BJP leader: ನಾಪತ್ತೆಯಾಗಿದ್ದ ಬಿಜೆಪಿ ನಾಯಕಿ ಹತ್ಯೆ… ತಾನೆ ಕೊಂದಿದ್ದಾಗಿ ಒಪ್ಪಿಕೊಂಡ ಪತಿ
Team Udayavani, Aug 12, 2023, 11:34 AM IST
ಮಹಾರಾಷ್ಟ್ರ: ಜಬಲ್ಪುರದಲ್ಲಿ ಕಳೆದ ಹತ್ತು ದಿನಗಳ ಹಿಂದೆ ನಾಪತ್ತೆಯಾಗಿದ್ದ ಮಹಾರಾಷ್ಟ್ರದ ಬಿಜೆಪಿಯ ಅಲ್ಪಸಂಖ್ಯಾತ ವಿಭಾಗದ ಮುಖ್ಯಸ್ಥೆ ಸನಾ ಖಾನ್ ಅವರನ್ನು ಕೊಲೆ ಮಾಡಲಾಗಿದೆ ಎಂದು ಜಬಲ್ಪುರ ಪೊಲೀಸರು ತಿಳಿಸಿದ್ದಾರೆ. ಈ ಪ್ರಕರಣಕ್ಕೆ ಸಂಬಂಧಿಸಿ ಪತಿ ಅಮಿತ್ ಅಲಿಯಾಸ್ ಪಪ್ಪುನನ್ನು ಪೊಲೀಸರು ವಶಕ್ಕೆ ಪಡೆದುಕೊಂಡಿದ್ದಾರೆ.
ನಾಗಪುರದ ಮನಕ್ಪುರ್ ಪ್ರದೇಶದ ಸನಾ ಖಾನ್ ಆರು ತಿಂಗಳ ಹಿಂದೆ ಬಿಲಹರಿಯ ಧಾಬಾ ನಿರ್ವಾಹಕ ಅಮಿತ್ (ಪಪ್ಪು) ಎಂಬಾತನನ್ನು ವಿವಾಹವಾಗಿದ್ದರು.
ಏನಿದು ಪ್ರಕರಣ: ಕಳೆದ ಹತ್ತು ದಿನಗಳ ಹಿಂದೆ ತನ್ನ ಪತಿಯನ್ನು ಭೇಟಿಯಾಗಲು ಜಬಲ್ಪುರಕ್ಕೆ ತೆರಳಿದ್ದ ಮಗಳು ಸನಾ ಖಾನ್ ಮನೆಗೆ ಬಾರದೆ ನಾಪತ್ತೆಯಾಗಿದ್ದಾಳೆ ಎಂದು ಆಕೆಯ ಪೋಷಕರು ನೀಡಿದ ದೂರಿನ ಅನ್ವಯ ನಾಪತ್ತೆ ಪ್ರಕರಣ ದಾಖಲಿಸಿಕೊಂಡ ಪೊಲೀಸರು ಮಹಿಳೆಯ ಪತ್ತೆಗೆ ತಂಡ ರಚಿಸಿದ್ದರು. ಆದರೆ ಮಹಿಳೆಯ ಪತ್ತೆ ಮಾತ್ರ ಆಗಲಿಲ್ಲ, ಕೊನೆಗೆ ಪೊಲೀಸರಿಗೆ ನಾಪತ್ತೆಯಾದ ಮಹಿಳೆಯ ಪತಿಯ ಮೇಲೆ ಸಂಶಯ ಬಂದು ವಿಚಾರಣೆ ನಡೆಸಿದಾಗ ತಾನೇ ತನ್ನ ಪತ್ನಿಯನ್ನು ಕೊಂದಿರುವ ಆಘಾತಕಾರಿ ವಿಚಾರವನ್ನು ಒಪ್ಪಿಕೊಂಡಿದ್ದಾನೆ.
