Bangladesh; ಶೇಖ್‌ ಹಸೀನಾಗೆ ಆಶ್ರಯ: ಭಾರತಕ್ಕೆ ತ್ರಿಶಂಕು ಸ್ಥಿತಿ

ಬಾಂಗ್ಲಾ ಬೇಕೋ, ಹಸೀನಾ ಮುಖ್ಯವೋ ನಿರ್ಧರಿಸಿ: ಬಿಎನ್ ಪಿ... ಹಸೀನಾಗೆ ಎಲ್ಲೂ ಸಿಗುತ್ತಿಲ್ಲ ರಾಜಾಶ್ರಯ

Team Udayavani, Aug 10, 2024, 6:40 AM IST

1-aaasaasa

ಹೊಸದಿಲ್ಲಿ: ಬಾಂಗ್ಲಾ ಮಾಜಿ ಪ್ರಧಾನಿ ಶೇಖ್‌ ಹಸೀನಾ ವಿಚಾರದಲ್ಲಿ ಭಾರತ ಈಗ ತ್ರಿಶಂಕು ಸ್ಥಿತಿಗೆ ತಲುಪಿದೆ. ಅತ್ತ ಹಸೀನಾಗೆ ಆಶ್ರಯ ನೀಡಿರುವುದರ ಬಗ್ಗೆ ಬಾಂಗ್ಲಾದ ಪಕ್ಷಗಳು ಕಿಡಿ ಕಾರುತ್ತಿದ್ದರೆ, ಇತ್ತ ಹಸೀನಾಗೆ ಬೇರೆ ರಾಷ್ಟ್ರಗಳಲ್ಲಿ ರಾಜಾಶ್ರಯ ದೊರೆಯುತ್ತಿಲ್ಲ, ಕೆಲವು ದಿನಗಳ ಕಾಲ ಭಾರತದಲ್ಲೇ ಉಳಿಯಬೇಕಾದ ಪರಿಸ್ಥಿತಿ ಎದುರಾಗಿದೆ.

ಹಸೀನಾಗೆ ಭಾರತ ಆಶ್ರಯ ನೀಡಿರುವುದರಿಂದ ಉಭಯ ರಾಷ್ಟ್ರಗಳ ಸಂಬಂಧ ಹಾಳಾಗಬಹುದು ಎಂದು ಬಾಂಗ್ಲಾದ ವಿಪಕ್ಷ ಬಾಂಗ್ಲಾದೇಶ ನ್ಯಾಶನಲಿಸ್ಟ್‌ ಪಾರ್ಟಿ (BNP) ಎಚ್ಚರಿಕೆ ನೀಡಿದೆ. ಬಿಎನ್‌ಪಿ ಹಿರಿಯ ನಾಯಕ ಗಯೇಶ್ವರ್‌ ರಾಯ್‌ ಮಾತನಾಡಿ, “ಭಾರತಕ್ಕೆ ಒಂದು ರಾಷ್ಟ್ರದೊಂದಿಗಿನ ಸಂಬಂಧ ಮುಖ್ಯವೋ ಅಥವಾ ಒಂದು ಪಕ್ಷವೋ ಎಂಬುದನ್ನು ಅದೇ ನಿರ್ಧರಿಸಬೇಕು’ ಎಂದಿದ್ದಾರೆ. ಮತ್ತೂಬ್ಬ ನಾಯಕ ಖಂಡಕರ್‌ ಮೋಷರಫ್ ಹುಸೇನ್‌, ನಮ್ಮ ಶತ್ರುವಿಗೆ ಯಾರು ಆಶ್ರಯ ನೀಡುತ್ತಾರೋ ಅಂಥವರ ವಿರುದ್ಧವೂ ಅಸಹನೆ ಮೂಡುವುದು ಸಹಜ ಎಂದಿದ್ದಾರೆ. ಇತ್ತ ಭಾರತಕ್ಕೆ ತಾತ್ಕಾಲಿಕವಾಗಿ ಬಂದ ಹಸೀನಾ ಬ್ರಿಟನ್‌ಗೆ ತೆರಳಬೇಕು ಎಂದುಕೊಂಡಿದ್ದರು. ಆದರೆ ಅಲ್ಲಿನ ಸರಕಾರ ಇದಕ್ಕೆ ಅನುಮತಿ ನೀಡಿಲ್ಲ. ಇತ್ತ ಅಮೆರಿಕ ಕೂಡ ಹಸೀನಾರ ವೀಸಾ ನಿರ್ಬಂಧಿಸಿದ್ದು , ಯುಎಇ ಹಾಗೂ ಐರೋಪ್ಯ ರಾಷ್ಟ್ರಗಳಲ್ಲಿ ಆಶ್ರಯ ಕೋರಲು ಹಸೀನಾ ಯೋಜಿಸಿ ದ್ದಾರೆ ಎನ್ನಲಾಗಿದೆ. ಅಲ್ಲಿಯವರೆಗೂ ಅವರಿಗೆ ಆಶ್ರಯ ನೀಡಲೇಬೇಕಾದ ಬಿಕ್ಕಟ್ಟಿಗೆ ಭಾರತ ಸಿಲುಕಿದೆ.

