UP; ಬಹ್ರೈಚ್ ಘಟನೆ ಆರೋಪಿಗಳು ನೇಪಾಳಕ್ಕೆ ಪರಾರಿಯಾಗುತ್ತಿದ್ದ ವೇಳೆ ಎನ್ ಕೌಂಟರ್

ದುರ್ಗಾ ಪೂಜೆ ಮೆರವಣಿಗೆ ವೇಳೆ ಹಿಂ*ಸಾಚಾರ ನಡೆಸಿದ್ದರು... ಪೊಲೀಸ್ ಕ್ರಮಕ್ಕೆ ಕಾಂಗ್ರೆಸ್ ಆಕ್ರೋಶ !

Team Udayavani, Oct 17, 2024, 5:09 PM IST

police crime

ಲಕ್ನೋ (ಉತ್ತರ ಪ್ರದೇಶ): ಬಹ್ರೈಚ್ ಹಿಂಸಾಚಾರ ಘಟನೆಯ ಆರೋಪಿಗಳು ನೇಪಾಳಕ್ಕೆ ಪರಾರಿಯಾಗಲು ಪ್ರಯತ್ನಿಸುತ್ತಿದ್ದಾಗ ಉತ್ತರ ಪ್ರದೇಶ ಪೊಲೀಸರು ಕಾಲಿಗೆ ಗುಂಡು ಹಾರಿಸಿದ್ದಾರೆ ಎಂದು ಪೊಲೀಸರು ಗುರುವಾರ (ಅಕ್ಟೋಬರ್ 17) ತಿಳಿಸಿದ್ದಾರೆ.

ಬಹ್ರೈಚ್‌ನಲ್ಲಿ ದುರ್ಗಾ ಪೂಜೆ ಮೆರವಣಿಗೆ ವೇಳೆ ಉಂಟಾದ ಹಿಂಸಾಚಾರ ಪ್ರಕರಣದ ಇಬ್ಬರು ಆರೋಪಿಗಳಾದ ಸರ್ಫರಾಜ್ ಮತ್ತು ಮೊಹಮ್ಮದ್ ತಾಲಿಬ್ ಮೇಲೆ ನೇಪಾಳದ ಗಡಿಗೆ ಹತ್ತಿರದಲ್ಲಿರುವ ಬಹ್ರೈಚ್‌ನ ಹಂಡಾ ಬಸೆಹ್ರಿ ಪ್ರದೇಶದಲ್ಲಿ ಗುಂಡು ಹಾರಿಸಿರುವುದಾಗಿ ಪೊಲೀಸರು ತಿಳಿಸಿದ್ದಾರೆ.

ಪೊಲೀಸರ ಗುಂಡಿಗೆ ಇಬ್ಬರು ಗಾಯಗೊಂಡಿದ್ದಾರೆ. ಕಾರ್ಯಾಚರಣೆ ವೇಳೆ ಒಟ್ಟು 5 ಮಂದಿ ಆರೋಪಿಗಳನ್ನು ಬಂಧಿಸಲಾಗಿದೆ ಎಂದು ಬಹ್ರೈಚ್ ಉನ್ನತ ಪೊಲೀಸ್ ಅಧಿಕಾರಿಯೊಬ್ಬರುಎನ್‌ಕೌಂಟರ್ ನಂತರ ಹೇಳಿಕೆ ನೀಡಿದ್ದಾರೆ.

ಅಕ್ಟೋಬರ್ 13 ರಂದು ದುರ್ಗಾ ಪೂಜೆ ಮೆರವಣಿಗೆ ವೇಳೆ ಹಿಂಸಾಚಾರಕ್ಕೆ ಕಾರಣವಾಗಿ 22 ವರ್ಷದ ರಾಮ್ ಗೋಪಾಲ್ ಮಿಶ್ರಾ ಎಂಬ ಯುವಕನ ಸಾವಿಗೆ ಕಾರಣವಾಗಿದ್ದರು ಎಂದು ಪೊಲೀಸರು ತಿಳಿಸಿದ್ದಾರೆ.

