ಭಾರತದಲ್ಲೂ ಲಸಿಕೆಗೆ ಒಪ್ಪಿಗೆ: ಆಕ್ಸ್‌ಫ‌ರ್ಡ್‌-ಆಸ್ಟ್ರಾಜೆನೆಕಾ ಲಸಿಕೆಗೆ ತಜ್ಞರ ಸಮ್ಮತಿ


Team Udayavani, Jan 2, 2021, 8:11 AM IST

Covid-v

ಹೊಸದಿಲ್ಲಿ: ನಿರೀಕ್ಷೆಯಂತೆಯೇ 2021 ಲಸಿಕೆಯ ಭರವಸೆಯೊಂದಿಗೆ ಆರಂಭವಾಗಿದೆ. ಪುಣೆಯ ಸೀರಮ್‌ ಸಂಸ್ಥೆಯಲ್ಲಿ ಅಭಿವೃದ್ಧಿಪಡಿಸಲಾದ ಆಕ್ಸ್‌ ಫ‌ರ್ಡ್‌-ಆಸ್ಟ್ರಾಜೆನೆಕಾ ಲಸಿಕೆ ಕೋವಿಶೀಲ್ಡ್‌ಗೆ ಭಾರತ ಔಷಧ ನಿಯಂತ್ರಣ ಪ್ರಾಧಿಕಾರ(ಡಿಸಿಜಿಐ) ನೇಮಿಸಿದ್ದ ಪರಿಶೀಲನ ಸಮಿತಿ ಒಪ್ಪಿಗೆ ನೀಡಿದೆ. ಕೆಲವು ಷರತ್ತುಗಳ ಜತೆಗೆ ತುರ್ತು ಬಳಕೆಗೆ ಅವಕಾಶ ನೀಡಬಹುದು ಎಂದು ಹೇಳಿದೆ. ಅಲ್ಲದೆ ಪೂರ್ಣವಾಗಿ ಸ್ವದೇಶಿ ಸಂಶೋಧನೆಯೊಂದಿಗೆ ಭಾರತ್‌ ಬಯೋಟೆಕ್‌ ಅಭಿವೃದ್ಧಿಪಡಿಸುತ್ತಿರುವ ಕೋವ್ಯಾಕ್ಸಿನ್‌ಗೂ ಇದೇ ಸಮಿತಿ ಸದ್ಯವೇ ಒಪ್ಪಿಗೆ ನೀಡುವ ಸಾಧ್ಯತೆ ಇದೆ. ಶುಕ್ರವಾರ ನಡೆದ ತಜ್ಞರ ಸಭೆಯಲ್ಲಿ ಈ ಎರಡೂ ಲಸಿಕೆಗಳ ಬಗ್ಗೆ ಚರ್ಚಿಸಲಾಗಿದೆ.

ರಾಯಿಟರ್ಸ್‌ ಸುದ್ದಿ ಸಂಸ್ಥೆಯ ವರದಿಯ ಪ್ರಕಾರ, ಕೋವಿಶೀಲ್ಡ್‌ಗೆ ಡಿಸಿಜಿಐ ಕೂಡ ಒಪ್ಪಿಗೆ ನೀಡಿದ್ದು, ಅಧಿಕೃತ ಘೋಷಣೆಯಾಗಬೇಕಿದೆ. ಸೀರಮ್‌ ಸಂಸ್ಥೆ ಶನಿವಾರ ಬೆಳಗ್ಗೆಯಿಂದಲೇ ಶೀತಲಾಗಾರಗಳಿಗೆ ಲಸಿಕೆಯನ್ನು ಸಾಗಿಸಲಿದೆ ಎಂದೂ ಅದು ಹೇಳಿದೆ. ಮುಂದಿನ ಬುಧವಾರದಿಂದಲೇ ದೇಶದಲ್ಲಿ ಲಸಿಕೆ ನೀಡುವ ಸಂಭವವಿದೆ. ಬೇರೆ ಲಸಿಕೆಗಳಿಗೆ ಹೋಲಿಕೆ ಮಾಡಿದರೆ ಆಕ್ಸ್‌ಫ‌ರ್ಡ್‌-ಆಸ್ಟ್ರಾಜೆನೆಕಾ ಬೆಲೆ ತೀರಾ ಕಡಿಮೆ. ಹೀಗಾಗಿ ಅಭಿವೃದ್ಧಿಶೀಲ ಮತ್ತು ಬಡ ದೇಶಗಳ ಪಾಲಿಗೆ ಈ ಲಸಿಕೆ ಸಂಜೀವಿನಿಯಾಗಬಹುದು.

