ಅಫ್ಘಾನ್‌ಗೆ ಜಗತ್ತಿನ ನೆರವು ಬೇಕು; ಜಿ-20 ರಾಷ್ಟ್ರಗಳಿಗೆ ಪಿಎಂ ಮೋದಿ ಸಲಹೆ


Team Udayavani, Oct 13, 2021, 6:21 AM IST

ಅಫ್ಘಾನ್‌ಗೆ ಜಗತ್ತಿನ ನೆರವು ಬೇಕು; ಜಿ-20 ರಾಷ್ಟ್ರಗಳಿಗೆ ಪಿಎಂ ಮೋದಿ ಸಲಹೆ

ಹೊಸದಿಲ್ಲಿ: “ಅಫ್ಘಾನಿಸ್ಥಾನವನ್ನು ಭಯೋ­ತ್ಪಾದನೆಯ ಮೂಲ ಕೇಂದ್ರ­ವನ್ನಾಗಿ ಪರಿವರ್ತನೆಯಾಗುವುದನ್ನು ತಡೆಯಿರಿ’- ಹೀಗೆಂದು ಪ್ರಧಾನಿ ನರೇಂದ್ರ ಮೋದಿ ಅಂತಾರಾಷ್ಟ್ರೀಯ ಸಮುದಾಯಕ್ಕೆ ಕರೆ ನೀಡಿದ್ದಾರೆ.

ಅಫ್ಘಾನಿಸ್ಥಾನ ವಿಚಾರಕ್ಕೆ ಸಂಬಂಧಿಸಿ­ದಂತೆ ಜಿ-20 ರಾಷ್ಟ್ರಗಳ ಒಕ್ಕೂಟ ಆಯೋಜಿಸಿದ್ದ ವಚ್ಯುವಲ್‌ ಕಾರ್ಯಕ್ರಮದಲ್ಲಿ ಭಾಗವಹಿಸಿ ಪ್ರಧಾನಿ ಮೋದಿ ಈ ಅಭಿಪ್ರಾಯ ವ್ಯಕ್ತಪಡಿಸಿದ್ದಾರೆ. ಇದರ ಜತೆಗೆ ಆ ದೇಶದಲ್ಲಿ ಮಾನವೀಯ ಮತ್ತು ಬದುಕಲು ಅಗತ್ಯವಾಗಿರುವ ಯೋಜನೆಗಳು ಅತ್ಯಂತ ತುರ್ತಾಗಿ ಬೇಕಾಗಿವೆ ಎಂದು ಹೇಳಿದ್ದಾರೆ.

ಆ ದೇಶದಲ್ಲಿ ಧನಾತ್ಮಕ ಬದಲಾವಣೆ ತರುವ ನಿಟ್ಟಿನಲ್ಲಿ ಅಂತಾರಾಷ್ಟ್ರೀಯ ಸಮುದಾಯ ಮುತುವರ್ಜಿ ವಹಿಸಿ ಕೆಲಸ ಮಾಡಬೇಕಾಗಿದೆ. ಅದಕ್ಕಾಗಿ ವಿಶ್ವಸಂಸ್ಥೆಯ ಭದ್ರತಾ ಮಂಡಳಿ ಈಗಾಗಲೇ ಕೈಗೊಂಡ ನಿರ್ಣಯ ಅನುಷ್ಠಾನ ಮಾಡಬೇಕು ಎಂದು ಸಲಹೆ ಮಾಡಿದ್ದಾರೆ.

