![IPL 2025: ಐಪಿಎಲ್ ವೇಳಾಪಟ್ಟಿ ಪ್ರಕಟ; KKR vs RCB ಮೊದಲ ಮುಖಾಮುಖಿ- ಇಲ್ಲಿದೆ ಪಟ್ಟಿ](https://www.udayavani.com/wp-content/uploads/2025/02/5-25-415x249.jpg)
![IPL 2025: ಐಪಿಎಲ್ ವೇಳಾಪಟ್ಟಿ ಪ್ರಕಟ; KKR vs RCB ಮೊದಲ ಮುಖಾಮುಖಿ- ಇಲ್ಲಿದೆ ಪಟ್ಟಿ](https://www.udayavani.com/wp-content/uploads/2025/02/5-25-415x249.jpg)
Team Udayavani, Sep 12, 2021, 4:08 PM IST
ಗಾಂಧಿನಗರ : ಗುಜರಾತ್ನ ನೂತನ ಮುಖ್ಯಮಂತ್ರಿಯಾಗಿ ಭೂಪೇಂದ್ರ ಪಟೇಲ್ ಆಯ್ಕೆಯಾಗಿದ್ದಾರೆ
ಶನಿವಾರ ನಡೆದ ದಿಢೀರ್ ಬೆಳವಣೆಗೆಯಲ್ಲಿ ವಿಜಯ್ ರೂಪಾಣಿಯವರು ತಮ್ಮ ಮುಖ್ಯಮಂತ್ರಿ ಸ್ಥಾನಕ್ಕೆ ರಾಜೀನಾಮೆ ನೀಡಿದರು. ಅವರ ನಂತರ ಮುಖ್ಯಮಂತ್ರಿ ಹುದ್ದೆ ಯಾರಿಗೆ ಒಲಿಯಲಿದೆ ಎನ್ನುವುದು ಬಿಸಿ ಬಿಸಿ ಚರ್ಚೆಯಾಗಿತ್ತು.ಇದೀಗ ಕುತೂಹಲಕ್ಕೆ ತೆರೆ ಬಿದ್ದಿದ್ದು ಭೂಪೇಂದ್ರ ಪಟೇಲ್ ಅವರು ನೂತನ ಮುಖ್ಯಮಂತ್ರಿಯಾಗಿ ನೇಮಕಗೊಂಡಿದ್ದಾರೆ.
Gujarat | Bhupendra Patel elected as the new leader of BJP Legislative Party, says Union Minister & BJP leader Narendra Singh Tomar
Bhupendra Patel will be sworn-in as Gujarat CM soon pic.twitter.com/gVIwOf9TIw
— ANI (@ANI) September 12, 2021
ರೂಪಾಣಿ ರಾಜೀನಾಮೆ ಬೆನ್ನಲ್ಲೆ ನೂತನ ಮುಖ್ಯಮಂತ್ರಿ ರೇಸ್ ನಲ್ಲಿ ಪ್ರಮುಖವಾಗಿ ಮೂರು ಜನರ ಹೆಸರುಗಳು ಮುನ್ನೆಲೆಗೆ ಬಂದಿದ್ದವು. ಕೇಂದ್ರ ಆರೋಗ್ಯ ಸಚಿವ ಮನ್ಸುಖ್ ಮಾಂಡವಿಯಾ, ಗುಜರಾತ್ ಉಪಮುಖ್ಯಮಂತ್ರಿ ನಿತಿನ್ ಪಟೇಲ್ ಹಾಗೂ ಕ್ಯಾಬಿನೆಟ್ ಮಂತ್ರಿ ಆರ್.ಸಿ ಫಾಲ್ದು ಅವರ ಹೆಸರುಗಳು ಮುಖ್ಯಮಂತ್ರಿ ಸ್ಥಾನದ ರೇಸ್ನಲ್ಲಿದ್ದವು.