ಇಂದು ದೇಶಾದ್ಯಂತ ಡ್ರೈ ರನ್‌
ಕೇಂದ್ರ ಸರಕಾರದ ಸೂಚನೆಯಂತೆ ಶನಿವಾರ ದೇಶದ ಎಲ್ಲ ರಾಜ್ಯಗಳು ಲಸಿಕೆ ವಿತರಣೆಯ ಪ್ರಾತ್ಯಕ್ಷಿಕೆ ನಡೆಸಲಿವೆ. ಲಸಿಕೆ ನೀಡುವುದೊಂದನ್ನು ಬಿಟ್ಟು, ಉಳಿದೆಲ್ಲ ಪ್ರಕ್ರಿಯೆಗಳು ನಡೆಯಲಿವೆ. ಜತೆಯಲ್ಲಿ ಕೋ-ವಿನ್‌ ಆ್ಯಪ್‌ ಅನ್ನೂ ಪರೀಕ್ಷೆಗೆ ಒಳಪಡಿಸಲಾಗುತ್ತದೆ.

16 ಆರೋಗ್ಯ ಕೇಂದ್ರಗಳಲ್ಲಿ ಡ್ರೈ ರನ್‌
ರಾಜ್ಯದ ಐದು ಜಿಲ್ಲೆಗಳ 16 ಆರೋಗ್ಯ ಕೇಂದ್ರಗಳಲ್ಲಿ ಶನಿವಾರ ಬೆಳಗ್ಗೆ ಕೊರೊನಾ ಲಸಿಕೆಯ ಡ್ರೈ ರನ್‌ ಜರಗಲಿದೆ. ಬೆಂಗಳೂರು, ಕಲಬುರಗಿ, ಶಿವಮೊಗ್ಗ, ಬೆಳಗಾವಿ, ಮೈಸೂರು ಜಿಲ್ಲೆಗಳ ತಲಾ 3 ಆರೋಗ್ಯ ಕೇಂದ್ರಗಳನ್ನು ಆಯ್ಕೆ ಮಾಡಲಾಗಿದ್ದು, ಒಂದು ಆರೋಗ್ಯ ಕೇಂದ್ರದಲ್ಲಿ ತಲಾ ಐವರು ಲಸಿಕೆ ಸಿಬಂದಿ ಇರಲಿದ್ದಾರೆ. ತಲಾ 25 ಪ್ರಾತ್ಯಕ್ಷಿಕೆ ಫ‌ಲಾನುಭವಿಗಳನ್ನು ನಿಗದಿಪಡಿಸಲಾಗಿದೆ. ಡ್ರೈ ರನ್‌ ಈ ಕುರಿತು ಶುಕ್ರವಾರ ಆರೋಗ್ಯ ಇಲಾಖೆಯ 100 ಸಿಬಂದಿಗೆ ಕೇಂದ್ರ ಸರಕಾರ ತರಬೇತಿ ನೀಡಿದೆ.

ಶುಕ್ರವಾರ ಆರೋಗ್ಯ ಸಿಬಂದಿಗೆ ತರಬೇತಿ ನೀಡಲಾಗಿದೆ. ಶನಿವಾರ ಬೆಳಗ್ಗೆ ಪ್ರತೀ ಜಿಲ್ಲೆಯ ತಲಾ ಒಂದು ಪ್ರಾಥಮಿಕ, ತಾಲೂಕು ಆರೋಗ್ಯ ಕೇಂದ್ರ, ಜಿಲ್ಲಾ ಆಸ್ಪತ್ರೆಗಳಲ್ಲಿ ಡ್ರೈ ರನ್‌ ನಡೆಯಲಿದೆ. ಲಸಿಕೆ ಬಂದ ಕೂಡಲೇ ಹಂಚಲು ಇದು ನೆರವಾಗಲಿದೆ.
– ಡಾ| ಕೆ.ಸುಧಾಕರ್‌,  ಆರೋಗ್ಯ, ವೈದ್ಯಕೀಯ ಸಚಿವ

