AtishiAAP; ದೆಹಲಿಯ ಮೂರನೇ ಮಹಿಳಾ ಸಿಎಂ ಆದ ಆತಿಷಿ
ಮೂವರಲ್ಲಿ ಅತ್ಯಂತ ಕಿರಿಯ ಎಂಬ ಹೆಗ್ಗಳಿಕೆ.. ದೆಹಲಿಗೆ ಹೊಸ ಮನಮೋಹನ್ ಸಿಂಗ್ ಸಿಕ್ಕಿದ್ದಾರೆ: ಬಿಜೆಪಿ
Team Udayavani, Sep 21, 2024, 8:28 PM IST
ಹೊಸದಿಲ್ಲಿ: ಆಮ್ ಆದ್ಮಿ ಪಕ್ಷದ ನಾಯಕಿ ಆತಿಷಿ(Atishi) ಶನಿವಾರ(ಸೆ21) ದೆಹಲಿಯ ಮೂರನೇ ಮಹಿಳಾ ಮುಖ್ಯಮಂತ್ರಿಯಾಗಿ(Delhi Chief Minister) ಪ್ರಮಾಣ ವಚನ ಸ್ವೀಕರಿಸಿದರು. ರಾಷ್ಟ್ರ ರಾಜಧಾನಿಯಲ್ಲಿ ಉನ್ನತ ಹುದ್ದೆಯನ್ನು ಅಲಂಕರಿಸಿದ ಮೂವರಲ್ಲಿ ಅತ್ಯಂತ ಕಿರಿಯ ಎಂಬ ಹೆಗ್ಗಳಿಕೆಗೆ ಪಾತ್ರರಾಗಿದ್ದಾರೆ. ಸ್ವತಂತ್ರ ಭಾರತದಲ್ಲಿ ಮುಖ್ಯಮಂತ್ರಿ ಹುದ್ದೆಯನ್ನು ಅಲಂಕರಿಸಿದ 17 ನೇ ಮಹಿಳೆಯಾಗಿದ್ದಾರೆ.
2025 ಫೆಬ್ರವರಿಯಲ್ಲಿ ರಾಷ್ಟ್ರ ರಾಜಧಾನಿಯಲ್ಲಿ ವಿಧಾನಸಭಾ ಚುನಾವಣೆ ನಡೆಯಲಿರುವ ಕಾರಣ, 43 ರ ಹರೆಯದ ಆತಿಷಿ ಅವರ ಅಧಿಕಾರ ಅಲ್ಪಾವಧಿಯದ್ದಾಗಿದೆ.
ಮೊದಲ ಬಾರಿಗೆ ಶಾಸಕಿಯಾಗಿರುವ ಆತಿಷಿ ಅವರು ಪಕ್ಷದ ಪ್ರಮುಖ ಮುಖವಾಗಿದ್ದು, ಅಬಕಾರಿ ನೀತಿ ಪ್ರಕರಣಕ್ಕೆ ಸಂಬಂಧಿಸಿದಂತೆ ಅರವಿಂದ್ ಕೇಜ್ರಿವಾಲ್ ತಿಹಾರ್ ಜೈಲಿನಲ್ಲಿದ್ದ ಸಮಯದಲ್ಲಿ ಪಕ್ಷದ ಮಹತ್ವದ ಜವಾಬ್ದಾರಿಗಳನ್ನು ನಿರ್ವಹಿಸುತ್ತಿದ್ದರು.
ಆತಿಷಿ ಅವರೊಂದಿಗೆ ಸೌರಭ್ ಭಾರದ್ವಾಜ್, ಗೋಪಾಲ್ ರಾಯ್, ಕೈಲಾಶ್ ಗೆಹ್ಲೋಟ್, ಇಮ್ರಾನ್ ಹುಸೇನ್ ಮತ್ತು ಮುಖೇಶ್ ಅಹ್ಲಾವತ್ ಅವರು ಸಚಿವರಾಗಿ ಪ್ರಮಾಣ ಸ್ವೀಕರಿಸಿದರು.
