![hdd](https://www.udayavani.com/wp-content/uploads/2024/12/hdd-1-415x258.jpg)
21ದಿನ ಲಾಕ್ ಡೌನ್;Covid ಸೋಂಕಿತ ವ್ಯಕ್ತಿ ಅಂತ್ಯ ಸಂಸ್ಕಾರ ಕುಟುಂಬ ವರ್ಗಕ್ಕೆ ಅವಕಾಶ ಇಲ್ಲ
ಈ ವೃದ್ಧನ ಮನೆಯವರನ್ನು ಇದೀಗ ಕ್ವಾರಂಟೈನ್ ನಲ್ಲಿ ಇರಿಸಲಾಗಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.
Team Udayavani, Mar 30, 2020, 1:44 PM IST
![21ದಿನ ಲಾಕ್ ಡೌನ್;Covid ಸೋಂಕಿತ ವ್ಯಕ್ತಿ ಅಂತ್ಯ ಸಂಸ್ಕಾರ ಕುಟುಂಬ ವರ್ಗಕ್ಕೆ ಅವಕಾಶ ಇಲ್ಲ](https://www.udayavani.com/wp-content/uploads/2020/03/Covid-19-patien-620x465.jpg)
Representative Image
ಹೈದರಾಬಾದ್:ದೇಶದಲ್ಲಿ ಮಾರಣಾಂತಿಕ ಕೋವಿಡ್ 19 ಸೋಂಕಿಗೆ 29 ಮಂದಿ ಸಾವನ್ನಪ್ಪಿದ್ದು, ಸಾವಿರಕ್ಕೂ ಅಧಿಕ ಜನರಿಗೆ ಸೋಂಕು ತಗುಲಿದೆ. ಏತನ್ಮಧ್ಯೆ ಹೈದರಬಾದ್ ನಲ್ಲಿ ಶನಿವಾರ ಸಾವನ್ನಪ್ಪಿರುವ 74ವರ್ಷದ ತೆಲಂಗಾಣದ ವ್ಯಕ್ತಿಯ ರಕ್ತ ಮಾದರಿಯನ್ನು ಪರೀಕ್ಷಿಸಿದಾಗ ಕೋವಿಡ್ 19 ಸೋಂಕು ಇದ್ದಿರುವುದು ಪತ್ತೆಯಾಗಿದೆ. ನಂತರ ಆ ವ್ಯಕ್ತಿಯ ಶವ ಸಂಸ್ಕಾರ ನಡೆಸಲು ಕುಟುಂಬ ಸದಸ್ಯರಿಗೆ ಅವಕಾಶ ನೀಡದೆ ಕೇವಲ ವೈದ್ಯಕೀಯ ಸಿಬ್ಬಂದಿಗಳ ಸಮ್ಮುಖದಲ್ಲಿ ನಡೆಸಿರುವುದಾಗಿ ವರದಿ ತಿಳಿಸಿದೆ.
ಈ ವೃದ್ಧನ ಮನೆಯವರನ್ನು ಇದೀಗ ಕ್ವಾರಂಟೈನ್ ನಲ್ಲಿ ಇರಿಸಲಾಗಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ. 21ದಿನಗಳ ಲಾಕ್ ಡೌನ್ ಜಾರಿಯಲ್ಲಿರುವ ಹಿನ್ನೆಲೆಯಲ್ಲಿ ಎಲ್ಲಿಯಾದರು ಸಾವು ಸಂಭವಿಸಿದರೆ 20 ಜನಕ್ಕಿಂತ ಹೆಚ್ಚು ಮಂದಿ ಸೇರಲು ಅವಕಾಶ ಇಲ್ಲ ಎಂಬ ಸೂಚನೆ ಇದ್ದಿರುವುದಾಗಿ ವರದಿ ಹೇಳಿದೆ.
ಈ ವ್ಯಕ್ತಿಗೆ ಕೋವಿಡ್ 19 ಸೋಂಕು ಇದ್ದಿರುವುದು ಆತ ಆಸ್ಪತ್ರೆಯಲ್ಲಿ ಸಾವನ್ನಪ್ಪಿದ್ದ ಬಳಿಕ ತಿಳಿದು ಬಂದಿದ್ದು, ವೃದ್ಧನಿಗೆ ಇತರ ಅನಾರೋಗ್ಯ ಕೂಡಾ ಇದ್ದಿರುವುದಾಗಿ ತೆಲಂಗಾಣ ಮುಖ್ಯಮಂತ್ರಿ ಕೆಸಿಆರ್ ಚಂದ್ರಶೇಖರ್ ತಿಳಿಸಿದ್ದಾರೆ. ರಾಜ್ಯದಲ್ಲಿ ಕೋವಿಡ್ 19 ಸೋಂಕಿತರ ಸಂಖ್ಯೆ 70ಕ್ಕೆ ಏರಿದೆ ಎಂದು ತಿಳಿಸಿದ್ದಾರೆ.
