![ಜರ್ಮನಿ ಅಧ್ಯಕ್ಷರ ಎಕ್ಸ್ ಖಾತೆ ಹ್ಯಾಕ್: ಬಿಹಾರ ಇಲಾಖೆ ಹೆಸರಿಟ್ಟ ಕಿಡಿಗೇಡಿಗಳು](https://www.udayavani.com/wp-content/uploads/2025/02/9-21-415x249.jpg)
![ಜರ್ಮನಿ ಅಧ್ಯಕ್ಷರ ಎಕ್ಸ್ ಖಾತೆ ಹ್ಯಾಕ್: ಬಿಹಾರ ಇಲಾಖೆ ಹೆಸರಿಟ್ಟ ಕಿಡಿಗೇಡಿಗಳು](https://www.udayavani.com/wp-content/uploads/2025/02/9-21-415x249.jpg)
Team Udayavani, Oct 16, 2019, 3:09 AM IST
ನವದೆಹಲಿ: ಅಕ್ರಮ ಹಣ ವರ್ಗಾವಣೆ ಪ್ರಕರಣದಡಿ ನನ್ನನ್ನು ಬಂಧಿಸಿರುವುದು ರಾಜಕೀಯ ಪಿತೂರಿ ಎಂದು ಮಾಜಿ ಸಚಿವ ಡಿ.ಕೆ. ಶಿವಕುಮಾರ್ ದೆಹಲಿ ಹೈಕೋರ್ಟ್ನಲ್ಲಿ ತಮ್ಮ ವಕೀಲರ ಮೂಲಕ ವಾದ ಮಂಡಿಸಿದ್ದಾರೆ. ತಮ್ಮ ವಿರುದ್ಧ ಯಾವುದೇ ಸಾಕ್ಷ್ಯಾಧಾರಗಳು ಇಲ್ಲದಿದ್ದರೂ ಜಾರಿ ನಿರ್ದೇಶನಾಲಯವು (ಇ.ಡಿ) ತಮ್ಮನ್ನು ಅನಾವಶ್ಯವಾಗಿ ಬಂಧನದಲ್ಲಿಟ್ಟುಕೊಂಡಿದೆ ಎಂದು ಅವರು ಇದೇ ವೇಳೆ ಆಪಾದಿಸಿದ್ದಾರೆ.
ಮಂಗಳವಾರ ನಡೆದ ಡಿಕೆಶಿಯವರ ಜಾಮೀನು ಅರ್ಜಿ ವಿಚಾರಣೆಯ ವೇಳೆ ವಾದ ಮಂಡಿಸಿದ ಡಿಕೆಶಿ ಪರ ವಕೀಲರ ತಂಡ, “ಶಿವಕುಮಾರ್ ಅವರು ಅನಾರೋಗ್ಯದಿಂದ ಬಳಲುತ್ತಿದ್ದಾರೆ. ಸೆಪ್ಟೆಂಬರ್ನಲ್ಲಿ ಅವರಿಗೆ ಆ್ಯಂಜಿಯೋಗ್ರಫಿ ನಡೆಸಲಾಗಿದೆ. ಹಾಗಿದ್ದರೂ, ಅವರನ್ನು 45 ದಿನಗಳವರೆಗೆ ಬಂಧನದಲ್ಲಿ ಇರಿಸಲಾಗಿದೆ. ಅನಾರೋಗ್ಯದಿಂದ ಬಳಲುತ್ತಿರುವ ತಮ್ಮ ಕಕ್ಷಿದಾರರನ್ನು ದೀರ್ಘಾವಧಿಯ ಬಂಧನದಲ್ಲಿ ಇರಿಸುವ ಹಾಗಿಲ್ಲ. ಹಾಗಾಗಿ, ಅವರಿಗೆ ಜಾಮೀನು ಮಂಜೂರು ಮಾಡಬೇಕು’ ಎಂದು ನ್ಯಾ. ಸುರೇಶ್ ಕೈಟ್ ಅವರಲ್ಲಿ ಮನವಿ ಮಾಡಿತು.
