![ಜರ್ಮನಿ ಅಧ್ಯಕ್ಷರ ಎಕ್ಸ್ ಖಾತೆ ಹ್ಯಾಕ್: ಬಿಹಾರ ಇಲಾಖೆ ಹೆಸರಿಟ್ಟ ಕಿಡಿಗೇಡಿಗಳು](https://www.udayavani.com/wp-content/uploads/2025/02/9-21-415x249.jpg)
![ಜರ್ಮನಿ ಅಧ್ಯಕ್ಷರ ಎಕ್ಸ್ ಖಾತೆ ಹ್ಯಾಕ್: ಬಿಹಾರ ಇಲಾಖೆ ಹೆಸರಿಟ್ಟ ಕಿಡಿಗೇಡಿಗಳು](https://www.udayavani.com/wp-content/uploads/2025/02/9-21-415x249.jpg)
Team Udayavani, Apr 23, 2023, 10:54 AM IST
ಚಂಡೀಗಢ: ಮೂಲಭೂತವಾದಿ ಸಿಖ್ ಧರ್ಮ ಪ್ರಚಾರಕ ಅಮೃತಪಾಲ್ ಸಿಂಗ್ ಅವರು ಒಂದು ತಿಂಗಳ ಕಾಲ ಬೇಟೆಯ ನಂತರ ಇಂದು ಬೆಳಗ್ಗೆ ಪಂಜಾಬ್ ನ ಮೊಗಾದಲ್ಲಿ ಶರಣಾಗಿದ್ದಾರೆ.
ಖಲಿಸ್ತಾನಿ-ಪಾಕಿಸ್ತಾನದ ಏಜೆಂಟ್ ಎಂದು ಸರ್ಕಾರ ಗುರುತಿಸುವ ಅಮೃತಪಾಲ್ ಸಿಂಗ್ ಶರಣಾಗುವ ಮೊದಲು ಮೊಗಾ ಜಿಲ್ಲೆಯ ರೋಡ್ ಗ್ರಾಮದ ಗುರುದ್ವಾರದಲ್ಲಿ ಸಭೆಯನ್ನು ಉದ್ದೇಶಿಸಿ ಮಾತನಾಡಿದ್ದಾರೆ.
ಅವರನ್ನು ಗುರುದ್ವಾರದಿಂದ ಬಂಧಿಸಲಾಗಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.
ಮೊಗಾ ಖಲಿಸ್ತಾನಿ ಪ್ರತ್ಯೇಕತಾವಾದಿ ಮತ್ತು ಭಯೋತ್ಪಾದಕ ಜರ್ನೈಲ್ ಸಿಂಗ್ ಭಿಂದ್ರನ್ವಾಲೆ ಅವರ ಗ್ರಾಮವಾಗಿದೆ. ಅಮೃತಪಾಲ್ ಸಿಂಗ್ ಅವರ ಭಿಂದ್ರನ್ವಾಲೆ ಅನುಯಾಯಿ ಎಂದು ಹೇಳಿಕೊಳ್ಳುತ್ತಾರೆ. ಅಲ್ಲದೆ ಅಮೃತಪಾಲ್ ಸಿಂಗ್ ಅವರನ್ನು “ಭಿಂದ್ರನ್ವಾಲೆ 2.0” ಎಂದು ಕರೆಯುತ್ತಾರೆ.
ಇದನ್ನೂ ಓದಿ:ಅರ್ಶದೀಪ್ ಬೆಂಕಿ ಚೆಂಡಿಗೆ ಸ್ಟಂಪ್ ಪೀಸ್ ಪೀಸ್: ಒಂದು LED stump ಬೆಲೆ ಎಷ್ಟು ಲಕ್ಷ ಗೊತ್ತಾ?
ಇಂದು ಅಮೃತಪಾಲ್ ಸಿಂಗ್ ಅವರನ್ನು ಎಲ್ಲಾ ಕಡೆಯಿಂದ ಪೊಲೀಸರು ಸುತ್ತುವರಿದು ಶರಣಾಗುವಂತೆ ಒತ್ತಾಯಿಸಲಾಯಿತು. “ಪೊಲೀಸರು ಪವಿತ್ರತೆಯನ್ನು ಕಾಪಾಡಿಕೊಳ್ಳಲು ಗುರುದ್ವಾರವನ್ನು ಪ್ರವೇಶಿಸಲಿಲ್ಲ. ನಾವು ಸಮವಸ್ತ್ರವನ್ನು ಧರಿಸಿ ಪ್ರವೇಶಿಸಲು ಸಾಧ್ಯವಾಗಲಿಲ್ಲ” ಎಂದು ಪೊಲೀಸರು ತಿಳಿಸಿದ್ದಾರೆ.
ಅವರನ್ನು ಈಗ ಅಸ್ಸಾಂನ ದಿಬ್ರುಗಢ ಜೈಲಿಗೆ ಕರೆದೊಯ್ಯಲಾಗುತ್ತಿದೆ, ಅಲ್ಲಿ ಅವರ ಎಂಟು ಸಹಾಯಕರನ್ನು ಈಗಾಗಲೇ ರಾಷ್ಟ್ರೀಯ ಭದ್ರತಾ ಕಾಯ್ದೆಯಡಿಯಲ್ಲಿ ಬಂಧಿಸಿಡಲಾಗಿದೆ.
ಜರ್ಮನಿ ಅಧ್ಯಕ್ಷರ ಎಕ್ಸ್ ಖಾತೆ ಹ್ಯಾಕ್: ಬಿಹಾರ ಇಲಾಖೆ ಹೆಸರಿಟ್ಟ ಕಿಡಿಗೇಡಿಗಳು
Anekal: ಪತ್ನಿಯನ್ನು ಹೊತ್ತೂಯ್ದು 2ನೇ ಮಹಡಿಯಿಂದ ತಳ್ಳಿ ಕೊಂದ!
Udayavani-MIC ನಮ್ಮ ಸಂತೆ ಸಂಭ್ರಮ: ಜೇನುಗೂಡು, ಜೇನು ಹನಿ
Air Lift: ಪಂಜಾಬ್ನಲ್ಲಿ ರೈತ ಮುಖಂಡ ಶಾಂತಕುಮಾರ್ಗೆ ಅಪಘಾತ; ಬೆಂಗಳೂರಿಗೆ ಏರ್ಲಿಫ್ಟ್
Kollywood: ಖ್ಯಾತ ನಟ ಯೋಗಿ ಬಾಬು ಕಾರು ಅಪಘಾತ?: ನಟ ಹೇಳಿದ್ದೇನು?
You seem to have an Ad Blocker on.
To continue reading, please turn it off or whitelist Udayavani.