‌ Andhra Pradesh: 1 ಕೋಟಿ ರೂ. ಇನ್ಶೂರೆನ್ಸ್ ಹಣಕ್ಕಾಗಿ ಸಹೋದರಿಯನ್ನೇ ಕೊ*ಲೆಗೈದ ಅಣ್ಣ


Team Udayavani, Jan 29, 2025, 1:36 PM IST

‌ Andhra Pradesh: 1 ಕೋಟಿ ರೂ. ಇನ್ಶೂರೆನ್ಸ್ ಹಣಕ್ಕಾಗಿ ಸಹೋದರಿಯನ್ನೇ ಕೊ*ಲೆಗೈದ ಅಣ್ಣ

ಆಂಧ್ರಪ್ರದೇಶ: ಇನ್ಶೂರೆನ್ಸ್ ಹಣಕ್ಕಾಗಿ ಸಹೋದರಿಯನ್ನೇ ಪ್ಲ್ಯಾನ್‌ ಮಾಡಿ ಕೊ*ಲೆಗೈದ ಘಟನೆ ಸಂಬಂಧ ವ್ಯಕ್ತಿಯೊಬ್ಬನನ್ನು ಪೊಲೀಸರು ಬಂಧಿಸಿರುವ ಘಟನೆ ಆಂಧ್ರಪ್ರದೇಶದ ಪ್ರಕಾಶಂ ಜಿಲ್ಲೆಯಲ್ಲಿ ನಡೆದಿದೆ.

ಆಂಧ್ರಪ್ರದೇಶದ ಪ್ರಕಾಶಂ ಜಿಲ್ಲೆಯ ರಿಯಲ್ ಎಸ್ಟೇಟ್ ಉದ್ಯಮಿ ಮಾಲಪತಿ ಅಶೋಕ್ ಕುಮಾರ್ (30) ಬಂಧಿತ ವ್ಯಕ್ತಿ.

2024ರ ಫೆಬ್ರವರಿ 2 ರಂದು ಪೊದಿಲಿಯ ಪೆಟ್ರೋಲ್ ಬಂಕ್ ಬಳಿ ಈ ಘಟನೆ ನಡೆದಿತ್ತು ಎಂದು ಪೊಲೀಸರು ಮಂಗಳವಾರ (ಜ.28ರಂದು) ಹೇಳಿದ್ದಾರೆ.

ಏನಿದು ಘಟನೆ?: ಅಶೋಕ್‌ ಕುಮಾರ್‌ ಉದ್ಯಮಿಯಾಗಿದ್ದರೂ ಆತ ಭಾರೀ ಸಾಲದ ಸುಳಿಯಲ್ಲಿ ಸಿಲುಕಿದ್ದ. ಕುಮಾರ್‌ ಜತೆ ಅವರ ಸಹೋದರಿ ವಾಸವಾಗಿದ್ದಳು. ಸಹೋದರಿ ಮದುವೆ ಆಗಿ ವಿಚ್ಛೇದನ ಪಡೆದುಕೊಂಡಿದ್ದಳು. ಅಣ್ಣನ ಜತೆ ವಾಸಿಸುತ್ತಿದ್ದಳು ಎಂದು ಪೊಲೀಸರು ಹೇಳಿದ್ದಾರೆ.

ಭಾರೀ ಸಾಲದ ಸುಳಿಯಲ್ಲಿ ಸಿಲುಕಿದ್ದ ಕುಮಾರ್‌ ತಂಗಿಯ ಹೆಸರಿನಲ್ಲಿ ಹಲವು ವಿಮಾ ಕಂಪನಿಗಳಲ್ಲಿ ಜೀವವನ್ನು ವಿಮೆ ಮಾಡಿದ್ದರು. ತಂಗಿಯನ್ನು ಕೊಲೆ ಮಾಡಿ ಅದನ್ನು ಅಪಘಾತವೆಂದು ಬಿಂಬಿಸಿ ವಿಮೆಯ 1 ಕೋಟಿ ರೂ. ಹಣವನ್ನು ಪಡೆದುಕೊಳ್ಳುವ ನಿಟ್ಟಿನಲ್ಲಿ ಕುಮಾರ್‌ ಒಂದು ಯೋಜನೆಯನ್ನು ರೂಪಿಸಿಕೊಂಡಿದ್ದ ಎಂದು ಪೊಲೀಸರು ಹೇಳಿದ್ದಾರೆ.

