Panaji: ಮಕ್ಕಳಿಗಾಗಿ ಬ್ಯಾಂಕ್‌ ಲಾಕರ್‌ನಲ್ಲಿ ಇಟ್ಟಿದ್ದ 3 ಕೋಟಿ ಮೌಲ್ಯದ ನೋಟು ಅಮಾನ್ಯ!


Team Udayavani, May 8, 2024, 10:24 PM IST

Panaji: ಮಕ್ಕಳಿಗಾಗಿ ಬ್ಯಾಂಕ್‌ ಲಾಕರ್‌ನಲ್ಲಿ ಇಟ್ಟಿದ್ದ 3 ಕೋಟಿ ಮೌಲ್ಯದ ನೋಟು ಅಮಾನ್ಯ!

ಪಣಜಿ: ತಾವು ಕಷ್ಟ ಪಟ್ಟಂತೆ ತಮ್ಮ ಮಕ್ಕಳು ಕಷ್ಟಪಡಬಾರದೆಂದು ಹೆತ್ತವರು ಅವಿರತ ದುಡಿದು ಹಣ, ಆಸ್ತಿ ಸಂಪಾದಿಸುತ್ತಾರೆ. ಆದರೆ, ವ್ಯಕ್ತಿಯೊಬ್ಬರು ಮಕ್ಕಳಿಗಾಗಿ ಬ್ಯಾಂಕ್‌ ಲಾಕರ್‌ನಲ್ಲಿ ಕೂಡಿಟ್ಟ 3 ಕೋಟಿ ರೂ. ಹಣ ಅಮಾನ್ಯವಾಗಿದೆ!

ಗೋವಾದ ಮಾಪ್ಸಾದಲ್ಲಿ ಇಂಥ ಅಪರೂಪದ ಘಟನೆ ನಡೆದಿದೆ. ಬ್ಯಾಂಕ್‌ ಲಾಕರ್‌ನಲ್ಲಿ ಪಾಲಕರು ಕೂಡಿಟ್ಟಿದ್ದ 500 ಹಾಗೂ 1000 ರೂ. ಮುಖಬೆಲೆಯ ಸುಮಾರು 3 ಕೋಟಿ ರೂ. ಮಕ್ಕಳಿಗೆ ಸಿಗದೆ ವ್ಯರ್ಥವಾಗಿದೆ. ನೋಟು ಅಮಾನ್ಯಿàಕರಣದಿಂದ ಈ ಹಣಕ್ಕೆ ಈಗ ಬೆಲೆಯೇ ಇಲ್ಲವಾಗಿದ್ದು, ಹೆತ್ತವರು ಕೂಡಿಟ್ಟ ಹಣದಲ್ಲಿ ಒಂದು ಪೈಸೆ ಕೂಡ ಮಕ್ಕಳಿಗೆ ಸಿಗದಂತಾಗಿದೆ. ಲಾಕರ್‌ಗಳಲ್ಲಿ ಹಣ ನೋಡಿ ಬ್ಯಾಂಕ್‌ ಅಧಿ ಕಾರಿಗಳೂ ಗೊಂದಲಕ್ಕೀಡಾಗಿದ್ದಾರೆ.

ಮೂರು ಲಾಕರ್‌ನಲ್ಲಿ ಹಣ:
ಗೋವಾದ ಬಾರದೇಸ್‌ ತಾಲೂಕಿನ ವ್ಯಕ್ತಿಯೊಬ್ಬರು 12 ವರ್ಷಗಳ ಹಿಂದೆ ಮೃತಪಟ್ಟಿದ್ದರು. ಇವರ ಪತ್ನಿ ಮೊದಲೇ ತೀರಿ ಹೋಗಿದ್ದರು. ಮಕ್ಕಳು ವಿದೇಶದಲ್ಲಿದ್ದರು. ಈ ದಂಪತಿ ಮಾಪ್ಸಾದ ಬ್ಯಾಂಕ್‌ನಲ್ಲಿ ಮೂರು ಲಾಕರ್‌ಗಳನ್ನು ತೆರೆದು ಅದರಲ್ಲಿ ಲಕ್ಷಾಂತರ ಮೌಲ್ಯದ ಚಿನ್ನಾಭರಣ ಮತ್ತು ಅಪಾರ ಪ್ರಮಾಣದ ಹಣ ಇರಿಸಿದ್ದರು. ಎರಡು ಲಾಕರ್‌ಗಳನ್ನು ತನ್ನ ಹೆಸರಿನಲ್ಲಿದ್ದರೆ, ಇನ್ನೊಂದನ್ನು ಪತ್ನಿ ಹೆಸರಿನಲ್ಲಿತ್ತು. ಪತ್ನಿ ನಿಧನದ ನಂತರ ಆ ಲಾಕರ್‌ನ್ನು ಕೂಡ ಇವರೇ ನಿರ್ವಹಿಸುತ್ತಿದ್ದರು.

