200ಕ್ಕೂ ಹೆಚ್ಚು ಗ್ರಾಮಗಳು ಜಲಾವೃತ; ಅಸ್ಸಾಂನಲ್ಲಿ ತೀವ್ರಗೊಂಡ ಮಳೆ-ಪ್ರವಾಹ

ಪ್ರವಾಹಕ್ಕೆ 3 ಮಂದಿ ಬಲಿ

Team Udayavani, May 16, 2022, 7:38 PM IST

200ಕ್ಕೂ ಹೆಚ್ಚು ಗ್ರಾಮಗಳು ಜಲಾವೃತ; ಅಸ್ಸಾಂನಲ್ಲಿ ತೀವ್ರಗೊಂಡ ಮಳೆ-ಪ್ರವಾಹ

ನವದೆಹಲಿ: ಧಾರಾಕಾರ ಮಳೆ, ಪ್ರವಾಹ, ಭೂಕುಸಿತ, ಭೂಕಂಪ.ನಿರಂತರ ಪ್ರಾಕೃತಿಕ ವಿಕೋಪದಿಂದ ಅಸ್ಸಾಂ ತತ್ತರಿಸಿದೆ. ಕಳೆದ ಕೆಲವು ದಿನಗಳಿಂದ ಈಶಾನ್ಯ ರಾಜ್ಯದಲ್ಲಿ ಭಾರೀ ಮಳೆಯಾಗುತ್ತಿದ್ದು, ಹಲವು ಪ್ರದೇಶಗಳು ಜಲಾವೃತವಾಗಿವೆ. ಇದರ ನಡುವೆಯೇ 12 ಗ್ರಾಮಗಳಲ್ಲಿ ಭೂಕುಸಿತ ಸಂಭವಿಸಿದ್ದು, ಮಗು ಸೇರಿದಂತೆ 3 ಮಂದಿ ಮೃತಪಟ್ಟಿದ್ದಾರೆ. ಶನಿವಾರವಷ್ಟೇ ಪ್ರವಾಹಕ್ಕೆ 3 ಮಂದಿ ಬಲಿಯಾಗಿದ್ದರು.

ಇನ್ನೊಂದೆಡೆ, ಅಸ್ಸಾಂನಲ್ಲಿ ಮತ್ತು ಮೇಘಾಲಯದಲ್ಲಿ ಸೋಮವಾರ 24 ಗಂಟೆಗಳ ಅವಧಿಯಲ್ಲಿ 3.4 ತೀವ್ರತೆಯಲ್ಲಿ ಭೂಮಿಯು ಎರಡು ಬಾರಿ ಕಂಪಿಸಿದೆ. ಯಾವುದೇ ಸಾವು ನೋವು, ಆಸ್ತಿಪಾಸ್ತಿ ಹಾನಿ ವರದಿಯಾಗಿಲ್ಲ.

ಡಿಕೋಕ್‌ಚೆರ್ರಾ ರೈಲು ನಿಲ್ದಾಣದಲ್ಲಿ ಮಳೆ ಹಾಗೂ ಪ್ರವಾಹದಿಂದ ಹಳಿಗಳು ಮುಳುಗಡೆಯಾಗಿದ್ದು, ನೂರಾರು ಮಂದಿ ನಿಲ್ದಾಣದಲ್ಲೇ ಸಿಲುಕುವಂತಾಗಿದೆ. ಈ ಹಿನ್ನೆಲೆಯಲ್ಲಿ 119 ಪ್ರಯಾಣಿಕರನ್ನು ವಾಯುಪಡೆ ಹೆಲಿಕಾಪ್ಟರ್‌ಗಳ ಮೂಲಕ ಏರ್‌ಲಿಫ್ಟ್ ಮಾಡಲಾಗಿದೆ. ಪ್ರವಾಹದಿಂದಾಗಿ ರಸ್ತೆಗಳು, ಸೇತುವೆ, ನೀರಾವರಿ ಕಾಲುವೆಗಳು ಹಾನಿಗೀಡಾಗಿವೆ.

ಹಿಮಾಚಲದಲ್ಲೂ ಮಳೆ:
ಹಿಮಾಚಲ ಪ್ರದೇಶದಲ್ಲೂ ಮಳೆ ಅಬ್ಬರಿಸತೊಡಗಿದ್ದು, ಬುಧವಾರದವರೆಗೂ ಇದೇ ಸ್ಥಿತಿ ಮುಂದುವರಿಯಲಿದೆ ಎಂದು ಹವಾಮಾನ ಇಲಾಖೆ ಹೇಳಿದೆ. ಅರುಣಾಚಲ ಪ್ರದೇಶದಲ್ಲಿ ಸೋಮವಾರ ಸಂಭವಿಸಿದ ಭೂಕುಸಿತದಲ್ಲಿ ನಾಲ್ವರು ಮೃತಪಟ್ಟಿದ್ದಾರೆ.