ಇಂದು ರಾಜ್ಯಕ್ಕೆ ಆಗಮಿಸಿದ ಬಿಜೆಪಿ ವರಿಷ್ಠರು ಸಭೆ ನಡೆಸಿದರು. ಬಳಿಕ ಮಾಧ್ಯಮಗೋಷ್ಠಿಯಲ್ಲಿ ನೂತನ ಮುಖ್ಯಮಂತ್ರಿಯಾಗಿ ಭೂಪೇಂದ್ರ ಪಟೇಲ್ ಹೆಸರನ್ನು ಘೋಷಿಸಿದರು.
ಇನ್ನು 2022ರ ಡಿಸೆಂಬರ್ ತಿಂಗಳಿನಲ್ಲಿ ಗುಜರಾತ್ ವಿಧಾನಸಭೆ ಚುನಾವಣೆ ನಡೆಯಲಿದ್ದು, ಮತ್ತೊಂದು ಬಾರಿ ಗದ್ದುಗೆ ಏರಲು ಬಿಜೆಪಿ ಯೋಜನೆ ಹಾಕಿಕೊಂಡಿದೆ. ಇದರ ಮೊದಲ ಹೆಜ್ಜೆ ಎನ್ನುವಂತೆ ಮುಖ್ಯಮಂತ್ರಿ ವಿಜಯ್ ರೂಪಾಣಿ ಅವರ ರಾಜೀನಾಮೆ ಪಡೆದು ಹೊಸಬರಿಗೆ ಅವಕಾಶ ನೀಡಿದೆ.
Controversy; ಮಹಾಕುಂಭ ‘ಅರ್ಥಹೀನ’ ಎಂದ ಲಾಲು ಪ್ರಸಾದ್ ಯಾದವ್
Pariksha Pe Charcha: ಸ್ಮಾರ್ಟ್ ಫೋನ್ಗಿಂತಲೂ ನೀವು ಸ್ಮಾರ್ಟ್ ಆಗಬೇಕು:ಸದ್ಗುರು
Mahakumbh sensation: ಕೇರಳದಲ್ಲಿ ಕುಂಭಮೇಳದ ಮೊನಾಲಿಸಾ ಹವಾ
Andhra Pradesh: ಚಿಕ್ಕಮ್ಮನ ಮೇಲೆರಗಿದ ಮಗನನ್ನೇ ಕೊಚ್ಚಿ ಕೊಂದ ತಾಯಿ!
ಹೆಚ್ಚು ವರದಕ್ಷಿಣೆ ನೀಡಲಿಲ್ಲವೆಂದು ಸೊಸೆಗೆ HIV ಸೋಂಕಿನ ಇಂಜೆಕ್ಷನ್ ನೀಡಿದ ಅತ್ತೆ ಮಾವ
IPL 2025: ಐಪಿಎಲ್ ವೇಳಾಪಟ್ಟಿ ಪ್ರಕಟ; KKR vs RCB ಮೊದಲ ಮುಖಾಮುಖಿ- ಇಲ್ಲಿದೆ ಪಟ್ಟಿ
Controversy; ಮಹಾಕುಂಭ ‘ಅರ್ಥಹೀನ’ ಎಂದ ಲಾಲು ಪ್ರಸಾದ್ ಯಾದವ್
Mahakumbh; ಸಿದ್ದರಾಮಯ್ಯನವರೇ 5 ವರ್ಷ ಸಿಎಂ ಆಗಿರಲಿ: ಅಭಿಮಾನಿಯ ಪ್ರಾರ್ಥನೆ
Pariksha Pe Charcha: ಸ್ಮಾರ್ಟ್ ಫೋನ್ಗಿಂತಲೂ ನೀವು ಸ್ಮಾರ್ಟ್ ಆಗಬೇಕು:ಸದ್ಗುರು
Congress ಪಕ್ಷಕ್ಕೆ ಮರು ಸೇರ್ಪಡೆಯಾದ ಎಲ್.ಆರ್.ಶಿವರಾಮೇಗೌಡ, ಬ್ರಿಜೇಶ್ ಕಾಳಪ್ಪ
You seem to have an Ad Blocker on.
To continue reading, please turn it off or whitelist Udayavani.