Assam ಹೆದ್ದಾರಿ ಬಳಿ ಬಿಜೆಪಿ ಮಹಿಳಾ ನಾಯಕಿಯ ಮೃತದೇಹ ಪತ್ತೆ ; ತನಿಖೆ
Team Udayavani, Jun 12, 2023, 3:18 PM IST
ಗೋಲ್ಪಾರಾ: ಆಘಾತಕಾರಿ ಘಟನೆಯಲ್ಲಿ ಅಸ್ಸಾಂನ ಗೋಲ್ಪಾರಾ ಜಿಲ್ಲೆಯ ಕೃಷ್ಣಾಯ್ನ ಸಲ್ಪಾರಾದಲ್ಲಿ ರಾಷ್ಟ್ರೀಯ ಹೆದ್ದಾರಿ 17 ರ ಬಳಿ ಬಿಜೆಪಿ ಮಹಿಳಾ ನಾಯಕಿಯ ಶವ ಭಾನುವಾರ ಪತ್ತೆಯಾಗಿದೆ. ಮೂಲಗಳ ಪ್ರಕಾರ ಮೃತದೇಹವನ್ನು ಗೋಲ್ಪಾರಾ ಜಿಲ್ಲಾ ಬಿಜೆಪಿ ಕಾರ್ಯದರ್ಶಿ ಜೊನಾಲಿ ನಾಥ್ ಎಂದು ಗುರುತಿಸಲಾಗಿದೆ.
ಜೋನಾಲಿ ನಾಥ್ ಅವರನ್ನು ಯೋಜಿತ ರೀತಿಯಲ್ಲಿ ಹತ್ಯೆ ಮಾಡಿ ಶವವನ್ನು ರಾಷ್ಟ್ರೀಯ ಹೆದ್ದಾರಿ ಪಕ್ಕದಲ್ಲಿ ಎಸೆದಿದ್ದಾರೆ ಎಂದು ಪೊಲೀಸ್ ಅಧಿಕಾರಿಗಳು ಶಂಕಿಸಿದ್ದಾರೆ. ಘಟನೆಯ ಕುರಿತು ತನಿಖೆ ನಡೆಯುತ್ತಿದ್ದು, ಹೆಚ್ಚಿನ ವಿವರಗಳನ್ನು ನಿರೀಕ್ಷಿಸಲಾಗುತ್ತಿದೆ.
ಪಕ್ಷದ ಸಹೋದ್ಯೋಗಿಗಳು ಟ್ವಿಟರ್ನಲ್ಲಿ ಜೊನಾಲಿ ನಾಥ್ ಅವರ ನಿಧನಕ್ಕೆ ಸಂತಾಪ ಸೂಚಿಸಿದ್ದು, ಅಸ್ಸಾಂ ಬಿಜೆಪಿಯ ವಕ್ತಾರ ಜ್ಯೂರಿ ಶರ್ಮಾ ಬೊರ್ಡೊಲೊಯ್ ಅವರು ನಾಥ್ ಅವರು ತಮ್ಮ “ಅಚಲವಾದ ಬದ್ಧತೆ ಮತ್ತು ದಣಿವರಿಯದ ಪ್ರಯತ್ನಗಳಿಗೆ” ಹೆಸರುವಾಸಿಯಾಗಿದ್ದರು ಎಂದು ಹೇಳಿದ್ದಾರೆ.
“ನಾವು ದುಃಖದಿಂದ ತುಂಬಿದ್ದೇವೆ, ಆದರೂ ಆಕೆಯ ಅಕಾಲಿಕ ಮರಣದ ಸುತ್ತಲಿನ ಸನ್ನಿವೇಶಗಳ ಮೇಲೆ ಬೆಳಕು ಚೆಲ್ಲಲು ಸಂಪೂರ್ಣ ತನಿಖೆ ನಡೆಸಲಾಗುವುದು ಎಂದು ನಾವು ಭರವಸೆ ನೀಡುತ್ತೇವೆ” ಎಂದು ಶರ್ಮಾ ಟ್ವೀಟ್ ಮಾಡಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Foreign affairs, ಕೃಷಿ ಶಿಕ್ಷಣ, ಸ್ಥಾಯಿ ಸಮಿತಿಗಳ ಅಧ್ಯಕ್ಷ ಸ್ಥಾನ ಕಾಂಗ್ರೆಸ್ ಪಾಲು
CBI ಪಂಜರದ ಗಿಳಿ: ಸುಪ್ರೀಂ ಅಭಿಪ್ರಾಯಕ್ಕೆ ಉಪರಾಷ್ಟ್ರಪತಿ ಕೆಂಡ
J&K ಸಂಸದ ಇಂಜಿನಿಯರ್ ರಶೀದ್ ಗೆ ಕೈಕೊಟ್ಟು ಎನ್ ಸಿ ಸೇರಿದ ಅಭ್ಯರ್ಥಿ!
Modi 100 days; ಮುಂದಿನ 1000 ವರ್ಷಗಳ ಅಭಿವೃದ್ಧಿಗೆ ತಳಹದಿ ಸಿದ್ಧಪಡಿಸಲಾಗುತ್ತಿದೆ
J-K ಉಗ್ರವಾದ ಯಾರೂ ಪುನರುಜ್ಜೀವನಗೊಳಿಸುವ ಧೈರ್ಯ ತೋರದಂತೆ ಸಮಾಧಿ: ಶಾ
MUST WATCH
ನವಜಾತ ಶಿಶುಗಳಲ್ಲಿ ಶ್ರವಣ ಶಕ್ತಿ ಸಮಸ್ಯೆ ಕುರಿತು ಸಂಪೂರ್ಣ ಮಾಹಿತಿ
ಅಂತರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆ ಅಂಗವಾಗಿ ತಾಲೂಕು ಮಟ್ಟದ ಮಾನವ ಸರಪಳಿ ಕಾರ್ಯಕ್ರಮ
ಈಟ್ ರಾಜಾ ಶಾಪ್ ನಲ್ಲಿ ಜ್ಯೂಸ್ ಕುಡಿಯೋದಷ್ಟೇ ಅಲ್ಲ ತಿನ್ನಲೂ ಬಹುದು
ಅಯ್ಯೋ…ಸಂತೆಕಟ್ಟೆ ಅಂಡರ್ ಪಾಸ್ ಪ್ರಯಾಣ ನಿತ್ಯ ನರಕ!
ನಾಗಮಂಗಲ ಗಣಪತಿ ಗಲಾಟೆ ಪ್ರಕರಣ ಸರ್ಕಾರದ ವಿರುದ್ಧ ಸಿ.ಟಿ.ರವಿ ವಾಗ್ದಾಳಿ
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.