“ರಾಜಕೀಯ ಪಿತೂರಿ’: ಮಂಗಳವಾರದ ವಿಚಾರಣೆ ಯಲ್ಲಿ ತಮ್ಮ ವಾದ ಮಂಡಿಸಿದ ವಕೀಲ ಸಿದ್ದಾರ್ಥ್ ಲೂತ್ರಾ, “ಶಿವಕುಮಾರ್ ವಿರುದ್ಧದ ಅಕ್ರಮ ಹಣ ವರ್ಗಾವಣೆ ಪ್ರಕರಣ ಒಂದು ರಾಜಕೀಯ ಪಿತೂರಿಯಾಗಿದೆ. ಮೂಲತಃ ಅವರ ಮೇಲೆ ಇದ್ದಿದ್ದು ಆದಾಯ ತೆರಿಗೆ ಕಾಯ್ದೆಯ ಪ್ರಕರಣ. ಆ ಪ್ರಕರಣದ ಕ್ರಿಮಿನಲ್ ಸಂಚಿನ ಪ್ರಕರಣವನ್ನು ಹೊಸದಾಗಿ ಸೇರ್ಪಡೆಗೊಳಿಸಿರುವ ಇ.ಡಿ., ಶಿವಕುಮಾರ್ ವಿರುದ್ಧ ಅಕ್ರಮ ಹಣ ವರ್ಗಾವಣೆ (ಪಿಎಂಎಲ್ಎ) ಪ್ರಕರಣ ದಾಖಲಿಸಿದೆ.
ಶಿವಕುಮಾರ್ರನ್ನು ತನ್ನ ಹಿಡಿತಕ್ಕೆ ತೆಗೆದುಕೊಳ್ಳುವ ಉದ್ದೇಶದಿಂದಲೇ ಇ.ಡಿ. ಈ ಪ್ರಕರಣವನ್ನು ದಾಖಲಿಸುತ್ತಿದೆ’ ಎಂದರು. ಅಲ್ಲದೆ, ಶಿವಕುಮಾರ್ ಈಗಾಗಲೇ ಏಳು ಬಾರಿ ಶಾಸಕರಾಗಿರುವವರು. ಸಮಾಜ ದೊಂದಿಗೆ ಉತ್ತಮ ಬಾಂಧವ್ಯ ಹೊಂದಿ ರು ವವರು. ಅವರು, ಜಾಮೀನು ಸಿಕ್ಕಕೂಡಲೇ ದೇಶ ಬಿಟ್ಟು ಓಡಿ ಹೋಗುವವರಲ್ಲ. ಅಷ್ಟು ಅನುಮಾನವಿದ್ದರೆ ಅವರ ಪಾಸ್ಪೋರ್ಟ್ನ್ನು ಸರ್ಕಾರ ವಶಪಡಿಸಿಕೊಳ್ಳಲಿ. ಜಾಮೀನಿನ ನಂತರವೂ ಶಿವಕುಮಾರ್ ತನಿಖೆಗೆ ಸಹಕರಿ ಸಲಿದ್ದಾರೆ. ಹಾಗಾಗಿ, ಅವರಿಗೆ ಜಾಮೀನು ನೀಡಬೇಕು ಎಂದು ಸಿದ್ದಾರ್ಥ್ ಮನವಿ ಮಾಡಿದರು.
ಇದು ಐಟಿ ಪ್ರಕರಣ, ಇ.ಡಿಯದ್ದಲ್ಲ!: ಈ ಸಂದರ್ಭದಲ್ಲಿ ಡಿಕೆಶಿ ಪರ ತಮ್ಮ ವಾದ ಮಂಡಿಸಿದ ಅಭಿಷೇಕ್ ಸಿಂಘ್ವಿ, “ಶಿವಕುಮಾರ್ ವಿರುದ್ಧ ಇ.ಡಿ ಮಾಡುತ್ತಿರುವ ಆರೋ ಪಗಳನ್ನು ಸಾಬೀತುಪಡಿಸುವ ಯಾವುದೇ ಸಾಕ್ಷ್ಯಾಧಾರಗಳನ್ನು ಇ.ಡಿ ಕಲೆಹಾಕಿಲ್ಲ. ಅಲ್ಲದೆ, ಅವರ ವಿರುದ್ಧ ದಾಖಲಾಗಿರುವ ಪ್ರಕರಣ ಕೇವಲ ಐಟಿ ಇಲಾಖೆಯ ವ್ಯಾಪ್ತಿಗೆ ಬರುವಂಥದ್ದು. ಇದರಲ್ಲಿ ಇ.ಡಿಯು ದೀರ್ಘಾವಧಿಯವರೆಗೆ ನಮ್ಮ ಕಕ್ಷಿದಾರರನ್ನು ಬಂಧನ ದಲ್ಲಿಟ್ಟುಕೊಂಡು ವಿಚಾರಣೆ ನಡೆಸುವ ಪ್ರಮೇಯವೇ ಇಲ್ಲ’ ಎಂದು ವಾದಿಸಿದರು.