ಎಷ್ಟು ಲಸಿಕೆ ಸಿದ್ಧ?
7.5 ಕೋಟಿ  ಜನವರಿ ಮೊದಲ ವಾರಾಂತ್ಯಕ್ಕೆ 10 ಕೋಟಿ

2.30 ಲಕ್ಷ-ಲಸಿಕೆ ನೀಡುವವರು 51 ಸಾವಿರ- ಲಸಿಕೆ ಕೇಂದ್ರಗಳು

ಲಸಿಕೆಯ ದರ
ಸರಕಾರಕ್ಕೆ: ಡೋಸ್‌ಗೆ 219 ರೂ.
ಪ್ರತೀ ವ್ಯಕ್ತಿಗೆ 438 ರೂ. ಖಾಸಗಿ: ಪ್ರತೀ ವ್ಯಕ್ತಿಗೆ 700ರಿಂದ 800 ರೂ.

ಟಾಪ್ ನ್ಯೂಸ್

Uchila Shree Mahalaxmi temple: 400 ಗ್ರಾಂ ತೂಕದ ಲಕ್ಷ್ಮೀ ಸರ ಸಮರ್ಪಣೆ

Uchila Shree Mahalaxmi Temple: 400 ಗ್ರಾಂ ತೂಕದ ಲಕ್ಷ್ಮೀ ಸರ ಸಮರ್ಪಣೆ

BJP Protest: ಸಿದ್ದರಾಮಯ್ಯರದ್ದು ಲೂಟಿಕೋರ ಸರಕಾರ: ನಳಿನ್‌ ಕುಮಾರ್‌ ಕಟೀಲು

BJP Protest: ಸಿದ್ದರಾಮಯ್ಯರದ್ದು ಲೂಟಿಕೋರ ಸರಕಾರ: ನಳಿನ್‌ ಕುಮಾರ್‌ ಕಟೀಲು

​​Bantwal, ಪುತ್ತೂರಿನ ಮಳೆ ಹಾನಿ ಪ್ರದೇಶಕ್ಕೆ ದಕ್ಷಿಣ ಕನ್ನಡ ಜಿಲ್ಲಾಧಿಕಾರಿ ಭೇಟಿ

​​Bantwal, ಪುತ್ತೂರಿನ ಮಳೆ ಹಾನಿ ಪ್ರದೇಶಕ್ಕೆ ದಕ್ಷಿಣ ಕನ್ನಡ ಜಿಲ್ಲಾಧಿಕಾರಿ ಭೇಟಿ

1-saasdsdsa-d

Vikram Misri ಭಾರತದ ಹೊಸ ವಿದೇಶಾಂಗ ಕಾರ್ಯದರ್ಶಿ

Manjunath Bhandary ಪ್ರಾಕೃತಿಕ ವಿಕೋಪ ಮೃತರ ಕುಟುಂಬಕ್ಕೆ ಹೆಚ್ಚಿನ ಪರಿಹಾರಕ್ಕೆ ಮನವಿ

Manjunath Bhandary ಪ್ರಾಕೃತಿಕ ವಿಕೋಪ ಮೃತರ ಕುಟುಂಬಕ್ಕೆ ಹೆಚ್ಚಿನ ಪರಿಹಾರಕ್ಕೆ ಮನವಿ

Subrahmanya: ಕುಮಾರ ಧಾರೆಯಲ್ಲಿ ನೀರಿನ ಮಟ್ಟ ಇಳಿಕೆ

Subrahmanya: ಕುಮಾರ ಧಾರೆಯಲ್ಲಿ ನೀರಿನ ಮಟ್ಟ ಇಳಿಕೆ

Mangaluru ಬೀದಿದೀಪ ಕಂಬಗಳ ಫ್ಯೂಸ್‌ ಬಾಕ್ಸ್‌ಗಳಿಗೆ ಟ್ರಿಪ್ಪರ್‌ ಅಳವಡಿಕೆ

Mangaluru ಬೀದಿದೀಪ ಕಂಬಗಳ ಫ್ಯೂಸ್‌ ಬಾಕ್ಸ್‌ಗಳಿಗೆ ಟ್ರಿಪ್ಪರ್‌ ಅಳವಡಿಕೆ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ED

