Shocking: ಆಟ ಆಡುತ್ತಿದ್ದ 8ರ ಬಾಲಕಿ ಮೇಲೆ ಸಾಮೂಹಿಕ ಅತ್ಯಾಚಾರವೆಸಗಿ ಕೊಲೆಗೈದ ಬಾಲಕರು.!
Team Udayavani, Jul 11, 2024, 4:39 PM IST
![12](https://www.udayavani.com/wp-content/uploads/2024/07/12-9-620x372.jpg)
![12](https://www.udayavani.com/wp-content/uploads/2024/07/12-9-620x372.jpg)
ಆಂಧ್ರಪ್ರದೇಶ: ಶಾಲಾ ಬಾಲಕಿಯನ್ನು ಮೂವರು ಅಪ್ರಾಪ್ತ ಬಾಲಕರು ಸೇರಿ ಸಾಮೂಹಿಕವಾಗಿ ಅತ್ಯಾಚಾರವೆಸಗಿ ಕೊಲೆಗೈದಿರುವ ಪೈಶಾಚಿಕ ಘಟನೆ ಆಂಧ್ರ ಪ್ರದೇಶದ (Andhra Pradesh) ನಂದ್ಯಾಲ ಜಿಲ್ಲೆಯ ಪಗಿದ್ಯಾಲ ಮಂಡಲದ ಮುಚ್ಮರಿ ಗ್ರಾಮದಲ್ಲಿ ನಡೆದಿದೆ.
ಭಾನುವಾರ ಈ ಘಟನೆ ನಡೆದಿದ್ದು ಬುಧವಾರ ಬೆಳಕಿಗೆ ಬಂದಿದೆ.
ಮೂರನೇ ತರಗತಿಯಲ್ಲಿ ಓದುತ್ತಿದ್ದ ಬಾಲಕಿಯನ್ನು 6ನೇ ತರಗತಿಯಲ್ಲಿ ಓದುತ್ತಿದ್ದ ಇಬ್ಬರು ಹಾಗೂ 7ನೇ ತರಗತಿಯಲ್ಲಿ ಓದುತ್ತಿದ್ದ 13 ವರ್ಷದ ಬಾಲಕರು ಸೇರಿ ಅತ್ಯಾಚಾರವೆಸಗಿ ಕೊಲೆಗೈದಿದ್ದಾರೆ.
ಬಾಲಕಿ ಮುಚ್ಮರಿ ಪಾರ್ಕ್ ನಲ್ಲಿ ಆಟ ಆಡುತ್ತಿದ್ದಳು ಆದರೆ ಸಂಜೆ ಆದರೂ ಮನೆಗೆ ಬಾರದಿದ್ದಾಗ ಬಾಲಕಿಯ ತಂದೆ ಮಿಸ್ಸಿಂಗ್ ಕೇಸ್ ದಾಖಲಿಸಿದ್ದಾರೆ. ಅಕ್ಕಪಕ್ಕ ಎಲ್ಲಾ ಕಡೆ ಸ್ಥಳೀಯರು ಹಾಗೂ ಪೊಲೀಸರು ಹುಡುಕಾಡಿದರೂ ಬಾಲಕಿಯ ಪತ್ತೆಯಾಗಿರಲಿಲ್ಲ. ಕೊನೆಗೆ ಪೊಲೀಸರು ಶ್ವಾನದಳವನ್ನು ನಿಯೋಜಿಸಿದ್ದಾರೆ. ಪೊಲೀಸ್ ಸ್ನಿಫರ್ ಡಾಗ್ ಆರೋಪಿ ಬಾಲಕರ ಮನೆ ಮುಂದೆ ಹೋಗಿ ನಿಂತಿದೆ.
ಪೊಲೀಸರು ಪ್ರಾಥಮಿಕ ತನಿಖೆಯಾಗಿ ಅಪ್ರಾಪ್ತ ಬಾಲಕರನ್ನು ವಿಚಾರಣೆಗೆ ಒಳಪಡಿಸಿದಾಗ ಕೃತ್ಯದ ಬಗ್ಗೆ ಬಾಯಿಬಿಟ್ಟಿದ್ದಾರೆ.
ಪಾರ್ಕ್ ನಲ್ಲಿ ಆಟ ಆಡುತ್ತಿದ್ದ ಬಾಲಕಿಯನ್ನು ನೋಡಿದ ಮೂವರು ಆಕೆಯ ಬಳಿ ತಮ್ಮನ್ನು ಆಟಕ್ಕೆ ಸೇರಿಸಿ ಎಂದು ಕೇಳಿ, ಆಕೆಯನ್ನು ನಿರ್ಜನ ಪ್ರದೇಶವೊಂದಕ್ಕೆ ಕರೆದುಕೊಂಡು ಹೋಗಿದ್ದಾರೆ. ಆ ಬಳಿಕ ಆಕೆಯ ಬಾಯಿಗೆ ಬಟ್ಟೆ ತುರುಕಿ ಒಬ್ಬರಾದ ಮೇಲೆ ಒಬ್ಬರು ಅತ್ಯಾಚಾರವೆಸಗಿದ್ದಾರೆ. ಇದಾದ ಬಳಿಕ ಬಾಲಕಿ ವಿಚಾರವನ್ನು ಮನೆಯವರಿಗೆ ತಿಳಿಸುತ್ತಾಳೆ ಎನ್ನುವ ಭೀತಿಯಿಂದ ಕೊಲೆಗೈದು ದೇಹವನ್ನು ಕಾಲುವೆಗೆ ಎಸೆದು ಅಲ್ಲಿಂದ ಪರಾರಿ ಆಗಿದ್ದಾರೆ ಎಂದು ಪೊಲೀಸರು ಹೇಳಿದ್ದಾರೆ.
