ರಾಹುಲ್ಗೆ ಶಾ ಪಂಚಪ್ರಶ್ನೆ
Team Udayavani, Nov 5, 2017, 6:05 AM IST
ಗಾಂಧಿನಗರ: ಗುಜರಾತ್ನಲ್ಲಿ ಚುನಾವಣೆ ಪ್ರಚಾರದ ಅಬ್ಬರ ಜೋರಾಗಿದ್ದು, ಕಾಂಗ್ರೆಸ್ ಉಪಾಧ್ಯಕ್ಷ ರಾಹುಲ್ ಗಾಂಧಿಗೆ ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ಅಮಿತ್ ಶಾ ಅವರು ಐದು ಪ್ರಶ್ನೆಗಳನ್ನು ಕೇಳಿದ್ದಾರೆ. ನರ್ಮದಾ ನದಿಗೆ ಸಂಬಂಧಿಸಿದಂತೆ ಈ ಪ್ರಶ್ನೆಗಳಿವೆ. ಗುಜರಾತ್ ಅಭಿವೃದ್ಧಿಗೆ ಸಂಬಂಧಿಸಿದಂತೆ ಬಿಜೆಪಿ ಪ್ರದರ್ಶಿಸುತ್ತಿರುವ ಸನ್ನಿವೇಶ ಸತ್ಯವಲ್ಲ ಎಂದು ರಾಹುಲ್ ಗಾಂಧಿ ಪ್ರಚಾರ ಭಾಷಣದಲ್ಲಿ ಹೇಳಿದ್ದರು. ಇದಕ್ಕೆ ಪ್ರತಿಯಾಗಿ ಅಮಿತ್ ಶಾ ಅವರು ರಾಹುಲ್ ಗಾಂಧಿಗೆ ಈ ಪ್ರಶ್ನೆಗಳನ್ನು ಕೇಳಿದ್ದಾರೆ.
ನರ್ಮದಾ ಯೋಜನೆ ಪೂರ್ಣಗೊಳಿಸಲು ಕಾಂಗ್ರೆಸ್ ಸರ್ಕಾರ ಯಾಕೆ ಅನುಮತಿ ನೀಡಿರಲಿಲ್ಲ? ನರ್ಮದಾ ಅಣೆಕಟ್ಟೆ ಗೇಟ್ಗಳನ್ನು ಮುಚ್ಚಲು ಕಾಂಗ್ರೆಸ್ ಸರ್ಕಾರ ಯಾಕೆ ಒಪ್ಪಿಗೆ ಕೊಟ್ಟಿರಲಿಲ್ಲ? ಕಛ… ವಲಯಕ್ಕೆ ಯಾಕೆ ವಿಶೇಷ ಅನುದಾನ ನೀಡಿರಲಿಲ್ಲ? ಗಾಂಧಿನಗರಕ್ಕೆ ಯುಪಿಎ ಅಧಿಕಾರದಲ್ಲಿದ್ದಾಗ ಕೇಂದ್ರದ ಅನುದಾನ ಯಾಕೆ ನೀಡಿರಲಿಲ್ಲ? ಯುಪಿಎ ಸರ್ಕಾರ ಅಧಿಕಾರದಲ್ಲಿದ್ದಾಗ ಹಲವು ವರ್ಷಗಳವರೆಗೆ ಕಚ್ಚಾ ತೈಲ ರಾಯಧನ ನೀಡಿರಲಿಲ್ಲ? ಎಂದು ಅಮಿತ್ ಶಾ ಪ್ರಶ್ನೆಸಿದ್ದಾರೆ. ಮೊದಲು ಈ ಪ್ರಶ್ನೆಗಳಿಗೆ ರಾಹುಲ್ ಗಾಂಧಿ ಉತ್ತರಿಸುವ ಧೈರ್ಯ ತೋರಬೇಕು ಎಂದೂ ಅವರು ಈ ವೇಳೆ ಕುಟುಕಿದ್ದಾರೆ.
ಶನಿವಾರದಿಂದ 6 ದಿನಗಳ ಕಾಲ ಶಾ ಅವರು ಗುಜರಾತ್ನಲ್ಲಿ ಚುನಾವಣಾ ಪ್ರಚಾರ ನಡೆಸಲಿದ್ದು, 33 ಜಿಲ್ಲೆಗಳಲ್ಲಿ ಪ್ರಚಾರ ಕೈಗೊಳ್ಳಲಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Fiscal Crisis: ಅಯೋಧ್ಯೆ ಮಸೀದಿ ಟ್ರಸ್ಟ್ ಸಮಿತಿಗಳ ವಿಸರ್ಜನೆ
Fact check ಘಟಕ ಸ್ಥಾಪಿಸುವ ಐಟಿ ನಿಯಮ ರದ್ದು: ಹೈಕೋರ್ಟ್ ಆದೇಶ
Edible oil; ದಾಸ್ತಾನಿದ್ದರೂ ಖಾದ್ಯ ತೈಲ ಬೆಲೆ ಏರಿಸಿದ್ದೇಕೆ: ಸರಕಾರ ಪ್ರಶ್ನೆ
Budgam; ಬಸ್ ಪ್ರಪಾತಕ್ಕೆ ಬಿದ್ದು 3 ಯೋಧರು ಮೃ*ತ್ಯು, 9 ಮಂದಿಗೆ ಗಂಭೀರ ಗಾಯ
AAP ಬೇಡಿಕೆ: ನಿರ್ಗಮಿತ ಸಿಎಂ ಕೇಜ್ರಿವಾಲ್ ಅವರಿಗೆ ಸರಕಾರಿ ವಸತಿ ಕಲ್ಪಿಸಿ
MUST WATCH
Kaljigaದಲ್ಲಿ ದೈವದ ಅಪಪ್ರಚಾರ ನಡೆದಿಲ್ಲ, ಸಿನಿಮಾ ನೋಡಿದ ಬಳಿಕ ಈ ಬಗ್ಗೆ ಪ್ರತಿಕ್ರಿಯಿಸಿ
ನವಜಾತ ಶಿಶುಗಳಲ್ಲಿ ಶ್ರವಣ ಶಕ್ತಿ ಸಮಸ್ಯೆ ಕುರಿತು ಸಂಪೂರ್ಣ ಮಾಹಿತಿ
ಅಂತರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆ ಅಂಗವಾಗಿ ತಾಲೂಕು ಮಟ್ಟದ ಮಾನವ ಸರಪಳಿ ಕಾರ್ಯಕ್ರಮ
ಈಟ್ ರಾಜಾ ಶಾಪ್ ನಲ್ಲಿ ಜ್ಯೂಸ್ ಕುಡಿಯೋದಷ್ಟೇ ಅಲ್ಲ ತಿನ್ನಲೂ ಬಹುದು
ಅಯ್ಯೋ…ಸಂತೆಕಟ್ಟೆ ಅಂಡರ್ ಪಾಸ್ ಪ್ರಯಾಣ ನಿತ್ಯ ನರಕ!
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.