ಬಾಬರಿ ಸಂಚು ವಿಚಾರಣೆ: ಆಡ್ವಾಣಿ, ಜೋಷಿ, ಉಮಾಗೆ ಸುಪ್ರೀಂ ಉರುಳು


Team Udayavani, Apr 19, 2017, 11:24 AM IST

advani-joshi-bharti.jpg

ಹೊಸದಿಲ್ಲಿ : ಆಳುವ ಬಿಜೆಪಿಗೆ ಭಾರೀ ದೊಡ್ಡ ಹಿನ್ನಡೆ ಎಂಬಂತೆ ಹಿರಿಯ ಬಿಜೆಪಿ ನಾಯಕರಾದ ಲಾಲಕೃಷ್ಣ ಆಡ್ವಾಣಿ, ಮುರಳೀ ಮನೋಹರ ಜೋಷಿ, ಉಮಾ ಭಾರತಿ ಮತ್ತು ಇತರ ಅನೇಕರು ಬಾಬರಿ ಮಸೀದಿ ಧ್ವಂಸ ಪ್ರಕರಣದಲ್ಲಿ ಸಂಚಿನ ಆರೋಪಕ್ಕಾಗಿ ವಿಚಾರಣೆಯನ್ನು ಎದುರಿಸಬೇಕು ಎಂದು ಇಂದು ಬುಧವಾರ ಸುಪ್ರೀಂ ಕೋರ್ಟ್‌ ಹೇಳಿದೆ.

ಆದರೆ ಇದೇ ವೇಳೆ ಸುಪ್ರೀಂ ಕೋರ್ಟ್‌ ಉತ್ತರ ಪ್ರದೇಶದ ಮಾಜಿ ಮುಖ್ಯಮಂತ್ರಿ ಹಾಗೂ ರಾಜಸ್ಥಾನದ ಹಾಲಿ ರಾಜ್ಯಪಾಲರಾಗಿರುವ ಕಲ್ಯಾಣ್‌ ಸಿಂಗ್‌ ಅವರಿಗೆ ಸಾಂವಿಧಾನಿಕ ರಕ್ಷಣೆ ಇರುವುದರಿಂದ ಅವರನ್ನು ಬಾಬರಿ ಮಸೀದಿ ಧ್ವಂಸ ಪ್ರಕರಣದ ಸಂಚಿನ ಆರೋಪದ ವಿಚಾರಣೆಯಿಂದ ವಿನಾಯಿತಿ ನೀಡಿದೆ. ರಾಜ್ಯಪಾಲರಾಗಿ ಅವರ ಅಧಿಕಾರಾವಧಿಯು ಮುಗಿದ ಬಳಿಕ ಅವರು ಕೂಡ ಸಂಚಿನ ಆರೋಪದ ವಿಚಾರಣೆಯನ್ನು ಎದುರಿಸಬೇಕಾಗುವುದು ಎಂದು ಸುಪ್ರೀಂ ಕೋರ್ಟ್‌ ಸ್ಪಷ್ಟಪಡಿಸಿದೆ. 

ಸಂಚಿನ ವಿಚಾರಣೆಯ ವೇಳೆ ಪ್ರಕರಣದ ಮುಂದೂಡಿಕೆಯನ್ನು (adjournment) ಸಾಮಾನ್ಯ ಸಂದರ್ಭಗಳಲ್ಲಿ ನೀಡಲಾಗುವುದು; ಆದರೆ ವಿಚಾರಣೆಯನ್ನು ನಡೆಸುವ ನ್ಯಾಯಾಧೀಶರನ್ನು ವರ್ಗಾಯಿಸಲಾಗದು ಎಂದು ಸುಪ್ರೀಂ ಕೋರ್ಟ್‌ಹೇಳಿದೆ.

ಕಳೆದ ಬಾರಿಯ ವಿಚಾರಣೆಯ ವೇಳೆ ಸಿಬಿಐ, ಬಿಜೆಪಿ ನಾಯಕರಾದ ಆಡ್ವಾಣಿ, ಜೋಷಿ, ಮತ್ತು ಇತರ ಕೆಲವು ನಾಯಕರ ವಿರುದ್ಧ  ಬಾಬರಿ ಮಸೀದಿ ಧ್ವಂಸ ಪ್ರಕರಣದ ಸಂಚಿನ ಆರೋಪಗಳನ್ನು ಪುನರುಜ್ಜೀವನಗೊಳಿಸುವಂತೆ ಸುಪ್ರೀಂ ಕೋರ್ಟನ್ನು ಕೇಳಿಕೊಂಡಿತ್ತು.