ಕಾಂಗ್ರೆಸ್, ಸಮಾಜವಾದಿ ಪಕ್ಷ ಆಕ್ರೋಶ

ಎನ್‌ಕೌಂಟರ್ ಬಗ್ಗೆ ಪ್ರತಿಕ್ರಿಯಿಸಿರುವ ಕಾಂಗ್ರೆಸ್, ಉತ್ತರಪ್ರದೇಶದ ಬಿಜೆಪಿ ಸರಕಾರದ ವಿರುದ್ಧ ವಾಗ್ದಾಳಿ ನಡೆಸಿದ್ದು, ಸರಕಾರ ತನ್ನ ವೈಫಲ್ಯವನ್ನು ಮುಚ್ಚಿಹಾಕಲು ಪ್ರಯತ್ನಿಸುತ್ತಿದೆ.ಮೊದಲಿನಿಂದಲೂ ನಕಲಿ ಎನ್‌ಕೌಂಟರ್‌ಗಳನ್ನು ಮಾಡಿ ತಮ್ಮ ವೈಫಲ್ಯವನ್ನು ಮುಚ್ಚಿಕೊಳ್ಳಲು ಪ್ರಯತ್ನಿಸುತ್ತಿದ್ದಾರೆ” ಎಂದು ಯುಪಿ ಕಾಂಗ್ರೆಸ್ ಅಧ್ಯಕ್ಷ ಅಜಯ್ ರಾಯ್ ಹೇಳಿಕೆ ನೀಡಿದ್ದಾರೆ.

ಸಮಾಜವಾದಿ ಪಕ್ಷದ ಅಧ್ಯಕ್ಷ ಅಖಿಲೇಶ್ ಯಾದವ್ ಪ್ರತಿಕ್ರಿಯಿಸಿ “ಈ ಘಟನೆಯು ಆಡಳಿತಾತ್ಮಕ ವೈಫಲ್ಯವಾಗಿದೆ. ಸರಕಾರವು ವೈಫಲ್ಯವನ್ನು ಮುಚ್ಚಿಕೊಳ್ಳಲು ಎನ್‌ಕೌಂಟರ್‌ಗಳನ್ನು ಮಾಡುತ್ತಿದೆ.ಎನ್‌ಕೌಂಟರ್‌ಗಳು ರಾಜ್ಯದ ಕಾನೂನು ಮತ್ತು ಸುವ್ಯವಸ್ಥೆಯನ್ನು ಸುಧಾರಿಸುತ್ತಿದ್ದರೆ, ಯುಪಿ ಹೆಚ್ಚಿನ ರಾಜ್ಯಗಳಿಗಿಂತ ಮುಂದಿರುತ್ತಿತ್ತು. ಒಂದು ವೇಳೆ ಮೆರವಣಿಗೆಗೆ ಅನುಮತಿ ಪಡೆದಿದ್ದರೆ, ಅಂತಹ ಸಣ್ಣ ಕಾರ್ಯಕ್ರಮವನ್ನು ಅವರು ನಿಭಾಯಿಸಲು ಸಾಧ್ಯವಾಗದಿದ್ದರೆ, ರಾಜ್ಯದಲ್ಲಿ ಕಾನೂನು ಮತ್ತು ಸುವ್ಯವಸ್ಥೆಯನ್ನು ಕಾಪಾಡುತ್ತಾರೆ ಎಂದು ಹೇಗೆ ನಿರೀಕ್ಷಿಸಬಹುದು? ಇಂತಹ ಘಟನೆಗಳು ನಡೆಯಬಾರದು ಮತ್ತು ಸಂತ್ರಸ್ತರ ಕುಟುಂಬಗಳೊಂದಿಗೆ ನಾವು ನಿಲ್ಲುತ್ತೇವೆ ಮತ್ತು ಅವರಿಗೆ ನ್ಯಾಯ ಸಿಗುತ್ತದೆ ಎಂದು ಖಚಿತಪಡಿಸಿಕೊಳ್ಳುತ್ತೇವೆ. ಈ ಘಟನೆಯು ಒಡೆದು ಆಳುವ ನೀತಿ” ಎಂದರು.