ಆ ದೇಶ ಮುಂದಿನ ದಿನಗಳಲ್ಲಿ ಉಗ್ರ­ವಾದದತ್ತ ಪ್ರಚೋದನೆ, ಭಯೋ­­­ತ್ಪಾದನೆಗೆ ಹೆಚ್ಚಿನ ರೀತಿಯಲ್ಲಿ ಪ್ರೋತ್ಸಾಹ ಸಿಗುವ ಕೇಂದ್ರ ಆಗ­ಬಾರದು. ಪ್ರಾದೇಶಿಕವಾಗಿ ಅಥವಾ ಜಗತ್ತನ್ನು ಕೇಂದ್ರೀಕರಿಸಿ ಉಗ್ರ ಚಟು­ವಟಿಕೆಗಳಿಗೆ ಅಲ್ಲಿ ಪ್ರೋತ್ಸಾಹ ಸಿಗಲೇ­ಬಾರದು ಎಂದು ಪ್ರಧಾನಿ ಮೋದಿ ಜಿ-20 ರಾಷ್ಟ್ರಗಳಿಗೆ ಒತ್ತಾಯ ಮಾಡಿ­ದರು ಎಂದು ಕೇಂದ್ರ ವಿದೇಶಾಂಗ ಸಚಿವಾಲಯ ಬಿಡುಗಡೆ ಮಾಡಿದ ಹೇಳಿಕೆಯಲ್ಲಿ ಉಲ್ಲೇಖಿಸಲಾಗಿದೆ.

ಇದನ್ನೂ ಓದಿ:ಉಪಚುನಾವಣೆ ಹಿನ್ನೆಲೆ : ಕಾಂಗ್ರೆಸ್ ಕಾರ್ಯಕರ್ತನಿಂದ ಬಿಜೆಪಿ ಯುವ ಕಾರ್ಯಕರ್ತರನ ಮೇಲೆ ಹಲ್ಲೆ

ತಡೆ ಅಗತ್ಯ: ದಕ್ಷಿಣ ಏಷ್ಯಾ ಪ್ರದೇಶ­ದಲ್ಲಿ ಮಾದಕ ವಸ್ತುಗಳ ಮತ್ತು ಅಕ್ರಮವಾಗಿ ಶಸ್ತ್ರಾಸ್ತ್ರಗಳ ಕಳ್ಳಸಾಗಣೆ ತಡೆಯೂ ಅಗತ್ಯವಾಗಿದೆ ಎಂದರು ಪ್ರಧಾನಿ ಮೋದಿ.

ಎಲ್ಲರನ್ನು ಒಳಗೊಂಡ ಸರಕಾರ: ಸದ್ಯ ತಾಲಿಬಾನ್‌ ವಶದಲ್ಲಿರುವ ಅಫ್ಘಾನಿಸ್ಥಾನದಲ್ಲಿ ಮಹಿಳೆಯರು, ಅಲ್ಪಸಂಖ್ಯಾಕರು ಸೇರಿದಂತೆ ಎಲ್ಲರ­ನ್ನೂ ಒಳಗೊಂಡ ಸರಕಾರ ರಚನೆ­ಯಾಗಬೇಕು. ಆಗ ಮಾತ್ರ ಅಲ್ಲಿ ಸುಸ್ಥಿರವಾಗಿರುವ ಅಭಿವೃದ್ಧಿ ಕಾಣಲು ಸಾಧ್ಯವಿದೆ ಎಂದು ಪ್ರತಿಪಾದಿಸಿದ್ದಾರೆ. ಉಪವಾಸದಿಂದ ಕಂಗೆಡುತ್ತಿರುವ ಅಫ್ಘಾನ್‌ನ ಪ್ರತಿಯೊಬ್ಬ ನಾಗರಿಕನಿ­ಗಾಗಿ ಪ್ರತಿಯೊಬ್ಬ ಭಾರತೀಯ ಪ್ರಜೆಯ ಹೃದಯ ಮಿಡಿಯುತ್ತಿದೆ. ಹೀಗಾಗಿ, ಅ.30ರಂದು ಭಾರತದ ಅಧ್ಯಕ್ಷತೆಯಲ್ಲಿ ವಿಶ್ವಸಂಸ್ಥೆಯ ಭದ್ರತಾ ಮಂಡಳಿಯಲ್ಲಿ ಕೈಗೊಂಡ ನಿರ್ಣಯ ಅನುಷ್ಠಾನವಾಗಬೇಕು ಎಂದಿದ್ದಾರೆ.

