![Shows cancelled: ಸ್ತ್ರೀ ವಿರೋಧಿ ಹೇಳಿಕೆ… ಹಾಸ್ಯಗಾರ ಬಸ್ಸಿ ಕಾರ್ಯಕ್ರಮ ರದ್ದು](https://www.udayavani.com/wp-content/uploads/2025/02/BASSI-415x234.jpg)
![Shows cancelled: ಸ್ತ್ರೀ ವಿರೋಧಿ ಹೇಳಿಕೆ… ಹಾಸ್ಯಗಾರ ಬಸ್ಸಿ ಕಾರ್ಯಕ್ರಮ ರದ್ದು](https://www.udayavani.com/wp-content/uploads/2025/02/BASSI-415x234.jpg)
Team Udayavani, Jan 29, 2025, 1:36 PM IST
ಆಂಧ್ರಪ್ರದೇಶ: ಇನ್ಶೂರೆನ್ಸ್ ಹಣಕ್ಕಾಗಿ ಸಹೋದರಿಯನ್ನೇ ಪ್ಲ್ಯಾನ್ ಮಾಡಿ ಕೊ*ಲೆಗೈದ ಘಟನೆ ಸಂಬಂಧ ವ್ಯಕ್ತಿಯೊಬ್ಬನನ್ನು ಪೊಲೀಸರು ಬಂಧಿಸಿರುವ ಘಟನೆ ಆಂಧ್ರಪ್ರದೇಶದ ಪ್ರಕಾಶಂ ಜಿಲ್ಲೆಯಲ್ಲಿ ನಡೆದಿದೆ.
ಆಂಧ್ರಪ್ರದೇಶದ ಪ್ರಕಾಶಂ ಜಿಲ್ಲೆಯ ರಿಯಲ್ ಎಸ್ಟೇಟ್ ಉದ್ಯಮಿ ಮಾಲಪತಿ ಅಶೋಕ್ ಕುಮಾರ್ (30) ಬಂಧಿತ ವ್ಯಕ್ತಿ.
2024ರ ಫೆಬ್ರವರಿ 2 ರಂದು ಪೊದಿಲಿಯ ಪೆಟ್ರೋಲ್ ಬಂಕ್ ಬಳಿ ಈ ಘಟನೆ ನಡೆದಿತ್ತು ಎಂದು ಪೊಲೀಸರು ಮಂಗಳವಾರ (ಜ.28ರಂದು) ಹೇಳಿದ್ದಾರೆ.
ಏನಿದು ಘಟನೆ?: ಅಶೋಕ್ ಕುಮಾರ್ ಉದ್ಯಮಿಯಾಗಿದ್ದರೂ ಆತ ಭಾರೀ ಸಾಲದ ಸುಳಿಯಲ್ಲಿ ಸಿಲುಕಿದ್ದ. ಕುಮಾರ್ ಜತೆ ಅವರ ಸಹೋದರಿ ವಾಸವಾಗಿದ್ದಳು. ಸಹೋದರಿ ಮದುವೆ ಆಗಿ ವಿಚ್ಛೇದನ ಪಡೆದುಕೊಂಡಿದ್ದಳು. ಅಣ್ಣನ ಜತೆ ವಾಸಿಸುತ್ತಿದ್ದಳು ಎಂದು ಪೊಲೀಸರು ಹೇಳಿದ್ದಾರೆ.
ಭಾರೀ ಸಾಲದ ಸುಳಿಯಲ್ಲಿ ಸಿಲುಕಿದ್ದ ಕುಮಾರ್ ತಂಗಿಯ ಹೆಸರಿನಲ್ಲಿ ಹಲವು ವಿಮಾ ಕಂಪನಿಗಳಲ್ಲಿ ಜೀವವನ್ನು ವಿಮೆ ಮಾಡಿದ್ದರು. ತಂಗಿಯನ್ನು ಕೊಲೆ ಮಾಡಿ ಅದನ್ನು ಅಪಘಾತವೆಂದು ಬಿಂಬಿಸಿ ವಿಮೆಯ 1 ಕೋಟಿ ರೂ. ಹಣವನ್ನು ಪಡೆದುಕೊಳ್ಳುವ ನಿಟ್ಟಿನಲ್ಲಿ ಕುಮಾರ್ ಒಂದು ಯೋಜನೆಯನ್ನು ರೂಪಿಸಿಕೊಂಡಿದ್ದ ಎಂದು ಪೊಲೀಸರು ಹೇಳಿದ್ದಾರೆ.
ಘಟನೆಯ ದಿನ ಒಂಗೋಲ್ಗೆ ಆಸ್ಪತ್ರೆಗೆ ಭೇಟಿ ನೀಡುವ ನೆಪದಲ್ಲಿ ಕುಮಾರ್ ತನ್ನ ಸಹೋದರಿಯನ್ನು ಕಾರಿನಲ್ಲಿ ಕರೆದೊಯ್ದಿದ್ದ. ವಾಪಾಸ್ ಬರುವಾಗ ತಂಗಿಗೆ ನಿದ್ರೆಯ ಮಾತ್ರೆಗಳನ್ನು ನೀಡಿದ್ದ. ಇದಾದ ಬಳಿಕ ಉಸಿರುಗಟ್ಟಿಸಿ ತಂಗಿಯನ್ನು ಕೊ*ಲೆ ಮಾಡಿದ್ದ. ಕೊ*ಲೆಗೈದ ನಂತರ ಕಾರನ್ನು ಅಪಘಾತ ಮಾಡಲು ಯತ್ನಿಸಿದ್ದಾನೆ ಎಂದು ಪೊಲೀಸ್ ತನಿಖೆಯಲ್ಲಿ ತಿಳಿದು ಬಂದಿದೆ.
