Ayodhya; ಮೂಲ ದಾವೆದಾರ ಇಕ್ಬಾಲ್ ಅನ್ಸಾರಿಯಿಂದ ಪ್ರಧಾನಿ ಕಾರಿಗೆ ಪುಷ್ಪ ವೃಷ್ಟಿ
Team Udayavani, Dec 31, 2023, 5:54 AM IST
ಅಯೋಧ್ಯೆ: ಪ್ರಧಾನಮಂತ್ರಿ ನರೇಂದ್ರ ಮೋದಿ ಅವರು ಶನಿವಾರ 15 ಕಿ.ಮೀ. ದೂರದ ರೋಡ್ ಶೋ ನಡೆಸುವ ಸಂದರ್ಭದಲ್ಲಿ ಅಯೋಧ್ಯೆಯ ರಾಮ ಜನ್ಮಭೂಮಿ ಮತ್ತು ಬಾಬರಿ ಮಸೀದಿ ವಿವಾದಕ್ಕೆ ಸಂಬಂಧಿಸಿದಂತೆ ಆರಂಭದಲ್ಲಿ ಕಾನೂನು ಹೋರಾಟ ನಡೆಸಿದ್ದ ಹಶೀಮ್ ಅನ್ಸಾರಿ ಅವರ ಪುತ್ರ ಇಕ್ಬಾಲ್ ಅನ್ಸಾರಿ ಪುಷ್ಪಗಳನ್ನು ಹಾಕಿ ಸ್ವಾಗತ ಕೋರಿದ್ದಾರೆ.
ಅಯೋಧ್ಯೆಯ ಪಾಂಜಿ ತೋಲಾ ಎಂಬಲ್ಲಿ ಪ್ರಧಾನಿಯವರ ವಾಹನ ತೆರಳಿದಾಗ ಗುಲಾಬಿ ಹೂಗಳನ್ನು ಕಾರಿನ ಮೇಲೆ ಹಾಕಿದ್ದಾರೆ. ಈ ಬಗ್ಗೆ ಮಾತನಾಡಿದ ಅವರು, “ಪ್ರಧಾನಿ ನರೇಂದ್ರ ಮೋದಿಯವರು ನಮ್ಮ ಅತಿಥಿ. ಅವರು ನಮ್ಮ ಸ್ಥಳಕ್ಕೆ ಬಂದಿದ್ದಾರೆ. ಸ್ವಾಗತಿಸುವುದು ನಮ್ಮ ಕರ್ತವ್ಯ’ ಎಂದಿದ್ದಾರೆ. ಅಯೋಧ್ಯೆಗೆ ಪ್ರಧಾನಿಯವರು ಭೇಟಿ ನೀಡಿದ ಸಂದರ್ಭದಲ್ಲಿ ಸ್ವಾಗತಿಸಲು ಸಿಕ್ಕ ಅವಕಾಶಕ್ಕೆ ಸಂಭ್ರಮ ಪಟ್ಟಿದ್ದಾರೆ. ಜ. 22ರಂದು ಅವರೇ ಮಂದಿರವನ್ನು ಲೋಕಾರ್ಪಣೆ ಮಾಡುವುದು ಸರಿಯಾದದ್ದು ಎಂದು ಪ್ರತಿಕ್ರಿಯೆ ನೀಡಿದ್ದಾರೆ.
ಮೊದಲ ವಿಮಾನದಲ್ಲಿ ಜೈ ಶ್ರೀರಾಮ್ ಘೋಷಣೆ
ಹೊಸದಿಲ್ಲಿಯಿಂದ ಅಯೋಧ್ಯೆಗೆ ಮೊದಲ ವಿಮಾನ ದಲ್ಲಿ ಪೈಲಟ್ ಕ್ಯಾ| ಅಶುತೋಷ್ ಶೇಖರ್ ಪ್ರಯಾಣಿ ಕರನ್ನು ಸ್ವಾಗತಿಸಿ, “ಅಯೋಧ್ಯೆ ವಿಮಾನ ನಿಲ್ದಾಣಕ್ಕೆ ಮೊದಲ ವಿಮಾನ ತೆರಳುತ್ತಿರುವುದು ಹೆಮ್ಮೆಯ ವಿಚಾರ. ನಿಮ್ಮೆಲ್ಲರನ್ನೂ ಸ್ವಾಗತಿಸುತ್ತಿದ್ದೇನೆ. ಜೈ ಶ್ರೀರಾಮ್’ ಎಂದಿದ್ದಾರೆ. ಅದಕ್ಕೆ ಪೂರಕವಾಗಿ ಖುಷಿ ಪಟ್ಟ ಪ್ರಯಾಣಿಕರೂ ಕೂಡ “ಜೈಶ್ರೀರಾಮ್’ ಎಂದು ಘೋಷಣೆ ಹಾಕಿದ್ದಾರೆ. ಇದರ ಜತೆಗೆ ಕೇಕ್ ಕತ್ತರಿಸಿ ಸಂಭ್ರಮ ವ್ಯಕ್ತಪಡಿಸಲಾಗಿದೆ. ಕೆಲವು ಪ್ರಯಾಣಿಕರು ಹನುಮಾನ್ ಚಾಲಿಸ ಪಠಿಸಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
Kaljigaದಲ್ಲಿ ದೈವದ ಅಪಪ್ರಚಾರ ನಡೆದಿಲ್ಲ, ಸಿನಿಮಾ ನೋಡಿದ ಬಳಿಕ ಈ ಬಗ್ಗೆ ಪ್ರತಿಕ್ರಿಯಿಸಿ
ನವಜಾತ ಶಿಶುಗಳಲ್ಲಿ ಶ್ರವಣ ಶಕ್ತಿ ಸಮಸ್ಯೆ ಕುರಿತು ಸಂಪೂರ್ಣ ಮಾಹಿತಿ
ಅಂತರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆ ಅಂಗವಾಗಿ ತಾಲೂಕು ಮಟ್ಟದ ಮಾನವ ಸರಪಳಿ ಕಾರ್ಯಕ್ರಮ
ಈಟ್ ರಾಜಾ ಶಾಪ್ ನಲ್ಲಿ ಜ್ಯೂಸ್ ಕುಡಿಯೋದಷ್ಟೇ ಅಲ್ಲ ತಿನ್ನಲೂ ಬಹುದು
ಅಯ್ಯೋ…ಸಂತೆಕಟ್ಟೆ ಅಂಡರ್ ಪಾಸ್ ಪ್ರಯಾಣ ನಿತ್ಯ ನರಕ!
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.