ಇಟಲಿ ಅಧ್ಯಕ್ಷತೆಯಲ್ಲಿ ಜಿ-20 ರಾಷ್ಟ್ರಗಳ ಒಕ್ಕೂಟ ಅಫ್ಘಾನಿಸ್ಥಾನದಲ್ಲಿ ಉತ್ತಮ ರೀತಿಯ ಅಭಿವೃದ್ಧಿ ಯೋಜ­ನೆಗಳನ್ನು ಜಾರಿ ಮಾಡಲು ಮುಂದಾ­ಗಬೇಕು ಎಂದರು. ಭಾರತ ಮತ್ತು ಅಫ್ಘಾನಿಸ್ಥಾನದ ನಡುವೆ ಐತಿಹಾಸಿಕ ಕಾಲದಿಂದಲೂ ಅತ್ಯುತ್ತಮ ಬಾಂಧವ್ಯ ಇತ್ತು ಎಂಬ ಅಂಶವನ್ನು ಪ್ರಧಾನಿ ಮೋದಿ ಉಲ್ಲೇಖಿಸಿದ್ದಾರೆ.

ಟಾಪ್ ನ್ಯೂಸ್

Thirthahalli: ಸಾಲ ಕಟ್ಟದ್ದಕ್ಕೆ ಕಿವಿಯೋಲೆ ಕಿತ್ತ ಬ್ಯಾಂಕ್‌ ಸಿಬ್ಬಂದಿ!

Thirthahalli: ಸಾಲ ಕಟ್ಟದ್ದಕ್ಕೆ ಕಿವಿಯೋಲೆ ಕಿತ್ತ ಬ್ಯಾಂಕ್‌ ಸಿಬ್ಬಂದಿ!

BR-Hills

Restriction: ನಿಷೇಧವಿದ್ದರೂ ಗೂಡ್ಸ್‌ ವಾಹನಗಳಲ್ಲಿ ಜನರು ಬಿಳಿಗಿರಿ ರಂಗನ ಬೆಟ್ಟಕ್ಕೆ ಪಯಣ!

Delhi-Stamp

Mahakumbh Rush: ಗೊಂದಲಕಾರಿ ಪ್ರಕಟಣೆಯಿಂದ ರೈಲು ನಿಲ್ದಾಣದಲ್ಲಿ ಕಾಲ್ತುಳಿತ: ಪೊಲೀಸರು

ಜರ್ಮನಿ ಅಧ್ಯಕ್ಷರ ಎಕ್ಸ್‌ ಖಾತೆ ಹ್ಯಾಕ್‌: ಬಿಹಾರ ಇಲಾಖೆ ಹೆಸರಿಟ್ಟ ಕಿಡಿಗೇಡಿಗಳು

ಜರ್ಮನಿ ಅಧ್ಯಕ್ಷರ ಎಕ್ಸ್‌ ಖಾತೆ ಹ್ಯಾಕ್‌: ಬಿಹಾರ ಇಲಾಖೆ ಹೆಸರಿಟ್ಟ ಕಿಡಿಗೇಡಿಗಳು

Kuruburu-Shanta

Air Lift: ಪಂಜಾಬ್‌ನಲ್ಲಿ ರೈತ ಮುಖಂಡ ಶಾಂತಕುಮಾರ್‌ಗೆ ಅಪಘಾತ; ಬೆಂಗಳೂರಿಗೆ ಏರ್‌ಲಿಫ್ಟ್‌

Kollywood: ಖ್ಯಾತ ನಟ ಯೋಗಿ ಬಾಬು ಕಾರು ಅಪಘಾತ?: ನಟ ಹೇಳಿದ್ದೇನು?

Kollywood: ಖ್ಯಾತ ನಟ ಯೋಗಿ ಬಾಬು ಕಾರು ಅಪಘಾತ?: ನಟ ಹೇಳಿದ್ದೇನು?

naki

Naki Sumo: ಮಗುವನ್ನು ಅಳಿಸುವ ವಿಚಿತ್ರ ಆಚರಣೆ !; ನಡೆಯುವುದಾದರು ಎಲ್ಲಿ?