ಬಾಬರಿ ಮಸೀದಿ ಧ್ವಂಸ ಪ್ರಕರಣದ ವಿಚಾರಣೆಯು ಕಳೆದ 25 ವರ್ಷಗಳಿಂದ ಬಾಕಿ ಇರುವುದನ್ನು ಗಮನಿಸಿದ ಸುಪ್ರೀಂ ಕೋರ್ಟ್‌ ಪೀಠದ ಜಸ್ಟಿಸ್‌ ಪಿನಾಕಿ ಚಂದ್ರ ಘೋಷ್‌ ಮತ್ತು ಜಸ್ಟಿಸ್‌ ರೋಹಿನ್‌ಟನ್‌ ಫಾಲಿ ನಾರೀಮನ್‌ ಅವರು ಸಂವಿಧಾನದ 142ನೇ ವಿಧಿಯಡಿ ತಾವು ಉಪಲಬ್ಧವಿರುವ ಅಸಾಮಾನ್ಯ ಅಧಿಕಾರವನ್ನು ಬಳಸಿಕೊಂಡು ಪ್ರಕರಣದ ವಿಚಾರಣೆಯನ್ನು ಲಕ್ನೊಗೆ ವರ್ಗಾಯಿಸಿ ಅಲ್ಲಿ ಜೋಷಿ ಸಹಿತ ಎಂಟು ಮಂದಿ ನಾಯಕರು ಇತರ 13 ಮಂದಿಯೊಂದಿಗೆ  ವಿಚಾರಣೆಯನ್ನು ಎದುರಿಸುವಂತೆ ಮಾಡುವೆವು ಎಂದು ಹೇಳಿದರು. 

ಬಿಜೆಪಿಯ ಎಂಟು ಹಿರಿಯ ನಾಯಕರು ಮತ್ತು ವಿಶ್ವ ಹಿಂದೂ ಪರಿಷತ್‌ನ ನಾಯಕರ ವಿರುದ್ಧ ಸಂಚಿನ ಆರೋಪವನ್ನು ಕೈಬಿಟ್ಟ ಅಲಹಾಬಾದ್‌ ಹೈಕೋರ್ಟಿನ 2010ರ ಮೇ ತೀರ್ಪನ್ನು ಪ್ರಶ್ನಿಸಿ ಸಿಬಿಐ, ಸುಪ್ರೀಂ ಕೋರ್ಟ್‌ ಮೆಟ್ಟಲೇರಿತ್ತು. 

ಟಾಪ್ ನ್ಯೂಸ್

Gun-Fire

Mandya: ನಾಗಮಂಗಲದಲ್ಲಿ ಆಕಸ್ಮಿಕ ಫೈರಿಂಗ್‌: 3 ವರ್ಷದ ಮಗು ಮೃತ್ಯು!

Thirthahalli: ಸಾಲ ಕಟ್ಟದ್ದಕ್ಕೆ ಕಿವಿಯೋಲೆ ಕಿತ್ತ ಬ್ಯಾಂಕ್‌ ಸಿಬ್ಬಂದಿ!

Thirthahalli: ಸಾಲ ಕಟ್ಟದ್ದಕ್ಕೆ ಕಿವಿಯೋಲೆ ಕಿತ್ತ ಬ್ಯಾಂಕ್‌ ಸಿಬ್ಬಂದಿ!

BR-Hills

Restriction: ನಿಷೇಧವಿದ್ದರೂ ಗೂಡ್ಸ್‌ ವಾಹನಗಳಲ್ಲಿ ಜನರು ಬಿಳಿಗಿರಿ ರಂಗನ ಬೆಟ್ಟಕ್ಕೆ ಪಯಣ!

Delhi-Stamp

Mahakumbh Rush: ಗೊಂದಲಕಾರಿ ಪ್ರಕಟಣೆಯಿಂದ ರೈಲು ನಿಲ್ದಾಣದಲ್ಲಿ ಕಾಲ್ತುಳಿತ: ಪೊಲೀಸರು

ಜರ್ಮನಿ ಅಧ್ಯಕ್ಷರ ಎಕ್ಸ್‌ ಖಾತೆ ಹ್ಯಾಕ್‌: ಬಿಹಾರ ಇಲಾಖೆ ಹೆಸರಿಟ್ಟ ಕಿಡಿಗೇಡಿಗಳು

ಜರ್ಮನಿ ಅಧ್ಯಕ್ಷರ ಎಕ್ಸ್‌ ಖಾತೆ ಹ್ಯಾಕ್‌: ಬಿಹಾರ ಇಲಾಖೆ ಹೆಸರಿಟ್ಟ ಕಿಡಿಗೇಡಿಗಳು

Kuruburu-Shanta

Air Lift: ಪಂಜಾಬ್‌ನಲ್ಲಿ ರೈತ ಮುಖಂಡ ಶಾಂತಕುಮಾರ್‌ಗೆ ಅಪಘಾತ; ಬೆಂಗಳೂರಿಗೆ ಏರ್‌ಲಿಫ್ಟ್‌

Kollywood: ಖ್ಯಾತ ನಟ ಯೋಗಿ ಬಾಬು ಕಾರು ಅಪಘಾತ?: ನಟ ಹೇಳಿದ್ದೇನು?

