![BR-Hills](https://www.udayavani.com/wp-content/uploads/2025/02/BR-Hills-415x249.jpg)
![BR-Hills](https://www.udayavani.com/wp-content/uploads/2025/02/BR-Hills-415x249.jpg)
Team Udayavani, Aug 24, 2019, 4:20 PM IST
ನವದೆಹಲಿ: ಭಾರತೀಯ ಜನತಾ ಪಕ್ಷದ ಹಿರಿಯ ನಾಯಕ, ಮಾಜಿ ವಿತ್ತ ಸಚಿವ ಅರುಣ್ ಜೇಟ್ಲಿ ಶನಿವಾರ ವಿಧಿವಶರಾಗಿದ್ದು, ಪಾರ್ಥಿವ ಶರೀರರವನ್ನು ಏಮ್ಸ್ ಆಸ್ಪತ್ರೆಯಿಂದ ದಿಲ್ಲಿಯ ನಿವಾಸಕ್ಕೆ ರವಾನಿಸಲಾಗಿದೆ. ಗಣ್ಯಾತೀಗಣ್ಯರು ಆಗಮಿಸಿ ಪಾರ್ಥಿವ ಶರೀರದ ದರ್ಶನ ಪಡೆಯುತ್ತಿದ್ದಾರೆ. ನಾಳೆ ಸಂಜೆ 5ಗಂಟೆಗೆ ಅಂತ್ಯಕ್ರಿಯೆ ನಡೆಯಲಿದೆ ಎಂದು ಕುಟುಂಬದ ಮೂಲಗಳು ತಿಳಿಸಿವೆ.
ನಾಳೆ ಬೆಳಗ್ಗೆ 10ಗಂಟೆವರೆಗೆ ಜೇಟ್ಲಿ ಅವರ ಪಾರ್ಥಿವ ಶರೀರದ ಅಂತಿಮ ದರ್ಶನಕ್ಕೆ ಅವಕಾಶವಿದೆ. ಬಳಿಕ ಬಿಜೆಪಿ ಕೇಂದ್ರ ಕಚೇರಿಯಲ್ಲಿ ಪಾರ್ಥಿವ ಶರೀರದ ಅಂತಿಮ ದರ್ಶನಕ್ಕೆ ಅವಕಾಶ ಮಾಡಿಕೊಡಲಾಗುವುದು. ಸಂಜೆ ಮೆರವಣಿಗೆ ಮೂಲಕ ಪಾರ್ಥಿವ ಶರೀರ ತಂದು, 5ಗಂಟೆ ನಂತರ ಅಂತ್ಯಸಂಸ್ಕಾರ ನಡೆಯಲಿದೆ ಎಂದು ವರದಿ ತಿಳಿಸಿದೆ.
ಪ್ರಧಾನಿ ನರೇಂದ್ರ ಮೋದಿ ಅವರು ಪ್ರಸ್ತುತ ಯುಎಇ ಪ್ರವಾಸದಲ್ಲಿದ್ದು, ತಮ್ಮ ಸಚಿವ ಸಂಪುಟದ ಸಹೋದ್ಯೋಗಿ, ಬಿಜೆಪಿ ಹಿರಿಯ ಮುಖಂಡ ಜೇಟ್ಲಿ ಅವರ ನಿಧನಕ್ಕೆ ತೀವ್ರ ಸಂತಾಪ ಸೂಚಿಸಿದ್ದಾರೆ. ಏತನ್ಮಧ್ಯೆ ದೂರವಾಣಿ ಕರೆ ಮಾಡಿ ಜೇಟ್ಲಿ ಅವರ ಪತ್ನಿ ಹಾಗೂ ಮಕ್ಕಳ ಜೊತೆ ಮಾತುಕತೆ ನಡೆಸಿ ಸಂತಾಪ ವ್ಯಕ್ತಪಡಿಸಿರುವುದಾಗಿ ಎಎನ್ ಐ ವರದಿ ತಿಳಿಸಿದೆ.
ರಾಷ್ಟ್ರಪತಿ ರಾಮನಾಥ್ ಕೋವಿಂದ್, ಕೇಂದ್ರ ಗೃಹ ಸಚಿವ ಅಮಿತ್ ಶಾ, ಕೇಂದ್ರ ರಕ್ಷಣಾ ಸಚಿವ ರಾಜನಾಥ್ ಸಿಂಗ್ ಭೇಟಿ ನೀಡಿ ಜೇಟ್ಲಿ ಪಾರ್ಥಿವ ಶರೀರದ ಅಂತಿಮ ದರ್ಶನ ಪಡೆದು ಗೌರವ ಸಲ್ಲಿಸಿದರು.
Mahakumbh Rush: ಗೊಂದಲಕಾರಿ ಪ್ರಕಟಣೆಯಿಂದ ರೈಲು ನಿಲ್ದಾಣದಲ್ಲಿ ಕಾಲ್ತುಳಿತ: ಪೊಲೀಸರು
RSS; ಹಿಂದೂ ಸಮಾಜ ದೇಶದ ಜವಾಬ್ದಾರಿಯುತ ಸಮುದಾಯ: ಮೋಹನ್ ಭಾಗವತ್
Controversy; ಮಹಾಕುಂಭ ‘ಅರ್ಥಹೀನ’ ಎಂದ ಲಾಲು ಪ್ರಸಾದ್ ಯಾದವ್
Pariksha Pe Charcha: ಸ್ಮಾರ್ಟ್ ಫೋನ್ಗಿಂತಲೂ ನೀವು ಸ್ಮಾರ್ಟ್ ಆಗಬೇಕು:ಸದ್ಗುರು
Mahakumbh sensation: ಕೇರಳದಲ್ಲಿ ಕುಂಭಮೇಳದ ಮೊನಾಲಿಸಾ ಹವಾ
You seem to have an Ad Blocker on.
To continue reading, please turn it off or whitelist Udayavani.