PM Modi ತುಂಬಾ ಶಕ್ತಿಶಾಲಿ ಆದರೆ ದೇವರಲ್ಲ: ದೆಹಲಿ ಸದನದಲ್ಲಿ ಕೇಜ್ರಿವಾಲ್

ದೆಹಲಿ ವಿಧಾನಸಭೆ ಸಂಖ್ಯಾಬಲ 66ಕ್ಕೆ ಕುಸಿತ..

Team Udayavani, Sep 26, 2024, 4:54 PM IST

1-kkk

ಹೊಸದಿಲ್ಲಿ: ಪ್ರಧಾನಿ ನರೇಂದ್ರ ಮೋದಿ ತುಂಬಾ ಶಕ್ತಿಶಾಲಿ ಆದರೆ ಅವರು ದೇವರಲ್ಲ ಎಂದು ಅರವಿಂದ್ ಕೇಜ್ರಿವಾಲ್ ಗುರುವಾರ(ಸೆ26) ಆಕ್ರೋಶ ಹೊರ ಹಾಕಿದ್ದಾರೆ.

ಸಿಎಂ ಹುದ್ದೆಗೆ ರಾಜೀನಾಮೆ ನೀಡಿದ ನಂತರ ದೆಹಲಿ ವಿಧಾನಸಭೆಯಲ್ಲಿ ಮಾಡಿದ ಮೊದಲ ಭಾಷಣದಲ್ಲಿ ಪ್ರಧಾನಿ ಮೋದಿ, ಬಿಜೆಪಿ  ವಿರುದ್ಧ  ಕೇಜ್ರಿವಾಲ್ ಆಕ್ರೋಶ ಹೊರ ಹಾಕಿದರು.

“ವಿಪಕ್ಷದಲ್ಲಿರುವ ನನ್ನ ಸಹೋದ್ಯೋಗಿಗಳು ಇಲ್ಲಿ ಮನೀಶ್ ಸಿಸೋಡಿಯಾ ಮತ್ತು ನನ್ನನ್ನು ನೋಡಿ ದುಃಖಿತರಾಗಿರಬೇಕು. ನಾನು ಯಾವಾಗಲೂ ಹೇಳುತ್ತೇನೆ ಪ್ರಧಾನಿ ಮೋದಿ ತುಂಬಾ ಶಕ್ತಿಶಾಲಿ ಮತ್ತು ಸಾಕಷ್ಟು ಸಂಪನ್ಮೂಲಗಳನ್ನು ಹೊಂದಿದ್ದಾರೆ ಆದರೆ ಅವರು ದೇವರಲ್ಲ. ದೇವರು ನಮ್ಮೊಂದಿಗಿದ್ದಾನೆ” ಎಂದರು.

“ನಾನು ಸುಪ್ರೀಂ ಕೋರ್ಟ್‌ಗೆ ಧನ್ಯವಾದ ಹೇಳಲು ಬಯಸುತ್ತೇನೆ, ಇಂದು ನಾನು ಮುಖ್ಯಮಂತ್ರಿ ಆತಿಷಿ ಅವರೊಂದಿಗೆ ರಸ್ತೆಗಳ ತಪಾಸಣೆಗೆ ಹೋಗಿದ್ದೆ. ನಾನು ಜೈಲಿಗೆ ಹೋಗುವ ಮೊದಲು ದೆಹಲಿ ವಿಶ್ವವಿದ್ಯಾಲಯದ ರಸ್ತೆಗಳು ಉತ್ತಮವಾಗಿದ್ದವು.ಅಲ್ಲಿನ ರಸ್ತೆಗಳನ್ನು ದುರಸ್ತಿ ಮಾಡಲು ಆದೇಶವನ್ನು ನೀಡುವಂತೆ ನಾನು ಕೇಳಿದೆ. 3-4 ದಿನಗಳ ಹಿಂದೆ ಬಿಜೆಪಿ ನಾಯಕರೊಬ್ಬರನ್ನು ಭೇಟಿ ಮಾಡಿ ನನ್ನನ್ನು ಜೈಲಿಗೆ ಕಳುಹಿಸುವುದರಿಂದ ಏನಾದರೂ ಪ್ರಯೋಜನವಿದೆಯೇ ಎಂದು ಕೇಳಿದ್ದೆವು, ಅದಕ್ಕವರು ನಾವು ಇಡೀ ದೆಹಲಿ ಸರ್ಕಾರವನ್ನು ಹಳಿತಪ್ಪಿಸಿದೆವು ಎಂದು ಉತ್ತರಿಸಿದರು” ಎಂದರು

“ದೆಹಲಿಯಲ್ಲಿ ಯಾರೂ ಕೇಜ್ರಿವಾಲ್ ಅಪ್ರಾಮಾಣಿಕ ಎಂದು ಹೇಳುವುದಿಲ್ಲ ನಕಲಿ ಪ್ರಕರಣಗಳಲ್ಲಿ ಸಿಕ್ಕಿಬಿದ್ದಿದ್ದಾರೆ ಮತ್ತು ಆಪ್ ನಾಯಕರನ್ನು ಜೈಲಿಗೆ ಹಾಕಿದ್ದಾರೆ ಎಂದು ಜನರು ಹೇಳುತ್ತಾರೆ. ನಾನು ನೈತಿಕ ಆಧಾರದ ಮೇಲೆ ರಾಜೀನಾಮೆ ನೀಡಲು ನಿರ್ಧರಿಸಿದ್ದು” ಎಂದು ದೆಹಲಿ ಮಾಜಿ ಸಿಎಂ ಹೇಳಿದರು.

