Narendra Modi ಪ್ರಮಾಣ ವಚನ ಕಾರ್ಯಕ್ರಮಕ್ಕೆ ಬಾಂಗ್ಲಾ, ನೇಪಾಳ ಪ್ರಧಾನಿ, ಲಂಕಾ ಅಧ್ಯಕ್ಷರು
Team Udayavani, Jun 6, 2024, 11:32 AM IST
ಹೊಸದಿಲ್ಲಿ: ಲೋಕಸಭೆ ಚುನಾವಣೆಯಲ್ಲಿ ಜಯ ಗಳಿಸಿರುವ ಎನ್ ಡಿಎ ಒಕ್ಕೂಟ ಸರ್ಕಾರ ರಚನೆಗೆ ಮುಂದಾಗಿದೆ. ನರೇಂದ್ರ ಮೋದಿ ಅವರು ಮೂರನೇ ಬಾರಿಗೆ ಪ್ರಧಾನಿಯಾಗಿ ಪ್ರಮಾಣ ವಚನ ಸ್ವೀಕರಿಸಲಿದ್ದಾರೆ. ಜೂನ್ 8ರಂದು ಮೋದಿ ಪ್ರಮಾಣ ವಚನ ಕಾರ್ಯಕ್ರಮ ನಡೆಯಲಿದೆ ಎನ್ನಲಾಗಿದೆ.
ಈ ಕಾರ್ಯಕ್ರಮಕ್ಕೆ ಬಾಂಗ್ಲಾದೇಶ ಪ್ರಧಾನಿ ಶೇಖ್ ಹಸೀನಾ ಮತ್ತು ಶ್ರೀಲಂಕಾದ ಅಧ್ಯಕ್ಷ ರಾನಿಲ್ ವಿಕ್ರಮಸಿಂಘೆ ಅವರು ಆಗಮಿಸಲಿದ್ದಾರೆ. ಅವರೊಂದಿಗೆ ನೇಪಾಳ ಪ್ರಧಾನಿ ಪುಷ್ಪ ಕುಮಾರ್ ದಹಾಲ್ ಮತ್ತು ಭೂತಾನ್ ದೊರೆ ಜಿಗ್ಮೆ ಖೇಸರ್ ನಮ್ಗ್ಯೆಲ್ ವಾಂಗ್ಚುಕ್ ಕೂಡ ಪ್ರಮಾಣ ವಚನ ಸಮಾರಂಭದಲ್ಲಿ ಪಾಲ್ಗೊಳ್ಳಲಿದ್ದಾರೆ. ಮಾರಿಷಸ್ ಪ್ರಧಾನಿ ಪ್ರವಿಂದ್ ಜುಗ್ನಾಥ್ ಅವರನ್ನೂ ಆಹ್ವಾನಿಸುವ ಸಾಧ್ಯತೆಯಿದೆ.
ಬಿಜೆಪಿ ನೇತೃತ್ವದ ಎನ್ಡಿಎ ಲೋಕಸಭೆ ಚುನಾವಣೆಯಲ್ಲಿ 293 ಸ್ಥಾನಗಳನ್ನು ಗೆಲ್ಲುವ ಬಹುಮತದ ಗುರುತನ್ನು ಮೀರಿರುವುದರಿಂದ ಜೂನ್ 8 ರಂದು ರಾತ್ರಿ 8 ಗಂಟೆಗೆ ಮೋದಿ ಪ್ರಮಾಣ ವಚನ ಸ್ವೀಕರಿಸುವ ಸಾಧ್ಯತೆಯಿದೆ ಎಂದು ಮೂಲಗಳು ತಿಳಿಸಿವೆ. ಎಕ್ಸಿಟ್ ಪೋಲ್ ಗಳನ್ನು ಮೀರಿ ವಿರೋಧ ಪಕ್ಷವಾದ ಇಂಡಿಯಾ ಬಣ 234 ಸ್ಥಾನಗಳನ್ನು ಪಡೆದುಕೊಂಡಿದೆ.