ಟಾಪ್ ನ್ಯೂಸ್

1-cccc

Haryana; ಸೋಲಿನ ಬೆನ್ನಲ್ಲೇ ಕಾಂಗ್ರೆಸ್ ಪಕ್ಷಕ್ಕೆ ಗುಡ್ ಬೈ ಹೇಳಿದ ಕ್ಯಾಪ್ಟನ್ ಅಜಯ್ ಯಾದವ್

Congress Govt.,: ವಾಲ್ಮೀಕಿ ಸಮಾಜದ ಕ್ಷಮೆ ಕೇಳಲಿ: ಆರಗ ಜ್ಞಾನೇಂದ್ರ

Congress Govt.,: ವಾಲ್ಮೀಕಿ ಸಮಾಜದ ಕ್ಷಮೆ ಕೇಳಲಿ: ಆರಗ ಜ್ಞಾನೇಂದ್ರ

Vimana 2

Hoax bomb calls; ಕ್ರಮ ತೆಗೆದುಕೊಳ್ಳಲಾಗುತ್ತಿದೆ:ಸಚಿವ ರಾಮ್ ಮೋಹನ್ ನಾಯ್ಡು

Flight: ಹುಬ್ಬಳ್ಳಿ-ಅಹ್ಮದಾಬಾದ್‌ ವಿಮಾನ ಸೇವೆ ಆರಂಭಕ್ಕೆ ಜೋಶಿ,ನಾಯ್ಡು ಚರ್ಚೆ

Flight: ಹುಬ್ಬಳ್ಳಿ-ಅಹ್ಮದಾಬಾದ್‌ ವಿಮಾನ ಸೇವೆ ಆರಂಭಕ್ಕೆ ಜೋಶಿ,ನಾಯ್ಡು ಚರ್ಚೆ

Pushpa 2: ರಿಲೀಸ್‌ಗೂ ಮೊದಲೇ 900 ಕೋಟಿ ರೂ. ಕಲೆಕ್ಷನ್‌ ಮಾಡಿದ ಅಲ್ಲು ಅರ್ಜುನ್‌ ʼಪುಷ್ಪ-2ʼ

Pushpa 2: ರಿಲೀಸ್‌ಗೂ ಮೊದಲೇ 900 ಕೋಟಿ ರೂ. ಕಲೆಕ್ಷನ್‌ ಮಾಡಿದ ಅಲ್ಲು ಅರ್ಜುನ್‌ ʼಪುಷ್ಪ-2ʼ

Bommai BJP

By election; ಶಿಗ್ಗಾವಿ ಟಿಕೆಟ್‌ ಆಕಾಂಕ್ಷಿಗಳ ಎದೆಯಲ್ಲಿ ಢವಢವ

Sheik Hasina

Bangladesh ; ಶೇಖ್ ಹಸೀನಾ ಬಂಧನಕ್ಕೆ ಗಡುವು ವಿಧಿಸಿದ ನ್ಯಾಯಮಂಡಳಿ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

