ಬಿಜೆಪಿ- ಆಪ್‌ “ಅಬಕಾರಿ’ ಜಟಾಪಟಿ


Team Udayavani, Aug 21, 2022, 6:45 AM IST

ಬಿಜೆಪಿ- ಆಪ್‌ “ಅಬಕಾರಿ’ ಜಟಾಪಟಿ

ನವದೆಹಲಿ: ಅಬಕಾರಿ ಪ್ರಕರಣದಲ್ಲಿ ದೆಹಲಿ ಡಿಸಿಎಂ ಮನೀಷ್‌ ಸಿಸೋಡಿಯಾ ಅವರ ಹೆಸರು ಕೇಳಿಬಂದ ಬೆನ್ನಲ್ಲೇ ಬಿಜೆಪಿ ಮತ್ತು ಆಮ್‌ ಆದ್ಮಿ ಪಕ್ಷದ ನಡುವಿನ ವಾಗ್ಯುದ್ಧ ತೀವ್ರಗೊಂಡಿದೆ.

ಶನಿವಾರ ಬಿಜೆಪಿ ನಾಯಕರಾದ ಸಚಿವ ಅನುರಾಗ್‌ ಠಾಕೂರ್‌, ಮನೀಷ್‌ ತಿವಾರಿ ಮತ್ತಿತರರು ಆಪ್‌ ವಿರುದ್ಧ ಕೆಂಡಕಾರಿದ್ದಾರೆ.

“ಅವರು ಮನೀಷ್‌ ಸಿಸೋಡಿಯಾ ಅಲ್ಲ, “ಮನಿ’ “ಶ್‌’ ಸಿಸೋಡಿಯಾ. ಮೊದಲು ಹಣ ಮಾಡುತ್ತಾರೆ, ನಂತರ ಮೌನಕ್ಕೆ ಶರಣಾಗುತ್ತಾರೆ. ಕೇಜ್ರಿವಾಲ್‌ ಅವರೇ ಈ ಹಗರಣದ ಕಿಂಗ್‌ಪಿನ್‌’ ಎಂದು ಆರೋಪಿಸಿದ್ದಾರೆ.

ಇದಕ್ಕೆ ಪ್ರತಿಕ್ರಿಯಿಸಿರುವ ಸಿಸೋಡಿಯಾ, “ಆಪ್‌ ಸರ್ಕಾರದ ಉತ್ತಮ ಕೆಲಸಗಳೇ ಈ ರೀತಿ ಟಾರ್ಗೆಟ್‌ ಮಾಡಲು ಕಾರಣ’ ಎಂದಿದ್ದಾರೆ.

ಇನ್ನು, ದೆಹಲಿ ಕಾಂಗ್ರೆಸ್‌ ಶನಿವಾರ ಭಾರೀ ಪ್ರತಿಭಟನೆ ನಡೆಸಿದ್ದು, ಉಪಮುಖ್ಯಮಂತ್ರಿ ಸಿಸೋಡಿಯಾ ರಾಜೀನಾಮೆ ನೀಡಬೇಕು ಎಂದು ಒತ್ತಾಯಿಸಿದೆ. ಇದೇ ವೇಳೆ, ಪ್ರಕರಣ ಸಂಬಂಧ ಕೆಲವು ಆರೋಪಿಗಳಿಗೆ ಸಿಬಿಐ ಸಮನ್ಸ್‌ ಜಾರಿ ಮಾಡಿದೆ.

