಿ ಶಾಸ್ತ್ರೀಯ ಸಂಗೀತ ಮತ್ತು ಗಜಲ್ ಅನ್ನು ಸಹ ಅತಿಥಿಗಳು ಆನಂದಿಸುತ್ತಾರೆ. ಈ ಕೂಟದಲ್ಲಿ “ಭಜನ್ ನಿಂದ ಬಾಲಿವುಡ್”ವರೆಗಿನ ಸಂಗೀತವು ಆವರಿಸಿರುತ್ತದೆ. ಭಾರತದ ಖ್ಯಾತ ಸಂಗೀತ ಸಂಯೋಜಕರು ಮತ್ತು ಗಾಯಕರಾದ ಶಂಕರ್ ಮಹಾದೇವನ್, ಹರಿಹರನ್, ಸೋನು ನಿಗಮ್, ಶ್ರೇಯಾ ಘೋಷಾಲ್ ಮತ್ತು ಕೌಶಿಕಿ ಚಕ್ರವರ್ತಿ, ಅಮಿತ್ ತ್ರಿವೇದಿ, ನೀತಿ ಮೋಹನ್ ಮತ್ತು ಪ್ರೀತಮ್ ಕಾರ್ಯಕ್ರಮ ನೀಡಲಿದ್ದಾರೆ. ಜನಪದ ಗಾಯಕರಾದ ಮಾಮೆ ಖಾನ್ ಮತ್ತು ಗಜಲ್ ಕಲಾವಿದೆ ಕವಿತಾ ಸೇಠ್ ಕೂಡ ತಮ್ಮ ಗಾಯನದಿಂದ ಪ್ರೇಕ್ಷಕರನ್ನು ಪುಳಕಗೊಳಿಸಲಿದ್ದಾರೆ. ಅನಿಲ್ ಭಟ್, ಸುಮೀತ್ ಭಟ್ ಮತ್ತು ವಿವೇಕ್ ಭಟ್ ಸಂಗೀತಕ್ಕೆ ಪಂಜಾಬಿಯ ಸಂಭ್ರಮವನ್ನು ಸಹ ಸೇರಿಸುತ್ತಾರೆ.

ಅಂಬಾನಿ ಕುಟುಂಬಕ್ಕೆ ಹಿಂದೂ ಪದ್ಧತಿ ಮತ್ತು ಸನಾತನ ಧರ್ಮದಲ್ಲಿ ಅಪಾರ ನಂಬಿಕೆ ಇದೆ. ಈ ಕಾರಣಕ್ಕಾಗಿ ಕಾಶಿಯ ಥೀಮ್ ಆಯ್ಕೆ ಮಾಡಲಾಗಿದೆ. ಮದುವೆ ಸಮಾರಂಭದಲ್ಲಿ ವಿಷ್ಣುವಿನ ದಶಾವತಾರವನ್ನೂ ಪ್ರದರ್ಶಿಸಲಾಗಿದೆ. ವಿಷ್ಣುವಿನ ಹತ್ತು ಅವತಾರಗಳನ್ನು ಆಡಿಯೋ ದೃಶ್ಯದ ಮೂಲಕ ವಿವರಿಸಲಾಗಿದೆ. ಮದುವೆಯ ನಂತರವೂ ಈ ಪ್ರದರ್ಶನ ಮುಂದುವರಿಯುತ್ತದೆ.

ಟಾಪ್ ನ್ಯೂಸ್

1-aaaaaaaaa

Train; ಕೆಟ್ಟು ನಿಂತ ‘ವಂದೇ ಭಾರತ್‌’ ಎಳೆದು ತಂದ ಗೂಡ್ಸ್‌ ರೈಲಿನ ಎಂಜಿನ್‌!