12 ವರ್ಷದ ಬಳಿಕ ಲಾಕರ್‌ ಓಪನ್‌:
ತಂದೆ ತೀರಿ ಹನ್ನೆರಡು ವರ್ಷಗಳ ಬಳಿಕ ಮಕ್ಕಳು ವಿದೇಶದಿಂದ ಆಗಮಿಸಿ ಗೋವಾದಲ್ಲಿನ ಆಸ್ತಿ ಮಾರಲು ನಿರ್ಧರಿಸಿದ್ದರು. ತಂದೆ-ತಾಯಿ ವಾಸವಿದ್ದ ಮನೆಯ ಪರಿಶೀಲನೆ ವೇಳೆ ಮಕ್ಕಳಿಗೆ ಬ್ಯಾಂಕ್‌ ದಾಖಲೆ, ಲಾಕರ್‌ ಕೀಗಳು ಸಿಕ್ಕಿವೆ. ನಂತರ ಮಕ್ಕಳು ಸಂಬಂಧಪಟ್ಟ ಬ್ಯಾಂಕ್‌ ಅ ಧಿಕಾರಿಗಳನ್ನು ಸಂಪರ್ಕಿಸಿದ್ದಾರೆ. ಬ್ಯಾಂಕ್‌ ಅ ಧಿಕಾರಿಗಳು ಲಾಕರ್‌ ಹೊಂದಿರುವವರ ಮೂಲ ವಾರಸುದಾರರಿಗೆ ಅದನ್ನು ತೆರೆಯಲು ಅವಕಾಶ ನೀಡಿದ್ದಾರೆ.

ಬೆಚ್ಚಿಬಿದ್ದ ಬ್ಯಾಂಕ್‌ ಸಿಬ್ಬಂದಿ:
ಮೇ 6ರಂದು ಲಾಕರ್‌ ತೆರೆಯಲಾಗಿದೆ. ಅದರಲ್ಲಿ 500 ಮತ್ತು 1000 ರೂ. ಮುಖಬೆಲೆಯ ಸುಮಾರು 3 ಕೋಟಿ ರೂ. ಪತ್ತೆಯಾಗಿದೆ. ಇದನ್ನು ಕಂಡು ಮಕ್ಕಳು ಹಾಗೂ ಅಧಿಕಾರಿಗಳು ದಂಗಾಗಿದ್ದಾರೆ. ಏಕೆಂದರೆ ನೋಟು ಅಮಾನ್ಯಿàಕರಣದಿಂದಾಗಿ ಇವೆಲ್ಲ ಈಗ ಕೇವಲ ಕಾಗದದ ಚೂರುಗಳಾಗಿವೆ ಹೊರತು ಯಾವ ಬೆಲೆಯೂ ಇಲ್ಲವಾಗಿದೆ.

ಕೈಗೆ ಬಂದ ತುತ್ತು ಬಾಯಿಗಿಲ್ಲ:
2019ರ ನ.8ರಂದು ಕೇಂದ್ರ ಸರ್ಕಾರ 500 ರೂ.ಮತ್ತು 1000 ರೂ.ನೋಟುಗಳನ್ನು ಅಮಾನ್ಯಗೊಳಿಸಿರುವುದಾಗಿ ಘೋಷಿಸಿತ್ತು. ಆದರೆ ಲಾಕರ್‌ನಲ್ಲಿ ಇಷ್ಟೆಲ್ಲ ಹಣವಿದೆ ಎಂಬ ವಿಷಯವೇ ಗೊತ್ತಿಲ್ಲದ ಮಕ್ಕಳು ತಮ್ಮ ಪೋಷಕರು ಕೂಡಿಟ್ಟ ಹಣ ನೋಡಿ ಮಮ್ಮಲ ಮರುಗಿದ್ದಾರೆ. ಬೆಲೆಬಾಳುವ ಒಡವೆಗಳಲ್ಲೇ ತೃಪ್ತಿಪಟ್ಟುಕೊಂಡಿದ್ದಾರೆ.

