ಯು ಟರ್ನ್; ದೆಹಲಿ ಮೇಯರ್ ಹುದ್ದೆಗೆ ಸ್ಪರ್ಧಿಸಲು ಅಣಿಯಾದ ಬಿಜೆಪಿ
Team Udayavani, Dec 27, 2022, 1:07 PM IST
ಹೊಸದಿಲ್ಲಿ: ಮಹತ್ವದ ಬೆಳವಣಿಗೆಯಲ್ಲಿ ದೆಹಲಿ ಮೇಯರ್ ಮತ್ತು ಉಪ ಮೇಯರ್ ಹುದ್ದೆಗೆ ಆಮ್ ಆದ್ಮಿ ಪಕ್ಷದ ವಿರುದ್ಧವಾಗಿ ಸ್ಪರ್ಧೆ ಮಾಡಲು ಬಿಜೆಪಿ ನಿರ್ಧರಿಸಿದೆ. ಚುನಾವಣೆಯ ಸೋಲಿನ ನಂತರ ವ್ಯತಿರಿಕ್ತ ಹೇಳಿಕೆಗಳ ನಂತರ, ದೆಹಲಿ ಮುನ್ಸಿಪಲ್ ಕಾರ್ಪೊರೇಷನ್ (ಎಂಸಿಡಿ) ಹುದ್ದೆಗಳಿಗೆ ಬಿಜೆಪಿ ತನ್ನ ಅಭ್ಯರ್ಥಿಗಳನ್ನು ಅಂತಿಮಗೊಳಿಸಿದೆ.
ಶಾಲಿಮರ್ ಬಾಘ್ ಕೌನ್ಸಿಲರ್ ರೇಖಾ ಗುಪ್ತಾ ಅವರು ಮೇಯರ್ ಹುದ್ದೆಯ ಸ್ಪರ್ಧಿಯಾಗಿದ್ದರೆ, ರಾಮ್ ನಗರ ವಾರ್ಡ್ ನ ಕಮಲ್ ಬಗ್ರಿ ಅವರು ಬಿಜೆಪಿಯಿಂದ ಡೆಪ್ಯುಟಿ ಮೇಯರ್ ಹುದ್ದೆಗೆ ಸ್ಪರ್ಧೆ ಮಾಡಲಿದ್ದಾರೆ.
ಅತೀ ಹೆಚ್ಚು ಮಂದಿ ಕೌನ್ಸಿಲರ್ ಗಳನ್ನು ಹೊಂದಿರುವ ಆಪ್, ಮೇಯರ್ ಹುದ್ದೆಗೆ ಪೂರ್ವ ಪಟೇಲ್ ನಗರದ ಶೆಲ್ಲಿ ಒಬೆರಾಯ್ ಅವರನ್ನು ಸ್ಪರ್ಧಿಯಾಗಿ ನೇಮಕ ಮಾಡಿದೆ. ಉಪ ಮೇಯರ್ ಹುದ್ದೆಗೆ ಚಾಂದನಿ ಮಹಲ್ ನ ಕೌನ್ಸಿಲರ್ ಆಲೆ ಮೊಹಮ್ಮದ್ ಇಕ್ಬಾಲ್ ಅವರನ್ನು ಸ್ಪರ್ಧಿಯಾಗಿ ಕಣಕ್ಕಿಳಿಸಿದೆ.
ಇದನ್ನೂ ಓದಿ:ಮುಂಬಯಿಯಲ್ಲಿ ಎಷ್ಟು ಮರಾಠಿ ಭಾಷಿಕರಿದ್ದಾರೆಂದು ಠಾಕ್ರೆ ನೋಡಲಿ: ಅಶ್ವಥ ನಾರಾಯಣ ತಿರುಗೇಟು
ಡಿಸೆಂಬರ್ 4ರಂದು ನಡೆದಿದ್ದ ದೆಹಲಿ ಮುನ್ಸಿಪಾಲಿಟಿಯ 250 ಕ್ಷೇತ್ರಗಳ ಚುನಾವಣೆಯಲ್ಲಿ 134 ಸ್ಥಾನ ಗೆದ್ದುಕೊಂಡಿದ್ದ ಆಪ್ ಜಯಭೇರಿ ಸಾಧಿಸಿದೆ. ಬಿಜೆಪಿಯು 104 ಸ್ಥಾನಗಳನ್ನು ಗೆದ್ದುಕೊಂಡಿತ್ತು.