ರೇವಡಿ-ಬೇವಡಿ ಸರ್ಕಾರ: ಬಿಜೆಪಿ
– ಆಪ್‌ನ ನಿಜಬಣ್ಣ ಬಯಲಾಗಿದೆ. ಸಿಬಿಐ ತನಿಖೆಯಲ್ಲೂ ರಾಜಕೀಯ ಮಾಡುವ ಮೂಲಕ ಆ ಪಕ್ಷ ಜನರ ದಾರಿ ತಪ್ಪಿಸುತ್ತಿದೆ.
– ಹಲವು ಚುನಾವಣೆಗಳಲ್ಲಿ ಆಮ್‌ ಆದ್ಮಿ ಪಕ್ಷವು ದೊಡ್ಡ ದೊಡ್ಡ ಘೋಷಣೆಗಳನ್ನು ಮಾಡಿದ್ದರೂ, ಪ್ರಧಾನಿ ನರೇಂದ್ರ ಮೋದಿಯವರ ಮುಂದೆ ಯಾವುದೂ ನಿಲ್ಲಲಿಲ್ಲ.
– 2014ಕ್ಕಿಂತ 2019ರ ಚುನಾವಣೆಯಲ್ಲಿ ಹೆಚ್ಚು ಸೀಟು ಗೆದ್ದಂತೆ, ಬಿಜೆಪಿ 2024ರ ಚುನಾವಣೆಯಲ್ಲೂ ಹೆಚ್ಚಿನ ಸ್ಥಾನಗಳಲ್ಲಿ ಜಯ ಗಳಿಸಲಿದೆ.
– ಆಪ್‌ ಸರ್ಕಾರ ಸಂಪುಟದ ಒಪ್ಪಿಗೆ ಪಡೆಯದೇ 144 ಕೋಟಿ ರೂ.ಗಳನ್ನು ಮದ್ಯದ ಕಂಪನಿಗಳಿಗೆ ಪಾವತಿಸಿದ್ದೇಕೆ ಎಂದು ಉತ್ತರಿಸಲಿ.
– ಪಂಜಾಬ್‌ನಿಂದ ದೆಹಲಿವರೆಗೂ ಆಪ್‌ನ ಭ್ರಷ್ಟಾಚಾರ ಎದ್ದು ಕಾಣುತ್ತಿದೆ. ಇದು ರೇವಡಿ(ಉಚಿತ ಕೊಡುಗೆಗಳು) ಮತ್ತು ಬೇವಡಿ (ಕುಡುಕರು) ಸರ್ಕಾರ.
– ಸಿಸೋಡಿಯಾ ಅವರು ಈ ಹಗರಣದಲ್ಲಿ ಆರೋಪಿ ನಂಬರ್‌ 1 ಆಗಿದ್ದರೆ, ಕೇಜ್ರಿವಾಲ್‌ ಅವರು ಇಡೀ ಹಗರಣದ ಕಿಂಗ್‌ಪಿನ್‌ ಆಗಿದ್ದಾರೆ.