ಘಟನೆಯ ದಿನ ಒಂಗೋಲ್‌ಗೆ ಆಸ್ಪತ್ರೆಗೆ ಭೇಟಿ ನೀಡುವ ನೆಪದಲ್ಲಿ ಕುಮಾರ್ ತನ್ನ ಸಹೋದರಿಯನ್ನು ಕಾರಿನಲ್ಲಿ ಕರೆದೊಯ್ದಿದ್ದ. ವಾಪಾಸ್‌ ಬರುವಾಗ ತಂಗಿಗೆ ನಿದ್ರೆಯ ಮಾತ್ರೆಗಳನ್ನು ನೀಡಿದ್ದ. ಇದಾದ ಬಳಿಕ ಉಸಿರುಗಟ್ಟಿಸಿ ತಂಗಿಯನ್ನು ಕೊ*ಲೆ ಮಾಡಿದ್ದ. ಕೊ*ಲೆಗೈದ ನಂತರ ಕಾರನ್ನು ಅಪಘಾತ ಮಾಡಲು ಯತ್ನಿಸಿದ್ದಾನೆ ಎಂದು ಪೊಲೀಸ್‌ ತನಿಖೆಯಲ್ಲಿ ತಿಳಿದು ಬಂದಿದೆ.

ಈ ಘಟನೆ ಸಂಬಂಧ ಸುದೀರ್ಘವಾಗಿ ತನಿಖೆ ನಡೆಸಿದ ಪೊಲೀಸರು, ಅಶೋಕ್‌ನನ್ನು ವಶಕ್ಕೆ ಪಡೆದು ವಿಚಾರಣೆ ನಡೆಸಿದ್ದಾರೆ. ತನಿಖೆಯ ನಂತರ ಅಧಿಕಾರಿಗಳು ಕುಮಾರ್ ನನ್ನು ಬಂಧಿಸಿದ್ದಾರೆ.

120 (ಬಿ) (ಕ್ರಿಮಿನಲ್ ಪಿತೂರಿ), 302 (ಕೊ*ಲೆ), ಮತ್ತು 201 (ಸಾಕ್ಷಿ ನಾಶಕ್ಕೆ ಯತ್ನ) ಸೇರಿದಂತೆ ಭಾರತೀಯ ದಂಡ ಸಂಹಿತೆಯ ಹಲವಾರು ಸೆಕ್ಷನ್‌ಗಳ ಅಡಿಯಲ್ಲಿ ದೂರು ದಾಖಲು ಮಾಡಲಾಗಿದೆ.

ಈತನೊಂದಿಗೆ ಬೇರೆ ಯಾರಾದ್ರೂ ಇದ್ದಾರೆಯೇ ಅಥವಾ ಈ ಹಿಂದೆ ಇದೇ ರೀತಿಯ ಕೃತ್ಯಗಳನ್ನು ಮಾಡಿದ್ದಾನೆಯೇ ಎಂಬುದರ ಬಗ್ಗೆ ಹೆಚ್ಚಿನ ತನಿಖೆ ನಡೆಯುತ್ತಿದೆ ಎಂದು ವರದಿ ತಿಳಿಸಿದೆ.