ED; ದಿಲ್ಲಿ ಅಬಕಾರಿ ನೀತಿ ಹಗರಣ: 9ನೇ ಆರೋಪಪಟ್ಟಿ ಸಲ್ಲಿಕೆ

MONEY (2)

Small savings ಮೇಲಿನ ಬಡ್ಡಿದರದಲ್ಲಿ ಬದಲಾವಣೆ ಇಲ್ಲ

1-saasdsdsa-d

Vikram Misri ಭಾರತದ ಹೊಸ ವಿದೇಶಾಂಗ ಕಾರ್ಯದರ್ಶಿ

stalin

NEET ಪರೀಕ್ಷೆಯಿಂದ ತಮಿಳುನಾಡನ್ನು ಹೊರಗಿಡುವ ನಿರ್ಣಯ ಅಂಗೀಕಾರ

1-wewewewqewq

Telangana;ಗಾಜಿನ ಕಾರ್ಖಾನೆ ಸ್ಫೋಟ: 5 ಸಾವು

MUST WATCH

udayavani youtube

ವಿಧಿಯಾಟಕ್ಕೆ ಬಲಿಯಾದ ಅಂಧರ ಪುಟ್ ಬಾಲ್ ತಂಡದ ಕ್ಯಾಪ್ಟನ್

udayavani youtube

ಮಾತು ಬರದ ಮಗುವಿಗೆ ಮಾತು ಬರಿಸಿದ ಕಾಪು ಮಾರಿಯಮ್ಮ | ಕಾಪುವಿನ ಅಮ್ಮನ ಪವಾಡ

udayavani youtube

ಡಿಸಿಎಂ ವಿಚಾರ ಇನ್ನೊಮ್ಮೆ ಮಾತನಾಡೋಣ; ಕುಕ್ಕೆಯಲ್ಲಿ ಡಿ.ಕೆ.ಶಿವಕುಮಾರ್

udayavani youtube

ಆನೆಗುಡ್ಡೆ ಶ್ರೀ ವಿನಾಯಕ ದೇಗುಲದಲ್ಲಿ ಅಂಗಾರ ಸಂಕಷ್ಟಹರ ಚತುರ್ಥಿ|

udayavani youtube

ಬಸ್ಸೇರಿ ಸಮಸ್ಯೆ ಆಲಿಸಿದ ಶಾಸಕ ರೈ

ಹೊಸ ಸೇರ್ಪಡೆ

ED

ED; ದಿಲ್ಲಿ ಅಬಕಾರಿ ನೀತಿ ಹಗರಣ: 9ನೇ ಆರೋಪಪಟ್ಟಿ ಸಲ್ಲಿಕೆ

Uchila Shree Mahalaxmi temple: 400 ಗ್ರಾಂ ತೂಕದ ಲಕ್ಷ್ಮೀ ಸರ ಸಮರ್ಪಣೆ

Uchila Shree Mahalaxmi Temple: 400 ಗ್ರಾಂ ತೂಕದ ಲಕ್ಷ್ಮೀ ಸರ ಸಮರ್ಪಣೆ

BJP Protest: ಸಿದ್ದರಾಮಯ್ಯರದ್ದು ಲೂಟಿಕೋರ ಸರಕಾರ: ನಳಿನ್‌ ಕುಮಾರ್‌ ಕಟೀಲು

BJP Protest: ಸಿದ್ದರಾಮಯ್ಯರದ್ದು ಲೂಟಿಕೋರ ಸರಕಾರ: ನಳಿನ್‌ ಕುಮಾರ್‌ ಕಟೀಲು

MONEY (2)

Small savings ಮೇಲಿನ ಬಡ್ಡಿದರದಲ್ಲಿ ಬದಲಾವಣೆ ಇಲ್ಲ

​​Bantwal, ಪುತ್ತೂರಿನ ಮಳೆ ಹಾನಿ ಪ್ರದೇಶಕ್ಕೆ ದಕ್ಷಿಣ ಕನ್ನಡ ಜಿಲ್ಲಾಧಿಕಾರಿ ಭೇಟಿ

​​Bantwal, ಪುತ್ತೂರಿನ ಮಳೆ ಹಾನಿ ಪ್ರದೇಶಕ್ಕೆ ದಕ್ಷಿಣ ಕನ್ನಡ ಜಿಲ್ಲಾಧಿಕಾರಿ ಭೇಟಿ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.