ದೇಶವನ್ನು ಸರ್ವಾಧಿಕಾರದಿಂದ ರಕ್ಷಿಸಲು ಎಷ್ಟು ಭಾರಿಯಾದರೂ ಜೈಲಿಗೆ ಹೋಗಲು ಸಿದ್ದ: ಕೇಜ್ರಿವಾಲ್

ಜೂನ್ 2 ರಂದು ಮತ್ತೆ ಜೈಲಿಗೆ ಹೋಗುವೆ...

Team Udayavani, May 31, 2024, 4:16 PM IST

ದೇಶವನ್ನು ಸರ್ವಾಧಿಕಾರದಿಂದ ರಕ್ಷಿಸಲು ಎಷ್ಟು ಭಾರಿಯಾದರೂ ಜೈಲಿಗೆ ಹೋಗಲು ಸಿದ್ದ: ಕೇಜ್ರಿವಾಲ್

ನವದೆಹಲಿ: ಅಬಕಾರಿ ನೀತಿ ಪ್ರಕರಣದಲ್ಲಿ ಮಧ್ಯಂತರ ಜಾಮೀನಿನ ಮೇಲೆ ಹೊರಗೆ ಬಂದಿರುವ ದೆಹಲಿ ಮುಖ್ಯಮಂತ್ರಿ ಅರವಿಂದ್ ಕೇಜ್ರಿವಾಲ್ ಅವರು ಜೂನ್ 2 ರಂದು ಮತ್ತೆ ಜೈಲಿಗೆ ಹೋಗುವುದಾಗಿ ಹೇಳಿದ ಅವರು ತಮ್ಮ ಕುಟುಂಬದ ಕಾಳಜಿ ವಹಿಸುವಂತೆ ದೆಹಲಿ ಜನತೆಯಲ್ಲಿ ಮನವಿ ಮಾಡಿದ್ದಾರೆ.

ಈ ಕುರಿತು X ನಲ್ಲಿ ವಿಡಿಯೋ ಹಂಚಿಕೊಂಡ ಕೇಜ್ರಿವಾಲ್ ಜಾಮೀನಿನ ಅವಧಿ ಮುಗಿಯುವ ಕಾರಣ ಜೂನ್ 2 ರಂದು ಮತ್ತೆ ಜೈಲಿಗೆ ತೆರಳುತ್ತಿದ್ದೇನೆ ಆದರೆ ಈ ಬಾರಿ ನಾನು ಹೆಚ್ಚಿನ ಉತ್ಸಾಹದಲ್ಲಿದ್ದೇನೆ ಎಂದು ಹೇಳಿಕೊಂಡಿದ್ದಾರೆ.

ದೆಹಲಿಯ ಅಬಕಾರಿ ನೀತಿ ಹಗರಣಕ್ಕೆ ಸಂಬಂಧಿಸಿದ ಅಕ್ರಮ ಹಣ ವರ್ಗಾವಣೆ ಪ್ರಕರಣದಲ್ಲಿ ದೆಹಲಿ ಸಿಎಂ ಅವರನ್ನು ಮಾರ್ಚ್‌ನಲ್ಲಿ ಜಾರಿ ನಿರ್ದೇಶನಾಲಯ ಬಂಧಿಸಿತ್ತು. ಆದರೆ ಲೋಕ ಸಭಾ ಚುನಾವಣೆಯ ಪ್ರಚಾರದ ನಿಟ್ಟಿನಲ್ಲಿ ಸುಪ್ರೀಂ ಕೋರ್ಟ್ ನನಗೆ 21 ದಿನಗಳ ಜಾಮೀನು ನೀಡಿತ್ತು. ಭಾನುವಾರ ಮತ್ತೆ ತಿಹಾರ್ ಜೈಲಿಗೆ ಹಿಂತಿರುಗುತ್ತೇನೆ. ಈ ಜನರು ನನ್ನನ್ನು ಎಷ್ಟು ದಿನ ಜೈಲಿನಲ್ಲಿ ಇಡುತ್ತಾರೋ ಗೊತ್ತಿಲ್ಲ. ಆದರೆ ನನ್ನ ಉತ್ಸಾಹ ಹೆಚ್ಚಾಗಿದೆ. ದೇಶವನ್ನು ಸರ್ವಾಧಿಕಾರದಿಂದ ರಕ್ಷಿಸಲು ಎಷ್ಟು ಭಾರಿಯಾದರೂ ಜೈಲಿಗೆ ಹೋಗಲು ಸಿದ್ದನಿದ್ದೇನೆ ಎಂದು ಹೇಳಿದರು.