ಮೋದಿ ವರ್ಸಸ್‌ ಕೇಜ್ರಿವಾಲ್‌: ಸಿಸೋಡಿಯಾ
– ಕೇಜ್ರಿವಾಲ್‌ ಅವರು ಪ್ರಧಾನಿ ಮೋದಿ ಅವರಿಗೆ “ರಾಷ್ಟ್ರೀಯ ಪರ್ಯಾಯ ನಾಯಕ’ನಾಗಿ ಹೊರಹೊಮ್ಮುತ್ತಿದ್ದಾರೆ. ಅದೇ ಕಾರಣಕ್ಕೆ ನಮ್ಮನ್ನು ಹೆದರಿಸಲಾಗುತ್ತಿದೆ
– 2024ರ ಲೋಕಸಭೆ ಚುನಾವಣೆಯು ಅರವಿಂದ ಕೇಜ್ರಿವಾಲ್‌ ಮತ್ತು ಪ್ರಧಾನಿ ಮೋದಿ ನಡುವಿನ ಸಮರವಾಗಿರಲಿದೆ.
– ಮೋದಿ ಮತ್ತು ಕೇಜ್ರಿವಾಲ್‌ ನಡುವಿನ ವ್ಯತ್ಯಾಸವೇನೆಂದರೆ, ಕೇಜ್ರಿವಾಲ್‌ ಬಡವರ ಪರ ಯೋಚಿಸುತ್ತಾರೆ, ಮೋದಿ ಶ್ರೀಮಂತರ ಬಗ್ಗೆಯಷ್ಟೇ ಯೋಚಿಸುತ್ತಾರೆ.
– ಮುಂದಿನ 3-4 ದಿನಗಳಲ್ಲಿ ಸಿಬಿಐ ಅಥವಾ ಇ.ಡಿ. ನನ್ನನ್ನು ಬಂಧಿಸಬಹುದು. ಆದರೆ ನಾವು ಹೆದರುವುದಿಲ್ಲ, ಏಕೆಂದರೆ ನಾವು ಭಗತ್‌ಸಿಂಗ್‌ರ ಅನುಯಾಯಿಗಳು.
– ಬಿಜೆಪಿಗೆ ಭ್ರಷ್ಟಾಚಾರದ ಬಗ್ಗೆ ಚಿಂತೆಯಿಲ್ಲ, ಬದಲಿಗೆ ಶಿಕ್ಷಣ ಮತ್ತು ಆರೋಗ್ಯ ಕ್ಷೇತ್ರದಲ್ಲಿ ಆಪ್‌ ಸರ್ಕಾರದ ಕೆಲಸವು ಜಗತ್ತಿನಾದ್ಯಂತ ಮೆಚ್ಚುಗೆ ಗಳಿಸಿರುವುದೇ ಈ ಹುನ್ನಾರದ ಹಿಂದಿನ ಮರ್ಮ.
– ಅದಕ್ಕಾಗಿಯೇ ಮೊದಲು ಆರೋಗ್ಯ ಸಚಿವ ಸತ್ಯೇಂದ್ರ ಜೈನ್‌ರನ್ನು ಬಂಧಿಸಿದರು, ಇನ್ನು ಸದ್ಯದಲ್ಲೇ ಶಿಕ್ಷಣ ಮಂತ್ರಿಯಾದ ನನ್ನನ್ನು ಬಂಧಿಸುತ್ತಾರೆ.

2024ರ ಲೋಕಸಭೆ ಚುನಾವಣೆಯಲ್ಲಿ ಮೋದಿ ವರ್ಸಸ್‌ ಕೇಜ್ರಿವಾಲ್‌ ಆದರೆ, ಬಿಜೆಪಿ ಮತ್ತಷ್ಟು ಸುಲಭದಲ್ಲಿ ಗೆಲುವು ಸಾಧಿಸಲಿದೆ. ಅನೇಕ ರಾಜ್ಯಗಳಲ್ಲಿ ಜನರಿಗೆ ಕೇಜ್ರಿವಾಲ್‌ ಯಾರೆಂದೇ ಗೊತ್ತಿಲ್ಲ. ಹಾಗಾಗಿ, ಬಿಜೆಪಿಯ ಸೀಟುಗಳು ಇನ್ನಷ್ಟು ಹೆಚ್ಚಳವಾಗುವುದರಲ್ಲಿ ಸಂಶಯವಿಲ್ಲ.
– ಹಿಮಾಂತ ಬಿಸ್ವ ಶರ್ಮಾ, ಅಸ್ಸಾಂ ಮುಖ್ಯಮಂತ್ರಿ

 