ತಮ್ಮ ತಂದೆ-ತಾಯಿ ತಮಗಾಗಿ ಇಷ್ಟು ದೊಡ್ಡ ಮೊತ್ತದ ಹಣ ಬಿಟ್ಟು ಹೋಗಿದ್ದಾರೆ ಎಂಬುದೇ ಗೊತ್ತಿರಲಿಲ್ಲ. ಲಾಕರ್‌ನಲ್ಲಿ ನೋಟುಗಳ ಬಂಡಲ್‌ ನೋಡಿದಾಗ ಮೊದಲು ನಂಬಲಾಗಲಿಲ್ಲ. ಮೊದಲೇ ತಿಳಿದಿದ್ದರೆ 2019ರಲ್ಲಿ ಸರ್ಕಾರ ನೋಟು ಅಮಾನ್ಯಿàಕರಣ ಜಾರಿಗೊಳಿಸಿದಾಗಲೇ ಕಾನೂನುಬದ್ಧವಾಗಿ ಈ ಮೊತ್ತವನ್ನು ಹಿಂಪಡೆಯಲು ಸಾಧ್ಯವಾಗುತ್ತಿತ್ತು ಎಂದು ಮಕ್ಕಳು ತಿಳಿಸಿದ್ದಾರೆ.

ಟಾಪ್ ನ್ಯೂಸ್

mohan bhagwat

RSS; ಹಿಂದೂ ಸಮಾಜ ದೇಶದ ಜವಾಬ್ದಾರಿಯುತ ಸಮುದಾಯ: ಮೋಹನ್ ಭಾಗವತ್

IPL 2025: ಐಪಿಎಲ್‌ ವೇಳಾಪಟ್ಟಿ ಪ್ರಕಟ; KKR vs RCB ಮೊದಲ ಮುಖಾಮುಖಿ- ಇಲ್ಲಿದೆ ಪಟ್ಟಿ

IPL 2025: ಐಪಿಎಲ್‌ ವೇಳಾಪಟ್ಟಿ ಪ್ರಕಟ; KKR vs RCB ಮೊದಲ ಮುಖಾಮುಖಿ- ಇಲ್ಲಿದೆ ಪಟ್ಟಿ

Lalu

Controversy; ಮಹಾಕುಂಭ ‘ಅರ್ಥಹೀನ’ ಎಂದ ಲಾಲು ಪ್ರಸಾದ್ ಯಾದವ್

1-sidda

Mahakumbh; ಸಿದ್ದರಾಮಯ್ಯನವರೇ 5 ವರ್ಷ ಸಿಎಂ ಆಗಿರಲಿ: ಅಭಿಮಾನಿಯ ಪ್ರಾರ್ಥನೆ

1-congress

Congress ಪಕ್ಷಕ್ಕೆ ಮರು ಸೇರ್ಪಡೆಯಾದ ಎಲ್.ಆರ್.ಶಿವರಾಮೇಗೌಡ, ಬ್ರಿಜೇಶ್ ಕಾಳಪ್ಪ

DKSHi-4

Siddaramaiah ನಮ್ಮ ನಾಯಕ, ಹೆಸರು ದುರ್ಬಳಕೆ ಮಾಡಿಕೊಳ್ಳುವ ಅಗತ್ಯವಿಲ್ಲ: ಡಿಕೆಶಿ

Actor Darshan: ಪ್ರೇಮ್‌ – ದರ್ಶನ್‌ ಸಿನಿಮಾ ಬರುವುದು ಪಕ್ಕಾ.. ಸ್ಪೆಷೆಲ್‌ ಪೋಸ್ಟರ್‌ ಔಟ್

Actor Darshan: ಪ್ರೇಮ್‌ – ದರ್ಶನ್‌ ಸಿನಿಮಾ ಬರುವುದು ಪಕ್ಕಾ.. ಸ್ಪೆಷೆಲ್‌ ಪೋಸ್ಟರ್‌ ಔಟ್


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

mohan bhagwat

RSS; ಹಿಂದೂ ಸಮಾಜ ದೇಶದ ಜವಾಬ್ದಾರಿಯುತ ಸಮುದಾಯ: ಮೋಹನ್ ಭಾಗವತ್

Lalu

Controversy; ಮಹಾಕುಂಭ ‘ಅರ್ಥಹೀನ’ ಎಂದ ಲಾಲು ಪ್ರಸಾದ್ ಯಾದವ್