1-cccc

Haryana; ಸೋಲಿನ ಬೆನ್ನಲ್ಲೇ ಕಾಂಗ್ರೆಸ್ ಪಕ್ಷಕ್ಕೆ ಗುಡ್ ಬೈ ಹೇಳಿದ ಕ್ಯಾಪ್ಟನ್ ಅಜಯ್ ಯಾದವ್

1-traa

Train; ಹಳಿತಪ್ಪಿದ ಅಗರ್ತಲಾ-ಲೋಕಮಾನ್ಯ ತಿಲಕ್ ಎಕ್ಸ್‌ಪ್ರೆಸ್‌ನ 8 ಬೋಗಿಗಳು

Vimana 2

Hoax bomb calls; ಕ್ರಮ ತೆಗೆದುಕೊಳ್ಳಲಾಗುತ್ತಿದೆ:ಸಚಿವ ರಾಮ್ ಮೋಹನ್ ನಾಯ್ಡು

Lawrwnce: ಬಿಷ್ಣೋಯಿ ಗ್ಯಾಂಗ್‌ ಸದಸ್ಯರ ಗಡಿಪಾರು ಮನವಿಗೆ ಕೆನಡಾ ಪ್ರತಿಕ್ರಿಯೆ ಇಲ್ಲ: ಭಾರತ

Lawrwnce: ಬಿಷ್ಣೋಯಿ ಗ್ಯಾಂಗ್‌ ಸದಸ್ಯರ ಗಡಿಪಾರು ಮನವಿಗೆ ಕೆನಡಾ ಪ್ರತಿಕ್ರಿಯೆ ಇಲ್ಲ: ಭಾರತ

Panaji: ಗೋವಾದಲ್ಲಿ ಧಾರಾಕಾರ ಮಳೆ: ಜನಜೀವನ ಅಸ್ತವ್ಯಸ್ತ

Panaji: ಗೋವಾದಲ್ಲಿ ಧಾರಾಕಾರ ಮಳೆ: ಜನಜೀವನ ಅಸ್ತವ್ಯಸ್ತ

MUST WATCH

udayavani youtube

ಡೂಪ್ಲಿಕೇಟ್ ಕೀ ಮಹತ್ವವೇನು ?

udayavani youtube

ಅಗಲಿದ ರತನ್ ಟಾಟಾಗೆ ಶ್ರದ್ಧಾಂಜಲಿ ಸಲ್ಲಿಸಿದ ಅಂಬಾನಿ ಕುಟುಂಬ

udayavani youtube

ಮಕ್ಕಳ ಸ್ಕ್ರೀನ್ ಟೈಮಿಂಗ್ ಕುರಿತು ಎಚ್ಚರಿಕೆ ಅತ್ಯವಶ್ಯಕ.. ಇಲ್ಲಿದೆ ಅಗತ್ಯ ಮಾಹಿತಿ

udayavani youtube

ಉಡುಪಿಯ ಈ ಜಾಗದಲ್ಲಿ ರಸಂ ಪುರಿ ತುಂಬಾನೇ ಫೇಮಸ್

udayavani youtube

ತಿರುಪತಿ ಲಡ್ಡು ವಿವಾದ ಪೇಜಾವರ ಶ್ರೀಗಳು ಹೇಳಿದ್ದೇನು ?

ಹೊಸ ಸೇರ್ಪಡೆ

1-cccc

Haryana; ಸೋಲಿನ ಬೆನ್ನಲ್ಲೇ ಕಾಂಗ್ರೆಸ್ ಪಕ್ಷಕ್ಕೆ ಗುಡ್ ಬೈ ಹೇಳಿದ ಕ್ಯಾಪ್ಟನ್ ಅಜಯ್ ಯಾದವ್

1-traa

Train; ಹಳಿತಪ್ಪಿದ ಅಗರ್ತಲಾ-ಲೋಕಮಾನ್ಯ ತಿಲಕ್ ಎಕ್ಸ್‌ಪ್ರೆಸ್‌ನ 8 ಬೋಗಿಗಳು

ಕಾಮಿಡಿ ಕಿಲಾಡಿಗಳು ಪ್ರೀಮಿಯರ್ ಲೀಗ್ ಗ್ರ್ಯಾಂಡ್‌ ಫಿನಾಲೆ

ಅ.19-20ರಂದು ಕಾಮಿಡಿ ಕಿಲಾಡಿಗಳು ಪ್ರೀಮಿಯರ್ ಲೀಗ್ ಗ್ರ್ಯಾಂಡ್‌ ಫಿನಾಲೆ

Congress Govt.,: ವಾಲ್ಮೀಕಿ ಸಮಾಜದ ಕ್ಷಮೆ ಕೇಳಲಿ: ಆರಗ ಜ್ಞಾನೇಂದ್ರ

Congress Govt.,: ವಾಲ್ಮೀಕಿ ಸಮಾಜದ ಕ್ಷಮೆ ಕೇಳಲಿ: ಆರಗ ಜ್ಞಾನೇಂದ್ರ

Bhool Bhulaiyaa 3; ವಿದ್ಯಾ-ಮಾಧುರಿ ನಾಟ್ಯ ಲಹರಿ

Bhool Bhulaiyaa 3; ವಿದ್ಯಾ-ಮಾಧುರಿ ನಾಟ್ಯ ಲಹರಿ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.