![Thirthahalli: ಸಾಲ ಕಟ್ಟದ್ದಕ್ಕೆ ಕಿವಿಯೋಲೆ ಕಿತ್ತ ಬ್ಯಾಂಕ್ ಸಿಬ್ಬಂದಿ!](https://www.udayavani.com/wp-content/uploads/2025/02/19-4-415x249.jpg)
![Thirthahalli: ಸಾಲ ಕಟ್ಟದ್ದಕ್ಕೆ ಕಿವಿಯೋಲೆ ಕಿತ್ತ ಬ್ಯಾಂಕ್ ಸಿಬ್ಬಂದಿ!](https://www.udayavani.com/wp-content/uploads/2025/02/19-4-415x249.jpg)
Team Udayavani, Mar 11, 2022, 3:40 PM IST
ಶ್ರೀನಗರ: ಗಡಿ ಭದ್ರತಾ ಪಡೆ ಸಿಬ್ಬಂದಿಯಿದ್ದ ಕ್ಯಾಂಪ್ ಗೆ ತೆರಳುತ್ತಿದ್ದ ಭಾರತೀಯ ಸೇನೆಯ ಚೀತಾ ಹೆಲಿಕಾಪ್ಟರ್ ಉತ್ತರ ಕಾಶ್ಮೀರದ ಗುರೇಜ್ ಸೆಕ್ಟರ್ನ ಗಡಿ ನಿಯಂತ್ರಣ ರೇಖೆ ಬಳಿ ಪತನಗೊಂಡಿದೆ.
ಅನಾರೋಗ್ಯದಿಂದ ಬಳಲುತ್ತಿದ್ದ ಬಿಎಸ್ಎಫ್ ಸಿಬ್ಬಂದಿಯನ್ನು ಕರೆತರಲು ಈ ಹೆಲಿಕಾಪ್ಟರ್ ಹೋಗುತ್ತಿತ್ತು ಎಂದು ವರದಿ ತಿಳಿಸಿದೆ.
ಜಮ್ಮು ಮತ್ತು ಕಾಶ್ಮೀರದ ಬಂಡಿಪೋರಾ ಜಿಲ್ಲೆಯ ಗುರೇಜ್ ಸೆಕ್ಟರ್ನ ಗುಜ್ರಾನ್ ನಾಲಾ ಬಳಿ ಹೆಲಿಕಾಪ್ಟರ್ ಅಪಘಾತ ಸಂಭವಿಸಿದೆ. ಇದು ಗಡಿ ನಿಯಂತ್ರಣ ರೇಖೆಗೆ (ಲೈನ್ ಆಫ್ ಕಂಟ್ರೋಲ್) ಅತ್ಯಂತ ಸಮೀಪದಲ್ಲಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.
ಇದನ್ನೂ ಓದಿ:ಸೋತ ಸಿಎಂ ಧಾಮಿಯನ್ನು ಧೋನಿಗೆ ಹೋಲಿಸಿದ ರಾಜನಾಥ್ ಸಿಂಗ್!
ಹೆಲಿಕಾಪ್ಟರ್ ಪತನಕ್ಕೆ ನಿಖರ ಕಾರಣ ಇದುವರೆಗೂ ಪತ್ತೆಯಾಗಿಲ್ಲ. ಹೆಲಿಕಾಪ್ಟರ್ ನಲ್ಲಿ ಪೈಲಟ್ ಮತ್ತು ಸಹಾಯಕ ಪೈಲಟ್ ಇದ್ದರು ಎಂದು ಅಧಿಕಾರಿಗಳು ತಿಳಿಸಿದ್ದಾರೆ. ಹೆಲಿಕಾಪ್ಟರ್ ಪತನವಾದ ಜಾಗ ಸಂಪೂರ್ಣವಾಗಿ ಹಿಮಚ್ಛಾದಿತವಾಗಿದೆ ಎಂದು ಹೇಳಲಾಗಿದೆ.
ರಕ್ಷಣಾ ಕಾರ್ಯಾಚರಣೆಗೆ ತಂಡಗಳನ್ನು ಕಾಲ್ನಡಿಗೆಯಲ್ಲಿ ಕಳುಹಿಸಲಾಗಿದೆ. ಆದರೆ ವಾಯು ವಿಚಕ್ಷಣ ತಂಡಗಳು ಬದುಕುಳಿದವರನ್ನು ಹುಡುಕುತ್ತಿವೆ ಎಂದು ವರದಿ ತಿಳಿಸಿದೆ.
Mahakumbh Rush: ಗೊಂದಲಕಾರಿ ಪ್ರಕಟಣೆಯಿಂದ ರೈಲು ನಿಲ್ದಾಣದಲ್ಲಿ ಕಾಲ್ತುಳಿತ: ಪೊಲೀಸರು
RSS; ಹಿಂದೂ ಸಮಾಜ ದೇಶದ ಜವಾಬ್ದಾರಿಯುತ ಸಮುದಾಯ: ಮೋಹನ್ ಭಾಗವತ್
Controversy; ಮಹಾಕುಂಭ ‘ಅರ್ಥಹೀನ’ ಎಂದ ಲಾಲು ಪ್ರಸಾದ್ ಯಾದವ್
Pariksha Pe Charcha: ಸ್ಮಾರ್ಟ್ ಫೋನ್ಗಿಂತಲೂ ನೀವು ಸ್ಮಾರ್ಟ್ ಆಗಬೇಕು:ಸದ್ಗುರು
Mahakumbh sensation: ಕೇರಳದಲ್ಲಿ ಕುಂಭಮೇಳದ ಮೊನಾಲಿಸಾ ಹವಾ
Kaup: ಸ್ಕೂಟಿ, ಕಾರಿಗೆ ಬಸ್ ಢಿಕ್ಕಿ; ಸವಾರನಿಗೆ ಗಾಯ
Thirthahalli: ಸಾಲ ಕಟ್ಟದ್ದಕ್ಕೆ ಕಿವಿಯೋಲೆ ಕಿತ್ತ ಬ್ಯಾಂಕ್ ಸಿಬ್ಬಂದಿ!
Padubidri: ಕಬ್ಬಿಣದ ತುಂಡು ಹೆಕ್ಕಿದ ಬಾಲಕರಿಗೆ ರೈಲ್ವೇ ಗ್ಯಾಂಗ್ಮನ್ ಹಲ್ಲೆ; ದೂರು
Restriction: ನಿಷೇಧವಿದ್ದರೂ ಗೂಡ್ಸ್ ವಾಹನಗಳಲ್ಲಿ ಜನರು ಬಿಳಿಗಿರಿ ರಂಗನ ಬೆಟ್ಟಕ್ಕೆ ಪಯಣ!
Pro Hockey: ಇಂಗ್ಲೆಂಡ್ ವಿರುದ್ಧ ಭಾರತ ವನಿತೆಯರಿಗೆ ಸೋಲು
You seem to have an Ad Blocker on.
To continue reading, please turn it off or whitelist Udayavani.