ನನ್ನ ತೇಜೋವದೆ ಮಾಡುವ ಎಲ್ಲ ಕೆಲಸಗಳನ್ನು ಮಾಡಿದರು ಆದರೆ ಅದು ಯಶಸ್ವಿಯಾಗಲಿಲ್ಲ. ನಾನು ಜೈಲಿನಲ್ಲಿದ್ದಾಗ ಅವರು ನನ್ನನ್ನು ಹಲವು ರೀತಿಯಲ್ಲಿ ಹಿಂಸಿಸುತ್ತಿದ್ದರು. ಅವರು ನನ್ನ ಔಷಧಿಗಳನ್ನು ನಿಲ್ಲಿಸಿದರು, ಜೈಲಿಗೆ ಹೋದಾಗ 70 ಕೆಜಿ ಇದ್ದ ನನ್ನ ತೂಕ ಇಂದು 64 ಕೆಜಿಗೆ ಇಳಿದಿದೆ. ಜೈಲಿನಿಂದ ಹೊರಬಂದ ನಂತರವೂ ನನ್ನ ತೂಕ ಹೆಚ್ಚಾಗುತ್ತಿಲ್ಲ. ಇದು ದೇಹದಲ್ಲಿ ಕೆಲವು ಗಂಭೀರ ಕಾಯಿಲೆಗಳ ಲಕ್ಷಣವೂ ಆಗಿರಬಹುದು ಎಂದು ವೈದ್ಯರು ಹೇಳುತ್ತಿದ್ದಾರೆ. ಅನೇಕ ಪರೀಕ್ಷೆಗಳನ್ನು ಮಾಡಬೇಕಾಗಿದೆ ಎಂದು ಹೇಳಿದರು.

ನಾನು ಭಾನುವಾರ ಶರಣಾಗಲು ಮಧ್ಯಾಹ್ನ 3 ಗಂಟೆಗೆ ನನ್ನ ಮನೆಯಿಂದ ಹೊರಡುತ್ತೇನೆ. ಈ ಬಾರಿ ಅವರು ನನ್ನನ್ನು ಹೆಚ್ಚು ಹಿಂಸಿಸುವ ಸಾಧ್ಯತೆಯಿದೆ, ಆದರೆ ನಾನು ತಲೆಬಾಗುವುದಿಲ್ಲ, ನಾನು ಎಲ್ಲಿದ್ದರೂ ದೆಹಲಿಯ ಕೆಲಸ ನಿಲ್ಲಿಸಲು ಬಿಡುವುದಿಲ್ಲ. ಉಚಿತ ವಿದ್ಯುತ್, ಮೊಹಲ್ಲಾ ಚಿಕಿತ್ಸಾಲಯಗಳು, ಆಸ್ಪತ್ರೆಗಳು, ಉಚಿತ ಔಷಧಗಳು, 24 ಗಂಟೆಗಳ ವಿದ್ಯುತ್ ಮತ್ತು ಇತರ ಹಲವು ಸವಲತ್ತುಗಳು ಯಾವುದೇ ಕಾರಣಕ್ಕೂ ನಿಲ್ಲಲ್ಲ, ಮುಂದುವರಿಯುತ್ತವೆ ಎಂದರು .

ನನ್ನ ತಂದೆ ತಾಯಿ ತುಂಬಾ ವಯಸ್ಸಾದವರು. ನನ್ನ ತಾಯಿ ತುಂಬಾ ಅನಾರೋಗ್ಯದಿಂದ ಬಳಲುತ್ತಿದ್ದಾರೆ. ಜೈಲಿನಲ್ಲಿರುವಾಗ ಅವರ ಆರೋಗ್ಯದ ಬಗ್ಗೆ ನನಗೆ ತುಂಬಾ ಚಿಂತೆ ಇದೆ ಹಾಗಾಗಿ ನಾನು ಜೈಲಿನಲ್ಲಿರುವ ಸಮಯದಲ್ಲಿ ನನ್ನ ಹೆತ್ತವರನ್ನು ನೋಡೊಕೊಳ್ಳಿ ಎಂದು ವಿನಂತಿಸಿದ್ದಾರೆ.