1sadgu

Pariksha Pe Charcha: ಸ್ಮಾರ್ಟ್ ಫೋನ್‌ಗಿಂತಲೂ ನೀವು ಸ್ಮಾರ್ಟ್ ಆಗಬೇಕು:ಸದ್ಗುರು

15-monalisa

Mahakumbh sensation: ಕೇರಳದಲ್ಲಿ ಕುಂಭಮೇಳದ ಮೊನಾಲಿಸಾ ಹವಾ

Andhra Pradesh: ಚಿಕ್ಕಮ್ಮನ ಮೇಲೆರಗಿದ ಮಗನನ್ನೇ ಕೊಚ್ಚಿ ಕೊಂದ ತಾಯಿ!

Andhra Pradesh: ಚಿಕ್ಕಮ್ಮನ ಮೇಲೆರಗಿದ ಮಗನನ್ನೇ ಕೊಚ್ಚಿ ಕೊಂದ ತಾಯಿ!

MUST WATCH

udayavani youtube

ಭೀಕರ ಹಿಟ್ & ರನ್ ಸಂತ್ರಸ್ತರ ಪರ ನಿಂತ ಪುತ್ತೂರು ಶಾಸಕ ಅಶೋಕ್ ರೈ

udayavani youtube

ಶ್ರೀ ಬ್ರಹ್ಮಬೈದರ್ಕಳ ನೇಮೋತ್ಸವ, ಮಾಣಿಬಾಲೆ ನೇಮೋತ್ಸವ

udayavani youtube

ಸಾಹಿತ್ಯಾಸಕ್ತಿಯ ಚಹಾ ಅಂಗಡಿ

udayavani youtube

ಇಲ್ಲಿ ಪ್ರತಿಯೊಂದು ಗೋವುಗಳಿಗೂ ವಿಭಿನ್ನ ಹೆಸರಿದೆ

udayavani youtube

ಮುಕೇಶ್ ಅಂಬಾನಿ ಕುಟುಂಬದ ನಾಲ್ಕು ತಲೆಮಾರು ಮಹಾ ಕುಂಭಮೇಳದಲ್ಲಿ ಪವಿತ್ರ ಸ್ನಾನ

ಹೊಸ ಸೇರ್ಪಡೆ

mohan bhagwat

RSS; ಹಿಂದೂ ಸಮಾಜ ದೇಶದ ಜವಾಬ್ದಾರಿಯುತ ಸಮುದಾಯ: ಮೋಹನ್ ಭಾಗವತ್

IPL 2025: ಐಪಿಎಲ್‌ ವೇಳಾಪಟ್ಟಿ ಪ್ರಕಟ; KKR vs RCB ಮೊದಲ ಮುಖಾಮುಖಿ- ಇಲ್ಲಿದೆ ಪಟ್ಟಿ

IPL 2025: ಐಪಿಎಲ್‌ ವೇಳಾಪಟ್ಟಿ ಪ್ರಕಟ; KKR vs RCB ಮೊದಲ ಮುಖಾಮುಖಿ- ಇಲ್ಲಿದೆ ಪಟ್ಟಿ

Lalu

Controversy; ಮಹಾಕುಂಭ ‘ಅರ್ಥಹೀನ’ ಎಂದ ಲಾಲು ಪ್ರಸಾದ್ ಯಾದವ್

1-sidda

Mahakumbh; ಸಿದ್ದರಾಮಯ್ಯನವರೇ 5 ವರ್ಷ ಸಿಎಂ ಆಗಿರಲಿ: ಅಭಿಮಾನಿಯ ಪ್ರಾರ್ಥನೆ

1sadgu

Pariksha Pe Charcha: ಸ್ಮಾರ್ಟ್ ಫೋನ್‌ಗಿಂತಲೂ ನೀವು ಸ್ಮಾರ್ಟ್ ಆಗಬೇಕು:ಸದ್ಗುರು

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.