ದೆಹಲಿ ವಿಧಾನಸಭೆ ಸಂಖ್ಯಾಬಲ 66ಕ್ಕೆ
70 ಸದಸ್ಯರ ದೆಹಲಿ ವಿಧಾನಸಭೆಯ ಹಾಲಿ ಬಲ 66 ಕ್ಕೆ ಇಳಿದಿದೆ. ಆಡಳಿತಾರೂಢ ಎಎಪಿ 59 ಶಾಸಕರನ್ನು ಹೊಂದಿದ್ದು, ಬಿಜೆಪಿ ಏಳು ಶಾಸಕರನ್ನು ಹೊಂದಿದೆ.

ಅಧಿವೇಶನದ ಮೊದಲ ದಿನವಾದ ಗುರುವಾರ ದೆಹಲಿ ವಿಧಾನಸಭೆ ಸ್ಪೀಕರ್ ರಾಮ್ ನಿವಾಸ್ ಗೋಯೆಲ್ ಅವರು ಆಡಳಿತಾರೂಢ ಎಎಪಿಯ ಮೂವರು ಸೇರಿದಂತೆ ನಾಲ್ವರು ಶಾಸಕರ ರಾಜೀನಾಮೆ ಮತ್ತು ಅನರ್ಹತೆಯನ್ನು ಘೋಷಿಸಿದರು. ಮಾಜಿ ವಿಪಕ್ಷದ ನಾಯಕ ರಾಮ್‌ವೀರ್ ಸಿಂಗ್ ಬಿಧುರಿ ಅವರು ದಕ್ಷಿಣ ದೆಹಲಿಯಿಂದ ಲೋಕಸಭೆಯ ಸಂಸದರಾಗಿ ಆಯ್ಕೆಯಾದ ನಂತರ ಜೂನ್ 18 ರಂದು ರಾಜೀನಾಮೆ ನೀಡಿದ್ದರು.

. ಎಎಪಿ ಶಾಸಕ ರಾಜೇಂದ್ರ ಪಾಲ್ ಗೌತಮ್ ಅವರು ತಮ್ಮ ವಿಧಾನಸಭಾ ಸದಸ್ಯತ್ವಕ್ಕೆ ರಾಜೀನಾಮೆ ನೀಡಿದ್ದರು. ಇಬ್ಬರು ಆಪ್ ಶಾಸಕರಾದ ರಾಜ್ ಕುಮಾರ್ ಆನಂದ್ ಮತ್ತು ಕರ್ತಾರ್ ಸಿಂಗ್ ಅವರನ್ನು ಸಂವಿಧಾನದ 10 ನೇ ಶೆಡ್ಯೂಲ್‌ನ ನಿಬಂಧನೆಗಳ ಅಡಿಯಲ್ಲಿ ಕ್ರಮವಾಗಿ ಮೇ 6 ಮತ್ತು ಜುಲೈ 10 ರಂದು  ಸದಸ್ಯತ್ವದಿಂದ ಅನರ್ಹಗೊಳಿಸಲಾಗಿದೆ.

ಟಾಪ್ ನ್ಯೂಸ್

BY-Vijayendra

CM: ಸಿದ್ದುಗೆ ಮಾದರಿ ಕೇಜ್ರಿವಾಲೋ, ರಾಮಕೃಷ್ಣ ಹೆಗಡೆಯೋ?: ಬಿ.ವೈ.ವಿಜಯೇಂದ್ರ

Modi 2

PM Modi; 10 ವರ್ಷದಲ್ಲಿ ಕಾಂಗ್ರೆಸ್‌ ಸಮರ್ಥ ವಿಪಕ್ಷವೂ ಆಗಲಿಲ್ಲ

ISREL

Israel; ಬೈರುತ್‌ ಮೇಲೆ ಕ್ಷಿಪಣಿದಾಳಿ: ಹೆಜ್ಬುಲ್ಲಾ ಕಮಾಂಡರ್‌ ಹ*ತ್ಯೆ

Udupi: ಗೀತಾರ್ಥ ಚಿಂತನೆ-47: ಅಪರೋಕ್ಷಜ್ಞಾನದ ಬಳಿಕವೂ ನಿಷ್ಕಾಮಕರ್ಮ

Udupi: ಗೀತಾರ್ಥ ಚಿಂತನೆ-47: ಅಪರೋಕ್ಷಜ್ಞಾನದ ಬಳಿಕವೂ ನಿಷ್ಕಾಮಕರ್ಮ

Mysuru-Dasara

Mysuru Dasara: ಎದೆ ಝಲ್‌ ಎನ್ನಿಸಿದ ಶಬ್ದಕ್ಕೂ ಜಗ್ಗದ ಗಜಪಡೆ

Zameer Ahmed ವಿರುದ್ಧ ನ್ಯಾಯಾಂಗ ನಿಂದನೆ ಕೇಸ್‌: ಅಬ್ರಹಾಂ Zameer Ahmed ವಿರುದ್ಧ ನ್ಯಾಯಾಂಗ ನಿಂದನೆ ಕೇಸ್‌: ಅಬ್ರಹಾಂ