ಟಾಪ್ ನ್ಯೂಸ್

‌Bollywood: ರಿಷಬ್‌ ಶೆಟ್ಟಿ ʼಛತ್ರಪತಿ ಶಿವಾಜಿʼ ತಂಡದಿಂದ ಹೊರಬಿತ್ತು ಬಿಗ್‌ ಅಪ್ಡೇಟ್   

‌Bollywood: ರಿಷಬ್‌ ಶೆಟ್ಟಿ ʼಛತ್ರಪತಿ ಶಿವಾಜಿʼ ತಂಡದಿಂದ ಹೊರಬಿತ್ತು ಬಿಗ್‌ ಅಪ್ಡೇಟ್  

Shows cancelled: ಸ್ತ್ರೀ ವಿರೋಧಿ ಹೇಳಿಕೆ… ಹಾಸ್ಯಗಾರ ಬಸ್ಸಿ ಕಾರ್ಯಕ್ರಮ ರದ್ದು

Shows cancelled: ಸ್ತ್ರೀ ವಿರೋಧಿ ಹೇಳಿಕೆ… ಹಾಸ್ಯಗಾರ ಬಸ್ಸಿ ಕಾರ್ಯಕ್ರಮ ರದ್ದು

Website blocked: ಮೋದಿ ವ್ಯಂಗ್ಯಚಿತ್ರ ಪ್ರಕಟಿಸಿದ್ದಕ್ಕೆ ನಿರ್ಬಂಧ: ವಿಕಟನ್‌ ಪತ್ರಿಕೆ

Website blocked: ಮೋದಿ ವ್ಯಂಗ್ಯಚಿತ್ರ ಪ್ರಕಟಿಸಿದ್ದಕ್ಕೆ ನಿರ್ಬಂಧ: ವಿಕಟನ್‌ ಪತ್ರಿಕೆ

ಚೀನಾ ಭಾರತದ ಶತ್ರುವಲ್ಲ: ಕಾಂಗ್ರೆಸ್‌ ಮುಖಂಡ ಪಿತ್ರೋಡಾ ಹೇಳಿಕೆಗೆ ಬಿಜೆಪಿ ಆಕ್ರೋಶ

ಚೀನಾ ಭಾರತದ ಶತ್ರುವಲ್ಲ: ಕಾಂಗ್ರೆಸ್‌ ಮುಖಂಡ ಪಿತ್ರೋಡಾ ಹೇಳಿಕೆಗೆ ಬಿಜೆಪಿ ಆಕ್ರೋಶ

Bollywood: ರೀ-ರಿಲೀಸ್‌ ಗಳಿಕೆಯಲ್ಲಿ ʼತುಂಬಾಡ್‌ʼ ಮೀರಿಸಿದ ʼಸನಮ್ ತೇರಿ ಕಸಮ್ʼ

Bollywood: ರೀ-ರಿಲೀಸ್‌ ಗಳಿಕೆಯಲ್ಲಿ ʼತುಂಬಾಡ್‌ʼ ಮೀರಿಸಿದ ʼಸನಮ್ ತೇರಿ ಕಸಮ್ʼ

11 ವರ್ಷದಿಂದ ವಿಶ್ವಗುರು ನೋಡಿದ್ದೇವೆ, ಅವರನ್ನು ಕೆಳಗಿಳಿಸಿ: ಬಿಜೆಪಿಗೆ ಸಂತೋಷ್ ಲಾಡ್ ಟಾಂಗ್

11 ವರ್ಷದಿಂದ ವಿಶ್ವಗುರು ನೋಡಿದ್ದೇವೆ, ಅವರನ್ನು ಕೆಳಗಿಳಿಸಿ: ಬಿಜೆಪಿಗೆ ಸಂತೋಷ್ ಲಾಡ್ ಟಾಂಗ್

Bengaluru: ಮೇ 30 ರೊಳಗೆ ಜಿ.ಪಂ-ತಾ.ಪಂ ಅಂತಿಮ ಮೀಸಲಾತಿ ಪಟ್ಟಿ ಆಯೋಗಕ್ಕೆ ಸಲ್ಲಿಕೆ

ಜಿಲ್ಲಾ ಪಂಚಾಯತ್‌, ತಾಲೂಕು ಪಂಚಾಯತ್‌ ಚುನಾವಣೆ: ಮೇ 30 ರೊಳಗೆ ಮೀಸಲಾತಿ ಪಟ್ಟಿ ಸಲ್ಲಿಕೆ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Website blocked: ಮೋದಿ ವ್ಯಂಗ್ಯಚಿತ್ರ ಪ್ರಕಟಿಸಿದ್ದಕ್ಕೆ ನಿರ್ಬಂಧ: ವಿಕಟನ್‌ ಪತ್ರಿಕೆ

