![Thirthahalli: ಸಾಲ ಕಟ್ಟದ್ದಕ್ಕೆ ಕಿವಿಯೋಲೆ ಕಿತ್ತ ಬ್ಯಾಂಕ್ ಸಿಬ್ಬಂದಿ!](https://www.udayavani.com/wp-content/uploads/2025/02/19-4-415x249.jpg)
![Thirthahalli: ಸಾಲ ಕಟ್ಟದ್ದಕ್ಕೆ ಕಿವಿಯೋಲೆ ಕಿತ್ತ ಬ್ಯಾಂಕ್ ಸಿಬ್ಬಂದಿ!](https://www.udayavani.com/wp-content/uploads/2025/02/19-4-415x249.jpg)
Team Udayavani, Oct 13, 2021, 6:21 AM IST
ಹೊಸದಿಲ್ಲಿ: “ಅಫ್ಘಾನಿಸ್ಥಾನವನ್ನು ಭಯೋತ್ಪಾದನೆಯ ಮೂಲ ಕೇಂದ್ರವನ್ನಾಗಿ ಪರಿವರ್ತನೆಯಾಗುವುದನ್ನು ತಡೆಯಿರಿ’- ಹೀಗೆಂದು ಪ್ರಧಾನಿ ನರೇಂದ್ರ ಮೋದಿ ಅಂತಾರಾಷ್ಟ್ರೀಯ ಸಮುದಾಯಕ್ಕೆ ಕರೆ ನೀಡಿದ್ದಾರೆ.
ಅಫ್ಘಾನಿಸ್ಥಾನ ವಿಚಾರಕ್ಕೆ ಸಂಬಂಧಿಸಿದಂತೆ ಜಿ-20 ರಾಷ್ಟ್ರಗಳ ಒಕ್ಕೂಟ ಆಯೋಜಿಸಿದ್ದ ವಚ್ಯುವಲ್ ಕಾರ್ಯಕ್ರಮದಲ್ಲಿ ಭಾಗವಹಿಸಿ ಪ್ರಧಾನಿ ಮೋದಿ ಈ ಅಭಿಪ್ರಾಯ ವ್ಯಕ್ತಪಡಿಸಿದ್ದಾರೆ. ಇದರ ಜತೆಗೆ ಆ ದೇಶದಲ್ಲಿ ಮಾನವೀಯ ಮತ್ತು ಬದುಕಲು ಅಗತ್ಯವಾಗಿರುವ ಯೋಜನೆಗಳು ಅತ್ಯಂತ ತುರ್ತಾಗಿ ಬೇಕಾಗಿವೆ ಎಂದು ಹೇಳಿದ್ದಾರೆ.
ಆ ದೇಶದಲ್ಲಿ ಧನಾತ್ಮಕ ಬದಲಾವಣೆ ತರುವ ನಿಟ್ಟಿನಲ್ಲಿ ಅಂತಾರಾಷ್ಟ್ರೀಯ ಸಮುದಾಯ ಮುತುವರ್ಜಿ ವಹಿಸಿ ಕೆಲಸ ಮಾಡಬೇಕಾಗಿದೆ. ಅದಕ್ಕಾಗಿ ವಿಶ್ವಸಂಸ್ಥೆಯ ಭದ್ರತಾ ಮಂಡಳಿ ಈಗಾಗಲೇ ಕೈಗೊಂಡ ನಿರ್ಣಯ ಅನುಷ್ಠಾನ ಮಾಡಬೇಕು ಎಂದು ಸಲಹೆ ಮಾಡಿದ್ದಾರೆ.