2019 ರ ಲೋಕಸಭಾ ಚುನಾವಣೆಯ ನಂತರ, ಮೋದಿ ಪ್ರಮಾಣ ವಚನ ಸಮಾರಂಭದಲ್ಲಿ ಪಾಲ್ಗೊಳ್ಳಲು ಭಾರತವು ಬಿಮ್ಸ್ಟೆಕ್ ರಾಷ್ಟ್ರಗಳ ನಾಯಕರನ್ನು ಆಹ್ವಾನಿಸಿತು. BIMSTEC, ಒಂದು ಪ್ರಾದೇಶಿಕ ಗುಂಪು. ಇದು ಬಾಂಗ್ಲಾದೇಶ, ಭೂತಾನ್, ಭಾರತ, ಮ್ಯಾನ್ಮಾರ್, ನೇಪಾಳ, ಶ್ರೀಲಂಕಾ ಮತ್ತು ಥೈಲ್ಯಾಂಡ್ ಅನ್ನು ಒಳಗೊಂಡಿದೆ. 2019 ರಲ್ಲಿ ವಿವಿಐಪಿಗಳು ಸೇರಿದಂತೆ ಸುಮಾರು 8,000 ಅತಿಥಿಗಳು ಕಾರ್ಯಕ್ರಮದಲ್ಲಿ ಭಾಗವಹಿಸಿದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Hosur: ಟಾಟಾ ಎಲೆಕ್ಟ್ರಾನಿಕ್ಸ್ ಘಟಕದಲ್ಲಿ ಅಗ್ನಿ ಅವಘಡ… ಕೋಟ್ಯಂತರ ಮೌಲ್ಯದ ಸೊತ್ತು ನಾಶ
Mumbai: ಭಯೋತ್ಪಾದಕ ದಾಳಿ ಸಾಧ್ಯತೆ-ಗುಪ್ತಚರ ಇಲಾಖೆ: ಮುಂಬೈನಲ್ಲಿ ಬಿಗಿ ಪೊಲೀಸ್ ಭದ್ರತೆ
Telangana: ಉಪಮುಖ್ಯಮಂತ್ರಿ ಮನೆಯಲ್ಲಿ ಭಾರಿ ಕಳ್ಳತನ.. ಚಿನ್ನದ ಬಿಸ್ಕತ್ ಸೇರಿ ನಗನಗದು ಕಳವು
Tragedy: ಬೆಳ್ಳಂಬೆಳಗ್ಗೆ ಬಾಡಿಗೆ ಮನೆಯಲ್ಲಿ ನಾಲ್ವರು ಹೆಣ್ಣುಮಕ್ಕಳ ಜೊತೆ ತಂದೆಯ ಶವ ಪತ್ತೆ
Porsche Crash: ಆ ಒಂದು ಘಟನೆಯಿಂದ ಬಾಲಕನಿಗೆ ಯಾವುದೇ ಕಾಲೇಜಿನಲ್ಲಿ ಸೀಟು ಸಿಕ್ತಿಲ್ಲ
MUST WATCH
ಉಡುಪಿಯ ಈ ಜಾಗದಲ್ಲಿ ರಸಂ ಪುರಿ ತುಂಬಾನೇ ಫೇಮಸ್
ತಿರುಪತಿ ಲಡ್ಡು ವಿವಾದ ಪೇಜಾವರ ಶ್ರೀಗಳು ಹೇಳಿದ್ದೇನು ?
Kaljigaದಲ್ಲಿ ದೈವದ ಅಪಪ್ರಚಾರ ನಡೆದಿಲ್ಲ, ಸಿನಿಮಾ ನೋಡಿದ ಬಳಿಕ ಈ ಬಗ್ಗೆ ಪ್ರತಿಕ್ರಿಯಿಸಿ
ನವಜಾತ ಶಿಶುಗಳಲ್ಲಿ ಶ್ರವಣ ಶಕ್ತಿ ಸಮಸ್ಯೆ ಕುರಿತು ಸಂಪೂರ್ಣ ಮಾಹಿತಿ
ಅಂತರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆ ಅಂಗವಾಗಿ ತಾಲೂಕು ಮಟ್ಟದ ಮಾನವ ಸರಪಳಿ ಕಾರ್ಯಕ್ರಮ
ಹೊಸ ಸೇರ್ಪಡೆ
Mangaluru: ಚಲಿಸುತ್ತಿದ್ದ ಕಾರಿನಲ್ಲಿ ಬೆಂಕಿ… ಅಪಾಯದಿಂದ ಪಾರಾದ ಪ್ರಯಾಣಿಕರು
SIT: ಶಾಸಕ ಮುನಿರತ್ನ ನಿವಾಸದ ಮೇಲೆ ಎಸ್ ಐಟಿ ತಂಡ ದಾಳಿ, ಸಾಕ್ಷ್ಯಾಧಾರಗಳ ಸಂಗ್ರಹ
ಭಾರತದಲ್ಲಿ ಪಾಕ್ ಸಿನಿಮಾ ದ ಲೆಜೆಂಡ್ ಆಫ್ ಮೌಲಾ ಜಟ್ ಪ್ರದರ್ಶನಕ್ಕೆ ಅವಕಾಶವಿಲ್ಲ: ಕೇಂದ್ರ
Shimoga; ನಿಮಗೊಂದು ಕಾನೂನು ನಮಗೊಂದು ಕಾನೂನು ಇದೆಯೇ..: ಸಿದ್ದರಾಮಯ್ಯ ವಿರುದ್ದ ಈಶ್ವರಪ್ಪ
Hosur: ಟಾಟಾ ಎಲೆಕ್ಟ್ರಾನಿಕ್ಸ್ ಘಟಕದಲ್ಲಿ ಅಗ್ನಿ ಅವಘಡ… ಕೋಟ್ಯಂತರ ಮೌಲ್ಯದ ಸೊತ್ತು ನಾಶ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.