ಗುರುವಾರಕ್ಕೆ ಮುಂದೂಡಿಕೆ: ಡಿಕೆಶಿ ಪರ ವಕೀಲರ ವಾದವನ್ನು ಆಲಿಸಿದ ನ್ಯಾಯಮೂರ್ತಿ ಸುರೇಶ್ ಕೈಟ್, ವಿಚಾರಣೆಯನ್ನು ಅ 17ಕ್ಕೆ ಮುಂದೂಡಿದರು. ಅಂದು, ಇ.ಡಿ ಪರ ವಕೀಲರು ತಮ್ಮ ಅಹವಾಲು ಸಲ್ಲಿಸುವಂತೆ ನ್ಯಾಯಮೂರ್ತಿ ಸೂಚಿಸಿದ್ದಾರೆ.
ಡಿ.ಕೆ. ಶಿವಕುಮಾರ್ ಆಪ್ತರಿಗೆ “ಮಧ್ಯಂತರ ರಕ್ಷಣೆ’
ಬೆಂಗಳೂರು: ಐಟಿ ದಾಳಿ ವೇಳೆ ದೆಹಲಿ ನಿವಾಸದಲ್ಲಿ ಸಿಕ್ಕ 8.69 ಕೋಟಿ ರೂ. ಬೇನಾಮಿ ಹಣದ ಪ್ರಕರಣಕ್ಕೆ ಸಂಬಂಧಿಸಿದಂತೆ ಮಾಜಿ ಸಚಿವ ಡಿ.ಕೆ. ಶಿವಕುಮಾರ್ ಆಪ್ತರಾದ ಸಚಿನ್ ನಾರಾಯಣ ಹಾಗೂ ಸುನೀಲ್ ಶರ್ಮಾ ಅವರನ್ನು 1 ವಾರದ ಮಟ್ಟಿಗೆ ಬಂಧಿಸದಂತೆ ಹೈಕೋರ್ಟ್ ಜಾರಿ ನಿರ್ದೇಶನಾಲಯಕ್ಕೆ ನಿರ್ದೇಶನ ನೀಡಿದೆ.
ಈ ಕುರಿತು ಸಚಿನ್ ನಾರಾಯಣ, ಸುನೀಲ್ ಶರ್ಮಾ ಹಾಗೂ ಇತರರು ಸಲ್ಲಿಸಿದ್ದ ಮಧ್ಯಂತರ ಅರ್ಜಿ ವಿಚಾರಣೆ ನಡೆಸಿದ ಮುಖ್ಯ ನ್ಯಾಯಮೂರ್ತಿ ಎ.ಎಸ್. ಓಕ್ ಹಾಗೂ ನ್ಯಾ. ಎಸ್.ಆರ್. ಕೃಷ್ಣಕುಮಾರ್ ಅವರಿದ್ದ ವಿಭಾಗೀಯ ನ್ಯಾಯಪೀಠ, ಅರ್ಜಿದಾರರನ್ನು ಬಂಧಿಸದಂತೆ ಈ ಹಿಂದೆ ನೀಡಿದ್ದ ಮಧ್ಯಂತರ ರಕ್ಷಣೆಯನ್ನು ಒಂದು ವಾರ ವಿಸ್ತರಿಸಿ ಆದೇಶಿಸಿತು. ಪ್ರಕರಣದ ಸಂಬಂಧ ಏಕಸದಸ್ಯ ಪೀಠ ನೀಡಿದ್ದ ತೀರ್ಪು ಪ್ರಶ್ನಿಸಿ ಸುಪ್ರಿಂಕೋರ್ಟ್ನಲ್ಲಿ ಮೇಲ್ಮನವಿ ಸಲ್ಲಿಸಲು ಅವಕಾಶ ಕೋರಿದ್ದ ಅರ್ಜಿದಾರರು ಅಲ್ಲಿಯವರೆಗೆ ತಮ್ಮನ್ನು ಬಂಧಿಸದಂತೆ ಜಾರಿ ನಿರ್ದೇಶನಾಲಯಕ್ಕೆ ನಿರ್ದೇಶಿಸಬೇಕು ಎಂದು ಕೋರಿದ್ದರು.