ಹವಾಮಾನ ವೈಪರೀತ್ಯ: ಪರಿಸ್ಥಿತಿ ವಿಕೋಪಕ್ಕೆ
ಒಂದೇ ದೇಶ. ಆದರೆ, ಒಂದು ಕಡೆ ಮಳೆ-ಪ್ರವಾಹ, ಮತ್ತೊಂದು ಕಡೆ ಬಿಸಿಗಾಳಿ, ಮಗದೊಂದು ಕಡೆ ಭೂಕುಸಿತ. ಇದು ಭಾರತದಲ್ಲಿ ಹೆಚ್ಚುತ್ತಿರುವ ಹವಾಮಾನ ವೈಪರೀತ್ಯದ ಚಿತ್ರಣ.

ದೆಹಲಿಯಲ್ಲಿ ಬಿಸಿಲಿನ ಝಳವು 49 ಡಿ.ಸೆ. ದಾಟಿದ್ದರೆ, ದಕ್ಷಿಣದ ರಾಜ್ಯಗಳಲ್ಲಿ ಮಳೆ ತಾಂಡವವಾಡುತ್ತಿದೆ, ಈಶಾನ್ಯದಲ್ಲಿ ಪ್ರವಾಹ, ಭೂಕುಸಿತವು ಜನಜೀವನವನ್ನು ತತ್ತರಿಸಿದೆ. ಮುಂದಿನ ದಿನಗಳಲ್ಲಿ ಭಾರತವು ಇಂತಹ ಮತ್ತಷ್ಟು ವೈಪರೀತ್ಯಗಳಿಗೆ ಸಾಕ್ಷಿಯಾಗಲಿದೆ ಎಂದು ಪರಿಸರ ವಿಜ್ಞಾನಿಗಳು ಎಚ್ಚರಿಸಿದ್ದಾರೆ.

ಅಸ್ಸಾಂ ಭೂಕುಸಿತದಿಂದ ಮೃತಪಟ್ಟವರು- 3
ಪ್ರವಾಹದಿಂದ ನಿರ್ವಸಿತರಾದವರು – 57,000
ಜಲಾವೃತಗೊಂಡ ಗ್ರಾಮಗಳು- 222
ಮುಳುಗಿದ ಕೃಷಿ ಭೂಮಿ- 10,321.44 ಹೆಕ್ಟೇರ್‌
ಹಾನಿಗೀಡಾದ ಮನೆಗಳು – 200

ಟಾಪ್ ನ್ಯೂಸ್

Kuruburu-Shanta

Air Lift: ಪಂಜಾಬ್‌ನಲ್ಲಿ ರೈತ ಮುಖಂಡ ಶಾಂತಕುಮಾರ್‌ಗೆ ಅಪಘಾತ; ಬೆಂಗಳೂರಿಗೆ ಏರ್‌ಲಿಫ್ಟ್‌

Kollywood: ಖ್ಯಾತ ನಟ ಯೋಗಿ ಬಾಬು ಕಾರು ಅಪಘಾತ?: ನಟ ಹೇಳಿದ್ದೇನು?

Kollywood: ಖ್ಯಾತ ನಟ ಯೋಗಿ ಬಾಬು ಕಾರು ಅಪಘಾತ?: ನಟ ಹೇಳಿದ್ದೇನು?

naki

Naki Sumo: ಮಗುವನ್ನು ಅಳಿಸುವ ವಿಚಿತ್ರ ಆಚರಣೆ !; ನಡೆಯುವುದಾದರು ಎಲ್ಲಿ?

mohan bhagwat

RSS; ಹಿಂದೂ ಸಮಾಜ ದೇಶದ ಜವಾಬ್ದಾರಿಯುತ ಸಮುದಾಯ: ಮೋಹನ್ ಭಾಗವತ್

IPL 2025: ಐಪಿಎಲ್‌ ವೇಳಾಪಟ್ಟಿ ಪ್ರಕಟ; KKR vs RCB ಮೊದಲ ಮುಖಾಮುಖಿ- ಇಲ್ಲಿದೆ ಪಟ್ಟಿ

IPL 2025: ಐಪಿಎಲ್‌ ವೇಳಾಪಟ್ಟಿ ಪ್ರಕಟ; KKR vs RCB ಮೊದಲ ಮುಖಾಮುಖಿ- ಇಲ್ಲಿದೆ ಪಟ್ಟಿ

Lalu

Controversy; ಮಹಾಕುಂಭ ‘ಅರ್ಥಹೀನ’ ಎಂದ ಲಾಲು ಪ್ರಸಾದ್ ಯಾದವ್

1-sidda

Mahakumbh; ಸಿದ್ದರಾಮಯ್ಯನವರೇ 5 ವರ್ಷ ಸಿಎಂ ಆಗಿರಲಿ: ಅಭಿಮಾನಿಯ ಪ್ರಾರ್ಥನೆ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