“ಈಗ ದೆಹಲಿಗೆ ಮೇಯರ್ ಆಯ್ಕೆ ನಡೆಯಲಿದೆ. ನಾಮನಿರ್ದೇಶಿತ ಕೌನ್ಸಿಲರ್ಗಳು ಯಾವ ರೀತಿಯಲ್ಲಿ ಮತ ಚಲಾಯಿಸುತ್ತಾರೆ ಇತ್ಯಾದಿ, ನಿಕಟ ಸ್ಪರ್ಧೆಯಲ್ಲಿ ಯಾರು ಸಂಖ್ಯೆಯನ್ನು ಹಿಡಿದಿಟ್ಟುಕೊಳ್ಳಬಹುದು ಎಂಬುದರ ಮೇಲೆ ಅವಲಂಬಿತವಾಗಿದೆ. ಉದಾಹರಣೆಗೆ ಚಂಡೀಗಢದಲ್ಲಿ ಬಿಜೆಪಿ ಮೇಯರ್ ಇದ್ದಾರೆ” ಎಂದು ಬಿಜೆಪಿ ಐಟಿ ಸೆಲ್ ಮುಖ್ಯಸ್ಥ ಅಮಿತ್ ಮಾಳವಿಯಾ ಅವರು ಟ್ವೀಟ್ ಮಾಡಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
PM ಮೋದಿ ಅಮೆರಿಕ ಪ್ರವಾಸ; ಮಣಿಪುರಕ್ಕೆ ಹೋಗುವುದಿಲ್ಲವೇಕೆ?:ಕಾಂಗ್ರೆಸ್ ಪ್ರಶ್ನೆ
Tirupati ತಿರುಪತಿ ಲಡ್ದು ಪ್ರಸಾದದಲ್ಲಿ ಬೀಫ್ ಫ್ಯಾಟ್!:ಲ್ಯಾಬ್ ವರದಿಯಲ್ಲಿ ದೃಢ
Chennai: ಗ್ರಾಹಕ ನಿಂದಿಸಿದ್ದಕ್ಕೆ ಖಿನ್ನತೆಗೆ ಒಳಗಾಗಿ ಫುಡ್ ಡೆಲಿವರಿ ಯುವಕ ಆತ್ಮಹತ್ಯೆ
Haryana: ಮಹಿಳೆಯರಿಗೆ ವಿತ್ತ ನೆರವು, ಎಂಎಸ್ ಪಿ ಭರವಸೆ; ಬಿಜೆಪಿ ಪ್ರಣಾಳಿಕೆ ಬಿಡುಗಡೆ
Chennai: ರಸ್ತೆ ಬದಿ ಪತ್ತೆಯಾದ ಸೂಟ್ಕೇಸ್ನಲ್ಲಿತ್ತು ಮಹಿಳೆಯ ಕತ್ತರಿಸಿದ ದೇಹದ ಭಾಗಗಳು…
MUST WATCH
Kaljigaದಲ್ಲಿ ದೈವದ ಅಪಪ್ರಚಾರ ನಡೆದಿಲ್ಲ, ಸಿನಿಮಾ ನೋಡಿದ ಬಳಿಕ ಈ ಬಗ್ಗೆ ಪ್ರತಿಕ್ರಿಯಿಸಿ
ನವಜಾತ ಶಿಶುಗಳಲ್ಲಿ ಶ್ರವಣ ಶಕ್ತಿ ಸಮಸ್ಯೆ ಕುರಿತು ಸಂಪೂರ್ಣ ಮಾಹಿತಿ
ಅಂತರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆ ಅಂಗವಾಗಿ ತಾಲೂಕು ಮಟ್ಟದ ಮಾನವ ಸರಪಳಿ ಕಾರ್ಯಕ್ರಮ
ಈಟ್ ರಾಜಾ ಶಾಪ್ ನಲ್ಲಿ ಜ್ಯೂಸ್ ಕುಡಿಯೋದಷ್ಟೇ ಅಲ್ಲ ತಿನ್ನಲೂ ಬಹುದು
ಅಯ್ಯೋ…ಸಂತೆಕಟ್ಟೆ ಅಂಡರ್ ಪಾಸ್ ಪ್ರಯಾಣ ನಿತ್ಯ ನರಕ!
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.