ಟಾಪ್ ನ್ಯೂಸ್

ಸಂತೋಷ್ ಲಾಡ್

Shiggavi Bypoll; ಗೆಲ್ಲುವ ಅಭ್ಯರ್ಥಿಗೆ ಪಕ್ಷ ಟಿಕೆಟ್ ನೀಡಲಿದೆ: ಸಂತೋಷ್ ಲಾಡ್

ನಿಮ್ಮ ಸಹಪಾಠಿಗಳು ಎಲ್ಲಿದ್ದಾರೆ ?: ಜೀವನದ ಪ್ರಯಾಣದಲ್ಲಿ ಎಲ್ಲವನ್ನು ಅನುಭವಿಸಬೇಕು

INDWvsSAW: ತಪ್ಪಿತು ರಿಚಾ ಶತಕ; ವಿಶ್ವದಾಖಲೆಯ ಮೊತ್ತ ಕಲೆ ಹಾಕಿದ ಭಾರತ

INDWvsSAW: ತಪ್ಪಿತು ರಿಚಾ ಶತಕ; ವಿಶ್ವದಾಖಲೆಯ ಮೊತ್ತ ಕಲೆ ಹಾಕಿದ ಭಾರತ

Dharmapuri Srinivas: ಹೃದಯಾಘಾತದಿಂದ ಕಾಂಗ್ರೆಸ್ ಹಿರಿಯ ನಾಯಕ ಧರ್ಮಪುರಿ ಶ್ರೀನಿವಾಸ್ ನಿಧನ

Dharmapuri Srinivas: ಹೃದಯಾಘಾತದಿಂದ ಕಾಂಗ್ರೆಸ್ ಹಿರಿಯ ನಾಯಕ ಧರ್ಮಪುರಿ ಶ್ರೀನಿವಾಸ್ ನಿಧನ

8-ptr-bus-campaign

Udayavani Campaign: 14 ಹೊಸ ಬಸ್‌ ಓಡಾಟಕ್ಕೆ ಕೆಎಸ್‌ಆರ್‌ಟಿಸಿ ಸಿದ್ಧ

ವಿಜಯೇಂದ್ರ

Shimoga; ಸಿಎಂ ಗಮನಕ್ಕೆ ಬಾರದೆ ವಾಲ್ಮೀಕಿ ನಿಗಮ ಹಣ ಲೂಟಿ ಸಾಧ್ಯವಿಲ್ಲ: ವಿಜಯೇಂದ್ರ ಆರೋಪ

Box office: ʼಕಲ್ಕಿ 2898 ಎಡಿʼಯ 2ನೇ ದಿನದ ಗಳಿಕೆಯಲ್ಲಿ ಭಾರೀ ಕುಸಿತ; ಗಳಿಸಿದ್ದೆಷ್ಟು?

Box office: ʼಕಲ್ಕಿ 2898 ಎಡಿʼಯ 2ನೇ ದಿನದ ಗಳಿಕೆಯಲ್ಲಿ ಭಾರೀ ಕುಸಿತ; ಗಳಿಸಿದ್ದೆಷ್ಟು?


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Dharmapuri Srinivas: ಹೃದಯಾಘಾತದಿಂದ ಕಾಂಗ್ರೆಸ್ ಹಿರಿಯ ನಾಯಕ ಧರ್ಮಪುರಿ ಶ್ರೀನಿವಾಸ್ ನಿಧನ

