Amit Shah; ಉಗ್ರರು, ಕಲ್ಲೆಸೆಯುವವರಿಗೆ ಬಿಡುಗಡೆ ಇಲ್ಲ
Team Udayavani, Sep 22, 2024, 11:10 PM IST
ನೌಶೇರಾ: ಜಮ್ಮು-ಕಾಶ್ಮೀರದಲ್ಲಿ ಈ ಬಾರಿ ಬಿಜೆಪಿಯೇ ಚುನಾವಣೆ ಗೆಲ್ಲಲಿದೆ ಎಂದು ಕೇಂದ್ರ ಗೃಹ ಸಚಿವ ಅಮಿತ್ ಶಾ ಹೇಳಿದ್ದಾರೆ. ನೌಶೇರಾದಲ್ಲಿ ಭಾನು ವಾರ ನಡೆದ ಚುನಾವಣಾ ರ್ಯಾಲಿಯಲ್ಲಿ ಮಾತನಾಡಿದ ಅವರು, ನಮ್ಮ ನೇತೃತ್ವದ ಸರ್ಕಾರ ಉಗ್ರರು, ಕಲ್ಲು ತೂರಾಟ ನಡೆಸುವವರನ್ನು ಬಿಡುಗಡೆ ಮಾಡುವುದಿಲ್ಲ. ಆದರೆ, ಕಾಂಗ್ರೆಸ್ ಮತ್ತು ನ್ಯಾಷನಲ್ ಕಾನ್ಫರೆನ್ಸ್ ಮೈತ್ರಿಕೂಟದ ಸರ್ಕಾರ ಅಸ್ತಿತ್ವ ಬಂದರೆ ಅವರನ್ನು ಬಿಡುಗಡೆ ಮಾಡಲಿದೆ ಎಂದು ಆರೋಪಿಸಿದ್ದಾರೆ.
ಅ.8ರಂದು ಮತ ಎಣಿಕೆಯಾದ ಬಳಿಕ “ಮೊಹಬ್ಬತ್ ಕೀ ದುಕಾನ್’ ಮುಚ್ಚಲಿದೆ ಎಂದು ಅಮಿತ್ ಶಾ ಟೀಕಿಸಿದರು. ಪ್ರಧಾನಿ ಮೋದಿ ನೇತೃತ್ವದ ಸರ್ಕಾರ ಭಯೋತ್ಪಾದನೆಯನ್ನು ಪಾತಾಳದಲ್ಲಿ ಹೂತು ಹಾಕಲಿದೆ ಎಂದು ಎಚ್ಚರಿಕೆ ನೀಡಿದ್ದಾರೆ.
ನಾಡಿದ್ದು 2ನೇ ಹಂತದ ಮತದಾನ: ಇಂದು ಬಹಿರಂಗ ಪ್ರಚಾರ ಅಂತ್ಯ
ಜಮ್ಮು-ಕಾಶ್ಮೀರ ವಿಧಾನಸಭೆಯ 2ನೇ ಹಂತದ ಮತದಾನ ಸೆ.25 ರಂದು ನಡೆಯಲಿದೆ. ಈ ಹಂತ ದಲ್ಲಿ 26 ಕ್ಷೇತ್ರಗಳಲ್ಲಿ ಮತದಾನ ನಡೆಯಲಿದ್ದು, ಸೋಮವಾರ ಚುನಾವಣಾ ಬಹಿರಂಗ ಪ್ರಚಾರವು ಅಂತ್ಯಗೊಳ್ಳಲಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ಉಡುಪಿಯ ಈ ಜಾಗದಲ್ಲಿ ರಸಂ ಪುರಿ ತುಂಬಾನೇ ಫೇಮಸ್
ತಿರುಪತಿ ಲಡ್ಡು ವಿವಾದ ಪೇಜಾವರ ಶ್ರೀಗಳು ಹೇಳಿದ್ದೇನು ?
Kaljigaದಲ್ಲಿ ದೈವದ ಅಪಪ್ರಚಾರ ನಡೆದಿಲ್ಲ, ಸಿನಿಮಾ ನೋಡಿದ ಬಳಿಕ ಈ ಬಗ್ಗೆ ಪ್ರತಿಕ್ರಿಯಿಸಿ
ನವಜಾತ ಶಿಶುಗಳಲ್ಲಿ ಶ್ರವಣ ಶಕ್ತಿ ಸಮಸ್ಯೆ ಕುರಿತು ಸಂಪೂರ್ಣ ಮಾಹಿತಿ
ಅಂತರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆ ಅಂಗವಾಗಿ ತಾಲೂಕು ಮಟ್ಟದ ಮಾನವ ಸರಪಳಿ ಕಾರ್ಯಕ್ರಮ
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.