7,200 ಭಾರತೀಯ ವಿದ್ಯಾರ್ಥಿಗಳು ಸ್ವದೇಶಕ್ಕೆ
ಬಾಂಗ್ಲಾ ಹಿಂಸಾಚಾರದ ಹಿನ್ನೆಲೆಯಲ್ಲಿ ಆ.1ರ ವರೆಗೆ 2 ವಾರಗಳಲ್ಲಿ 7,200ಕ್ಕೂ ಅಧಿಕ ಭಾರತೀಯ ವಿದ್ಯಾರ್ಥಿಗಳು ಸ್ವದೇಶಕ್ಕೆ ಮರಳಿದ್ದಾರೆ ಎಂದು ಕೇಂದ್ರ ಸರಕಾರ ರಾಜ್ಯಸಭೆಗೆ ತಿಳಿಸಿದೆ. ಬಾಂಗ್ಲಾದಲ್ಲಿರುವ ಭಾರತೀಯ ಹೈಕಮಿಷನ್‌ಗಳು ಭಾರತೀಯ ಪ್ರಜೆಗಳನ್ನು ಸ್ವದೇಶಕ್ಕೆ ಕಳುಹಿಸಲು ನೆರವಾಗುತ್ತಿವೆ ಎಂದೂ ವಿದೇಶಾಂಗ ವ್ಯವಹಾರಗಳ ಖಾತೆ ರಾಜ್ಯ ಸಚಿವ ಕೀರ್ತಿವರ್ಧನ್‌ ಸಿಂಗ್‌ ತಿಳಿಸಿದ್ದಾರೆ.

ಭಾರತ-ಬಾಂಗ್ಲಾ ಗಡಿ ನಿಗಾಕ್ಕೆ ಕೇಂದ್ರದಿಂದ 5 ಸದಸ್ಯರ ಸಮಿತಿ
ಭಾರತ-ಬಾಂಗ್ಲಾ ಗಡಿಯಲ್ಲಿನ ಪ್ರಸಕ್ತ ಪರಿಸ್ಥಿತಿ ಪರಿಶೀಲಿಸುವುದಕ್ಕಾಗಿ ಕೇಂದ್ರ ಸರಕಾರ ಬಿಎಸ್‌ಎಫ್ನ ಪೂರ್ವ ಕಮಾಂಡ್‌ನ‌ ಹೆಚ್ಚುವರಿ ಮಹಾ ನಿರ್ದೇಶಕರ (ಎಡಿಜಿ) ನೇತೃತ್ವದಲ್ಲಿ 5 ಸದಸ್ಯರ ಸಮಿತಿಯನ್ನು ರಚಿಸಿದೆ. ಬಾಂಗ್ಲಾದಲ್ಲಿ ಮಧ್ಯಾಂತರ ಸರಕಾರ ಅಸ್ತಿತ್ವಕ್ಕೆ ಬಂದಿದ್ದು, ಮಾಜಿ ಪ್ರಧಾನಿ ಹಸೀನಾಗೆ ಭಾರತ ಆಶ್ರಯ ನೀಡುವುದರ ಬಗ್ಗೆ ಆಕ್ಷೇಪ ಕೇಳಿಬರುತ್ತಿರುವ ನಡುವೆಯೇ ಈ ಬೆಳವಣಿಗೆ ನಡೆದಿದೆ. ಈ ಬಗ್ಗೆ ಗೃಹ ಸಚಿವ ಅಮಿತ್‌ ಶಾ ಮಾಹಿತಿ ನೀಡಿದ್ದು,”ಬಾಂಗ್ಲಾದ ಪ್ರಸಕ್ತ ಪರಿಸ್ಥಿತಿ ಗಮನದಲ್ಲಿಟ್ಟುಕೊಂಡು ಈ ಸಮಿತಿ ರಚಿಸಲಾಗಿದೆ. ಸಮಿತಿಯ ಅಧಿಕಾರಿಗಳು ಬಾಂಗ್ಲಾದ ಜತೆ ಸಂವಹನ ನಡೆಸಿ, ಭಾರತೀಯ ಪ್ರಜೆಗಳ, ಹಿಂದೂಗಳು ಹಾಗೂ ಇತರ ಅಲ್ಪಸಂಖ್ಯಾಕರ ಸುರಕ್ಷೆಯನ್ನು ಖಾತರಿ ಪಡಿಸಿಕೊಳ್ಳಲಿದ್ದಾರೆ’ ಎಂದಿದ್ದಾರೆ.