Dharmapuri Srinivas: ಹೃದಯಾಘಾತದಿಂದ ಕಾಂಗ್ರೆಸ್ ಹಿರಿಯ ನಾಯಕ ಧರ್ಮಪುರಿ ಶ್ರೀನಿವಾಸ್ ನಿಧನ

NEET Paper Leak case: ಸಿಬಿಐನಿಂದ ಜಾರ್ಖಂಡ್‌ ಕಾಲೇಜಿನ ಪ್ರಾಂಶುಪಾಲರ ಬಂಧನ

NEET Paper Leak case: ಸಿಬಿಐನಿಂದ ಜಾರ್ಖಂಡ್‌ ಕಾಲೇಜಿನ ಪ್ರಾಂಶುಪಾಲರ ಬಂಧನ

Postponed UGC NET, CSIR NET exam date announced

NTA; ಮುಂದೂಡಲಾಗಿದ್ದ UGC NET, CSIR NET ಪರೀಕ್ಷಾ ದಿನಾಂಕ ಪ್ರಕಟ

ಮಮತಾ ಬ್ಯಾನರ್ಜಿ ವಿರುದ್ಧ ಮಾನನಷ್ಟ ಮೊಕದ್ದಮೆ ದಾಖಲಿಸಿದ ಬಂಗಾಳ ರಾಜ್ಯಪಾಲ

Defamation Case: ಮಮತಾ ವಿರುದ್ಧ ಮಾನನಷ್ಟ ಮೊಕದ್ದಮೆ ದಾಖಲಿಸಿದ ಬಂಗಾಳ ರಾಜ್ಯಪಾಲ ಬೋಸ್

Mumbai-Nagpur ಎಕ್ಸ್‌ಪ್ರೆಸ್‌ವೇಯಲ್ಲಿ ಭೀಕರ ಅಪಘಾತ: 7 ಮಂದಿ ದುರ್ಮರಣ, ನಾಲ್ವರು ಗಂಭೀರ

Mumbai-Nagpur ಎಕ್ಸ್‌ಪ್ರೆಸ್‌ವೇಯಲ್ಲಿ ಭೀಕರ ಅಪಘಾತ: 7 ಮಂದಿ ದುರ್ಮರಣ, ನಾಲ್ವರು ಗಂಭೀರ

MUST WATCH

udayavani youtube

ವಿಧಿಯಾಟಕ್ಕೆ ಬಲಿಯಾದ ಅಂಧರ ಪುಟ್ ಬಾಲ್ ತಂಡದ ಕ್ಯಾಪ್ಟನ್

udayavani youtube

ಮಾತು ಬರದ ಮಗುವಿಗೆ ಮಾತು ಬರಿಸಿದ ಕಾಪು ಮಾರಿಯಮ್ಮ | ಕಾಪುವಿನ ಅಮ್ಮನ ಪವಾಡ

udayavani youtube

ಡಿಸಿಎಂ ವಿಚಾರ ಇನ್ನೊಮ್ಮೆ ಮಾತನಾಡೋಣ; ಕುಕ್ಕೆಯಲ್ಲಿ ಡಿ.ಕೆ.ಶಿವಕುಮಾರ್

udayavani youtube

ಆನೆಗುಡ್ಡೆ ಶ್ರೀ ವಿನಾಯಕ ದೇಗುಲದಲ್ಲಿ ಅಂಗಾರ ಸಂಕಷ್ಟಹರ ಚತುರ್ಥಿ|

udayavani youtube

ಬಸ್ಸೇರಿ ಸಮಸ್ಯೆ ಆಲಿಸಿದ ಶಾಸಕ ರೈ

ಹೊಸ ಸೇರ್ಪಡೆ

ಸಂತೋಷ್ ಲಾಡ್

Shiggavi Bypoll; ಗೆಲ್ಲುವ ಅಭ್ಯರ್ಥಿಗೆ ಪಕ್ಷ ಟಿಕೆಟ್ ನೀಡಲಿದೆ: ಸಂತೋಷ್ ಲಾಡ್

ನಿಮ್ಮ ಸಹಪಾಠಿಗಳು ಎಲ್ಲಿದ್ದಾರೆ ?: ಜೀವನದ ಪ್ರಯಾಣದಲ್ಲಿ ಎಲ್ಲವನ್ನು ಅನುಭವಿಸಬೇಕು

INDWvsSAW: ತಪ್ಪಿತು ರಿಚಾ ಶತಕ; ವಿಶ್ವದಾಖಲೆಯ ಮೊತ್ತ ಕಲೆ ಹಾಕಿದ ಭಾರತ

INDWvsSAW: ತಪ್ಪಿತು ರಿಚಾ ಶತಕ; ವಿಶ್ವದಾಖಲೆಯ ಮೊತ್ತ ಕಲೆ ಹಾಕಿದ ಭಾರತ

Dharmapuri Srinivas: ಹೃದಯಾಘಾತದಿಂದ ಕಾಂಗ್ರೆಸ್ ಹಿರಿಯ ನಾಯಕ ಧರ್ಮಪುರಿ ಶ್ರೀನಿವಾಸ್ ನಿಧನ

Dharmapuri Srinivas: ಹೃದಯಾಘಾತದಿಂದ ಕಾಂಗ್ರೆಸ್ ಹಿರಿಯ ನಾಯಕ ಧರ್ಮಪುರಿ ಶ್ರೀನಿವಾಸ್ ನಿಧನ

8-ptr-bus-campaign

Udayavani Campaign: 14 ಹೊಸ ಬಸ್‌ ಓಡಾಟಕ್ಕೆ ಕೆಎಸ್‌ಆರ್‌ಟಿಸಿ ಸಿದ್ಧ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.