माननीय आतिशी जी ने ली मुख्यमंत्री पद की शपथ🔥
अब @AtishiAAP जी दिल्ली में केजरीवाल जी की काम की राजनीति को बढ़ाएंगी आगे💯 pic.twitter.com/IfN57i0nos
— AAP (@AamAadmiParty) September 21, 2024
ಈ ವಾರದ ಆರಂಭದಲ್ಲಿ ಅನಿರೀಕ್ಷಿತ ಎಂಬಂತೆ ಕೇಜ್ರಿವಾಲ್ ಅವರು ಮುಖ್ಯಮಂತ್ರಿ ಸ್ಥಾನಕ್ಕೆ ರಾಜೀನಾಮೆ ಘೋಷಿಸಿ ವಿಧಾನಸಭಾ ಚುನಾವಣೆಯಲ್ಲಿ ದೆಹಲಿಯ ಜನರು “ಪ್ರಾಮಾಣಿಕತೆಯ ಪ್ರಮಾಣಪತ್ರ” ನೀಡಿದರೆ ಮಾತ್ರ ಮತ್ತು ಹುದ್ದೆಗೆ ಮರಳುವುದಾಗಿ ಘೋಷಣೆ ಮಾಡಿದ ನಂತರ ಆತಿಷಿ ಅವರನ್ನು ಶಾಸಕಾಂಗ ಪಕ್ಷದ ನಾಯಕಿಯನ್ನಾಗಿ ಆಯ್ಕೆ ಮಾಡಲಾಗಿತ್ತು. ಮುಂದಿನ ವರ್ಷದ ಆರಂಭದಲ್ಲಿ ವಿಧಾನಸಭಾ ಚುನಾವಣೆ ನಡೆಯಲಿದೆ.
ಬಿಜೆಪಿ ನಾಯಕಿ ದಿವಂಗತ ಸುಷ್ಮಾ ಸ್ವರಾಜ್ ಮತ್ತು ಕಾಂಗ್ರೆಸ್ ನಾಯಕಿ ಶೀಲಾ ದೀಕ್ಷಿತ್ ಅವರು ದೆಹಲಿಯ ಮುಖ್ಯಮಂತ್ರಿ ಹುದ್ದೆ ಅಲಂಕರಿಸಿದ್ದರು.
ದೆಹಲಿಗೆ ಹೊಸ ಮನಮೋಹನ್ ಸಿಂಗ್ ಸಿಕ್ಕಿದ್ದಾರೆ’: ಬಿಜೆಪಿ ಲೇವಡಿ
“ಅರವಿಂದ್ ಕೇಜ್ರಿವಾಲ್ ಅವರ ಬಳಿ ನಿಜವಾದ ಶಕ್ತಿ ಇರುವುದರಿಂದ ದೆಹಲಿಯ ಜನರಿಗೆ ‘ಹೊಸ ಮನಮೋಹನ್ ಸಿಂಗ್’ ಸಿಕ್ಕಿದ್ದರಿಂದ ನಾನು ಅವರನ್ನು ಅಭಿನಂದಿಸುತ್ತೇನೆ. ಅವರು ವಾಸ್ತವಿಕ ಸಿಎಂ ಆಗಿರುತ್ತಾರೆ ಮತ್ತು ಆತಿಷಿ ನ್ಯಾಯಸಮ್ಮತ ಸಿಎಂ ಆಗಿರುತ್ತಾರೆ. ಅರವಿಂದ್ ಕೇಜ್ರಿವಾಲ್ ನೇರವಾಗಿ ಸಿಎಂ ಆಗಿ ಕಾರ್ಯನಿರ್ವಹಿಸಲು ಸಾಧ್ಯವಾಗದ ಕಾರಣ ನ್ಯಾಯಾಲಯ ಜಾಮೀನಿನಲ್ಲಿ ಷರತ್ತುಗಳನ್ನು ವಿಧಿಸಿದೆ, ಹೀಗಾಗಿ ಇಲ್ಲಿ ಒಪಿಎಸ್ ವ್ಯವಸ್ಥೆ ಆರಂಭವಾಗಿದೆ ಎಂದು ಬಿಜೆಪಿ ವಕ್ತಾರ ಶೆಹಜಾದ್ ಪೂನವಾಲಾ ಟೀಕಾ ಪ್ರಹಾರ ನಡೆಸಿದ್ದಾರೆ.