ಆ ದೇಶ ಮುಂದಿನ ದಿನಗಳಲ್ಲಿ ಉಗ್ರವಾದದತ್ತ ಪ್ರಚೋದನೆ, ಭಯೋತ್ಪಾದನೆಗೆ ಹೆಚ್ಚಿನ ರೀತಿಯಲ್ಲಿ ಪ್ರೋತ್ಸಾಹ ಸಿಗುವ ಕೇಂದ್ರ ಆಗಬಾರದು. ಪ್ರಾದೇಶಿಕವಾಗಿ ಅಥವಾ ಜಗತ್ತನ್ನು ಕೇಂದ್ರೀಕರಿಸಿ ಉಗ್ರ ಚಟುವಟಿಕೆಗಳಿಗೆ ಅಲ್ಲಿ ಪ್ರೋತ್ಸಾಹ ಸಿಗಲೇಬಾರದು ಎಂದು ಪ್ರಧಾನಿ ಮೋದಿ ಜಿ-20 ರಾಷ್ಟ್ರಗಳಿಗೆ ಒತ್ತಾಯ ಮಾಡಿದರು ಎಂದು ಕೇಂದ್ರ ವಿದೇಶಾಂಗ ಸಚಿವಾಲಯ ಬಿಡುಗಡೆ ಮಾಡಿದ ಹೇಳಿಕೆಯಲ್ಲಿ ಉಲ್ಲೇಖಿಸಲಾಗಿದೆ.
ಇದನ್ನೂ ಓದಿ:ಉಪಚುನಾವಣೆ ಹಿನ್ನೆಲೆ : ಕಾಂಗ್ರೆಸ್ ಕಾರ್ಯಕರ್ತನಿಂದ ಬಿಜೆಪಿ ಯುವ ಕಾರ್ಯಕರ್ತರನ ಮೇಲೆ ಹಲ್ಲೆ
ತಡೆ ಅಗತ್ಯ: ದಕ್ಷಿಣ ಏಷ್ಯಾ ಪ್ರದೇಶದಲ್ಲಿ ಮಾದಕ ವಸ್ತುಗಳ ಮತ್ತು ಅಕ್ರಮವಾಗಿ ಶಸ್ತ್ರಾಸ್ತ್ರಗಳ ಕಳ್ಳಸಾಗಣೆ ತಡೆಯೂ ಅಗತ್ಯವಾಗಿದೆ ಎಂದರು ಪ್ರಧಾನಿ ಮೋದಿ.
ಎಲ್ಲರನ್ನು ಒಳಗೊಂಡ ಸರಕಾರ: ಸದ್ಯ ತಾಲಿಬಾನ್ ವಶದಲ್ಲಿರುವ ಅಫ್ಘಾನಿಸ್ಥಾನದಲ್ಲಿ ಮಹಿಳೆಯರು, ಅಲ್ಪಸಂಖ್ಯಾಕರು ಸೇರಿದಂತೆ ಎಲ್ಲರನ್ನೂ ಒಳಗೊಂಡ ಸರಕಾರ ರಚನೆಯಾಗಬೇಕು. ಆಗ ಮಾತ್ರ ಅಲ್ಲಿ ಸುಸ್ಥಿರವಾಗಿರುವ ಅಭಿವೃದ್ಧಿ ಕಾಣಲು ಸಾಧ್ಯವಿದೆ ಎಂದು ಪ್ರತಿಪಾದಿಸಿದ್ದಾರೆ. ಉಪವಾಸದಿಂದ ಕಂಗೆಡುತ್ತಿರುವ ಅಫ್ಘಾನ್ನ ಪ್ರತಿಯೊಬ್ಬ ನಾಗರಿಕನಿಗಾಗಿ ಪ್ರತಿಯೊಬ್ಬ ಭಾರತೀಯ ಪ್ರಜೆಯ ಹೃದಯ ಮಿಡಿಯುತ್ತಿದೆ. ಹೀಗಾಗಿ, ಅ.30ರಂದು ಭಾರತದ ಅಧ್ಯಕ್ಷತೆಯಲ್ಲಿ ವಿಶ್ವಸಂಸ್ಥೆಯ ಭದ್ರತಾ ಮಂಡಳಿಯಲ್ಲಿ ಕೈಗೊಂಡ ನಿರ್ಣಯ ಅನುಷ್ಠಾನವಾಗಬೇಕು ಎಂದಿದ್ದಾರೆ.