Zameer Ahmed ವಿರುದ್ಧ ನ್ಯಾಯಾಂಗ ನಿಂದನೆ ಕೇಸ್‌: ಅಬ್ರಹಾಂ

Rain: ಕರಾವಳಿಯ ವಿವಿಧೆಡೆ ಸಾಧಾರಣ ಮಳೆ

Rain: ಕರಾವಳಿಯ ವಿವಿಧೆಡೆ ಸಾಧಾರಣ ಮಳೆ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Supreme Court

Supreme; ಎಲ್ಲ ಮಹಿಳೆಯರಿಗೂ ಕೌಟುಂಬಿಕ ದೌರ್ಜನ್ಯತಡೆ ಕಾಯ್ದೆ ಅನ್ವಯ

Modi 2

PM Modi; 10 ವರ್ಷದಲ್ಲಿ ಕಾಂಗ್ರೆಸ್‌ ಸಮರ್ಥ ವಿಪಕ್ಷವೂ ಆಗಲಿಲ್ಲ

Bhagavant mann

Punjab CM ಭಗವಂತ್‌ ಸಿಂಗ್‌ ಮೊಹಾಲಿ ಆಸ್ಪತ್ರೆಗೆ ದಾಖಲು !

1-him

Record; ಪೂರ್ವ ಹಿಮಾಲಯದ 20,900 ಅಡಿ ಎತ್ತರದ ಶಿಖರ ಏರಿ ದಾಖಲೆ!

Supreme Court

Godhra case ಮತ್ತೆ ಮುಂದಕ್ಕೆ ಹಾಕಲ್ಲ, ಜ.15ಕ್ಕೆ ವಿಚಾರಣೆ: ಸುಪ್ರೀಂ

MUST WATCH

udayavani youtube

ಉಡುಪಿಯ ಈ ಜಾಗದಲ್ಲಿ ರಸಂ ಪುರಿ ತುಂಬಾನೇ ಫೇಮಸ್

udayavani youtube

ತಿರುಪತಿ ಲಡ್ಡು ವಿವಾದ ಪೇಜಾವರ ಶ್ರೀಗಳು ಹೇಳಿದ್ದೇನು ?

udayavani youtube

Kaljigaದಲ್ಲಿ ದೈವದ ಅಪಪ್ರಚಾರ ನಡೆದಿಲ್ಲ, ಸಿನಿಮಾ ನೋಡಿದ ಬಳಿಕ ಈ ಬಗ್ಗೆ ಪ್ರತಿಕ್ರಿಯಿಸಿ

udayavani youtube

ನವಜಾತ ಶಿಶುಗಳಲ್ಲಿ ಶ್ರವಣ ಶಕ್ತಿ ಸಮಸ್ಯೆ ಕುರಿತು ಸಂಪೂರ್ಣ ಮಾಹಿತಿ

udayavani youtube

ಅಂತರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆ ಅಂಗವಾಗಿ ತಾಲೂಕು ಮಟ್ಟದ ಮಾನವ ಸರಪಳಿ ಕಾರ್ಯಕ್ರಮ

ಹೊಸ ಸೇರ್ಪಡೆ

BY-Vijayendra

CM: ಸಿದ್ದುಗೆ ಮಾದರಿ ಕೇಜ್ರಿವಾಲೋ, ರಾಮಕೃಷ್ಣ ಹೆಗಡೆಯೋ?: ಬಿ.ವೈ.ವಿಜಯೇಂದ್ರ

police USA

California: ದೇಗುಲ ಧ್ವಂಸ ಮಾಡಿದ ದುಷ್ಕರ್ಮಿಗಳು

Supreme Court

Supreme; ಎಲ್ಲ ಮಹಿಳೆಯರಿಗೂ ಕೌಟುಂಬಿಕ ದೌರ್ಜನ್ಯತಡೆ ಕಾಯ್ದೆ ಅನ್ವಯ

Modi 2

PM Modi; 10 ವರ್ಷದಲ್ಲಿ ಕಾಂಗ್ರೆಸ್‌ ಸಮರ್ಥ ವಿಪಕ್ಷವೂ ಆಗಲಿಲ್ಲ

ISREL

Israel; ಬೈರುತ್‌ ಮೇಲೆ ಕ್ಷಿಪಣಿದಾಳಿ: ಹೆಜ್ಬುಲ್ಲಾ ಕಮಾಂಡರ್‌ ಹ*ತ್ಯೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.