ಟಾಪ್ ನ್ಯೂಸ್

Udupi: ಗೀತಾರ್ಥ ಚಿಂತನೆ-41: ಭಗವಂತನ ಜತೆ ಜೀವಿಗಳ ನಿತ್ಯಸಂಬಂಧ

Udupi: ಗೀತಾರ್ಥ ಚಿಂತನೆ-41: ಭಗವಂತನ ಜತೆ ಜೀವಿಗಳ ನಿತ್ಯಸಂಬಂಧ

High Court: ಅಶ್ಲೀಲ ವೀಡಿಯೋ ಹಂಚಿಕೆ: ಪ್ರೀತಂಗೌಡ ವಿರುದ್ಧದ ಪ್ರಕರಣ ವಿಚಾರಣೆ ಮುಂದಕ್ಕೆ

High Court: ಅಶ್ಲೀಲ ವೀಡಿಯೋ ಹಂಚಿಕೆ: ಪ್ರೀತಂಗೌಡ ವಿರುದ್ಧದ ಪ್ರಕರಣ ವಿಚಾರಣೆ ಮುಂದಕ್ಕೆ

ನನ್ನನ್ನು ಸಿಲುಕಿಸಲು ಹಳೇ ಪ್ರಕರಣಗಳಿಗೆ ಜೀವ: ಕುಮಾರಸ್ವಾಮಿ ಆರೋಪ

Congress: ನನ್ನನ್ನು ಸಿಲುಕಿಸಲು ಹಳೇ ಪ್ರಕರಣಗಳಿಗೆ ಜೀವ: ಕುಮಾರಸ್ವಾಮಿ ಆರೋಪ

KEA: 206 ಸೀಟು ರದ್ದು ಮಾಡಿಕೊಂಡ ಅಭ್ಯರ್ಥಿಗಳು

KEA: 206 ಸೀಟು ರದ್ದು ಮಾಡಿಕೊಂಡ ಅಭ್ಯರ್ಥಿಗಳು

1 ಮೆಟ್ರಿಕ್‌ ಟನ್‌ ರೇಷ್ಮೆ ಉತ್ಪಾದನೆ ಗುರಿ: ಕೇಂದ್ರ ಜವುಳಿ ಸಚಿವ ಗಿರಿರಾಜ್‌ ಸಿಂಗ್‌

1 ಮೆಟ್ರಿಕ್‌ ಟನ್‌ ರೇಷ್ಮೆ ಉತ್ಪಾದನೆ ಗುರಿ: ಕೇಂದ್ರ ಜವುಳಿ ಸಚಿವ ಗಿರಿರಾಜ್‌ ಸಿಂಗ್‌

CT Ravi: ಶೇ. 80ರಷ್ಟು ಹಿಂದೂಗಳೇ ಇದ್ದರೂ ಗಣೇಶೋತ್ಸವಕ್ಕೆ ಅಡ್ಡಿ

CT Ravi: ಶೇ. 80ರಷ್ಟು ಹಿಂದೂಗಳೇ ಇದ್ದರೂ ಗಣೇಶೋತ್ಸವಕ್ಕೆ ಅಡ್ಡಿ

Araga Jnanendra ಕಾಲದ ಹಗರಣ ತನಿಖೆ ನಡೆಸಿ: ಕಿಮ್ಮನೆ ರತ್ನಾಕರ್‌

Araga Jnanendra ಕಾಲದ ಹಗರಣ ತನಿಖೆ ನಡೆಸಿ: ಕಿಮ್ಮನೆ ರತ್ನಾಕರ್‌


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

1-wewewqeqwewqe

Edible oil; ದಾಸ್ತಾನಿದ್ದರೂ ಖಾದ್ಯ ತೈಲ ಬೆಲೆ ಏರಿಸಿದ್ದೇಕೆ: ಸರಕಾರ ಪ್ರಶ್ನೆ

BSF (2)