ಈ ಘಟನೆ ಸಂಬಂಧ ಸುದೀರ್ಘವಾಗಿ ತನಿಖೆ ನಡೆಸಿದ ಪೊಲೀಸರು, ಅಶೋಕ್ನನ್ನು ವಶಕ್ಕೆ ಪಡೆದು ವಿಚಾರಣೆ ನಡೆಸಿದ್ದಾರೆ. ತನಿಖೆಯ ನಂತರ ಅಧಿಕಾರಿಗಳು ಕುಮಾರ್ ನನ್ನು ಬಂಧಿಸಿದ್ದಾರೆ.
120 (ಬಿ) (ಕ್ರಿಮಿನಲ್ ಪಿತೂರಿ), 302 (ಕೊ*ಲೆ), ಮತ್ತು 201 (ಸಾಕ್ಷಿ ನಾಶಕ್ಕೆ ಯತ್ನ) ಸೇರಿದಂತೆ ಭಾರತೀಯ ದಂಡ ಸಂಹಿತೆಯ ಹಲವಾರು ಸೆಕ್ಷನ್ಗಳ ಅಡಿಯಲ್ಲಿ ದೂರು ದಾಖಲು ಮಾಡಲಾಗಿದೆ.
ಈತನೊಂದಿಗೆ ಬೇರೆ ಯಾರಾದ್ರೂ ಇದ್ದಾರೆಯೇ ಅಥವಾ ಈ ಹಿಂದೆ ಇದೇ ರೀತಿಯ ಕೃತ್ಯಗಳನ್ನು ಮಾಡಿದ್ದಾನೆಯೇ ಎಂಬುದರ ಬಗ್ಗೆ ಹೆಚ್ಚಿನ ತನಿಖೆ ನಡೆಯುತ್ತಿದೆ ಎಂದು ವರದಿ ತಿಳಿಸಿದೆ.
Website blocked: ಮೋದಿ ವ್ಯಂಗ್ಯಚಿತ್ರ ಪ್ರಕಟಿಸಿದ್ದಕ್ಕೆ ನಿರ್ಬಂಧ: ವಿಕಟನ್ ಪತ್ರಿಕೆ
ಚೀನಾ ಭಾರತದ ಶತ್ರುವಲ್ಲ: ಕಾಂಗ್ರೆಸ್ ಮುಖಂಡ ಪಿತ್ರೋಡಾ ಹೇಳಿಕೆಗೆ ಬಿಜೆಪಿ ಆಕ್ರೋಶ
Earthquake: ಪ್ರಬಲ ಭೂಕಂಪ: ಬೆಳ್ಳಂಬೆಳಗ್ಗೆ ಬೆಚ್ಚಿ ಬಿದ್ದ ದೆಹಲಿ ಜನ.. 4.0ತೀವ್ರತೆ ದಾಖಲು
Delhi Stampede: ನನ್ನ ಪತ್ನಿ ತಾರಾ ಎಲ್ಲಿ?..ನಾಪತ್ತೆಯಾದ ಪತ್ನಿಗಾಗಿ ಪತಿಯ ಹುಡುಕಾಟ!
Indian Deportees: ಭಾರತೀಯರಿಗೆ ಮತ್ತೆ ಕೋಳ ತೊಡಿಸಿ ಗಡೀಪಾರು!
Katapadi: ಮುಕ್ಕಾಲು ಎಕರೆಯಲ್ಲಿ 8 ಟನ್ ಸೌತೆ, ಅಂಗಳದಿಂದಲೇ ಮಾರಾಟ!
Shows cancelled: ಸ್ತ್ರೀ ವಿರೋಧಿ ಹೇಳಿಕೆ… ಹಾಸ್ಯಗಾರ ಬಸ್ಸಿ ಕಾರ್ಯಕ್ರಮ ರದ್ದು
Website blocked: ಮೋದಿ ವ್ಯಂಗ್ಯಚಿತ್ರ ಪ್ರಕಟಿಸಿದ್ದಕ್ಕೆ ನಿರ್ಬಂಧ: ವಿಕಟನ್ ಪತ್ರಿಕೆ
Mangaluru: ನದಿ-ಕಡಲು ಸಂಗಮದ ಸನಿಹದಲ್ಲೇ ಪ್ರವಾಸಿ ಸೇತುವೆ!
ಚೀನಾ ಭಾರತದ ಶತ್ರುವಲ್ಲ: ಕಾಂಗ್ರೆಸ್ ಮುಖಂಡ ಪಿತ್ರೋಡಾ ಹೇಳಿಕೆಗೆ ಬಿಜೆಪಿ ಆಕ್ರೋಶ
You seem to have an Ad Blocker on.
To continue reading, please turn it off or whitelist Udayavani.