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Delhi-Stamp

Mahakumbh Rush: ಗೊಂದಲಕಾರಿ ಪ್ರಕಟಣೆಯಿಂದ ರೈಲು ನಿಲ್ದಾಣದಲ್ಲಿ ಕಾಲ್ತುಳಿತ: ಪೊಲೀಸರು

mohan bhagwat

RSS; ಹಿಂದೂ ಸಮಾಜ ದೇಶದ ಜವಾಬ್ದಾರಿಯುತ ಸಮುದಾಯ: ಮೋಹನ್ ಭಾಗವತ್

Lalu

Controversy; ಮಹಾಕುಂಭ ‘ಅರ್ಥಹೀನ’ ಎಂದ ಲಾಲು ಪ್ರಸಾದ್ ಯಾದವ್

1sadgu

Pariksha Pe Charcha: ಸ್ಮಾರ್ಟ್ ಫೋನ್‌ಗಿಂತಲೂ ನೀವು ಸ್ಮಾರ್ಟ್ ಆಗಬೇಕು:ಸದ್ಗುರು

15-monalisa

Mahakumbh sensation: ಕೇರಳದಲ್ಲಿ ಕುಂಭಮೇಳದ ಮೊನಾಲಿಸಾ ಹವಾ

MUST WATCH

udayavani youtube

ನಿಮ್ಮ ಅಚ್ಚುಮೆಚ್ಚಿನ ; ಆರೋಗ್ಯಕರ ಪಾನಿಪುರಿ ಸವಿಯಲು ಇಲ್ಲಿಗೆ ಬನ್ನಿ

udayavani youtube

ಭೀಕರ ಹಿಟ್ & ರನ್ ಸಂತ್ರಸ್ತರ ಪರ ನಿಂತ ಪುತ್ತೂರು ಶಾಸಕ ಅಶೋಕ್ ರೈ

udayavani youtube

ಶ್ರೀ ಬ್ರಹ್ಮಬೈದರ್ಕಳ ನೇಮೋತ್ಸವ, ಮಾಣಿಬಾಲೆ ನೇಮೋತ್ಸವ

udayavani youtube

ಸಾಹಿತ್ಯಾಸಕ್ತಿಯ ಚಹಾ ಅಂಗಡಿ

udayavani youtube

ಇಲ್ಲಿ ಪ್ರತಿಯೊಂದು ಗೋವುಗಳಿಗೂ ವಿಭಿನ್ನ ಹೆಸರಿದೆ

ಹೊಸ ಸೇರ್ಪಡೆ

accident

Kaup: ಸ್ಕೂಟಿ, ಕಾರಿಗೆ ಬಸ್‌ ಢಿಕ್ಕಿ; ಸವಾರನಿಗೆ ಗಾಯ

Thirthahalli: ಸಾಲ ಕಟ್ಟದ್ದಕ್ಕೆ ಕಿವಿಯೋಲೆ ಕಿತ್ತ ಬ್ಯಾಂಕ್‌ ಸಿಬ್ಬಂದಿ!

Thirthahalli: ಸಾಲ ಕಟ್ಟದ್ದಕ್ಕೆ ಕಿವಿಯೋಲೆ ಕಿತ್ತ ಬ್ಯಾಂಕ್‌ ಸಿಬ್ಬಂದಿ!

1

Padubidri: ಕಬ್ಬಿಣದ ತುಂಡು ಹೆಕ್ಕಿದ ಬಾಲಕರಿಗೆ ರೈಲ್ವೇ ಗ್ಯಾಂಗ್‌ಮನ್‌ ಹಲ್ಲೆ; ದೂರು

BR-Hills

Restriction: ನಿಷೇಧವಿದ್ದರೂ ಗೂಡ್ಸ್‌ ವಾಹನಗಳಲ್ಲಿ ಜನರು ಬಿಳಿಗಿರಿ ರಂಗನ ಬೆಟ್ಟಕ್ಕೆ ಪಯಣ!

16

Pro Hockey: ಇಂಗ್ಲೆಂಡ್‌ ವಿರುದ್ಧ ಭಾರತ ವನಿತೆಯರಿಗೆ ಸೋಲು

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.