ಉಗ್ರನ ಹತ್ಯೆಗೆ ನೆರವಾಗಿ,ಮಸೀದಿ ಉಳಿಸಿದ ಸೇನೆಯ ಶ್ವಾನಕ್ಕೆ ಅಂತಿಮ ನಮನ

ನಿಯತ್ತಿನ ದೇಶ ಸೇವೆ ಮಾಡಿ ಹುತಾತ್ಮನಾದ ಆಕ್ಸೆಲ್ ಗೆ ಸೇನಾ ಗೌರವ

Team Udayavani, Jul 31, 2022, 8:21 PM IST

1-sadsa-dsad

ಶ್ರೀನಗರ: ಉಗ್ರ ವಿರೋಧಿ ಕಾರ್ಯಾಚರಣೆಯ ಸಂದರ್ಭದಲ್ಲಿ ಅತ್ಯುನ್ನತ ತ್ಯಾಗ ಮಾಡಿದ ಶ್ವಾನ ‘ಆಕ್ಸೆಲ್’ಗೆ ಭಾರತೀಯ  ಸೇನೆಯು ಭಾನುವಾರ ಗೌರವ ನಮನ ಸಲ್ಲಿಸಿ ಅಂತ್ಯಕ್ರಿಯೆಯನ್ನು ಮಾಡಿತು. ಅಡಗಿದ್ದ ಉಗ್ರನನ್ನು ಗುರುತಿಸುವ ಮೊದಲು ಹತ್ತಿರದಲ್ಲಿದ್ದ ಮಸೀದಿಯನ್ನು ರಕ್ಷಿಸಲು ನೆರವಾಗಿತ್ತು.

ಕುಪ್ವಾರ ನಿವಾಸಿ ಅಖ್ತರ್ ಹುಸೇನ್ ಭಟ್ ಎಂದು ಗುರುತಿಸಲಾದ ಜೈಶ್-ಎ-ಮೊಹಮ್ಮದ್ ಸಂಘಟನೆಯೊಂದಿಗೆ ಸಂಬಂಧ ಹೊಂದಿದ್ದ ಭಯೋತ್ಪಾದಕನನ್ನು ಶನಿವಾರ ಬಾರಾಮುಲ್ಲಾ ಜಿಲ್ಲೆಯ ಕ್ರೀರಿಯ ವನಿಗಮ್ ಬಾಲಾ ಪ್ರದೇಶದಲ್ಲಿ ಎಂಟು ಗಂಟೆಗಳ ಕಾಲ ನಡೆದ ಗುಂಡಿನ ಚಕಮಕಿಯ ನಂತರ ಭದ್ರತಾ ಪಡೆಗಳು ಹತ್ಯೆಗೈದಿದ್ದರು.

ಸೇನೆಯ 26 ಶ್ವಾನ ಘಟಕದಲ್ಲಿದ್ದ ಎರಡು ವರ್ಷದ ಜರ್ಮನ್ ಶಫರ್ಡ್ ತಳಿಯ ಶ್ವಾನ ‘ಆಕ್ಸೆಲ್’ ಕಾರ್ಯಾಚರಣೆಯಲ್ಲಿ ಪ್ರಮುಖ ಪಾತ್ರ ವಹಿಸಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ. ಎನ್‌ಕೌಂಟರ್‌ನಲ್ಲಿ ಒಬ್ಬ ಸೇನಾ ಯೋಧ ಮತ್ತು ಪೋಲೀಸ್‌ ಗಾಯಗೊಂಡ ನಂತರ, ಬಾಡಿ ಕ್ಯಾಮೆರಾದೊಂದಿಗೆ ಜೋಡಿಸಲಾದ ‘ಆಕ್ಸೆಲ್’ ಅನ್ನು ಕಾರ್ಯಾಚರಣೆಗಿಳಿಸಲಾಗಿತ್ತು.

10 ಮೀಟರ್ ಒಳಗೆ ಮಸೀದಿ ಇದ್ದುದರಿಂದ ಉಗ್ರನನ್ನು ಹತ್ಯೆಗೈಯಲು ಯಾವುದೇ ಹೆಚ್ಚಿನ ಕ್ಯಾಲಿಬರ್ ಶಸ್ತ್ರಾಸ್ತ್ರಗಳನ್ನು ಬಳಸಲಾಗಿಲ್ಲಎಂದು ಅಧಿಕಾರಿಯೊಬ್ಬರು ತಿಳಿಸಿದ್ದಾರೆ. ‘ಆಕ್ಸೆಲ್’ ಉಗ್ರನ ಇರುವಿಕೆಯನ್ನು ಗುರುತಿಸುವಲ್ಲಿ ಯಶಸ್ವಿಯಾಯಿತು ಆದರೆ ಈ ವೇಳೆ ಗುಂಡಿಗೆ ಬಲಿಯಾಯಿತು.