Budgam; ಬಸ್ ಪ್ರಪಾತಕ್ಕೆ ಬಿದ್ದು 3 ಯೋಧರು ಮೃ*ತ್ಯು, 9 ಮಂದಿಗೆ ಗಂಭೀರ ಗಾಯ

kejriwal-2

AAP ಬೇಡಿಕೆ: ನಿರ್ಗಮಿತ ಸಿಎಂ ಕೇಜ್ರಿವಾಲ್ ಅವರಿಗೆ ಸರಕಾರಿ ವಸತಿ ಕಲ್ಪಿಸಿ

1-modi

Congress ಪಕ್ಷವನ್ನು ತುಕ್ಡೆ ತುಕ್ಡೆ ಗ್ಯಾಂಗ್, ನಗರ ನಕ್ಸಲರು ನಡೆಸುತ್ತಿದ್ದಾರೆ:ಮೋದಿ

Bhavani Revanna

SC ಭವಾನಿ ರೇವಣ್ಣ ನಿರೀಕ್ಷಣಾ ಜಾಮೀನು ರದ್ದು ಅರ್ಜಿ ಎರಡು ವಾರ ಮುಂದೂಡಿಕೆ

MUST WATCH

udayavani youtube

Kaljigaದಲ್ಲಿ ದೈವದ ಅಪಪ್ರಚಾರ ನಡೆದಿಲ್ಲ, ಸಿನಿಮಾ ನೋಡಿದ ಬಳಿಕ ಈ ಬಗ್ಗೆ ಪ್ರತಿಕ್ರಿಯಿಸಿ

udayavani youtube

ನವಜಾತ ಶಿಶುಗಳಲ್ಲಿ ಶ್ರವಣ ಶಕ್ತಿ ಸಮಸ್ಯೆ ಕುರಿತು ಸಂಪೂರ್ಣ ಮಾಹಿತಿ

udayavani youtube

ಅಂತರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆ ಅಂಗವಾಗಿ ತಾಲೂಕು ಮಟ್ಟದ ಮಾನವ ಸರಪಳಿ ಕಾರ್ಯಕ್ರಮ

udayavani youtube

ಈಟ್ ರಾಜಾ ಶಾಪ್ ನಲ್ಲಿ ಜ್ಯೂಸ್ ಕುಡಿಯೋದಷ್ಟೇ ಅಲ್ಲ ತಿನ್ನಲೂ ಬಹುದು

udayavani youtube

ಅಯ್ಯೋ…ಸಂತೆಕಟ್ಟೆ ಅಂಡರ್ ಪಾಸ್ ಪ್ರಯಾಣ ನಿತ್ಯ ನರಕ!

ಹೊಸ ಸೇರ್ಪಡೆ

Udupi: ಗೀತಾರ್ಥ ಚಿಂತನೆ-41: ಭಗವಂತನ ಜತೆ ಜೀವಿಗಳ ನಿತ್ಯಸಂಬಂಧ

Udupi: ಗೀತಾರ್ಥ ಚಿಂತನೆ-41: ಭಗವಂತನ ಜತೆ ಜೀವಿಗಳ ನಿತ್ಯಸಂಬಂಧ

1-wewewqeqwewqe

Edible oil; ದಾಸ್ತಾನಿದ್ದರೂ ಖಾದ್ಯ ತೈಲ ಬೆಲೆ ಏರಿಸಿದ್ದೇಕೆ: ಸರಕಾರ ಪ್ರಶ್ನೆ

Madikeri ಭಾಗದ ಅಪರಾಧ ಸುದ್ದಿಗಳು

Madikeri ಭಾಗದ ಅಪರಾಧ ಸುದ್ದಿಗಳು

High Court: ಅಶ್ಲೀಲ ವೀಡಿಯೋ ಹಂಚಿಕೆ: ಪ್ರೀತಂಗೌಡ ವಿರುದ್ಧದ ಪ್ರಕರಣ ವಿಚಾರಣೆ ಮುಂದಕ್ಕೆ

High Court: ಅಶ್ಲೀಲ ವೀಡಿಯೋ ಹಂಚಿಕೆ: ಪ್ರೀತಂಗೌಡ ವಿರುದ್ಧದ ಪ್ರಕರಣ ವಿಚಾರಣೆ ಮುಂದಕ್ಕೆ

ನನ್ನನ್ನು ಸಿಲುಕಿಸಲು ಹಳೇ ಪ್ರಕರಣಗಳಿಗೆ ಜೀವ: ಕುಮಾರಸ್ವಾಮಿ ಆರೋಪ

Congress: ನನ್ನನ್ನು ಸಿಲುಕಿಸಲು ಹಳೇ ಪ್ರಕರಣಗಳಿಗೆ ಜೀವ: ಕುಮಾರಸ್ವಾಮಿ ಆರೋಪ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.