ಜಬಲ್ಪುರ ಮತ್ತು ನಾಗ್ಪುರ ಪೊಲೀಸರ ಜಂಟಿ ಕಾರ್ಯಾಚರಣೆಯಲ್ಲಿ ಈ ಸಂಪೂರ್ಣ ವಿಷಯ ಬಯಲಾಗಿದೆ. ಪ್ರಕರಣದ ಪ್ರಮುಖ ಆರೋಪಿ ಅಮಿತ್ ಅಲಿಯಾಸ್ ಪಪ್ಪು ಸಾಹು ಎಂಬಾತನನ್ನು ಪೊಲೀಸರು ಬಂಧಿಸಿದ್ದಾರೆ. ಪೊಲೀಸರ ವಿಚಾರಣೆಯಲ್ಲಿ ಸನಾ ಖಾನ್ ಕೊಲೆ ಮಾಡಿದ್ದನ್ನು ಅಮಿತ್ ಒಪ್ಪಿಕೊಂಡಿದ್ದಾನೆ. ಮೊದಲು ತನ್ನ ಮನೆಯಲ್ಲಿಯೇ ಸನಾಳನ್ನು ದೊಣ್ಣೆಯಿಂದ ಹೊಡೆದು ಕೊಂದಿರುವುದಾಗಿ ಅಮಿತ್ ಪೊಲೀಸರಿಗೆ ಹೇಳಿದ್ದಾನೆ. ಕೊಲೆಯ ನಂತರ, ಜಬಲ್ಪುರದಿಂದ ಸುಮಾರು 45 ಕಿಮೀ ದೂರದಲ್ಲಿರುವ ಹಿರಾನ್ ನದಿಯ ಸೇತುವೆಗೆ ಸನಾ ಶವವನ್ನು ಎಸೆದಿರುವುದಾಗಿ ಹೇಳಿಕೊಂಡಿದ್ದಾನೆ.
ತಾಯಿ ಮನೆಯಲ್ಲೇ ವಾಸವಿದ್ದ ಸನಾ :
ಮದುವೆಯಾಗಿ ಆರು ತಿಂಗಳು ಆಗಿದ್ದರು ಸನಾ ಮಾತ್ರ ನಾಗ್ಪುರದಲ್ಲಿ ತಾಯಿ ಜೊತೆಗೆ ಇದ್ದರು ಎನ್ನಲಾಗಿದೆ ಅಲ್ಲದೆ ಪತಿ ಜಬಲ್ಪುರದಲ್ಲಿ ಕೆಲಸ ನಿರ್ವಹಿಸುತ್ತಿದ್ದ ಎನ್ನಲಾಗಿದೆ.
ಹಣದ ವಿಚಾರಕ್ಕೆ ಕೊಲೆ:
ಅಮಿತ್ ಹಾಗೂ ಸನಾ ನಡುವೆ ಹಣದ ವಿಚಾರದಲ್ಲಿ ಆಗಾಗ ಜಗಳ ನಡೆಯುತ್ತಿದ್ದುದಾಗಿ ಅಮಿತ್ ಹೇಳಿಕೊಂಡಿದ್ದಾನೆ ಅದರಂತೆ ಸನಾ ಖಾನ್ ಆಗಸ್ಟ್ 2 ರಂದು ನಾಗ್ಪುರದಿಂದ ಜಬಲ್ಪುರಕ್ಕೆ ಬಂದವೇಳೆ ಇಬ್ಬರ ನಡುವೆ ಜಗಳ ನಡೆದಿದ್ದು ಜಗಳ ಅತಿರೇಕಕ್ಕೆ ಹೋಗಿ ಅಮಿತ್ ಮನೆಯಲ್ಲಿದ್ದ ದೊಣ್ಣೆಯಿಂದ ಸನಾ ತಲೆಗೆ ಹೊಡೆದಿದ್ದಾನೆ ಈ ವೇಳೆ ಪ್ರಜ್ಞೆ ಕಳೆದುಕೊಂಡು ಬಿದ್ದ ಸನಾ ಅಲ್ಲೇ ಸಾವನ್ನಪ್ಪಿದ್ದಾಳೆ ಬಳಿಕ ಆಕೆಯ ಶವವನ್ನು ಸುಮಾರು 45 ಕಿಮೀ ದೂರದಲ್ಲಿರುವ ಹಿರಾನ್ ನದಿಗೆ ಎಸೆದಿರುವುದಾಗಿ ಹೇಳಿಕೊಂಡಿದ್ದಾನೆ.
ಇನ್ನೂ ಪತ್ತೆಯಾಗದ ಮೃತದೇಹ;
ಅಮಿತ್ ಹೇಳಿಕೆಯಂತೆ ಸನಾ ಮೃತ ದೇಹವನ್ನು ಹಿರಾನ್ ನದಿಗೆ ಎಸೆದಿರುವ ಹೇಳಿಕೆಯನ್ನು ಆಧರಿಸಿ ನದಿಯಲ್ಲಿ ಮಹಿಳೆಯ ದೇಹದ ಹುಡುಕಾಟ ನಡೆಸುತ್ತಿರುವ ಪೊಲೀಸರಿಗೆ ಮೃತದೇಹ ಇನ್ನೂ ಪತ್ತೆಯಾಗಿಲ್ಲ.