ದೆಹಲಿಯ ವಿಪಕ್ಷ ನಾಯಕ ವಿಜೇಂದರ್ ಗುಪ್ತಾ ಪ್ರತಿಕ್ರಿಯಿಸಿ “ಇದು ಡಮ್ಮಿ ಸರಕಾರ ಮತ್ತು ಡಮ್ಮಿ ಮುಖ್ಯಮಂತ್ರಿ. ಇದು ರಿಮೋಟ್ ಕಂಟ್ರೋಲ್ ರನ್ ಸರಕಾರವಾಗಿರುತ್ತದೆ” ಎಂದು ವ್ಯಂಗ್ಯವಾಡಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
J&K Assembly polls; ಈಗ ಪಾಕಿಸ್ಥಾನವು ಮೋದಿಗೆ ಹೆದರುತ್ತಿದೆ: ಅಮಿತ್ ಶಾ ವಾಗ್ದಾಳಿ
Tirupati laddoo: ʼಅಯೋಧ್ಯೆ ರಾಮಮಂದಿರ ಪ್ರಾಣಪ್ರತಿಷ್ಠೆಯಲ್ಲಿ ಲಡ್ಡು ಪ್ರಸಾದ ಹಂಚಿದ್ದೆವುʼ
Rescue;ಅಪಘಾತಕ್ಕೀಡಾಗಿ ಫ್ಲೈಓವರ್ ಪಿಲ್ಲರ್ನಲ್ಲಿ ಸಿಲುಕಿಕೊಂಡ ಮಹಿಳೆ!!
Laddu ವಿವಾದ: ಮುಂದಿನ ಕ್ರಮದ ಬಗ್ಗೆ ಅರ್ಚಕರು, ತಜ್ಞರೊಂದಿಗೆ ಸಮಾಲೋಚನೆ: ಸಿಎಂ ನಾಯ್ಡು
Air Force Chief: ವಾಯುಪಡೆಯ ನೂತನ ಮುಖ್ಯಸ್ಥರಾಗಿ ಏರ್ ಮಾರ್ಷಲ್ ಅಮರ್ ಪ್ರೀತ್ ಸಿಂಗ್ ನೇಮಕ
MUST WATCH
Kaljigaದಲ್ಲಿ ದೈವದ ಅಪಪ್ರಚಾರ ನಡೆದಿಲ್ಲ, ಸಿನಿಮಾ ನೋಡಿದ ಬಳಿಕ ಈ ಬಗ್ಗೆ ಪ್ರತಿಕ್ರಿಯಿಸಿ
ನವಜಾತ ಶಿಶುಗಳಲ್ಲಿ ಶ್ರವಣ ಶಕ್ತಿ ಸಮಸ್ಯೆ ಕುರಿತು ಸಂಪೂರ್ಣ ಮಾಹಿತಿ
ಅಂತರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆ ಅಂಗವಾಗಿ ತಾಲೂಕು ಮಟ್ಟದ ಮಾನವ ಸರಪಳಿ ಕಾರ್ಯಕ್ರಮ
ಈಟ್ ರಾಜಾ ಶಾಪ್ ನಲ್ಲಿ ಜ್ಯೂಸ್ ಕುಡಿಯೋದಷ್ಟೇ ಅಲ್ಲ ತಿನ್ನಲೂ ಬಹುದು
ಅಯ್ಯೋ…ಸಂತೆಕಟ್ಟೆ ಅಂಡರ್ ಪಾಸ್ ಪ್ರಯಾಣ ನಿತ್ಯ ನರಕ!
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.