ಭದ್ರತಾ ಪಡೆಗಳು ಮಸೀದಿಯ ಪಾವಿತ್ರ್ಯತೆಯನ್ನು ಉಲ್ಲಂಘಿಸದೆ ಮತ್ತು ಅದಕ್ಕೆ ಯಾವುದೇ ಹಾನಿಯಾಗದಂತೆ ಭಯೋತ್ಪಾದಕನನ್ನು ಹೊಡೆದುರುಳಿಸಲು ‘ಆಕ್ಸೆಲ್’ ಕಾರಣವಾಗಿ ಕೊನೆಯುಸಿರೆಳೆಯಿತು.

“ನಿನ್ನ ಸೇವೆಗೆ ಧನ್ಯವಾದಗಳು, ಆಕ್ಸೆಲ್” ಎಂದು ಶ್ರೀನಗರ ಮೂಲದ ಸೇನೆಯ ಚಿನಾರ್ ಕಾರ್ಪ್ಸ್ ಜರ್ಮನ್ ಶೆಫರ್ಡ್‌ನ ಫೈಲ್ ಫೋಟೋ ಜೊತೆಗೆ ಟ್ವೀಟ್ ಮಾಡಿದೆ.ಭಾನುವಾರ ಪಟ್ಟನ್‌ನಲ್ಲಿ ನಡೆದ ಮಿಲಿಟರಿ ಸಮಾರಂಭದಲ್ಲಿ ಸೇನೆಯು ‘ಆಕ್ಸೆಲ್’ಗೆ ಗೌರವ ಸಲ್ಲಿಸಿತು.

ಕಿಲೋ ಫೋರ್ಸ್‌ನ ಜನರಲ್ ಆಫೀಸರ್ ಕಮಾಂಡಿಂಗ್ (ಜಿಒಸಿ) ಮೇಜರ್ ಜನರಲ್ ಎಸ್. ಎಸ್. ಸ್ಲಾರಿಯಾ ಅವರು ಯೋಧನಿಗೆ ನಮನ ಸಲ್ಲಿಸಿದರು. ಕಳೆದ ಎರಡು ವರ್ಷಗಳಿಂದ ಅದರ ರಕ್ಷಕ, ಪಾಲಕ, ತರಬೇತುದಾರ ಮತ್ತು ಹತ್ತಿರದ ಗೆಳೆಯರಾಗಿರುವ ಆಕ್ಸೆಲ್‌ನ ಹ್ಯಾಂಡ್ಲರ್‌ಗೆ ಇದು ಭಾವನಾತ್ಮಕ ಕ್ಷಣವಾಗಿತ್ತು. 26 ಸೇನಾ ಶ್ವಾನ ಘಟಕದ ಆವರಣದಲ್ಲಿ ಘಟಕದ ಸಿಬ್ಬಂದಿ ಹಾಗೂ ಅಧಿಕಾರಿಗಳ ಸಮ್ಮುಖದಲ್ಲಿ ಆಕ್ಸೆಲ್‌ ನನ್ನ ಸಮಾಧಿ ಮಾಡಲಾಯಿತು.

‘ಆಕ್ಸೆಲ್’ ವೃತ್ತಿಪರ ಸಾಮರ್ಥ್ಯ, ಶೌರ್ಯ ಮತ್ತು ಅತ್ಯುನ್ನತ ತ್ಯಾಗಕ್ಕಾಗಿ ಯಾವಾಗಲೂ ನೆನಪಿನಲ್ಲಿ ಉಳಿಯುತ್ತದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.

ಟಾಪ್ ನ್ಯೂಸ್

Kodagu-Polcie

Madikeri: ವಿವಿಧ ಕಳವು ಪ್ರಕರಣ: ಕೊಡಗು ಪೊಲೀಸರಿಂದ ಮೂವರ ಸೆರೆ

DKSHi (3)

Water; ಗೌಡರು ಅಧಿಕಾರದಲ್ಲಿದ್ದಾಗ ನೀರಿನ ಹೋರಾಟ ಏಕೆ: ಡಿಕೆಶಿ

Beer

ಶಾಲೆ ಸಮೀಪ ಮದ್ಯದಂಗಡಿ ಇದ್ದರೆ ದೂರು ನೀಡಿ

1-dee

ಕಾಲೇಜುಗಳಲ್ಲಿ ಜಾನಪದ ಉತ್ಸವ: ಇಲಾಖೆ ಸೂಚನೆ

Gun-Fire

Mandya: ನಾಗಮಂಗಲದಲ್ಲಿ ಆಕಸ್ಮಿಕ ಫೈರಿಂಗ್‌: 3 ವರ್ಷದ ಮಗು ಮೃತ್ಯು!