Rain ದಕ್ಷಿಣ ಕನ್ನಡ : ಆಗಾಗ್ಗೆ ಬಿರುಸಿನ ಮಳೆ

Rain ದಕ್ಷಿಣ ಕನ್ನಡ : ಆಗಾಗ್ಗೆ ಬಿರುಸಿನ ಮಳೆ

Madikeri ಕೊಡಗಿನಲ್ಲಿ ಭಾರೀ ಮಳೆ; ಕೃಷಿ ಫ‌ಸಲಿಗೆ ಅಪಾರ ಹಾನಿ

Madikeri ಕೊಡಗಿನಲ್ಲಿ ಭಾರೀ ಮಳೆ; ಕೃಷಿ ಫ‌ಸಲಿಗೆ ಅಪಾರ ಹಾನಿ

Shiradi Ghat ಕೆಂಪುಹೊಳೆ ಬಳಿ ಅಪಘಾತ: ಎರಡು ಕಾರು -ಲಾರಿ ಢಿಕ್ಕಿ: ಓರ್ವ ಸ್ಥಳದಲ್ಲೇ ಸಾವು

Shiradi Ghat ಕೆಂಪುಹೊಳೆ ಬಳಿ ಅಪಘಾತ: ಎರಡು ಕಾರು -ಲಾರಿ ಢಿಕ್ಕಿ: ಓರ್ವ ಸ್ಥಳದಲ್ಲೇ ಸಾವು

uUdupi ಗೀತಾರ್ಥ ಚಿಂತನೆ-31; ದುಷ್ಟರಲ್ಲಿಯೂ ಸೂಕ್ತವರ್ಗUdupi ಗೀತಾರ್ಥ ಚಿಂತನೆ-31; ದುಷ್ಟರಲ್ಲಿಯೂ ಸೂಕ್ತವರ್ಗ

Udupi ಗೀತಾರ್ಥ ಚಿಂತನೆ-31; ದುಷ್ಟರಲ್ಲಿಯೂ ಸೂಕ್ತವರ್ಗ

AC ಸ್ಫೋಟದಿಂದ ಗಾಯಗೊಂಡಿದ್ದ ಸೂರಿಂಜೆ ಮೂಲದ ವ್ಯಕ್ತಿ ಸಾವು

AC ಸ್ಫೋಟದಿಂದ ಗಾಯಗೊಂಡಿದ್ದ ಸೂರಿಂಜೆ ಮೂಲದ ವ್ಯಕ್ತಿ ಸಾವು

Udupi ಶಿಕ್ಷಕರನ್ನು ಅವಮಾನಿಸಿದರೆ ಸಹಿಸಲು ಸಾಧ್ಯವಿಲ್ಲ: ಯಶ್‌ಪಾಲ್‌ ಸುವರ್ಣ

Udupi ಶಿಕ್ಷಕರನ್ನು ಅವಮಾನಿಸಿದರೆ ಸಹಿಸಲು ಸಾಧ್ಯವಿಲ್ಲ: ಯಶ್‌ಪಾಲ್‌ ಸುವರ್ಣ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

1-aaaaaaaaa

Train; ಕೆಟ್ಟು ನಿಂತ ‘ವಂದೇ ಭಾರತ್‌’ ಎಳೆದು ತಂದ ಗೂಡ್ಸ್‌ ರೈಲಿನ ಎಂಜಿನ್‌!

1-mmmm

Ram Janmabhoomi Trust President ನೃತ್ಯ ಗೋಪಾಲ್‌ ದಾಸ್‌ ಆರೋಗ್ಯ ಗಂಭೀರ

1-sss

HAL ಸಂಸ್ಥೆಯ ನೂತನ ಸಿಎಂಡಿ ಸ್ಥಾನಕ್ಕೆ ಡಾ| ಸುನಿಲ್‌ ನೇಮಕ

1-ak

AAP; ಹಣಕಾಸು ಅಕ್ರಮ: ಆಪ್‌ ಶಾಸಕ ಖಾನ್‌ಗೆ ನ್ಯಾಯಾಂಗ ಬಂಧನ

Kharge (2)