ಟಾಪ್ ನ್ಯೂಸ್
![hdd](https://www.udayavani.com/wp-content/uploads/2024/12/hdd-1-415x258.jpg)
![](https://www.udayavani.com/wp-content/uploads/2024/03/IndianClicks_GVega_300x250_03212024_1_3.gif)
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
![ಕನಸಲ್ಲೂ ಅಂಬೇಡ್ಕರ್ರನ್ನು ಅವಮಾನಿಸಿಲ್ಲ: ಅಮಿತ್](https://www.udayavani.com/wp-content/uploads/2024/12/amith-shah-150x84.jpg)
Ambedkar Remarks: ಕನಸಲ್ಲೂ ಅಂಬೇಡ್ಕರ್ರನ್ನು ಅವಮಾನಿಸಿಲ್ಲ: ಅಮಿತ್ ಶಾ
![Hydarabad: ಪುಷ್ಪ-2 ಚಿತ್ರದ ಪ್ರದರ್ಶನ ವೇಳೆ ಗಾಯಗೊಂಡಿದ್ದ ಬಾಲಕನ ಸ್ಥಿತಿ ಗಂಭೀರ](https://www.udayavani.com/wp-content/uploads/2024/12/pushpa-2-5-150x94.jpg)
Hydarabad: ಪುಷ್ಪ-2 ಚಿತ್ರದ ಪ್ರದರ್ಶನ ವೇಳೆ ಗಾಯಗೊಂಡಿದ್ದ ಬಾಲಕನ ಸ್ಥಿತಿ ಗಂಭೀರ
![ನಾವು ಅಧಿಕಾರಕ್ಕೆ ಬಂದರೆ 60 ವರ್ಷ ಮೇಲ್ಪಟ್ಟ ಎಲ್ಲರಿಗೂ ಉಚಿತ ಚಿಕಿತ್ಸೆ: ಕೇಜ್ರಿವಾಲ್](https://www.udayavani.com/wp-content/uploads/2024/12/kejriwal-6-150x93.jpg)
ನಾವು ಅಧಿಕಾರಕ್ಕೆ ಬಂದರೆ 60 ವರ್ಷ ಮೇಲ್ಪಟ್ಟ ಎಲ್ಲರಿಗೂ ಉಚಿತ ಚಿಕಿತ್ಸೆ: ಕೇಜ್ರಿವಾಲ್
![Noida: ಟಾಯ್ಲೆಟಲ್ಲಿ ರಹಸ್ಯ ಕ್ಯಾಮರಾ ಇಟ್ಟಿದ್ದ ಶಾಲಾ ನಿರ್ದೇಶಕ… ಪತ್ತೆ ಹಚ್ಚಿದ ಶಿಕ್ಷಕಿ](https://www.udayavani.com/wp-content/uploads/2024/12/noida-2-150x92.jpg)
Noida: ಟಾಯ್ಲೆಟಲ್ಲಿ ರಹಸ್ಯ ಕ್ಯಾಮರಾ ಇಟ್ಟಿದ್ದ ಶಾಲಾ ನಿರ್ದೇಶಕ… ಪತ್ತೆ ಹಚ್ಚಿದ ಶಿಕ್ಷಕಿ
![Mumbai: ಗೇಟ್ವೇ ಆಫ್ ಇಂಡಿಯಾ ಬಳಿ ಮುಳುಗಿದ 30 ಪ್ರಯಾಣಿಕರಿದ್ದ ಬೋಟ್… ರಕ್ಷಣಾ ತಂಡ ದೌಡು](https://www.udayavani.com/wp-content/uploads/2024/12/boat-2-150x83.jpg)
Mumbai: ಗೇಟ್ವೇ ಆಫ್ ಇಂಡಿಯಾ ಬಳಿ ಮುಳುಗಿದ 67 ಪ್ರಯಾಣಿಕರಿದ್ದ ಬೋಟ್… ರಕ್ಷಣಾ ತಂಡ ದೌಡು
MUST WATCH
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.