Thirthahalli: ಸಾಲ ಕಟ್ಟದ್ದಕ್ಕೆ ಕಿವಿಯೋಲೆ ಕಿತ್ತ ಬ್ಯಾಂಕ್‌ ಸಿಬ್ಬಂದಿ!

Thirthahalli: ಸಾಲ ಕಟ್ಟದ್ದಕ್ಕೆ ಕಿವಿಯೋಲೆ ಕಿತ್ತ ಬ್ಯಾಂಕ್‌ ಸಿಬ್ಬಂದಿ!

BR-Hills

Restriction: ನಿಷೇಧವಿದ್ದರೂ ಗೂಡ್ಸ್‌ ವಾಹನಗಳಲ್ಲಿ ಜನರು ಬಿಳಿಗಿರಿ ರಂಗನ ಬೆಟ್ಟಕ್ಕೆ ಪಯಣ!


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Delhi-Stamp

Mahakumbh Rush: ಗೊಂದಲಕಾರಿ ಪ್ರಕಟಣೆಯಿಂದ ರೈಲು ನಿಲ್ದಾಣದಲ್ಲಿ ಕಾಲ್ತುಳಿತ: ಪೊಲೀಸರು

mohan bhagwat

RSS; ಹಿಂದೂ ಸಮಾಜ ದೇಶದ ಜವಾಬ್ದಾರಿಯುತ ಸಮುದಾಯ: ಮೋಹನ್ ಭಾಗವತ್

Lalu

Controversy; ಮಹಾಕುಂಭ ‘ಅರ್ಥಹೀನ’ ಎಂದ ಲಾಲು ಪ್ರಸಾದ್ ಯಾದವ್

1sadgu

Pariksha Pe Charcha: ಸ್ಮಾರ್ಟ್ ಫೋನ್‌ಗಿಂತಲೂ ನೀವು ಸ್ಮಾರ್ಟ್ ಆಗಬೇಕು:ಸದ್ಗುರು

15-monalisa

Mahakumbh sensation: ಕೇರಳದಲ್ಲಿ ಕುಂಭಮೇಳದ ಮೊನಾಲಿಸಾ ಹವಾ

MUST WATCH

udayavani youtube

ನಿಮ್ಮ ಅಚ್ಚುಮೆಚ್ಚಿನ ; ಆರೋಗ್ಯಕರ ಪಾನಿಪುರಿ ಸವಿಯಲು ಇಲ್ಲಿಗೆ ಬನ್ನಿ

udayavani youtube

ಭೀಕರ ಹಿಟ್ & ರನ್ ಸಂತ್ರಸ್ತರ ಪರ ನಿಂತ ಪುತ್ತೂರು ಶಾಸಕ ಅಶೋಕ್ ರೈ

udayavani youtube

ಶ್ರೀ ಬ್ರಹ್ಮಬೈದರ್ಕಳ ನೇಮೋತ್ಸವ, ಮಾಣಿಬಾಲೆ ನೇಮೋತ್ಸವ

udayavani youtube

ಸಾಹಿತ್ಯಾಸಕ್ತಿಯ ಚಹಾ ಅಂಗಡಿ

udayavani youtube

ಇಲ್ಲಿ ಪ್ರತಿಯೊಂದು ಗೋವುಗಳಿಗೂ ವಿಭಿನ್ನ ಹೆಸರಿದೆ

ಹೊಸ ಸೇರ್ಪಡೆ

Kodagu-Polcie

Madikeri: ವಿವಿಧ ಕಳವು ಪ್ರಕರಣ: ಕೊಡಗು ಪೊಲೀಸರಿಂದ ಮೂವರ ಸೆರೆ

DKSHi (3)

Water; ಗೌಡರು ಅಧಿಕಾರದಲ್ಲಿದ್ದಾಗ ನೀರಿನ ಹೋರಾಟ ಏಕೆ: ಡಿಕೆಶಿ

Beer

ಶಾಲೆ ಸಮೀಪ ಮದ್ಯದಂಗಡಿ ಇದ್ದರೆ ದೂರು ನೀಡಿ

1-dee

ಕಾಲೇಜುಗಳಲ್ಲಿ ಜಾನಪದ ಉತ್ಸವ: ಇಲಾಖೆ ಸೂಚನೆ

arrested

CM ಕಚೇರಿಯ ಟಿಪ್ಪಣಿ ನಕಲು: ಬಂಧನ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.