Website blocked: ಮೋದಿ ವ್ಯಂಗ್ಯಚಿತ್ರ ಪ್ರಕಟಿಸಿದ್ದಕ್ಕೆ ನಿರ್ಬಂಧ: ವಿಕಟನ್‌ ಪತ್ರಿಕೆ

ಚೀನಾ ಭಾರತದ ಶತ್ರುವಲ್ಲ: ಕಾಂಗ್ರೆಸ್‌ ಮುಖಂಡ ಪಿತ್ರೋಡಾ ಹೇಳಿಕೆಗೆ ಬಿಜೆಪಿ ಆಕ್ರೋಶ

ಚೀನಾ ಭಾರತದ ಶತ್ರುವಲ್ಲ: ಕಾಂಗ್ರೆಸ್‌ ಮುಖಂಡ ಪಿತ್ರೋಡಾ ಹೇಳಿಕೆಗೆ ಬಿಜೆಪಿ ಆಕ್ರೋಶ

Earthquake: ಪ್ರಬಲ ಭೂಕಂಪ: ಬೆಳ್ಳಂಬೆಳಗ್ಗೆ ಬೆಚ್ಚಿ ಬಿದ್ದ ದೆಹಲಿ ಜನ.. 4.0ತೀವ್ರತೆ ದಾಖಲು

Earthquake: ಪ್ರಬಲ ಭೂಕಂಪ: ಬೆಳ್ಳಂಬೆಳಗ್ಗೆ ಬೆಚ್ಚಿ ಬಿದ್ದ ದೆಹಲಿ ಜನ.. 4.0ತೀವ್ರತೆ ದಾಖಲು

Delhi-Stamp2

Delhi Stampede: ನನ್ನ ಪತ್ನಿ ತಾರಾ ಎಲ್ಲಿ?..ನಾಪತ್ತೆಯಾದ ಪತ್ನಿಗಾಗಿ ಪತಿಯ ಹುಡುಕಾಟ!

US-Deportesr

Indian Deportees: ಭಾರತೀಯರಿಗೆ ಮತ್ತೆ ಕೋಳ ತೊಡಿಸಿ ಗಡೀಪಾರು!

MUST WATCH

udayavani youtube

ನಿಮ್ಮ ಅಚ್ಚುಮೆಚ್ಚಿನ ; ಆರೋಗ್ಯಕರ ಪಾನಿಪುರಿ ಸವಿಯಲು ಇಲ್ಲಿಗೆ ಬನ್ನಿ

udayavani youtube

ಭೀಕರ ಹಿಟ್ & ರನ್ ಸಂತ್ರಸ್ತರ ಪರ ನಿಂತ ಪುತ್ತೂರು ಶಾಸಕ ಅಶೋಕ್ ರೈ

udayavani youtube

ಶ್ರೀ ಬ್ರಹ್ಮಬೈದರ್ಕಳ ನೇಮೋತ್ಸವ, ಮಾಣಿಬಾಲೆ ನೇಮೋತ್ಸವ

udayavani youtube

ಸಾಹಿತ್ಯಾಸಕ್ತಿಯ ಚಹಾ ಅಂಗಡಿ

udayavani youtube

ಇಲ್ಲಿ ಪ್ರತಿಯೊಂದು ಗೋವುಗಳಿಗೂ ವಿಭಿನ್ನ ಹೆಸರಿದೆ

ಹೊಸ ಸೇರ್ಪಡೆ

‌Bollywood: ರಿಷಬ್‌ ಶೆಟ್ಟಿ ʼಛತ್ರಪತಿ ಶಿವಾಜಿʼ ತಂಡದಿಂದ ಹೊರಬಿತ್ತು ಬಿಗ್‌ ಅಪ್ಡೇಟ್   

‌Bollywood: ರಿಷಬ್‌ ಶೆಟ್ಟಿ ʼಛತ್ರಪತಿ ಶಿವಾಜಿʼ ತಂಡದಿಂದ ಹೊರಬಿತ್ತು ಬಿಗ್‌ ಅಪ್ಡೇಟ್  

4

Editorial: ನೀರಿನ ಸಂರಕ್ಷಣೆಗಾಗಿ ಈಗಿನಿಂದಲೇ ಎಚ್ಚರ ಅಗತ್ಯ

Udupi: ಗೀತಾರ್ಥ ಚಿಂತನೆ-188: ವೇದಾಂತ-ವ್ಯವಹಾರ ಮಿಶ್ರಣವಾದರೆ ಗೊಂದಲ

Udupi: ಗೀತಾರ್ಥ ಚಿಂತನೆ-188: ವೇದಾಂತ-ವ್ಯವಹಾರ ಮಿಶ್ರಣವಾದರೆ ಗೊಂದಲ

7

Katapadi: ಮುಕ್ಕಾಲು ಎಕರೆಯಲ್ಲಿ 8 ಟನ್‌ ಸೌತೆ, ಅಂಗಳದಿಂದಲೇ ಮಾರಾಟ!

Shows cancelled: ಸ್ತ್ರೀ ವಿರೋಧಿ ಹೇಳಿಕೆ… ಹಾಸ್ಯಗಾರ ಬಸ್ಸಿ ಕಾರ್ಯಕ್ರಮ ರದ್ದು

Shows cancelled: ಸ್ತ್ರೀ ವಿರೋಧಿ ಹೇಳಿಕೆ… ಹಾಸ್ಯಗಾರ ಬಸ್ಸಿ ಕಾರ್ಯಕ್ರಮ ರದ್ದು

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.