ಟಾಪ್ ನ್ಯೂಸ್

Kundapura: ಖಾಸಗಿ ಬಸ್‌ಗಳ ಮಧ್ಯೆ ಪೈಪೋಟಿ… ನಿರ್ವಾಹಕನಿಗೆ ಗಾಯ

Kundapura: ಖಾಸಗಿ ಬಸ್‌ಗಳ ಮಧ್ಯೆ ಪೈಪೋಟಿ… ನಿರ್ವಾಹಕನಿಗೆ ಗಾಯ

Modi (2)

PM ಮೋದಿ ಅಮೆರಿಕ ಪ್ರವಾಸ; ಮಣಿಪುರಕ್ಕೆ ಹೋಗುವುದಿಲ್ಲವೇಕೆ?:ಕಾಂಗ್ರೆಸ್ ಪ್ರಶ್ನೆ

High Court: ಮಹಿಳೆ ಅಪಹರಣ ಕೇಸ್‌; ರೇವಣ್ಣ ಅರ್ಜಿ ವಿಚಾರಣೆ ಮುಂದಕ್ಕೆ

High Court: ಮಹಿಳೆ ಅಪಹರಣ ಕೇಸ್‌; ಎಚ್‌.ಡಿ.ರೇವಣ್ಣ ಅರ್ಜಿ ವಿಚಾರಣೆ ಮುಂದಕ್ಕೆ

11

Eshwara Khandre: ಮಹದಾಯಿಗೆ ಅನುಮತಿ ಸಿಗೋವರೆಗೂ ಮರ ಕಡಿಯಲು ಬಿಡಲ್ಲ

H.D.Kumaraswamy

H. D. Kumaraswamy: ರಾಜಕೀಯ ಮಾಡಲು, ಬೆಂಕಿ ಹಚ್ಚಲು ಬಂದಿಲ್ಲ

1-frr

BJP ಶಾಸಕ ಮುನಿರತ್ನಗೆ ಷರತ್ತುಬದ್ಧ ಜಾಮೀನು; ಆದರೂ ತಪ್ಪಿಲ್ಲ ಸಂಕಷ್ಟ!

HP ಯಿಂದ ಹೊಸ ಪ್ರಿಂಟರ್‌ಗಳ ಬಿಡುಗಡೆ

HP ಯಿಂದ ಹೊಸ ಪ್ರಿಂಟರ್‌ಗಳ ಬಿಡುಗಡೆ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Modi (2)