ಇಟಲಿ ಅಧ್ಯಕ್ಷತೆಯಲ್ಲಿ ಜಿ-20 ರಾಷ್ಟ್ರಗಳ ಒಕ್ಕೂಟ ಅಫ್ಘಾನಿಸ್ಥಾನದಲ್ಲಿ ಉತ್ತಮ ರೀತಿಯ ಅಭಿವೃದ್ಧಿ ಯೋಜನೆಗಳನ್ನು ಜಾರಿ ಮಾಡಲು ಮುಂದಾಗಬೇಕು ಎಂದರು. ಭಾರತ ಮತ್ತು ಅಫ್ಘಾನಿಸ್ಥಾನದ ನಡುವೆ ಐತಿಹಾಸಿಕ ಕಾಲದಿಂದಲೂ ಅತ್ಯುತ್ತಮ ಬಾಂಧವ್ಯ ಇತ್ತು ಎಂಬ ಅಂಶವನ್ನು ಪ್ರಧಾನಿ ಮೋದಿ ಉಲ್ಲೇಖಿಸಿದ್ದಾರೆ.
Mahakumbh Rush: ಗೊಂದಲಕಾರಿ ಪ್ರಕಟಣೆಯಿಂದ ರೈಲು ನಿಲ್ದಾಣದಲ್ಲಿ ಕಾಲ್ತುಳಿತ: ಪೊಲೀಸರು
RSS; ಹಿಂದೂ ಸಮಾಜ ದೇಶದ ಜವಾಬ್ದಾರಿಯುತ ಸಮುದಾಯ: ಮೋಹನ್ ಭಾಗವತ್
Controversy; ಮಹಾಕುಂಭ ‘ಅರ್ಥಹೀನ’ ಎಂದ ಲಾಲು ಪ್ರಸಾದ್ ಯಾದವ್
Pariksha Pe Charcha: ಸ್ಮಾರ್ಟ್ ಫೋನ್ಗಿಂತಲೂ ನೀವು ಸ್ಮಾರ್ಟ್ ಆಗಬೇಕು:ಸದ್ಗುರು
Mahakumbh sensation: ಕೇರಳದಲ್ಲಿ ಕುಂಭಮೇಳದ ಮೊನಾಲಿಸಾ ಹವಾ
Kaup: ಸ್ಕೂಟಿ, ಕಾರಿಗೆ ಬಸ್ ಢಿಕ್ಕಿ; ಸವಾರನಿಗೆ ಗಾಯ
Thirthahalli: ಸಾಲ ಕಟ್ಟದ್ದಕ್ಕೆ ಕಿವಿಯೋಲೆ ಕಿತ್ತ ಬ್ಯಾಂಕ್ ಸಿಬ್ಬಂದಿ!
Padubidri: ಕಬ್ಬಿಣದ ತುಂಡು ಹೆಕ್ಕಿದ ಬಾಲಕರಿಗೆ ರೈಲ್ವೇ ಗ್ಯಾಂಗ್ಮನ್ ಹಲ್ಲೆ; ದೂರು
Restriction: ನಿಷೇಧವಿದ್ದರೂ ಗೂಡ್ಸ್ ವಾಹನಗಳಲ್ಲಿ ಜನರು ಬಿಳಿಗಿರಿ ರಂಗನ ಬೆಟ್ಟಕ್ಕೆ ಪಯಣ!
Pro Hockey: ಇಂಗ್ಲೆಂಡ್ ವಿರುದ್ಧ ಭಾರತ ವನಿತೆಯರಿಗೆ ಸೋಲು
You seem to have an Ad Blocker on.
To continue reading, please turn it off or whitelist Udayavani.