ಬಂಧನಾವಧಿ ವಿಸ್ತರಣೆ: ಡಿ.ಕೆ.ಶಿವಕುಮಾರ್ರವರ ನ್ಯಾಯಾಂಗ ಬಂಧನವನ್ನು ದೆಹಲಿ ಸ್ಥಳೀಯ ನ್ಯಾಯಾಲಯ ಅ.25ರವರೆಗೆ ವಿಸ್ತರಿಸಿದೆ. ಈ ಹಿಂದೆ ವಿಧಿಸಲಾಗಿದ್ದ ಬಂಧನಾವಧಿಯು ಅ.15ರಂದು (ಮಂಗಳವಾರ) ಮುಕ್ತಾಯಗೊಂಡ ಹಿನ್ನೆಲೆಯಲ್ಲಿ ಅವರನ್ನು ನ್ಯಾಯಾಲಯಕ್ಕೆ ಹಾಜರುಪಡಿಸಲಾಗಿತ್ತು. ವಿಚಾರಣೆ ವೇಳೆ, ಇ.ಡಿ ಪರ ವಕೀಲರು, ಹೆಚ್ಚುವರಿ ವಿಚಾರಣೆಗಾಗಿ ಕಾಲಾವಕಾಶ ಕೋರಿದರು. ಇದಕ್ಕೆ ಡಿಕೆಶಿ ಪರ ವಕೀಲರು ವಿರೋಧಿಸಲಿಲ್ಲ. ಹಾಗಾಗಿ, ನ್ಯಾ.ಅಜಯ್ ಕುಮಾರ್ ಕುಹರ್, ಡಿಕೆಶಿಯವರ ಬಂಧನಾವಧಿಯನ್ನು ಅ.25ರವರೆಗೆ ವಿಸ್ತರಿಸಿ ಆದೇಶ ನೀಡಿದರು.
ಕುರ್ಚಿ ನೀಡಲು ಕೋರ್ಟ್ ಸೂಚನೆ: ತಿಹಾರ್ ಜೈಲಿನಲ್ಲಿರುವ ಡಿಕೆಶಿರವರ ಸೆಲ್ಗೆ ಕುರ್ಚಿ, ಟಿವಿಯನ್ನು ಕೊಡಬೇಕೆಂದು ದೆಹಲಿಯ ಸಿಬಿಐ ನ್ಯಾಯಾಲಯ, ಜೈಲಿನ ಅಧಿಕಾರಿಗಳಿಗೆ ಸೂಚಿಸಿದೆ. ಶಿವಕುಮಾರ್ ಬೆನ್ನುನೋವಿನಿಂದ ಬಳಲುತ್ತಿದ್ದಾರೆ ಎಂದು ವಕೀಲರು ನ್ಯಾಯಾಲಯಕ್ಕೆ ತಿಳಿಸಿದರು. ಈ ಹಿನ್ನೆಲೆಯಲ್ಲಿ ಜೈಲಿನ ನಿಯಮಗಳಿಗೆ ಅನುಸಾರವಾಗಿ ನೀಡಬೇಕಿರುವ ಸೌಲಭ್ಯಗಳನ್ನು ನೀಡುವಂತೆ ನ್ಯಾಯಾಧೀಶರು ಸೂಚಿಸಿದರು.
Politics: ಸಿದ್ದರಾಮಯ್ಯ 5 ವರ್ಷವೂ ಸಿಎಂ: ಕೊತ್ತೂರು ಮಂಜುನಾಥ್
Air Lift: ಪಂಜಾಬ್ನಲ್ಲಿ ರೈತ ಮುಖಂಡ ಶಾಂತಕುಮಾರ್ಗೆ ಅಪಘಾತ; ಬೆಂಗಳೂರಿಗೆ ಏರ್ಲಿಫ್ಟ್
Mahakumbh; ಸಿದ್ದರಾಮಯ್ಯನವರೇ 5 ವರ್ಷ ಸಿಎಂ ಆಗಿರಲಿ: ಅಭಿಮಾನಿಯ ಪ್ರಾರ್ಥನೆ
Congress ಪಕ್ಷಕ್ಕೆ ಮರು ಸೇರ್ಪಡೆಯಾದ ಎಲ್.ಆರ್.ಶಿವರಾಮೇಗೌಡ, ಬ್ರಿಜೇಶ್ ಕಾಳಪ್ಪ
Siddaramaiah ನಮ್ಮ ನಾಯಕ, ಹೆಸರು ದುರ್ಬಳಕೆ ಮಾಡಿಕೊಳ್ಳುವ ಅಗತ್ಯವಿಲ್ಲ: ಡಿಕೆಶಿ
You seem to have an Ad Blocker on.
To continue reading, please turn it off or whitelist Udayavani.