Kollywood: ಖ್ಯಾತ ನಟ ಯೋಗಿ ಬಾಬು ಕಾರು ಅಪಘಾತ?: ನಟ ಹೇಳಿದ್ದೇನು?


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Delhi-Stamp

Mahakumbh Rush: ಗೊಂದಲಕಾರಿ ಪ್ರಕಟಣೆಯಿಂದ ರೈಲು ನಿಲ್ದಾಣದಲ್ಲಿ ಕಾಲ್ತುಳಿತ: ಪೊಲೀಸರು

mohan bhagwat

RSS; ಹಿಂದೂ ಸಮಾಜ ದೇಶದ ಜವಾಬ್ದಾರಿಯುತ ಸಮುದಾಯ: ಮೋಹನ್ ಭಾಗವತ್

Lalu

Controversy; ಮಹಾಕುಂಭ ‘ಅರ್ಥಹೀನ’ ಎಂದ ಲಾಲು ಪ್ರಸಾದ್ ಯಾದವ್

1sadgu

Pariksha Pe Charcha: ಸ್ಮಾರ್ಟ್ ಫೋನ್‌ಗಿಂತಲೂ ನೀವು ಸ್ಮಾರ್ಟ್ ಆಗಬೇಕು:ಸದ್ಗುರು

15-monalisa

Mahakumbh sensation: ಕೇರಳದಲ್ಲಿ ಕುಂಭಮೇಳದ ಮೊನಾಲಿಸಾ ಹವಾ

MUST WATCH

udayavani youtube

ನಿಮ್ಮ ಅಚ್ಚುಮೆಚ್ಚಿನ ; ಆರೋಗ್ಯಕರ ಪಾನಿಪುರಿ ಸವಿಯಲು ಇಲ್ಲಿಗೆ ಬನ್ನಿ

udayavani youtube

ಭೀಕರ ಹಿಟ್ & ರನ್ ಸಂತ್ರಸ್ತರ ಪರ ನಿಂತ ಪುತ್ತೂರು ಶಾಸಕ ಅಶೋಕ್ ರೈ

udayavani youtube

ಶ್ರೀ ಬ್ರಹ್ಮಬೈದರ್ಕಳ ನೇಮೋತ್ಸವ, ಮಾಣಿಬಾಲೆ ನೇಮೋತ್ಸವ

udayavani youtube

ಸಾಹಿತ್ಯಾಸಕ್ತಿಯ ಚಹಾ ಅಂಗಡಿ

udayavani youtube

ಇಲ್ಲಿ ಪ್ರತಿಯೊಂದು ಗೋವುಗಳಿಗೂ ವಿಭಿನ್ನ ಹೆಸರಿದೆ

ಹೊಸ ಸೇರ್ಪಡೆ

Gun-Fire

Mandya: ನಾಗಮಂಗಲದಲ್ಲಿ ಆಕಸ್ಮಿಕ ಫೈರಿಂಗ್‌: 3 ವರ್ಷದ ಮಗು ಮೃತ್ಯು!

accident

Kaup: ಸ್ಕೂಟಿ, ಕಾರಿಗೆ ಬಸ್‌ ಢಿಕ್ಕಿ; ಸವಾರನಿಗೆ ಗಾಯ

Thirthahalli: ಸಾಲ ಕಟ್ಟದ್ದಕ್ಕೆ ಕಿವಿಯೋಲೆ ಕಿತ್ತ ಬ್ಯಾಂಕ್‌ ಸಿಬ್ಬಂದಿ!

Thirthahalli: ಸಾಲ ಕಟ್ಟದ್ದಕ್ಕೆ ಕಿವಿಯೋಲೆ ಕಿತ್ತ ಬ್ಯಾಂಕ್‌ ಸಿಬ್ಬಂದಿ!

1

Padubidri: ಕಬ್ಬಿಣದ ತುಂಡು ಹೆಕ್ಕಿದ ಬಾಲಕರಿಗೆ ರೈಲ್ವೇ ಗ್ಯಾಂಗ್‌ಮನ್‌ ಹಲ್ಲೆ; ದೂರು

BR-Hills

Restriction: ನಿಷೇಧವಿದ್ದರೂ ಗೂಡ್ಸ್‌ ವಾಹನಗಳಲ್ಲಿ ಜನರು ಬಿಳಿಗಿರಿ ರಂಗನ ಬೆಟ್ಟಕ್ಕೆ ಪಯಣ!

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.