ಕೊಲೆಯಾದ ಬಾಲಕಿ ಹಾಗೂ ಬಾಲಕರು ಒಂದೇ ಶಾಲೆಯಲ್ಲಿ ಓದುತ್ತಿದ್ದರು ಎಂದು ತಿಳಿದುಬಂದಿದೆ.
ಸದ್ಯ ಮೂವರು ಅಪ್ರಾಪ್ತ ಬಾಲಕರನ್ನು ಕಸ್ಟಡಿಗೆ ತೆಗೆದುಕೊಂಡಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
![Kumbh stampede: Ashutosh sinha protest against the government](https://www.udayavani.com/wp-content/uploads/2025/02/asj-150x81.jpg)
![Kumbh stampede: Ashutosh sinha protest against the government](https://www.udayavani.com/wp-content/uploads/2025/02/asj-150x81.jpg)
![Kumbh stampede: Ashutosh sinha protest against the government](https://www.udayavani.com/wp-content/uploads/2025/02/asj-150x81.jpg)
Kumbh stampede: ಸರ್ಕಾರದ ವಿರುದ್ಧ “ಅಸ್ಥಿ ಕುಡಿಕೆ’ ಪ್ರತಿಭಟನೆ
![Augusta scam broker Michael granted bail after 6 years in custody](https://www.udayavani.com/wp-content/uploads/2025/02/augs-150x81.jpg)
![Augusta scam broker Michael granted bail after 6 years in custody](https://www.udayavani.com/wp-content/uploads/2025/02/augs-150x81.jpg)
![Augusta scam broker Michael granted bail after 6 years in custody](https://www.udayavani.com/wp-content/uploads/2025/02/augs-150x81.jpg)
Augusta scam: 6 ವರ್ಷಗಳ ಕಸ್ಟಡಿ ಬಳಿಕ ಅಗಸ್ಟಾ ಹಗರಣ ದಲ್ಲಾಳಿ ಮೈಕೆಲ್ಗೆ ಜಾಮೀನು
![TTD-Donate](https://www.udayavani.com/wp-content/uploads/2025/02/TTD-Donate-150x90.jpg)
![TTD-Donate](https://www.udayavani.com/wp-content/uploads/2025/02/TTD-Donate-150x90.jpg)
![TTD-Donate](https://www.udayavani.com/wp-content/uploads/2025/02/TTD-Donate-150x90.jpg)
TTD: ತಿರುಪತಿ ದೇಗುಲದ ಉಚಿತ ಅನ್ನಪ್ರಸಾದ ಟ್ರಸ್ಟ್ಗೆ ಮುಂಬೈ ವ್ಯಕ್ತಿ 11ಕೋಟಿ ರೂ.ದೇಣಿಗೆ!
![ಮಹಾಕುಂಭ ‘ಮೃತ್ಯುಕುಂಭ’ ವಾಗಿ ಮಾರ್ಪಟ್ಟಿದೆ… ಯೋಗಿ ಸರ್ಕಾರದ ವಿರುದ್ಧ ಮಮತಾ ವಾಗ್ದಾಳಿ](https://www.udayavani.com/wp-content/uploads/2025/02/mamatha1-150x84.jpg)
![ಮಹಾಕುಂಭ ‘ಮೃತ್ಯುಕುಂಭ’ ವಾಗಿ ಮಾರ್ಪಟ್ಟಿದೆ… ಯೋಗಿ ಸರ್ಕಾರದ ವಿರುದ್ಧ ಮಮತಾ ವಾಗ್ದಾಳಿ](https://www.udayavani.com/wp-content/uploads/2025/02/mamatha1-150x84.jpg)
ಮಹಾಕುಂಭ ‘ಮೃತ್ಯುಕುಂಭ’ ವಾಗಿ ಮಾರ್ಪಟ್ಟಿದೆ… ಯೋಗಿ ಸರ್ಕಾರದ ವಿರುದ್ಧ ಮಮತಾ ವಾಗ್ದಾಳಿ
![Maharashtra: ಬಿಜೆಪಿ-ಶಿಂಧೆ ಶಿವಸೇನೆ ನಡುವೆ ಬಿಕ್ಕಟ್ಟು: 20 ಶಾಸಕರ “Y” ಭದ್ರತೆ ವಾಪಸ್!](https://www.udayavani.com/wp-content/uploads/2025/02/Devendra-150x81.jpg)
![Maharashtra: ಬಿಜೆಪಿ-ಶಿಂಧೆ ಶಿವಸೇನೆ ನಡುವೆ ಬಿಕ್ಕಟ್ಟು: 20 ಶಾಸಕರ “Y” ಭದ್ರತೆ ವಾಪಸ್!](https://www.udayavani.com/wp-content/uploads/2025/02/Devendra-150x81.jpg)
Maharashtra: ಬಿಜೆಪಿ-ಶಿಂಧೆ ಶಿವಸೇನೆ ನಡುವೆ ಬಿಕ್ಕಟ್ಟು: 20 ಶಾಸಕರ “Y” ಭದ್ರತೆ ವಾಪಸ್!