Mallikarjun Kharge ಕಿಡಿ: ಮಣಿಪುರ ವಿಚಾರದಲ್ಲಿ ಮೋದಿಯ ಹೀನಾಯ ವೈಫಲ್ಯ ಅಕ್ಷಮ್ಯ

MUST WATCH

udayavani youtube

ಗಜಪಯಣಕ್ಕೆ ಚಾಲನೆ : ಕ್ಯಾಪ್ಟನ್‌ ಅಭಿಮನ್ಯು ನೇತೃತ್ವದ 9 ಆನೆಗಳ ಗಜಪಡೆ

udayavani youtube

ರಕ್ಷಾ ಬಂಧನದ ಅರ್ಥ ಮತ್ತು ಮಹತ್ವ | ರಕ್ಷಾ ಬಂಧನ 2024

udayavani youtube

ಕಡಿಮೆ ಬೆಲೆಗೆ ಫಸ್ಟ್ ಕ್ಲಾಸ್ ಬಾಳೆಎಲೆ ಊಟ

udayavani youtube

ಆ.18 ರಿಂದ ಶ್ರೀಕೃಷ್ಣ ಮಠದಲ್ಲಿ ಕ್ರೀಡೋತ್ಸವ

udayavani youtube

ತಮ್ಮ ಮಕ್ಕಳನ್ನು ಬೆಳೆಸುವ ಸಲುವಾಗಿ ಕಂಡೋರ ಮಕ್ಕಳ ಭವಿಷ್ಯ ನಾಶ. ಈ ವ್ಯವಸ್ಥೆಗೆ ನಾನೂ ಬಲಿ

ಹೊಸ ಸೇರ್ಪಡೆ

1-aaaaaaaaa

Train; ಕೆಟ್ಟು ನಿಂತ ‘ವಂದೇ ಭಾರತ್‌’ ಎಳೆದು ತಂದ ಗೂಡ್ಸ್‌ ರೈಲಿನ ಎಂಜಿನ್‌!

Rain ದಕ್ಷಿಣ ಕನ್ನಡ : ಆಗಾಗ್ಗೆ ಬಿರುಸಿನ ಮಳೆ

Rain ದಕ್ಷಿಣ ಕನ್ನಡ : ಆಗಾಗ್ಗೆ ಬಿರುಸಿನ ಮಳೆ

Pilikula “ನಿಶ್ಶಬ್ದ ವಲಯ’ ಘೋಷಣೆಗೆ ಜಿಲ್ಲಾಧಿಕಾರಿಗೆ ಮನವಿPilikula “ನಿಶ್ಶಬ್ದ ವಲಯ’ ಘೋಷಣೆಗೆ ಜಿಲ್ಲಾಧಿಕಾರಿಗೆ ಮನವಿ

Pilikula “ನಿಶ್ಶಬ್ದ ವಲಯ’ ಘೋಷಣೆಗೆ ಜಿಲ್ಲಾಧಿಕಾರಿಗೆ ಮನವಿ

Madikeri ಕೊಡಗಿನಲ್ಲಿ ಭಾರೀ ಮಳೆ; ಕೃಷಿ ಫ‌ಸಲಿಗೆ ಅಪಾರ ಹಾನಿ

Madikeri ಕೊಡಗಿನಲ್ಲಿ ಭಾರೀ ಮಳೆ; ಕೃಷಿ ಫ‌ಸಲಿಗೆ ಅಪಾರ ಹಾನಿ

Shiradi Ghat ಕೆಂಪುಹೊಳೆ ಬಳಿ ಅಪಘಾತ: ಎರಡು ಕಾರು -ಲಾರಿ ಢಿಕ್ಕಿ: ಓರ್ವ ಸ್ಥಳದಲ್ಲೇ ಸಾವು

Shiradi Ghat ಕೆಂಪುಹೊಳೆ ಬಳಿ ಅಪಘಾತ: ಎರಡು ಕಾರು -ಲಾರಿ ಢಿಕ್ಕಿ: ಓರ್ವ ಸ್ಥಳದಲ್ಲೇ ಸಾವು

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.