mohan bhagwat

RSS; ಹಿಂದೂ ಸಮಾಜ ದೇಶದ ಜವಾಬ್ದಾರಿಯುತ ಸಮುದಾಯ: ಮೋಹನ್ ಭಾಗವತ್

Lalu

Controversy; ಮಹಾಕುಂಭ ‘ಅರ್ಥಹೀನ’ ಎಂದ ಲಾಲು ಪ್ರಸಾದ್ ಯಾದವ್

1sadgu

Pariksha Pe Charcha: ಸ್ಮಾರ್ಟ್ ಫೋನ್‌ಗಿಂತಲೂ ನೀವು ಸ್ಮಾರ್ಟ್ ಆಗಬೇಕು:ಸದ್ಗುರು

15-monalisa

Mahakumbh sensation: ಕೇರಳದಲ್ಲಿ ಕುಂಭಮೇಳದ ಮೊನಾಲಿಸಾ ಹವಾ

Andhra Pradesh: ಚಿಕ್ಕಮ್ಮನ ಮೇಲೆರಗಿದ ಮಗನನ್ನೇ ಕೊಚ್ಚಿ ಕೊಂದ ತಾಯಿ!

Andhra Pradesh: ಚಿಕ್ಕಮ್ಮನ ಮೇಲೆರಗಿದ ಮಗನನ್ನೇ ಕೊಚ್ಚಿ ಕೊಂದ ತಾಯಿ!

MUST WATCH

udayavani youtube

ನಿಮ್ಮ ಅಚ್ಚುಮೆಚ್ಚಿನ ; ಆರೋಗ್ಯಕರ ಪಾನಿಪುರಿ ಸವಿಯಲು ಇಲ್ಲಿಗೆ ಬನ್ನಿ

udayavani youtube

ಭೀಕರ ಹಿಟ್ & ರನ್ ಸಂತ್ರಸ್ತರ ಪರ ನಿಂತ ಪುತ್ತೂರು ಶಾಸಕ ಅಶೋಕ್ ರೈ

udayavani youtube

ಶ್ರೀ ಬ್ರಹ್ಮಬೈದರ್ಕಳ ನೇಮೋತ್ಸವ, ಮಾಣಿಬಾಲೆ ನೇಮೋತ್ಸವ

udayavani youtube

ಸಾಹಿತ್ಯಾಸಕ್ತಿಯ ಚಹಾ ಅಂಗಡಿ

udayavani youtube

ಇಲ್ಲಿ ಪ್ರತಿಯೊಂದು ಗೋವುಗಳಿಗೂ ವಿಭಿನ್ನ ಹೆಸರಿದೆ

ಹೊಸ ಸೇರ್ಪಡೆ

20

Udayavani-MIC ನಮ್ಮ ಸಂತೆ ಸಂಭ್ರಮ: ಜೇನುಗೂಡು, ಜೇನು ಹನಿ

Kuruburu-Shanta

Air Lift: ಪಂಜಾಬ್‌ನಲ್ಲಿ ರೈತ ಮುಖಂಡ ಶಾಂತಕುಮಾರ್‌ಗೆ ಅಪಘಾತ; ಬೆಂಗಳೂರಿಗೆ ಏರ್‌ಲಿಫ್ಟ್‌

Kollywood: ಖ್ಯಾತ ನಟ ಯೋಗಿ ಬಾಬು ಕಾರು ಅಪಘಾತ?: ನಟ ಹೇಳಿದ್ದೇನು?

Kollywood: ಖ್ಯಾತ ನಟ ಯೋಗಿ ಬಾಬು ಕಾರು ಅಪಘಾತ?: ನಟ ಹೇಳಿದ್ದೇನು?

19

Bharamasagara: ವಿದ್ಯುತ್ ಕಿಡಿಗೆ ಎರಡು‌ ಮೇವಿನ ಬಣವೆ ಸಂಪೂರ್ಣ ಭಸ್ಮ

1-tengu-dsdsa

Udayavani-MIC ನಮ್ಮ ಸಂತೆ: ತೆಂಗಿನ ಗರಟೆಯಲ್ಲಿ ಅರಳಿದ ಕಲಾಕೃತಿ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.