![BR-Hills](https://www.udayavani.com/wp-content/uploads/2025/02/BR-Hills-415x249.jpg)
![BR-Hills](https://www.udayavani.com/wp-content/uploads/2025/02/BR-Hills-415x249.jpg)
Team Udayavani, Sep 3, 2019, 8:38 AM IST
ಶ್ರೀನಗರ: ಜಮ್ಮು ಕಾಶ್ಮೀರದಲ್ಲಿ ಭಾರತೀಯ ಸೇನೆಯಿಂದ ಬಂಧಿತರಾದ ಇಬ್ಬರು ಉಗ್ರರು ಪಾಕಿಸ್ಥಾನದ ಮಹಾ ಸಂಚಿನ ಬಗ್ಗೆ ಬಾಯಿ ಬಿಟ್ಟಿದ್ದಾರೆ. ಕಾಶ್ಮೀರದ ಒಳಗೆ ಉಗ್ರರನ್ನು ಕಳುಸಿ ವಿಧ್ವಂಸಕ ಕೃತ್ಯ ನಡೆಸಲು ಪಾಕಿಸ್ಥಾನ ತಯಾರಿ ನಡೆಸುತ್ತಿದೆ ಎಂದು ಭಾರತೀಯ ಸೇನೆಗೆ ಉಗ್ರರು ಮಾಹಿತಿ ನೀಡಿದ್ದಾರೆಂದು ವರದಿಯಾಗಿದೆ.
ಭಾರತೀಯ ಸೇನೆ ಬಂಧಿಸಿದ ಖಲೀಲ್ ಅಹಮದ್ ಮತ್ತು ನಜೀಂ ಖೋಕರ್ ಎಂಬ ಇಬ್ಬರು ಉಗ್ರರು ಹಲವು ಮಹತ್ವದ ಮಾಹಿತಿಯನ್ನು ಬಹಿರಂಗಗೊಳಿಸಿದ್ದು, ಪಾಕಿಸ್ಥಾನದ ಸೇನೆ ಹಲವು ಉಗ್ರರಿಗೆ ತರಬೇತಿ ನೀಡುತ್ತಿದ್ದು, ಅವರನ್ನು ಭಾರತದ ಗಡಿಯೊಳಗೆ ಕಳುಹಿಸಿ ಕಾಶ್ಮೀರದಲ್ಲಿ ವಿಧ್ವಂಸಕ ಕೃತ್ಯ ನಡೆಸಲು ತಯಾರಿ ನಡೆಸುತ್ತಿದೆ ಎಂದು ಹೇಳಿದ್ದಾರೆ.
ಲಶ್ಕರ್ ಸಂಘಟನೆ ತರಬೇತಿ ಪಡೆದ ಏಳು ಉಗ್ರರನ್ನು ಭಾರತದ ಒಳಗೆ ಕಳುಹಿಸಿದೆ ಎಂಬ ಸ್ಫೋಟಕ ಮಾಹಿತಿ ಬಹಿರಂಗಪಡಿಸಿದ್ದಾರೆ. ಖಲೀಲ್ ಅಹಮದ್ ಮತ್ತು ಖೋಕರ್ ಕೂಡಾ ಇದೇ ಗುಂಪಿನ ಉಗ್ರರಾಗಿದ್ದು, ತಂಡದಲ್ಲಿ ಮೂವರು ಅಫ್ಘಾನ್ ಪ್ರಜೆಗಳಿದ್ದಾರೆ. ಭಾರತೀಯ ಸೇನೆಯ ಇವರ ಪ್ರಮುಖ ಟಾರ್ಗೆಟ್ ಎಂದು ಹೇಳಿದ್ದಾರೆ.
ಬಂಧಿತ ಇಬ್ಬರೂ ಉಗ್ರರು ಪಾಕಿಸ್ಥಾನದ ಪ್ರಜೆಗಳಾಗಿದ್ದು, ಲಶ್ಕರ್ ಎ ತೋಯ್ಬಾ ಉಗ್ರ ಸಂಘಟನೆಗೆ ಸೇರಿದವರಾಗಿದ್ದಾರೆ. ಪಾಕ್ ಆಕ್ರಮಿತ ಕಾಶ್ಮೀರದಲ್ಲಿ ಶಸ್ತ್ರಾಸ್ತ್ರ ಬಳಕೆಯ ಬಗ್ಗೆ ತರಬೇತಿ ಪಡೆದಿದ್ದರು.
Mahakumbh Rush: ಗೊಂದಲಕಾರಿ ಪ್ರಕಟಣೆಯಿಂದ ರೈಲು ನಿಲ್ದಾಣದಲ್ಲಿ ಕಾಲ್ತುಳಿತ: ಪೊಲೀಸರು
RSS; ಹಿಂದೂ ಸಮಾಜ ದೇಶದ ಜವಾಬ್ದಾರಿಯುತ ಸಮುದಾಯ: ಮೋಹನ್ ಭಾಗವತ್
Controversy; ಮಹಾಕುಂಭ ‘ಅರ್ಥಹೀನ’ ಎಂದ ಲಾಲು ಪ್ರಸಾದ್ ಯಾದವ್
Pariksha Pe Charcha: ಸ್ಮಾರ್ಟ್ ಫೋನ್ಗಿಂತಲೂ ನೀವು ಸ್ಮಾರ್ಟ್ ಆಗಬೇಕು:ಸದ್ಗುರು
Mahakumbh sensation: ಕೇರಳದಲ್ಲಿ ಕುಂಭಮೇಳದ ಮೊನಾಲಿಸಾ ಹವಾ
You seem to have an Ad Blocker on.
To continue reading, please turn it off or whitelist Udayavani.