PM ಮೋದಿ ಅಮೆರಿಕ ಪ್ರವಾಸ; ಮಣಿಪುರಕ್ಕೆ ಹೋಗುವುದಿಲ್ಲವೇಕೆ?:ಕಾಂಗ್ರೆಸ್ ಪ್ರಶ್ನೆ

1-tirupati-laddu

Tirupati ತಿರುಪತಿ ಲಡ್ದು ಪ್ರಸಾದದಲ್ಲಿ ಬೀಫ್ ಫ್ಯಾಟ್!:ಲ್ಯಾಬ್ ವರದಿಯಲ್ಲಿ ದೃಢ

Chennai: ಗ್ರಾಹಕ ನಿಂದಿಸಿದ್ದಕ್ಕೆ ಖಿನ್ನತೆಗೆ ಒಳಗಾಗಿ ಫುಡ್‌ ಡೆಲಿವರಿ ಯುವಕ ಆತ್ಮಹತ್ಯೆ

Chennai: ಗ್ರಾಹಕ ನಿಂದಿಸಿದ್ದಕ್ಕೆ ಖಿನ್ನತೆಗೆ ಒಳಗಾಗಿ ಫುಡ್‌ ಡೆಲಿವರಿ ಯುವಕ ಆತ್ಮಹತ್ಯೆ

Haryana: Financial assistance to women, MSP promised; BJP manifesto released

Haryana: ಮಹಿಳೆಯರಿಗೆ ವಿತ್ತ ನೆರವು, ಎಂಎಸ್‌ ಪಿ ಭರವಸೆ; ಬಿಜೆಪಿ ಪ್ರಣಾಳಿಕೆ ಬಿಡುಗಡೆ

Chennai: ರಸ್ತೆ ಬದಿ ಪತ್ತೆಯಾದ ಸೂಟ್‌ಕೇಸ್‌ನಲ್ಲಿತ್ತು ಮಹಿಳೆಯ ಕತ್ತರಿಸಿದ ದೇಹದ ಭಾಗಗಳು…

Chennai: ರಸ್ತೆ ಬದಿ ಪತ್ತೆಯಾದ ಸೂಟ್‌ಕೇಸ್‌ನಲ್ಲಿತ್ತು ಮಹಿಳೆಯ ಕತ್ತರಿಸಿದ ದೇಹದ ಭಾಗಗಳು…

MUST WATCH

udayavani youtube

Kaljigaದಲ್ಲಿ ದೈವದ ಅಪಪ್ರಚಾರ ನಡೆದಿಲ್ಲ, ಸಿನಿಮಾ ನೋಡಿದ ಬಳಿಕ ಈ ಬಗ್ಗೆ ಪ್ರತಿಕ್ರಿಯಿಸಿ

udayavani youtube

ನವಜಾತ ಶಿಶುಗಳಲ್ಲಿ ಶ್ರವಣ ಶಕ್ತಿ ಸಮಸ್ಯೆ ಕುರಿತು ಸಂಪೂರ್ಣ ಮಾಹಿತಿ

udayavani youtube

ಅಂತರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆ ಅಂಗವಾಗಿ ತಾಲೂಕು ಮಟ್ಟದ ಮಾನವ ಸರಪಳಿ ಕಾರ್ಯಕ್ರಮ

udayavani youtube

ಈಟ್ ರಾಜಾ ಶಾಪ್ ನಲ್ಲಿ ಜ್ಯೂಸ್ ಕುಡಿಯೋದಷ್ಟೇ ಅಲ್ಲ ತಿನ್ನಲೂ ಬಹುದು

udayavani youtube

ಅಯ್ಯೋ…ಸಂತೆಕಟ್ಟೆ ಅಂಡರ್ ಪಾಸ್ ಪ್ರಯಾಣ ನಿತ್ಯ ನರಕ!

ಹೊಸ ಸೇರ್ಪಡೆ

POCSO ಪ್ರಕರಣ : ಜ್ಯೋತಿಷಿ ನರಸಿಂಹ ಪ್ರಸಾದ್‌ ಪಾಂಗಣ್ಣಾಯ ಬಂಧನ

POCSO ಪ್ರಕರಣ : ಜ್ಯೋತಿಷಿ ನರಸಿಂಹ ಪ್ರಸಾದ್‌ ಪಾಂಗಣ್ಣಾಯ ಬಂಧನ

Kundapura: ಪ್ರಾಣಿ ತ್ಯಾಜ್ಯ ಚೀಲದಲ್ಲಿ ಪತ್ತೆ… ಕೇಸು ದಾಖಲು

Kundapura: ಪ್ರಾಣಿ ತ್ಯಾಜ್ಯ ಚೀಲದಲ್ಲಿ ಪತ್ತೆ… ಕೇಸು ದಾಖಲು

1-baa

Mangalore Port ಇಬ್ಬರು ಬಾಲಕಾರ್ಮಿಕರ ರಕ್ಷಣೆ

Kundapura: ಖಾಸಗಿ ಬಸ್‌ಗಳ ಮಧ್ಯೆ ಪೈಪೋಟಿ… ನಿರ್ವಾಹಕನಿಗೆ ಗಾಯ

Kundapura: ಖಾಸಗಿ ಬಸ್‌ಗಳ ಮಧ್ಯೆ ಪೈಪೋಟಿ… ನಿರ್ವಾಹಕನಿಗೆ ಗಾಯ

12

High Court: ಬಿಎಸ್‌ವೈ ಪೋಕ್ಸೋ ಕೇಸ್‌: ಸೆ.27ಕ್ಕೆ ವಿಚಾರಣೆ ಮುಂದಕ್ಕೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.