ಉಗ್ರರ ವಿರುದ್ಧ ಶೂನ್ಯ ಸಹನೆ ನೀತಿ: ಕಾಶ್ಮೀರದ ಸಭೆಯಲ್ಲಿ ಕೇಂದ್ರ ಗೃಹ ಸಚಿವ ಅಮಿತ್ ಶಾ ಸ್ಪಷ್ಟನೆ
ಜಮ್ಮು ಮತ್ತು ಕಾಶ್ಮೀರ ಸ್ಥಿತಿ ಬಗ್ಗೆ ಮಹತ್ವದ ಸಭೆ
Team Udayavani, Dec 29, 2022, 12:52 AM IST
ಹೊಸದಿಲ್ಲಿ : ಜಮ್ಮು ಮತ್ತು ಕಾಶ್ಮೀರದಲ್ಲಿ ಭಯೋತ್ಪಾದನೆಗೆ ಪ್ರೋತ್ಸಾಹ ನೀಡುವ ವ್ಯವಸ್ಥೆಯ ವಿರುದ್ಧ ಶೂನ್ಯ ಸಹನೆ ನೀತಿ ಅನುಸರಿಸಲಾಗುತ್ತದೆ ಎಂದು ಕೇಂದ್ರ ಗೃಹ ಸಚಿವ ಅಮಿತ್ ಶಾ ಹೇಳಿದ್ದಾರೆ.
ಉಗ್ರರಿಗೆ ಸಹಾಯ ಮಾಡುವ ಮತ್ತು ಪ್ರೋತ್ಸಾಹಿಸುವ ವ್ಯವಸ್ಥೆಯನ್ನು ಸಂಪೂರ್ಣ ಬುಡಮೇಲು ಮಾಡಬೇಕಿದೆ ಎಂದೂ ಅವರು ಹೇಳಿದ್ದಾರೆ.
ಜಮ್ಮು ಮತ್ತು ಕಾಶ್ಮೀರದಲ್ಲಿ ಭದ್ರತೆಗೆ ಸಂಬಂಧಿಸಿದಂತೆ ಲೆಫ್ಟಿನೆಂಟ್ ಗವರ್ನರ್ ಮನೋಜ್ ಸಿನ್ಹಾ ಹಾಗೂ ಗೃಹ ಸಚಿವಾ ಲಯ, ಗುಪ್ತಚರ ಇಲಾಖೆ, ಅರೆಸೇನಾ ಪಡೆ ಮತ್ತು ರಾಜ್ಯ ಪೊಲೀಸ್ ಇಲಾಖೆಯ ಹಿರಿಯ ಅಧಿಕಾರಿಗಳ ಸಭೆಯಲ್ಲಿ ಅವರು ಮಾತನಾಡಿದರು.
ಜಮ್ಮು ಮತ್ತು ಕಾಶ್ಮೀರದ ನಾಗರಿಕರ ಉತ್ತಮ ಜೀವನ ಮತ್ತು ಭವಿಷ್ಯಕ್ಕಾಗಿ ಭಯೋತ್ಪಾನೆಯ ವಿರುದ್ಧ ಶೂನ್ಯ ಸಹಿಷ್ಣುತೆ ನೀತಿ ಅನುಸರಿಸುವಂತೆ ಇದೇ ವೇಳೆ ಶಾ ಅಧಿಕಾರಿಗಳಿಗೆ ಸೂಚಿಸಿದರು. ರಾಜ್ಯದಲ್ಲಿ ಭದ್ರತೆ ಕುರಿತು ಕೈಗೊಂಡಿರುವ ವಿವಿಧ ಕ್ರಮಗಳ ಬಗ್ಗೆ ಅಧಿಕಾರಿಗಳಿಂದ ಮಾಹಿತಿ ಪಡೆದರು.
“ಪ್ರತ್ಯೇಕವಾದಿ ಮನಸ್ಥಿತಿಯನ್ನು ಬೆಂಬಲಿಸುವ ಹಾಗೂ ಭಯೋತ್ಪಾದನೆ ಪ್ರೋತ್ಸಾಹಿಸುವ ಪರಿಸರ ವ್ಯವಸ್ಥೆಯನ್ನು ಸಂಪೂರ್ಣವಾಗಿ ಬುಡಮೇಲು ಮಾಡಬೇಕಿದೆ. ಇದು ಸಾಮಾನ್ಯರ ಒಳತಿಗಾಗಿ ಅಗತ್ಯವಿದೆ,’ ಎಂದು ಅಮಿತ್ ಶಾ ಪ್ರತಿಪಾದಿಸಿದರು. ಇದೇ ವೇಳೆ ಜಮ್ಮು ಮತ್ತು ಕಾಶ್ಮೀರದಲ್ಲಿ ಕೈಗೊಂಡಿರುವ ವಿವಿಧ ಅಭಿವೃದ್ಧಿ ಯೋಜ ನೆಯ ಪ್ರಗತಿಯನ್ನು ಪರಿಶೀಲಿಸಿದರು.
ಹೊಸದಿಲ್ಲಿ ಯಲ್ಲಿ ಕೇಂದ್ರ ಗೃಹ ಸಚಿವ ಅಮಿತ್ ಶಾ ಸಭೆ ನಡೆಸಿದರು. ಜಮ್ಮು ಮತ್ತು ಕಾಶ್ಮೀರ ಲೆಫ್ಟಿನೆಂಟ್ ಗವರ್ನರ್ ಮನೋಜ್ ಸಿನ್ಹಾ ಇದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
Kaljigaದಲ್ಲಿ ದೈವದ ಅಪಪ್ರಚಾರ ನಡೆದಿಲ್ಲ, ಸಿನಿಮಾ ನೋಡಿದ ಬಳಿಕ ಈ ಬಗ್ಗೆ ಪ್ರತಿಕ್ರಿಯಿಸಿ
ನವಜಾತ ಶಿಶುಗಳಲ್ಲಿ ಶ್ರವಣ ಶಕ್ತಿ ಸಮಸ್ಯೆ ಕುರಿತು ಸಂಪೂರ್ಣ ಮಾಹಿತಿ
ಅಂತರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆ ಅಂಗವಾಗಿ ತಾಲೂಕು ಮಟ್ಟದ ಮಾನವ ಸರಪಳಿ ಕಾರ್ಯಕ್ರಮ
ಈಟ್ ರಾಜಾ ಶಾಪ್ ನಲ್ಲಿ ಜ್ಯೂಸ್ ಕುಡಿಯೋದಷ್ಟೇ ಅಲ್ಲ ತಿನ್ನಲೂ ಬಹುದು
ಅಯ್ಯೋ…ಸಂತೆಕಟ್ಟೆ ಅಂಡರ್ ಪಾಸ್ ಪ್ರಯಾಣ ನಿತ್ಯ ನರಕ!
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.