ಇದನ್ನೂ ಓದಿ: Rudraprayag: ಭೂಕುಸಿತಕ್ಕೆ ಕೊಚ್ಚಿಹೋದ ರಸ್ತೆ: ಕೇದಾರನಾಥಕ್ಕೆ ತೆರಳುತ್ತಿದ್ದ ಐವರು ಸಾವು
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Politics; ಲೋಕಸಭೆ ಚುನಾವಣೆ ಬಳಿಕ ಮೋದಿ ಮನಸ್ಥಿತಿ ಬದಲಾಗಿದೆ: ರಾಹುಲ್ ಗಾಂಧಿ
Delhi; ಕೇಜ್ರಿವಾಲ್ ಗಾಗಿ ಖಾಲಿ ಕುರ್ಚಿ ಇರಿಸಿ ನಿಷ್ಠೆ ತೋರಿಸಿದ ದೆಹಲಿ ಸಿಎಂ ಆತಿಶಿ
Tirupati Laddu ವಿವಾದ: ತಿರುಪತಿ ದೇಗುಲದಲ್ಲಿ ಮಹಾ ಶಾಂತಿ ಹೋಮ, ಶುದ್ದೀಕರಣ…
Pocso: ಮಕ್ಕಳ ಅಶ್ಲೀಲ ವಿಡಿಯೋ ನೋಡುವುದು, ಸಂಗ್ರಹಿಸುವುದು ಪೋಕ್ಸೋ ಅಡಿ ಅಪರಾಧ: ಸುಪ್ರೀಂ
Viral Video: ಟಿಕೆಟ್ ಇಲ್ಲದೆ ರೈಲಿನ ಎಸಿ ಕೋಚ್ ನಲ್ಲಿ ಪ್ರಯಾಣಿಸಿದ ಹಾವು…
MUST WATCH
ಉಡುಪಿಯ ಈ ಜಾಗದಲ್ಲಿ ರಸಂ ಪುರಿ ತುಂಬಾನೇ ಫೇಮಸ್
ತಿರುಪತಿ ಲಡ್ಡು ವಿವಾದ ಪೇಜಾವರ ಶ್ರೀಗಳು ಹೇಳಿದ್ದೇನು ?
Kaljigaದಲ್ಲಿ ದೈವದ ಅಪಪ್ರಚಾರ ನಡೆದಿಲ್ಲ, ಸಿನಿಮಾ ನೋಡಿದ ಬಳಿಕ ಈ ಬಗ್ಗೆ ಪ್ರತಿಕ್ರಿಯಿಸಿ
ನವಜಾತ ಶಿಶುಗಳಲ್ಲಿ ಶ್ರವಣ ಶಕ್ತಿ ಸಮಸ್ಯೆ ಕುರಿತು ಸಂಪೂರ್ಣ ಮಾಹಿತಿ
ಅಂತರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆ ಅಂಗವಾಗಿ ತಾಲೂಕು ಮಟ್ಟದ ಮಾನವ ಸರಪಳಿ ಕಾರ್ಯಕ್ರಮ
ಹೊಸ ಸೇರ್ಪಡೆ
Politics; ಲೋಕಸಭೆ ಚುನಾವಣೆ ಬಳಿಕ ಮೋದಿ ಮನಸ್ಥಿತಿ ಬದಲಾಗಿದೆ: ರಾಹುಲ್ ಗಾಂಧಿ
Hubli; ತಪ್ಪಿಸಲೆತ್ನಿಸಿದ ಆರೋಪಿ; ಕಾಲಿಗೆ ಗುಂಡು ಹೊಡೆದು ಬಂಧಿಸಿದ ಪೊಲೀಸರು
Arunagiri ಗ್ರಾಮಸ್ಥರಿಂದ ರಸ್ತೆಯ ಗುಂಡಿ ಮುಚ್ಚುವ ಮಹತ್ಕಾರ್ಯ: ಶಿವನ್ ಗೌಡ ಮೆಚ್ಚುಗೆ
Thirthahalli: ನಿಜವಾದ ಕಾರ್ಮಿಕ ಫಲಾನುಭವಿಗಳಿಗೆ ಇಲ್ವಾ ಕಿಟ್ !?
America: 1951ರಲ್ಲಿ ಕಿಡ್ನಾಪ್ ಆದ ಬಾಲಕ 70 ವರ್ಷಗಳ ಬಳಿಕ ವಾಪಸ್…ಪತ್ತೆ ಕಾರ್ಯವೇ ರೋಚಕ!
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.